Home Posts tagged V4News (Page 576)

ಮೂಡುಬಿದರೆ : ಧೂಳು ಬರುವ ಹಾಗೆ ವಾಹನ ಚಾಲಾಯಿಸಬೇಡ ಎಂದಾತನ ಕೊಲೆ

ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆಬಾಗಿಲಿನ ನಿವಾಸಿ ಫಯಾಝ್ (61) ಹತ್ಯೆಗೀಡಾದ ವ್ಯಕ್ತಿ. ಪಯಾಜ್ ಶುಕ್ರವಾರ ಕೋಟೆಬಾಗಿಲು ಮಸೀದಿಗೆ ನಮಾಝ್‍ಗೆ ತೆರಳುವ ಸಂಧರ್ಭ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಪರೂಪದ ರಕ್ತದ ಗುಂಪಿನ ಬಾಂಬೆ ಫಿನೋಟೈಪ್ ಹೊಂದಿರುವ ಮಹಿಳೆಯ ಯಶಸ್ವಿ ನಿರ್ವಹಣೆ

ಮಣಿಪಾಲ, 3ನೇ ಫೆಬ್ರವರಿ 2023:ರಕ್ತದ ಗುಂಪು O ನೆಗೆಟಿವ್ ಆಗಿದ್ದು ಹಾಗೂ ಆಂಟಿಬಾಡಿ ಇದೆಯೆಂದು ಮುಂದಿನ ನಿರ್ವಹಣೆಗಾಗಿ ಗರ್ಭಿಣಿ ಮಹಿಳೆಯನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕಳುಹಿಸಲಾಗಿತ್ತು. ಕಸ್ತೂರ್ಬಾ ಆಸ್ಪತ್ರೆ ರಕ್ತ ಕೇಂದ್ರದಲ್ಲಿ ಪರೀಕ್ಷೆ ಮಾಡಿದಾಗ ಮಹಿಳೆಗೆ ಅತ್ಯಂತ ಅಪರೂಪದ ಬಾಂಬೆ ನೆಗೆಟಿವ್ ರಕ್ತದ ಗುಂಪು ಇರುವುದು ಕಂಡುಬಂದಿತು. ಇಂತಹ ಸಂದರ್ಭದಲ್ಲಿ ಆಂಟಿ ‘ಡಿ’ ಆಂಟಿಬಾಡಿ ಇರುವಿಕೆಯನ್ನುಪರೀಕ್ಷೆ ಮಾಡಲು ತುಂಬಾ ಕಷ್ಟ. ರಕ್ತದ ಉನ್ನತ

ಫೆ.5ರಿಂದ 9ರ ವರೆಗೆ ಕರಾವಳಿಯಲ್ಲಿ ಪ್ರಜಾಧ್ವನಿ ಯಾತ್ರೆ

ಕರಾವಳಿ ಭಾಗದಲ್ಲಿ ಫೆ.5ರಿಂದ 9ರವರೆಗೆ ಪ್ರಜಾಧ್ವನಿ ಯಾತ್ರೆ ಕೈಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು ಎಂದು ಮಾಜಿ ಸಚಿವ ಹಾಲಿ ಶಾಸಕ ಹಾಗೂ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಧ್ವನಿ ಯಾತ್ರೆ ಫೆ.5ರಂದು ಸುಳ್ಯದಿಂದ ಆರಂಭಗೊಂಡು ಫೆ.6ರಂದು ಮೂಡಬಿದಿರೆ, ಫೆ.7ರಂದು ಕಾಪು, ಫೆ.8ರಂದು ಕುಂದಾಪುರ, ಫೆ.9ರಂದು ಶೃಂಗೇರಿ ತಲುಪಲಿದೆ ಎಂದರು.

