Home Posts tagged V4News (Page 567)

ಫೆ.17ರಂದು ಸಂತ ಅಲೋಶಿಯಸ್ ಕಾಲೇಜಿನಲ್ಲಿ”ನಿರುತ್ತಾಯಣ” ಯಕ್ಷರೂಪಕ

ದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯು (NSD) “ಭಾರತ್ ರಂಗ್ ಮಹೋತ್ಸವ್” ಎಂಬ ಹೆಸರಿನಲ್ಲಿ ನಾಟಕೋತ್ಸವವನ್ನು ಪ್ರತೀವರ್ಷ ಆಯೋಜಿಸುತ್ತದೆ. ಈ ಉತ್ಸವದ 22 ನೇ ಆವೃತ್ತಿಯು, ಇದೇ ಫೆಬ್ರವರಿಯ 14 ರಿಂದ ಫೆಬ್ರವರಿ 26 ರವರೆಗೆ ನಡೆಯಲಿದೆ. ಭಾರತದಾದ್ಯಂತ 10 ಸ್ಥಳಗಳಲ್ಲಿ ಪ್ರದರ್ಶಿಸಲು 960 ನಾಟಕಗಳಿಂದ, ಕೇವಲ  77 ನಾಟಕಗಳನ್ನು ಪ್ರಸಕ್ತ ವರ್ಷದಲ್ಲಿ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನ : ಬಾಬಾ ಶ್ರೀ ಸೋಮರನಾಥ ಬಾಬಜಿ ಭೇಟಿ

ಹಿಮಾಲಯದಲ್ಲಿ ವಾಸಿಸುತ್ತಿರುವ ನಾಥ ಸಂಪ್ರದಾಯದ ಅವಧೂತ ಮಹಾಸಭಾದ ಬಾಬಾ ಶ್ರೀ ಸೋಮರನಾಥ ಬಾಬಜಿ ಇವರು ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಅತಿರುದ್ರ ಮಹಾಯಾಗದ ಪೂರ್ವ ತಯಾರಿಯನ್ನು ನೋಡಿ ಈ ಮಹಾಕಾರ್ಯ ಆ ಶಿವನ ಪ್ರೇರಣೆ ಮತ್ತು ಅನುಗ್ರಹದಿಂದ ನೆರವೇರುತ್ತಿದೆ. ಶಿವನನ್ನು ಇಲ್ಲಿ ಭಜಿಸುವುದರಿಂದ ಈ ಪ್ರದೇಶ ಪಾವನ ತಾಣವಾಗಿ ಪರಿವರ್ತಿತವಾಗುತ್ತದೆ. ಅತಿರುದ್ರ ಮಹಾಯಾಗ ಯಶಸ್ವಿಯಾಗಲಿ, ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಈ

ಕಾವೇರಿ 2.0 ಹೆಸರಲ್ಲಿ ಮಂಗಳೂರಿಗರನ್ನು ವಂಚಿಸುತ್ತಿರುವ ನೋಂದಣಿ ಇಲಾಖೆ ದಿವ್ಯ ಮೌನಕ್ಕೆ ಶರಣಾದ ಜನಪ್ರತಿನಿಧಿಗಳು! ಮೌನದ ಹಿಂದಿನ (ಕಟ್ಟು) ಗುಟ್ಟೇನು?

ಕರ್ನಾಟಕ ರಾಜ್ಯದ ನೋಂದಣಿ ಇಲಾಖೆ ತನ್ನ ಬಂಗಾರದ ಮೊಟ್ಟೆ ಇಡುವ ಕೋಳಿಯನ್ನು ಮಂಗಳೂರಿನಲ್ಲಿ ಸಾಕಲು ಮುಂದಾಗುತ್ತಿದ್ದು, ಕೆಲವೇ ದಿನಗಳಲ್ಲಿ ಇಲ್ಲಿನ ಸಾರ್ವಜನಿಕರು ನೋಂದಣಿಗೆ ಸಂಬಂಧಪಟ್ಟು ಸಾಕಷ್ಟು ಪರದಾಟ ಅನುಭವಿಸಲು ಸಜ್ಜಾಗುತ್ತಿದ್ದಾರೆ. ಕಾವೇರಿ 2.0 ತತ್ರಾಂಶದ ಮೂಲಕ ತನ್ನ ಕಾಲ ಮೇಲೆಯೇ ಕಲ್ಲು ಹಾಕಿಕೊಳ್ಳಲು ಮುದ್ರಂಕ ಹಾಗೂ ನೋಂದಣಿ ಇಲಾಖೆ ಸಜ್ಜಾಗುತ್ತಿದೆ. ನಾನು ಈ ಬರಹ ಬರೆಯುತ್ತಿರುವ ಉದ್ದೇಶ ಜಮೀನು ನೋಂದಣಿಗೆ ಸಂಬಂಧಪಟ್ಟಂತೆ ಇದೆ ಫೆಬ್ರವರಿ 13 ರಿಂದ

