Home Posts tagged V4News (Page 588)

ಅಶೋಕ್ ಕುಮಾರ್ ರೈ ಬಿಜೆಪಿಯ ಸಕ್ರೀಯ ಸದಸ್ಯತ್ವ ನವೀಕರಿಸಿಲ್ಲ: ಬಿಜೆಪಿ ಮಂಡಲದ ಹೇಳಿಕೆ

ಪುತ್ತೂರು: ಬಿಜೆಪಿ ಪಕ್ಷವು ಸಿದ್ದಾಂತದ ಮೇಲೆ ನಿಂತಿದೆ. ಅದನ್ನು ನಂಬಿಕೊಂಡು ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಸಿದ್ಧಾಂತವನ್ನು ಒಪ್ಪಿಕೊಂಡು ಯಾವ ಕಾಲಕ್ಕೂ ಚುನಾವಣೆ ಬರಲಿ ಅಲ್ಲಿ ಸೋಲು ಗೆಲುವು ಮುಖ್ಯವಾಗುವುದಿಲ್ಲ. ಯಾಕೆಂದರೆ ಇಲ್ಲಿ ದೇಶದ ಬಗ್ಗೆ ಚಿಂತನೆ ಇದೆ. ಬೇರೆ ಪಕ್ಷದಲ್ಲಿ ಬಿಜೆಪಿಯನ್ನು ಸೋಲಿಸುವ ಚಿಂತನೆ ಇದೆ. ಹಾಗಾಗಿ ಕಳೆದ 6 ವರ್ಷಗಳಿಂದ

ಉಳ್ಳಾಲ ನಗರಸಭೆ ಸ್ಥಾಯಿ ಸಮಿತಿ ನೇಮಕ ಅಸಿಂಧು : ಸಭೆ ಮೊಟಕುಗೊಳಿಸಿ ಹೊರನಡೆದ ಅಧ್ಯಕ್ಷೆ

ಉಳ್ಳಾಲ: ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ನೇಮಕ ಕಾಂಗ್ರೆಸ್-ಬಿಜೆಪಿ ಮೈತ್ರಿಯಿಂದ ಮಾಡಲಾಗಿದೆ . ಈ ಕುರಿತ ವರದಿಯನ್ನು ನಗರಸಭೆ ಅಧ್ಯಕ್ಷರು ಜಿಲ್ಲಾಧಿಕಾರಿಗೆ ನೀಡಿದ್ದಾರೆ ಅನ್ನುವ ನಗರಸಭೆ ಸದಸ್ಯರೊಬ್ಬರ ಆರೋಪ ಎರಡು ಪಕ್ಷಗಳ ಸದಸ್ಯರ ನಡುವೆ ವಾಗ್ವಾದಕ್ಕೆ ಕಾರಣವಾಗಿ ಅಧ್ಯಕ್ಷರು ರಾಷ್ಟ್ರಗೀತೆಯನ್ನು ಹಾಡದೇ ಅರ್ಧದಲ್ಲೇ ಸಭೆಯಿಂದ ಹೊರನಡೆದ ಘಟನೆ ಇಂದು ಉಳ್ಳಾಲ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಡೆಯಿತು. ಕಾಂಗ್ರೆಸ್ ಬೆಂಬಲಿತ 7 ಸದಸ್ಯರನ್ನು ಇಟ್ಟುಕೊಂಡು

ಜ.20 : ಆಳ್ವಾಸ್ ನಲ್ಲಿ ಯಕ್ಷ ರಂಗಾಯಣದ ಪರಶುರಾಮ ನಾಟಕ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಇದರ ಆಶ್ರಯದಲ್ಲಿ, ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಾಳೆ (ಜ.20)ಸಂಜೆ 6.45 ಕ್ಕೆ ಯಕ್ಷ ರಂಗಾಯಣ ಕಾರ್ಕಳ ಇದರ ಕಲಾವಿದರು ಅಭಿನಯಿಸುವ ಪರಶುರಾಮ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶಶಿರಾಜ್ ಕಾವೂರು ರಚಿಸಿದ ಈ ನಾಟಕವನ್ನು ಡಾ||ಜೀವನ್ ರಾಂ ಸುಳ್ಯ ನಿರ್ದೇಶಿಸಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ.ಮೋಹನ ಆಳ್ವರು ನಾಟಕ

ಭಗವಂತಕೊಟ್ಟ ಶಕ್ತಿಯನ್ನು ಸಮಾಜಕ್ಕೆ, ಈ ದೇಶಕ್ಕೋಸ್ಕರ ವಿನಿಯೋಗಿಸಬೇಕು: ಸಚಿವ ಬಿ.ಸಿ ನಾಗೇಶ್ ಹೇಳಿಕೆ

ಕೇಂದ್ರ ಹಾಗೂ ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳನು ನೀಡುವುದರೊಂದಿಗೆ ಆಮೂಲಾಗ್ರ ಬದಲವಾಣೆ ತಂದು ಹೊಸ ಶಿಕ್ಷಣ ನೀತಿಯಿಂದ ದೇಶದ ಭವಿಷ್ಯವನ್ನು ಬದಲಾಯಿಸಿ ದೇಶವನ್ನು ದೇಶದ ಗತವೈಭವವನ್ನು ಮರು ನಿರ್ಮಾಣ ಮಾಡಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೆಶ್ ಹೇಳಿದರು. ಅವರು ಕಡಬ ಸರಕಾರಿ ಪ್ರೌಢ ಶಾಲೆಯಲ್ಲಿ ಸಚಿವರ ವಿಶೇಷ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಐದು ಕೊಠಡಿಗಳಿಗೆ ಶಿಲಾನ್ಯಾಸ ನೆರವೇರಿಸಿ ಸಭಾ ಕಾರ್ಯಕ್ರಮವನ್ನು

ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ.ಗೆ ಕುಂದೇಶ್ವರ ಸಮ್ಮಾನ್

ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ರಂಗದ ಬಿರ್ಸೆ ಪ್ರಶಾಂತ್ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಗಾನ ವೃತ್ತಿಪರ ಮೇಳದಲ್ಲಿ ಹಾಸ್ಯ ಕಲಾವಿದರಾಗಿರುವ ಪ್ರಶಾಂತ್ ಸಿ.ಕೆ. ಅವರು, ಅನೇಕ ಯಕ್ಷಗಾನ ಪ್ರಸಂಗ, ತುಳು ನಾಟಕಗಳನ್ನು ರಚಿಸಿದ್ದಾರೆ. ಸಿನಿಮಾ ರಂಗದಲ್ಲಿ

ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್ ಮುಚ್ಚುವಂತೆ ಪ್ರತಿಭಟನೆ

ಮಂಗಳೂರು ನಗರದಲ್ಲಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಮತ್ತು ಜೂಜುಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ನೀತಿಯ ವಿರುದ್ಧ ಡಿವೈಎಫ್‍ಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.

ಮಾಣಿ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಪೂರ್ಣ ಸುಟ್ಟು ಕರಕಲಾದ ಮನೆ

ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರು ಮನೆಯಲ್ಲಿ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ

ರಸ್ತೆಯುದ್ಧಕ್ಕೂ ಚೆಲ್ಲುತ್ತಿರುವ ಮೀನಿನ ದುರ್ವಾಸನೆಯುಕ್ತ ನೀರು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ

ಮಂಜೇಶ್ವರ : ಮೀನುಗಳನ್ನು ಬಾಕ್ಸ್ ಗಳಲ್ಲಿ ತುಂಬಿಕೊಂಡು ಹೆದ್ದಾರಿಯಲ್ಲಿ ಬೇರೆಡೆಗೆ ಸಾಗುವ ಮೀನು ಲಾರಿಗಳು ದುರ್ವಾಸನೆಯನ್ನು ಬೀರಿ ಅವಾಂತರ ಸೃಷ್ಟಿಸಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ವ್ಯಕ್ತವಾಗುತ್ತಿದೆ. ಮೀನು ಸಾಗಾಟ ಮಾಡುವ ಲಾರಿಗಳು ಐಸ್ ತುಂಬಿದ ಬಾಕ್ಸ್ ಗಳಲ್ಲಿ ಮೀನುಗಳನ್ನು ಹಾಕಿಕೊಂಡು ಕಾಸರಗೋಡು ಭಾಗದಿಂದ ಕೇರಳದ ವಿವಿಧಡೆಗೆ ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗುತ್ತಿದೆ. ಆದರೆ ಲಾರಿಗಳಲ್ಲಿ ಐಸ್ ಕರಗಿದ ನೀರು ರಸ್ತೆಯ ಮೇಲೆ ಬೀಳದಂತೆ ಸೇಪ್ಟಿ

ಪಡುಬಿದ್ರಿಯಲ್ಲಿ ಸರಣಿ ಕಳ್ಳತನ, ಕಳವು ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಳೆದ ರಾತ್ರಿ ಪಡುಬಿದ್ರಿ ಮುಖ್ಯ ಮಾರುಕಟ್ಟೆಯ ಸೂಪರ್ ಮಾರ್ಕೆಟ್ ಹಾಗೂ ಕಾರ್ಕಳ ರಸ್ತೆಯಲ್ಲಿರುವ ಬಟ್ಟೆಯಂಗಡಿಯಲ್ಲಿ ಕಳ್ಳತನ ನಡೆದಿದ್ದು ಸಹಸ್ರಾರು ರೂಪಾಯಿ ಬೆಲೆಬಾಳುವ ವಸ್ತುಗಳು ಹಾಗೂ ನಗದು ಕಳವಾಗಿದ್ದು ಕಳ್ಳ ಸಿಸಿ ಕ್ಯಾಮಾರದಲ್ಲಿ ಸೆರೆ ಸಿಕ್ಕಿದ್ದಾನೆ.ಮುಖ್ಯ ಮಾರುಕಟ್ಟೆಯಲ್ಲಿರುವ ಕೆ.ಎಸ್. ಬಜಾರ್‍ನ ಬೀಗ ಮುರಿದ ಕಳ್ಳ ಒಳ ಹೊಕ್ಕು ಒಂದು ಲ್ಯಾಪ್‍ಟಾಪ್ ಹಾಗೂ ಒಂದು ಬೊಬೈಲ್ ಕಳವು ನಡೆಸಿದ್ದಾನೆ. ಕಾರ್ಕಳ ರಸ್ತೆಯಲ್ಲಿರುವ ಬಟ್ಟೆಯಂಗಡಿಯ

ಉಪ್ಪಿನಂಗಡಿ : ಟಯರ್ ರಿಸೋಲ್ ಸಂಸ್ಥೆಯಲ್ಲಿ ಬೆಂಕಿ, ಕಾರ್ಮಿಕ ಮೃತ್ಯು

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯಲ್ಲಿ ಮಧ್ಯಾಹ್ನದ ವೇಳೆಗೆ ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