ಮಂಗಳೂರಿನಲ್ಲಿ ಜುವೆಲ್ಲರಿ ಶಾಪ್ ಗೆ ನುಗ್ಗಿ ವ್ಯಕ್ತಿಯ ಕೊಲೆ

ವ್ಯಕ್ತಿಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ. ನಗರದಲ್ಲಿರುವ ಮಂಗಳೂರು ಜುವೆಲ್ಲರಿಗೆ ನುಗ್ಗಿದ ಮುಸುಕುಧಾರಿ ವ್ಯಕ್ತಿಯೊಬ್ಬ ಅಲ್ಲಿನ ಸಿಬ್ಬಂದಿಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿದ್ದಾನೆ. ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವ (52) ಕೊಲೆಯಾದ ವ್ಯಕ್ತಿ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಕೃತ್ಯ ಎಸಗಿದ್ದಾನೆ. ಜುವೆಲ್ಲರಿ ಮಾಲಕ ಊಟಕ್ಕೆಂದು ತೆರಳಿದ್ದಾಗ ಆಗಂತುಕ ಒಳಗೆ ಬಂದಿದ್ದ.

ಪುತ್ತೂರು : ಕಾರಿಗೆ ಢಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷ

ಕಾರಿಗೆ ಡಿಕ್ಕಿಯಾದ ನಾಯಿ ಕಾರಿನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಎಂಬಲ್ಲಿ ನಡೆದಿದೆ.ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ ಗಾಯಗಳಾಗದೆ ಆರಾಮವಾಗಿ ಬಂಪರ್ ಒಳಗಿನಿಂದ ಇಳಿದು ಹೋಗಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಪುತ್ತೂರಿಗೆ ವಾಪಾಸಾಗುತ್ತಿದ್ದ ದಾರಿ ಮಧ್ಯೆ ಬಳ್ಪ ಎಂಬಲ್ಲಿ ನಾಯೊಂದು ಕಾರಿಗೆ ಡಿಕ್ಕಿ

ಫೆ.11ರಂದು ಪುತ್ತೂರಿಗೆ ಆಗಮಿಸಲಿರುವ ಕೇಂದ್ರ ಸಚಿವ ಅಮಿತ್ ಶಾ

ಪುತ್ತೂರು: ಸುವರ್ಣ ಮಹೋತ್ಸವ ಆಚರಿಸುತ್ತಿರುವ ಪ್ರತಿಷ್ಠಿತ ಅಂತರ್ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪೆÇ್ಕೀದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಫೆ.11ರಂದು ಕೇಂದ್ರ ಗೃಹ ಸಚಿವರು, ಕೇಂದ್ರದ ಪ್ರಥಮ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಪೂರಕ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮತ್ತು ದ.ಕ ಎಸ್ಪಿ ಡಾ.ಅಮಟೆ ವಿಕ್ರಮ್‍ರವರು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಮಾವೇಶ

ಮಂಜೇಶ್ವರ: ಸಾರ್ವಜನಿಕ ಸ್ಥಳಗಳಲ್ಲಿ ತಂದು ತ್ಯಾಜ್ಯ ಸುರಿಯುತ್ತಿರುವ ವಿಚಾರ, ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತು ವ್ಯಾಪ್ತಿಯ 5 ಹಾಗೂ 7ನೇ ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಯತೀಂ ಖಾನ-ಗೇರುಕಟ್ಟೆ ರಸ್ತೆಯ ಅಂಬಿತ್ತಡಿ, ಹಾರ್ವಾರ ಮುಂತಾದ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳು ತುಂಬಿ ದುರ್ವಾಸನೆ ಬೀರುತ್ತಿದೆ. ಜನಸಂಚಾರವಿಲ್ಲದ ರಾತ್ರಿ ಸಮಯಗಳಲ್ಲಿ ಇಲ್ಲಿ ತ್ಯಾಜ್ಯಗಳನ್ನು ತಂದು ಹಾಕಲಾಗುತ್ತಿದೆ. ಸಾರ್ವಜನಿಕ ಸ್ಥಳ ಹಾಗೂ ರಸ್ತೆ ಬದಿಗಳಲ್ಲಿ ವ್ಯಾಪಕವಾಗಿ ತ್ಯಾಜ್ಯಗಳು