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆ ಕೇರಳದಲ್ಲಿ ಬಂಧನ

ವಿಟ್ಲ: ಪ್ರಕರಣಯೊಂದರಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ವಿಟ್ಲ ಪೊಲೀಸರು ಕೇರಳದಲ್ಲಿ ಬಂಧಿಸಿದ ಘಟನೆ ನಡೆದಿದೆ.‌ ಕೇರಳ ರಾಜ್ಯದ ಪಯ್ಯನ್ನೂರು ಜಿಲ್ಲೆಯ ಕುಂಞಮಂಗಲ ಪಾಣಚೇರಿ ನಿವಾಸಿಸುಜಾತ(42) ಬಂಧಿತ ಆರೋಪಿ ಮಹಿಳೆ.ಈಕೆಯ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಕಲಂ:379,311,406,417, 418,419.420.423.427.465,467,468,471,504,506 r/w 34 IPC ಯಂತೆ ಪ್ರಕರಣ ದಾಖಲಾಗಿತ್ತು.ಈಕೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ

ಫೆ.11 : ಮರೋಳಿ ಶ್ರೀ ಸೂರ್ಯನಾರಾಯಣನ ಸನ್ನಿಧಿಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ

ಮರೋಳಿಯ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ, ಜನ್ಮಭೂಮಿ ಫೌಂಡೇಶನ್ ಮಂಗಳೂರು ವತಿಯಿಂದ ಫೆ.11ರಂದು ಶ್ರೀ ಸೂರ್ಯನಾರಾಯಣ ಸನ್ನಿಧಿಯಲ್ಲಿ ಸಪ್ತಗಿರಿವಾಸಿಯಾದ ಶ್ರೀನಿವಾಸ ಮತ್ತು ಪದ್ಮಾವತಿಯ ಕಲ್ಯಾಣೋತ್ಸವದ ಪುಣ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಗಣೇಶ್ ಶೆಟ್ಟಿ ಜಪ್ಪು ಗುಡ್ಡೆಗುತ್ತು ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಫೆ.11ರಂದು ಸಂಜೆ 4 ಗಂಟೆಗೆ ಬ್ರಹ್ಮಶ್ರೀ ಕೆ.ಯು ನೀಲೇಶ್ವರ

ಅಮೃತ ವಿದ್ಯಾಲಯಂನಲ್ಲಿ ಸಾರ್ವಜನಿಕ ಮಕ್ಕಳ ಆರೋಗ್ಯ ಶಿಬಿರ

ಇದೇ ಬರುವ ಆದಿತ್ಯವಾರ ಫೆಬ್ರವರಿ 5ರಂದು ಬೋಳೂರಿನಲ್ಲಿರುವ ಅಮೃತ ವಿದ್ಯಾಲಯಂನ ಆವರಣದಲ್ಲಿ ಸಾರ್ವಜನಿಕ ಮಕ್ಕಳಿಗೆ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಬೆಳಿಗ್ಗೆ 8.30ರಿಂದ ಅಪರಾಹ್ನ 1.30ರ ವರೆಗೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಡಾ. ಚಾಂದಿನಿ ವಿಕ್ರಂ ಶೆಟ್ಟಿ ಎಚ್ ಒ ಡಿ, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್,ಇವರಿಂದ ದಂತ ನೈರ್ಮಲ್ಯದ ಬಗ್ಗೆ ಉಪನ್ಯಾಸ ಮಾಡಲಿದ್ಧಾರೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆಯ ಬೇಕಾಗಿ ವಿನಂತಿ.

