ನವ ದೆಹಲಿ, ಜನವರಿ 15; 72 ಪ್ರಯಾಣಿಕರ ಸಾಮರ್ಥ್ಯದ ವಿಮಾನ ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಪತನಗೊಂಡಿದೆ. ರಕ್ಷಣಾ ಕಾರ್ಯಗಳು ನಡೆಯುತ್ತಿವೆ. ಭಾನುವಾರ 68 ಪ್ರಯಾಣಿಕರು, ನಾಲ್ವರು ಸಿಬ್ಬಂದಿ ಇದ್ದ Yeti ವಿಮಾನಯಾನ ಸಂಸ್ಥೆಗೆ ಸೇರಿದ್ದ ವಿಮಾನ ವಿಮಾನ ನಿಲ್ದಾಣದ ರನ್ವೇ ಸಮೀಪ ಪತನಗೊಂಡಿದೆ. ಪತನಗೊಂಡ
ನಮ್ಮಲ್ಲಿರುವ ಒಳ್ಳೆ ಗುಣಗಳನ್ನು ಬೆಳೆಸಬೇಕು.ನಮ್ಮನ್ನು ನಾವು ಗುರುತಿಸಿ ಕೊಳ್ಳಬೇಕು ಎಂದು ಮೂಡಬಿದ್ರೆಯ ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷರಾದ ಯುವರಾಜ್ ಜೈನ್ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಅನಾರು ದೇವಸ್ಥಾನದಲ್ಲಿ ಧಾರ್ಮಿಕ ಭಾಷಣದಲ್ಲಿ ಮಾತನಾಡಿ ದೇವರನ್ನು ನಾವು ನಮ್ಮ ಹೃದಯದಲ್ಲಿ ಕಾಣಬೇಕು. ಜೀವನದಲ್ಲಿ ದೇವರು ಮೆಚ್ಚುವಂತಹ ಒಳ್ಳೆಯ ಕೆಲಸ ಮಾಡಬೇಕು ಎಂದು ಹೇಳಿದರು. ನಂತರ ಉಳಿಯ ಬೀಡಿನ ನಿತೇಶ್ ಬಲ್ಲಾಳ್ ಮಾತನಾಡಿ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸಿದ
ಹೆಸರಾಂತ ಕನ್ನಡ ಲೇಖಕಿ ನಾಡೋಜ ಸಾರಾ ಅಬೂಬಕ್ಕರ್ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರಿಗೆ ನಾಗರಿಕ ನುಡಿನಮನ ಮತ್ತು ಸಂತಾಪ ಸಭೆಯು ಬಲ್ಮಠದ ಸಹೋದಯ ಸಭಾಂಗಣದಲ್ಲಿ ಜರುಗಿತು. ಹಿರಿಯ ಸಾಹಿತಿ ಬಿ.ಎಂ. ರೋಹಿಣಿ ಮಾತನಾಡಿ, ಪ್ರಭುತ್ವ ಪೊಲೀಸ್, ಪುರೋಹಿತಶಾಹಿ ವಿರುದ್ಧ ಸಾರಾ ಅಬೂಬಕ್ಕರ್ ಧ್ವನಿ ಎತ್ತಿದ್ದರು. ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂಬುವುದು ಅವರ ನಿಲುವಾಗಿತ್ತು. ತನ್ನ ಕೃತಿಯ ಅನುವಾದ ಮತ್ತು ಕಾದಂಬರಿ ಆಧರಿಸಿ ನಿರ್ಮಿಸಿದ ಚಲನಚಿತ್ರವನ್ನು
ಇಂದು ಬೆಳಗ್ಗೆ ನೇಪಾಳದ ಪೋಖರಾದಲ್ಲಿ ಪತನಗೊಂಡ ಯೇತಿ ಏರ್ಲೈನ್ಸ್ ವಿಮಾನದಲ್ಲಿ ಕನಿಷ್ಠ ಐವರು ಭಾರತೀಯರು ಪ್ರಯಾಣಿಸುತ್ತಿದ್ದರು ಎಂದು ರಾಷ್ಟ್ರದ ನಾಗರಿಕ ವಿಮಾನಯಾನ ಪ್ರಾಧಿಕಾರ ಟ್ವೀಟ್ನಲ್ಲಿ ಖಚಿತಪಡಿಸಿದೆ. 15 ವಿದೇಶಿಯರು ಸೇರಿದಂತೆ 72 ಜನರನ್ನು ಹೊತ್ತೊಯ್ಯುತ್ತಿದ್ದ ನೇಪಾಳದ ಪ್ರಯಾಣಿಕ ವಿಮಾನವು ಪ್ರಮುಖ ಪ್ರವಾಸಿ ತಾಣವಾದ ಪೋಖರಾದ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ನದಿಯ ಕಮರಿಗೆ ಬಿದ್ದು ಪತನಗೊಂಡಿದೆ. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐವರು
ಗಾಂಧಿ ವಿಚಾರ ವೇದಿಕೆ ವತಿಯಿಂದ ಮಿನುಗು ನೋಟ ಎಮ್.ಜಿ. ಹೆಗ್ಡೆಯವರು ಬರೆದಿರುವ ಗಾಂಧೀಜಿಯವರ ಕುರಿತ ಪ್ರಶ್ನೆಗಳಿಗೆ ಉತ್ತರದ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಗರದ ಕದ್ರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಿತು. ಪುಸ್ತಕವನ್ನು ಪ್ರಸಿದ್ಧ ಅಂಕಣಕಾರರಾದ ಸುಧೀಂದ್ರ ಕುಲಕರ್ಣಿ ಅವರು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಮಾನವತೆಗೆ ಬೇಕಾದ ವಿಚಾರ ಎಂದೂ ಸಾಯುವುದಿಲ್ಲ. ಮಹಾತ್ಮಾ ಗಾಂಧೀಜಿಯವರು ವಿಶ್ವಶಾಂತಿಗಾಗಿ ಇಡೀ ಜಗತ್ತಿನಲ್ಲಿ ಸಹಬಂಧುತ್ವಕ್ಕಾಗಿ,
ಉಪ್ಪಿನಂಗಡಿ: ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್: ಕರ್ನಾಟಕದ ವಿಶ್ವವಿದ್ಯಾನಿಲಯಗಳ ಶುಭಾರಂಭ
ಅಖಿಲ ಭಾರತಅಂತರ್ ವಿ ವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನ ಮೊದಲ ದಿನ ನಡೆದ ನಾಕೌಟ್ ಮಾದರಿಯ ಪಂದ್ಯಾಟದಲ್ಲಿ ಸುಮಾರು 30 ಪಂದ್ಯಾವಳಿಗಳು ನಡೆದಿದ್ದು,15 ವಿ.ವಿ ತಂಡಗಳು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಮೊದಲ ದಿನ ನಾಕೌಟ್ ಪಂದ್ಯಗಳಲ್ಲಿ ಬೆಂಗಳೂರು ವಿವಿ 35-07, 35-14ರಲ್ಲಿ ಮೌಲಾನಾ ಆಜಾದ್ ವಿವಿಯನ್ನು
ನೇಪಾಳದ ಕಾಠ್ಮಂಡುವಿನಿಂದ ಹೊರಟ ವಿಮಾನವೊಂದು ಪೋಖರಾ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯೇತಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಪೋಖರಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುವ ವೇಳೆ ಪತನವಾಗಿದೆ. ಇದುವರೆಗೆ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ಮಂಗಳೂರು ವಿವಿಯು ಐದು ದಿನಗಳ ಕಾಲ ಆಯೋಜಿಸಿರುವ ಪುರುಷರ ಅಖಿಲ ಭಾರತ ಅಂತರ ವಿವಿ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅದ್ದೂರಿಯ ಚಾಲನೆ ದೊರಕಿದೆ. ರಾಷ್ಟ್ರ ಧ್ವಜದ ಬಣ್ಣವನ್ನು ಸಂಕೇತಿಸುವ ಬಲೂನುಗಳನ್ನು ಗಗನದೆತ್ತರಕ್ಕೆ ಹಾರಿಬಿಡುವ ಮೂಲಕ ಶಾಸಕ ಹಾಗೂ ಕಾಲೇಜಿನ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸಂಜೀವ ಮಠಂದೂರು ಅವರು ಪಂದ್ಯಾಟಕ್ಕೆ ಚಾಲನೆ ನೀಡಿದರು. ಅದರೊಂದಿಗೆ ನೂರಾರು ಬಣ್ಣಬಣ್ಣದ ಬಲೂನುಗಳನ್ನು
ಮಂಗಳೂರಿನ ಅದ್ಯಪಾಡಿ ಬೈಲು ಮಾಗಣಿಯ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬೀಬಿಲಚ್ಚಿಲ್ನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ಅಷ್ಟಪವಿತ್ರ ನಾಗಬ್ರಹ್ಮ ಮಂಡಲೋತ್ಸವವು ಫೆ2ರಿಂದ ಫೆ.9ರ ವರೆಗೆ ನಡೆಯಲಿದ್ದು, ಆ ಪ್ರಯುಕ್ತ ಹೊರೆಕಾಣಿಕೆ ಕಾರ್ಯಾಲಯದ ಉದ್ಘಾಟನೆ ಕಾರ್ಯಕ್ರಮವು ನಗರದ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ನಡೆಯಿತು. ಮಂಗಳೂರು ನಗರದಲ್ಲಿರುವ ಶ್ರೀ ಕ್ಷೇತ್ರ ಶರವು ದೇವಸ್ಥಾನದ ವಠಾರದಲ್ಲಿ ಹೊರೆಕಾಣಿಕೆ ಕಾರ್ಯಾಲಯದ
ಪುತ್ತೂರು: ