ಮೂಡುಬಿದಿರೆ:ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ 36ನೇ ಅಂತರ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ ಪ್ರಥಮ ಹಾಗೂ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಆಳ್ವಾಸ್ ಕಾಲೇಜು ರಾಷ್ಟç ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಆಳ್ವಾಸ್ ಕಾಲೇಜು ತಂಡವು
ಬಂಟ್ವಾಳ: ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನಿಚರ್ಸ್ ಮತ್ತು ಕೊಮಾಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಾಳಿಗೆಯಲ್ಲಿ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಜನ ಜಮಾವಣೆಗೊಂಡಿದ್ದು, ನಂದಿಸುವ
ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆಯ ಮುಂಚಿತವಾಗಿ ಇಂದು ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀಮಿತ ಸಂಪನ್ಮೂಲಗಳನ್ನು ವಿವೇಚನಾಯಕ್ತವಾಗಿ ಬಳಸುವ ಜಾಣ್ಮೆ ಮೆರೆದಿದ್ದಾರೆ.ಜಾಗತಿಕ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸವಾಲುಗಳನ್ನು ಎದುರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಘೋಷಿಸಿದ್ದಾರೆ. ಬಜೆಟ್ ನಲ್ಲಿ ಏಳು ಆದ್ಯತಾ ವಲಯಗಳನ್ನು ಅವರು ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ
ಆಲೆಟ್ಟಿ ಗ್ರಾಮದ ನಾರ್ಕೋಡು ಕೋಲ್ಚಾರು ಕನ್ನಡಿತೋಡು ಮೂಲಕ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆಗೆ ಸೇರಿದ್ದು ಕಳೆದ 4 ವರ್ಷಗಳ ಹಿಂದೆ ಶಾಸಕ ಎಸ್.ಅಂಗಾರ ರವರು ಕೋಲ್ಚಾರಿನಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು.ಅನುದಾನ ರೂ. 10.5 ಕೋಟಿ ಬಿಡುಗಡೆಗೊಂಡು ಜೆ.ಡಿ.ಸುವರ್ಣ ಎಂಬ ಗುತ್ತಿಗೆದಾರರು ಕಾಮಗಾರಿ ಕೆಲಸ ಮಾಡುತ್ತಿದ್ದಾರೆ. ರಸ್ತೆಅಗಲೀಕರಣದ ಅರ್ಥ್ ವರ್ಕ್ ಮುಗಿದು ಇದೀಗ ಅಂತಿಮ ಹಂತದ ಡಾಮರೀಕರಣ ಕೆಲಸ
ಪುರಸಭೆ ವ್ಯಾಪ್ತಿಯಲ್ಲಿ ಬಹುಕೋಟಿ ರೂಪಾಯಿ ವೆಚ್ಚದ ಒಳಚರಂಡಿ ಕಳಪೆ ಕಾಮಗಾರಿಕೆಯಿಂದ ಕೂಡಿದೆ ಪರಿಸರದ ನಿವಾಸಿಗಳ ಬಾವಿಗಳು ಮಲಿನಗೊಂಡಿವೆ ಇದಕ್ಕಾಗಿ ಒಳಚರಂಡಿ ಮಂಡಳಿ ವಿರುದ್ಧ ಕ್ರಿಮಿನಲ್ ದಾಖಲೆ ದಾಖಲಿಸುವಂತೆ ಶುಭದರಾವ್ ಆಗ್ರಹಿಸಿದರು . ಅಧ್ಯಕ್ಷ ಸುಮಕೇಶವ ಅಧ್ಯಕ್ಷತೆಯಲ್ಲಿ ನಡೆದ ಕಾರ್ಕಳ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿ ಮೂರು ಮಾರ್ಗದಿಂದ ರಥ ಬೀದಿ ಸೇರಿದಂತೆ ಒಳಚರಂಡಿ ಮೂಲಕ ಹಾದು ಹೋದ ಕಡೆಗಳಲ್ಲಿ ಮಲಿನ ನೀರು ಸೋರಿಕೆಯಾಗುತ್ತಿದೆ. ಒತ್ತಡ
ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜ.30 ರಂದು
ಸುಳ್ಯ:ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ ಅವರಿಗೆ ವರ್ಗಾವಣೆಯಾಗಿದೆ.ಮುಂಬರುವ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್ಗಳ ವರ್ಗಾವಣೆಯಾಗಿದ್ದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮೀ ಅವರನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ತಹಶೀಲ್ದಾರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸುಳ್ಯಕ್ಕೆ ತಹಶೀಲ್ದಾರ್ ನೇಮಕ ಆದೇಶ ಇನ್ನಷ್ಟೇ ಆಗಬೇಕಾಗಿದೆ.ಕರ್ನಾಟಕ ವಿಧಾನಸಭಾ ಚುನಾವಣೆ 2023ರ
ಸುಳ್ಯ: ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ ಅವರಿಗೆ ವರ್ಗಾವಣೆಯಾಗಿದೆ.ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಅಧಿಕಾರಿಗಳ ವರ್ಗಾವಣೆಯಾಗುತ್ತಿದ್ದು ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮಾಂತರ ವೃತ್ತಕ್ಕೆವರ್ಗಾವಣೆಯಾಗಿದೆ.ಸುಳ್ಯ ವೃತ್ತ ನಿರೀಕ್ಷಕರಾಗಿ ಅಂಕೋಲದಲ್ಲಿ ಸರ್ಕಲ್ಇನ್ಸ್ಪೆಕ್ಟರ್ ಆಗಿರುವ ಸಂತೋಷ್ ಶೆಟ್ಟಿ ಎಂಬವರು ಬರಲಿದ್ದಾರೆ ಎಂದು
ಮೂಡುಬಿದಿರೆ : ನೇತಾಜಿ ಬ್ರಿಗೇಡ್ (ರಿ.) ಮೂಡುಬಿದಿರೆ ಇದರ 10ನೇ ಸೇವಾ ಯೋಜನೆಯ ಅಂಗವಾಗಿ ಮೂಡುಬಿದಿರೆಯ ಶ್ರೀ ಪುರಾತನ ಆದಿಶಕ್ತಿ ಮಹಾದೇವಿ ದೇವಸ್ಥಾನದಲ್ಲಿಎರಡು ಕುಟುಂಬಗಳಿಗೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು”ರಕ್ತದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಮೂಡುಬಿದಿರೆಯ ಶ್ರೀಯಾ ಎಂಬ ಮಗುವಿನ ಚಿಕಿತ್ಸಾ ವೆಚ್ಚಕ್ಕಾಗಿ ಮತ್ತು ಬಂಟ್ವಾಳದಲ್ಲಿ ಪುಟಾಣಿ ಮಕ್ಕಳಾದ ರಶ್ಮಿತ್ ಹಾಗೂ ಶ್ರದ್ಧಾ ಎಂಬುವರ ಶ್ರದ್ಧಾಶ್ರಯ ಮನೆ ನಿರ್ಮಾಣಕ್ಕೆ” ತಲಾ
ಬೆಳ್ತಂಗಡಿ; ಆದಿವಾಸಿವಸಮುದಾಯದ ಮುಖಂಡ ಜಯಾನಂದ ಪಿಲಿಕಳ ಅವರ ಮೇಲೆ ಶಾಸಕರು ದಬ್ಬಾಳಿಕೆ ನಡೆಸಿ ಅವಮಾನ ಮಾಡಿ ಹಲ್ಲೆ ಮಾಡುವುದಾಗಿ ಸಾರ್ವಜನಿಕವಾಗಿ ಬೆದರಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿರುವುದನ್ನು ವಿರೋಧಿಸಿ ಮೂಲನಿವಾಸಿ ಮಲೆಕುಡಿಯರ ಸಂಘ, ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಎದುರು ಸೋಮವಾರ ಪ್ರತಿಭಟನೆ ನಡೆಯಿತು.




