ಫೆ.11ರಂದು ಪುತ್ತೂರಿಗೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ : ಕಾರ್ಯಕ್ರಮ ಯಶಸ್ವಿಗಾಗಿ ಪ್ರಾರ್ಥನೆ

ಪುತ್ತೂರು : ಅಮಿತ್ ಶಾ ಫೆ.11 ರಂದು ಪುತ್ತೂರಿಗೆ ಆಗಮಿಸಿ ಕ್ಯಾಂಪ್ಕೊ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ ಸಮಾವೇಶ ನಡೆಯಲಿರುವ ಹಿನ್ನಲೆಯಲ್ಲಿ ಕಾರ್ಯಕ್ರಮದ ಯಶಸ್ವಿಗಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಗುರುವಾರ ಪ್ರಾರ್ಥನೆ ಸಲ್ಲಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್.ಭಟ್ ಪ್ರಾರ್ಥನೆ ಸಲ್ಲಿಸಿದರು. ಕಾರ್ಯಕ್ರಮದ ಸಂದರ್ಭದಲ್ಲಿ ಹಾಗೂ ಬರುವವರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಅನುಗ್ರಹಿಸಲು

ಕಡಬ : ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಎಂಬ ಗುಮಾನಿ, ಅಗ್ನಿಶಾಮಕ ದಳಕ್ಕೆ ಮಾಹಿತಿ

ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ

ಶ್ರಮದಾನದ ಮೂಲಕ ರಸ್ತೆಗೆ ಚೆಲ್ಲಿದ್ದ ಮರಳು : ಅಲೋಶಿಯಸ್ ಐಟಿಐ ಕಾಲೇಜಿನ ವಿದ್ಯಾರ್ಥಿಗಳಿಂದತೆರವು ಕಾರ್ಯ

ನಗರದ ಅಲೋಶಿಯಸ್ ಐಟಿಐ ಕಾಲೇಜಿನ ರಸ್ತೆಯಲ್ಲಿ ಮರಳು ಸಾಗಾಟ ಲಾರಿಯಿಂದ ಮರಳು ರಸ್ತೆಗೆ ಚೆಲ್ಲಿದ್ದು ಇದರಿಂದ ದ್ವಿಚಕ್ರ ವಾಹನದಲ್ಲಿ ಚಲಿಸುವ ಸವಾರರು ಅಪಘಾತಕ್ಕೊಳಗಾಗುತ್ತಿದ್ದರು. ಇದನ್ನು ಗಮನಿಸಿದ ಅಲೋಶಿಯಸ್ ಕಾಲೇಜಿನ ಐಟಿಐ ವಿದ್ಯಾರ್ಥಿಗಳು ರಸ್ತೆಗೆ ಚೆಲ್ಲಿದ್ದ ಮರಳನ್ನು ತೆರವು ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವಿದ್ಯಾರ್ಥಿಗಳ ಸೇವಾ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಊರ್ಮಿಳಾ ರಮೇಶ್‌ಗೆ ಮಾತೃ ವಿಯೋಗ

ಮಂಗಳೂರು: ಪ್ರತಿಷ್ಠಿತ ದೀಪಾ ಕಂಫರ್ಟ್‌ ಮಾಲಕಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷರಾದ ಊರ್ಮಿಳಾ ರಮೇಶ್ ಅವರ ಮಾತೃಶ್ರೀ ರಾಧಾ ಡಿ. ಅಮೀನ್(93) ಗುರುವಾರ ಮಂಗಳೂರು ಗಾಂಧಿನಗರದ ನಿವಾಸದಲ್ಲಿ ನಿಧನರಾದರು. ಅವರು ಪುತ್ರ, ಪುತ್ರಿ ಸೇರಿ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ವಿಧಿ ಗಾಂಧಿನಗರದ ನಿವಾಸದಲ್ಲಿ ಇಂದು ಸಂಜೆ 4ಗಂಟೆಗೆ ನೆರವೇರಲಿದೆ