ಮುಲ್ಕಿ: ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಮುಲ್ಕಿ: ಮುಲ್ಕಿ ಸಮೀಪದ ಬೆಳ್ಳಾಯರು ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಶ್ರೀ ದೇವರಿಗೆ ಪೂರ್ವಾಹ್ನ ಗಂಟೆ 10:25ರ ಮೀನ ಲಗ್ನ ಸುಮುಹೂರ್ತದಲ್ಲಿ ದೇವಸ್ಥಾನದ ತಂತ್ರಿಗಳಾದ ಶಿವಪ್ರಸಾದ ತಂತ್ರಿ ,ವೇ.ಮೂ ಪಂಜ ಭಾಸ್ಕರ ಭಟ್ ಹಾಗೂ ಅರ್ಚಕ ಗೋಪಾಲ ಭಟ್ ಪೌರೋಹಿತ್ಯದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಿತು. ಬಳಿಕ ಮಹಾಪೂಜೆ, ಅವಸ್ಕೃತ ಬಲಿ ನಡೆಯಿತು. ಮಧ್ಯಾಹ್ನ ಪಲ್ಲಪೂಜೆ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ

ಹಳೆಯಂಗಡಿ : ಸಮಸ್ಯೆಗಳನ್ನು ಒಂದೇ ಸೂರಿನಡಿ ಪರಿಹರಿಸುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮ

ಹಳೆಯಂಗಡಿ: ಗ್ರಾಮದ ಜನತೆಯ ಸಮಸ್ಯೆಗಳನ್ನು ಒಂದೇ ಸೂರಿನಡಿ ಪರಿಹರಿಸುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ, ಸಾಕಷ್ಟು ಮಂದಿ ಇದರ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ ಹಾಗೂ ಪಡೆದುಕೊಳ್ಳಬೇಕು ಎಂದು ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೊಟ್ಯಾನ್‌ ಹೇಳಿದರು. ಅವರು ಹಳೆಯಂಗಡಿ ಪಂಚಾಯತ್‌ ವತಿಯಿಂದ ಕೆಮ್ರಾಲ್, ಪಡುಪನಂಬೂರು, ಮತ್ತು ಹಳೆಯಂಗಡಿ ಗ್ರಾಮ ಪಂಚಾಯತ್ ನಲ್ಲಿ ಬರುವ ಎಲ್ಲಾ ಗ್ರಾಮದವರಿಗೆ ವಿದ್ಯಾ ವಿನಾಯಕ ಯುವಕ ಮಂಡಲ ಸಭಾಭವನ

ಫೆಬ್ರವರಿ 6 ರಿಂದ 11ರವರೆಗೆ ಶ್ರೀ ಸಹಸ್ರ ನೃಸಿಂಹ ಯಾಗ

ಫೆಬ್ರವರಿ 6 ರಿಂದ 11ರವರೆಗೆ ಶ್ರೀ ಸಹಸ್ರ ನೃಸಿಂಹ ಯಾಗ ನಡೆಯಲಿದೆ ಎಂದು ಯಾಗಾಧ್ಯಕ್ಷ ಸುಬ್ರಹ್ಮಣ್ಯ ಶೆಣೈ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಯಾಗದ ಕಾರ್ಯಾಧ್ಯಕ್ಷ ದೇವಿ ಪ್ರಸಾದ್‌ ಶೆಟ್ಟಿ ಕೊಡೆತ್ತೂರು ಮಾತನಾಡಿ ವೇ.ಮೂ.ಸುಧೀರ್‌ ಭಟ್‌. ನೇತೃತ್ವದಲ್ಲಿ ವೇ.ಮೂ. ಕಾಶಿನಾಥ ಆಚಾರ್ಯ ಮಾರ್ಗದರ್ಶನದಲ್ಲಿ 50 ಮಂದಿ ಖುತ್ವಿಜರಿಂದ ಬೃಹತ್‌ ಕುಂಡದಲ್ಲಿ ಶ್ರೀ ಸಹಸ್ರ ನೃಸಿಂಹ ಯಾಗ ನಡೆಯಲಿದೆ. ದಿನಂಪ್ರತಿ 5000ದಷ್ಟು ಮಂದಿ ಅನ್ನ ಪ್ರಸಾದ ಸ್ವೀಕರಿಸಲಿದ್ದು