Home Posts tagged V4News (Page 565)

ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅತಿರುದ್ರ ಮಹಾಯಾಗ ಯಜ್ಞ ದ್ರವ್ಯಗಳ ಸಮರ್ಪಣಾ ಕಾರ್ಯಕ್ರಮಕ್ಕೆ ಚಾಲನೆ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಅತಿರುದ್ರ ಮಹಾಯಾಗದ ಅಂಗವಾಗಿ ಭಾನುವಾರದಂದು ಯಜ್ಞಕ್ಕೆ ಬೇಕಾಗುವ ದ್ರವ್ಯಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ಅತಿಥಿಗಳೆಲ್ಲರೂ ಸೇರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಕೊಪ್ಪರಿಗೆಗೆ ಭತ್ತ ಸುರಿಯುವ ಮೂಲಕ ಚಾಲನೆ ನೀಡಿದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ

ಸತತ 20 ಗಂಟೆಗಳ ಕಾರ್ಯಾಚರಣೆ : ಕೊನೆಗೂ ಚಿರತೆಯು ಬೋನಿಗೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ನಿಡೋಡಿ ಚರ್ಚಿನ ಬಲಭಾಗದಲ್ಲಿರುವಂತ ದಡ್ಡಿನ ಫ್ಲೋರಿಂಗ್ ಇವರ ಮನೆಯ ಬಾವಿಗೆ ಶುಕ್ರವಾರ ರಾತ್ರಿ ಎಂದು ಚಿರತೆಯೂ ಬಿದ್ದಿರುವ ಘಟನೆಯು ನಡೆದಿದೆ. ಶನಿವಾರ ಮಧ್ಯಾಹ್ನ 11 ಗಂಟೆಯ ಹೊತ್ತಿಗೆ ಚಿರತೆಯು ಬಾವಿಯಲ್ಲಿ ಮನೆಯವರಿಗೆ ಬೆಳಕಿಗೆ ಬಂದಿದ್ದು ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿತ್ತು ಕೂಡಲೆ ಅರಣ್ಯ ಇಲಾಖೆಯವರು ಇದಕ್ಕೆ ಸ್ಪಂದಿಸಿ ಎರಡು ಗಂಟೆಯ ಹೊತ್ತಿಗೆ ಸ್ಥಳಕ್ಕೆ ಭೇಟಿ ನೀಡಿ ಅದನ್ನು ಪರಿಶೀಲಿಸಿ‌ ಬೋನಿಯನ್ನ

ಬಂಟ್ವಾಳ : ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ: ವಿಶ್ರಾಂತ ಸರಕಾರಿ ನೌಕರರಿಗೆ, ಸಾಧಕರಿಗೆ ಅಭಿನಂದನೆ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ ಆಶ್ರಯದಲ್ಲಿ ಸರ್ಕಾರಿ ನೌಕರರಿಗೆ ಮಾಹಿತಿ ಕಾರ್ಯಗಾರ ಮತ್ತು ವಿಶ್ರಾಂತ ಸರಕಾರಿ ನೌಕರರಿಗೆ  ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಮತ್ತು 2021-22 ನೇ ಸಾಲಿನ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ. ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ  ಬಾಲ್ಯ, ಯೌವನ ನಮ್ಮ ಸಂಪತ್ತು ಅದನ್ನು

ಕರ್ನಾಟಕವನ್ನು ಸುರಕ್ಷಿತವಾಗಿಡಲು ಮೋದಿ ಮತ್ತು ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ : ಅಮಿತ್ ಶಾ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ರೈತರ ಮತ್ತು ರಾಷ್ಟ್ರದ ಸಮಗ್ರ ಅಭಿವೃದ್ಧಿಯ ಧ್ಯೇಯೋದ್ದೇಶವನ್ನು ಒಳಗೊಂಡಿರುವ ವಿವಿಧ ಆಯಾಮಗಳನ್ನು ಹೊಂದಿರುವ ಏಕರೂಪಿ ನಿಯಮಾಧಾರಿತ ಕೃಷಿ ಪತ್ತಿನ ಸಹಕಾರಿ ಸಂಘ(ಪಿಎಸಿಎಸ್)ಗಳನ್ನು ದೇಶದ ಪ್ರತೀ ಗ್ರಾಮ ಪಂಚಾಯತ್‌ಗಳಲ್ಲಿ ಮುಂದಿನ ಮೂರು ವರ್ಷಗಳೊಳಗೆ ಸ್ಥಾಪಿಸಲಾಗುವುದು ಎಂದು ಕೇಂದ್ರದ ಪ್ರಥಮ ಸಹಕಾರಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಕಟಿಸಿದರು. ಅವರು ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ

ಪುತ್ತೂರು: ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಲೋಕಾರ್ಪಣೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರಮಂಗಲದ ಹನುಮಗಿರಿಯ ಅಮರಗಿರಿಯಲ್ಲಿ ಧರ್ಮಶ್ರೀ ಪ್ರತಿಷ್ಠಾನ ವತಿಯಿಂದ ನೂತನವಾಗಿ  ನಿರ್ಮಾಣಗೊಂಡಿರುವ ಶ್ರೀ ಭಾರತೀ ಅಮರಜ್ಯೋತಿ ಮಂದಿರ ಥೀಮ್ ಪಾರ್ಕ್ ಅನ್ನು  ಕೇಂದ್ರದ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು  ಲೋಕಾರ್ಪಣೆ ಮಾಡಿದರು. ಭಾರತಮಾತೆಗೆ ಪುಷ್ಪಾರ್ಚನೆ ಮಾಡಿದ ಅಮಿತ್ ಶಾ ಅವರು ನಂತರ ಸಂದರ್ಶಕರ ಪುಸ್ತಕದಲ್ಲಿ ಅಮರಗಿರಿಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಬರೆದು ಹಸ್ತಾಕ್ಷರ

ಉಡುಪಿ: ಅತಿರುದ್ರ ಮಹಾಯಾಗಕ್ಕೆ ಆಮಂತ್ರಣ ಪತ್ರಿಕೆ ನೀಡಿ ಗಣ್ಯರಿಗೆ ಆಹ್ವಾನ

ಶಿವಪಾಡಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಫೆಬ್ರವರಿ 22 ರಿಂದ ಮಾರ್ಚ್ 05 ರ ವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗದ  ಆಮಂತ್ರಣ ಪತ್ರಿಕೆಯನ್ನು ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,  ಬಿ.ಜೆ.ಪಿ ಜಿಲ್ಲಾಧ್ಯಕ್ಷ  ಕುಯಿಲಾಡಿ ಸುರೇಶ್ ನಾಯಕ್, ಉದಯ್ ಕುಮಾರ್ ಶೆಟ್ಟಿ ಮತ್ತಿತರರಿಗೆ ಉಡುಪಿ ಜಿಲ್ಲಾ ಬಿ.ಜೆ. ಪಿ. ಕಛೇರಿಯಲ್ಲಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಫೆಬ್ರವರಿ 14: ಶಿವಪಾಡಿಯಲ್ಲಿ ಪುಂಗನೂರು ಗೋವುಗಳೊಂದಿಗೆ ಗೋವು ಆಲಿಂಗನ ದಿನಾಚರಣೆ

ಫೆಬ್ರವರಿ 14 ನ್ನು ಗೋವು ಆಲಿಂಗನ ದಿನವಾಗಿ ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮವು ಬೆಳಿಗ್ಗೆ 9.30ರಿಂದ ವಿಶಿಷ್ಟ ಮತ್ತು ಧಾರ್ಮಿಕ ಮಹತ್ವದ ಪುಂಗನೂರು ಗೋವುಗಳ ಆಲಿಂಗನದ ಮೂಲಕ ಆರಂಭವಾಗುವುದು. ಗೋವು ಪ್ರಿಯರು ಮತ್ತು ಆಸ್ತಿಕ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗೋವು ಆಲಿಂಗನ ದಿನಾಚರಣೆಯನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಲಾಗಿದೆ. ಪುಂಗನೂರು ತಳಿಯ ಗೋವುಗಳು ಜಗತ್ತಿನಲ್ಲೇ ಅತಿ ಸುಂದರ,

ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದ ಸ್ನೇಹಿತೆಯರ ಅಂಗಡಿ ಆಕಸ್ಮಿಕವಾಗಿ ಬೆಂಕಿಗಾಹುತಿ 

ಉಳ್ಳಾಲ: ಅಗ್ನಿ ಆಕಸ್ಮಿಕ ನಡೆದ ಪರಿಣಾಮ ಫಾಸ್ಟ್ ಫುಡ್ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ. ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತ ಜತೆಯಾಗಿ ಸಾಲ ಮಾಡಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು.ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ

ಗ್ರೈಂಡರ್‍ ಗೆ ಶಾಲು ಸಿಲುಕಿ ಯುವತಿ ದಾರುಣ ಸಾವು

ಮಂಜೇಶ್ವರ: ಹುಟ್ಟು ಹಬ್ಬದಂದೇ ಗ್ರೈಂಡರ್ ಗೆ ಶಾಲು ಸಿಲುಕಿ ಯುವತಿಯೊಬ್ಬಳು ದಾರುಣವಾಗಿ ಸಾವನ್ನಪ್ಪಿದ್ದಾಳೆ. ತೂಮಿನಾಡು ಲಕ್ಷಂ ವೀಡು ಕಾಲನಿ ನಿವಾಸಿ ರಂಜನ್ ಕುಟ್ಟ ಎಂಬವರ ಪತ್ನಿ ಜಯಶೀಲ ಚುಮ್ಮಿ (20) ಸಾವನ್ನಪ್ಪಿದ ದುರ್ದೈವಿ. ಈಕೆ ತೂಮಿನಾಡಿನಲ್ಲಿರುವ ಬೇಕರಿಯೊಂದರ ನೌಕರಿಯಾಗಿದ್ದು ಎಂದಿನಂತೆ ಬೇಕರಿಗೆ ತೆರಳಿ ಗ್ರೈಂಡರ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮಧ್ಯೆ ಶಾಲು ಗ್ರೈಂಡರ್ ಗೆ ಸಿಲುಕಿ ದುರಂತ ಸಂಭವಿಸಿದೆ. ಹುಟ್ಟು ಹಬ್ಬದ ದಿನವಾದ ಹಿನ್ನೆಲೆಯಲ್ಲಿ

PWD ಜೂನಿಯರ್ ಇಂಜಿನಿಯರ್ ಮೇಲೆ ಅಕ್ರಮ ಆಸ್ತಿ ಆರೋಪ : ಆರೋಪಿ ಖುಲಾಸೆ

ತನ್ನ ಸೇವಾ ಅವಧಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆದಾಯ ಗಳಿಸಿದ್ದಾರೆ ಎಂದು ಆರೋಪಿಸಿ PWD ಇಂಜಿನಿಯರ್ ಅರುಣ್ ಪ್ರಕಾಶ್ ವಿರುದ್ದ ಪೊಲೀಸ್ ಉಪಾಧಿಕ್ಷಕರು ಕರ್ನಾಟಕ ಲೋಕಾಯುಕ್ತ ಇವರು ಮಾನ್ಯ ಮಂಗಳೂರು ಲೋಕಾಯುಕ್ತ ನ್ಯಾಯಾಲಯ ಇಲ್ಲಿ ದೋಷರೋಪಣಾ ಪತ್ರ ಸಲ್ಲಿಸಿದ್ದ ಪ್ರಕರಣದಲ್ಲಿ ನ್ಯಾಯಾಲಯವು ದೋಷಮುಕ್ತ ಗೊಳಿಸಿದೆ. ಬಂಟ್ವಾಳದಲ್ಲಿ ಸಹಾಯಕ ಜೂನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರುಣ್ ಪ್ರಕಾಶ್ ಡಿಸೋಜ ಇವರು ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದಾರೆ ಎಂಬ