ಮಂಗಳೂರಿನ ಬಿಜೈನ ಭಾರತೀನಗರದ ಶ್ರೀ ಕ್ಷೇತ್ರ ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ದೈವಸ್ಥಾನದ ಶ್ರೀ ದೈವರಾಜ ಬಬ್ಬುಸ್ವಾಮಿ ತನ್ನಿಮಾನಿಗ ಹಾಗೂ ಧೂಮಾವತಿ ಬಂಟ ಸಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ನವಕಲಶಾಭಿಷೇಕ ಜನವರಿ 28ರಿಂದ 30ರ ವರೆಗೆ ನಡೆಯಲಿದೆ. ಜನವರಿ 28ರ ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ನವಕಲಶಾಭಿಷೇಕ, ಗಣಹೋಮ, ಚಪ್ಪರ ಮುಹೂರ್ತ, ಮಧ್ಯಾಹ್ನ
ಕುಂದಾಪುರ ತಾಲೂಕು ಯುವ ಬಂಟರ ಸಂಫದ ವತಿಯಿಂದ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ ಹಾಗೂ ಬಂಟರ ಸಮ್ಮಿಲನ ಕಾರ್ಯಕ್ರಮವು ಕುಂದಾಪುರದ ಗಾಂಧೀ ಮೈದಾನದಲ್ಲಿ ನಡೆಯಿತು. ರಾಜ್ಯದ ವಿವಿಧ ಕಡೆಗಳಿಂದ ಕ್ರೀಡಾಪಟುಗಳ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಂಘಟನೆ ಮೂಲಕ ಒಂದಷ್ಟು ಜನ ಸಮುದಾಯದವರು ಒಟ್ಟಾಗುವ ಅವಕಾಶ ಇಂತಹ
ಭಾತ್ರತ್ವದ ಸಂದರ್ಭದಲ್ಲಿ ಏಸು ರಾಜ ಕ್ರಿಸ್ತನನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಬಂದು ವಿಶಾಲವಾದ ಮೈದಾನದಲ್ಲಿ ಏಸು ಕ್ರಿಸ್ತನ ದೇವರ ವಾಕ್ಯವನ್ನು ಕೇಳುತ್ತಾ ಅವರನ್ನು ಸ್ತುತಿಸುತ್ತ ಏಸು ಕ್ರಿಸ್ತನ ನಾಮದಲ್ಲಿ ಆಶೀರ್ವಾದ ಪಡೆದಿದ್ದೇವೆ. ಏಕತೆ, ಸಹೋದರತೆ, ಭಾತ್ರತ್ವ ಇರಬೇಕು ಎಂದು ಪ್ರವಚನ ನೀಡಿದಂತ ದಿವ್ಯ ಬಲಿ ಪೂಜೆಯನ್ನು ವಂದನೀಯ ಸ್ವಾಮಿ ಸಿರಿಲ್ ಲೋಬೋ ಉಡುಪಿ ಧರ್ಮಪ್ರಾಂತ್ಯದ ದಿವ್ಯ ಜ್ಯೋತಿ ಇದರ ನಿರ್ದೇಶಕರಾಗಿದ್ದವರು ಮುಂದಿನ ಐದು ದಿನಗಳ ಕಾಲ
ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ಬಳಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನಕ್ಕೆಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸಗೈದರು. ನಂತರ ಮಾತನಾಡಿದ ಅವರು 1500 ಅಂಬೇಡ್ಕರ್ ಭವನಗಳು ಸೂಕ್ತ ರೀತಿಯಲ್ಲಿ ನಿರ್ವಹಣೆಯಿಲ್ಲದಿರುವುದರಿಂದ ಅವುಗಳನ್ನು ಗ್ರಂಥಾಲಯವಾಗಿ ಪರಿವರ್ತಿಸಲು ಈಗಾಗಲೇ ಆದೇಶಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ
ಬೆಂಗಳೂರು; ಸ್ಯಾಂಡಲ್ ವುಡ್ ಇದೀಗ ಮತ್ತೊಮ್ಮೆ ಆಘಾತ ಎದುರಾಗಿದೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಆ ಬಳಿಕ ಅವರಿಗೆ ಹೃದಯಾಘಾತವಾಗಿದೆ. ಇದೀಗ
‘ಲೇಖಕಿ ಸಾರಾ ಅಬೂಬಕ್ಕರ್ ಅವರು ತನ್ನ ಧರ್ಮಕ್ಕೆ ನಿಷ್ಠರಾಗಿದ್ದರು ಮತ್ತು ಬೇರೆ ಧರ್ಮಗಳ ಜೊತೆಗೂ ಒಳ್ಳೆಯ ಒಡನಾಟ ಇಟ್ಟು ಕೊಂಡಿದ್ದರು. ಮುಸ್ಲಿಂ ಸಮುದಾಯದ ಆಚಾರಗಳು ಮತ್ತು ಆಚರಣೆಯ ಸಂಧಿಗ್ಧತೆಗಳ ತುಂಬಾ ಅಧ್ಯಯನ ಮಾಡಿ ತಮ್ಮ ಕಾದಂಬರಿಗಳಲ್ಲಿ ಕಣ್ಣಿಗೆ ಕಟ್ಟುವಂತೆ ಬರೆಯುತ್ತಿದ್ದರು. ಸ್ತ್ರೀವಾದಿಯಾಗಿದ್ದ ಸಾರಾ ಅವರು ಮಾನವತಾವಾದಿಯೂ ಆಗಿದ್ದರು. ಸಂವೇದನೆಗಳು ಮತ್ತು ಸಂಘರ್ಷಗಳ ನಡುವೆ ನಿರಾಳವಾಗಿ ಬದುಕಿದ ಗಟ್ಟಿ ಮನಸಿನ
ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಾಧಾರ ನದಿಯಲ್ಲಿ ತೆಪ್ಪದಲ್ಲಿ ಸಾಗುತ್ತಿದ್ದಾಗ ಆಕಸ್ಮಿಕವಾಗಿ ತೆಪ್ಪ ಮಗುಚಿ ಮಹಿಳೆಯೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಏಣಿತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬವರ ಪತ್ನಿ ಗೀತಾ (47) ಎಂದು ಗುರುತಿಸಲಾಗಿದೆ. ದನಗಳಿಗೆ ಮೇವಿನ ಹುಲ್ಲು ತರುವುದಕ್ಕಾಗಿ ಏಣಿತಡ್ಕ ಭಾಗದಿಂದ ನದಿಯ ಇನ್ನೊಂದು ಭಾಗ ಆರೆಲ್ತಡಿ ಎಂಬಲ್ಲಿಗೆ ತೆಪ್ಪದಲ್ಲಿ ತೆರಳಿ
ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಇತಿಹಾಸ ಪ್ರಸಿದ್ಧ ಉಳ್ಳಾಲ ಸೈಯದ್ ಮದನಿ ದರ್ಗಾಕ್ಕೆ ಭೇಟಿ ನೀಡಿದರು. ಮಂಗಳೂರು ದಕ್ಷಿಣ ಮಾಜಿ ಶಾಸಕ ಜೆ.ಆರ್ ಲೋಬೊ, ಕೆಪಿಸಿಸಿಯ ಪ್ರೊ. ರಾಧಾಕೃಷ್ಣ , ಕೆಪಿಸಿಸಿ ಸೆಕ್ರೆಟರಿಗಳಾದ ಹುಸೈನ್ , ಜಿ.ಎ.ಬಾವಾ, ಟಿ.ಕೆ ಸುಧೀರ್, ಡಾ.ಅಭಿಲಾಷ್ ಕೂಡ ಭೇಟಿ ನೀಡಿದ್ದು, ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮೂಡುಬಿದಿರೆ : ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಇರುವ ಮಾರಿಗುಡಿಗೆ ನುಗ್ಗಿ ಗದ್ದುಗೆ ಮಂಟಪದಲ್ಲಿದ್ದ ಮೂರು ಕಾಣಿಕೆ ಡಬ್ಬಗಳನ್ನು ಕಳವುಗೈದಿರುವ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ ಶನಿವಾರ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಹೆಜಮಾಡಿಯ ಕೊಕ್ರಾಣಿ ಗ್ರಾಮದ ಕಕ್ವಾ ನಿವಾಸಿ ವಿಜಯ ಯಾನೆ ಕೊಕ್ರಾಣಿ ವಿಜಯ್ ಬಂಧಿತ ಆರೋಪಿ. ಈತ ಜ.15ರಂದು ರಾತ್ರಿ ಮೂಡುಬಿದಿರೆಯ ಮಾರಿಗುಡಿಗೆ ಪ್ರವೇಶಿಸಿ ಕಾಣಿಕೆ ಡಬ್ಬಿಗಳನ್ನು ಕಳವುಗೈದಿದ್ದ ಈ ಬಗ್ಗೆ ಮೂಡುಬಿದಿರೆ
ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ನಡೆದ ಕಿಡ್ನಾಪ್ ಪ್ರಕರಣವೊಂದನ್ನು ಪೊಲೀಸರೂ ಅದೇ ಸ್ಟೈಲ್ ನಲ್ಲಿ ಭೇದಿಸಿದ್ದಾರೆ.ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸಿದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸ್ ಬಲೆಗೆ ಬಿದ್ದಿದ್ದಾರೆ.ಗೋಲ್ಡ್ ಬಿಸ್ಕೇಟ್ ಹಾಗೂ ಹಣ ದೋಚಲು ಯತ್ನಿಸಿದ ಖದೀಮರು ಇದೀಗ ಜೈಲು ಕಂಬಿ ಎಣಿಸಿತ್ತಿದ್ದಾರೆ. ಹಣಕ್ಕಾಗಿ ಜನ ಏನು ಬೇಕಾದ್ರು ಮಾಡ್ತಾರೆ ಅನ್ನೋದು ಆಗ್ಗಾಗ್ಗೆ ಸಾಬೀತಾಗುತ್ತಿದೆ. ಮಂಗಳೂರಿನಲ್ಲಿ ಇದೇ ರೀತಿ ಹಣದ ಆಸೆಗೆ




























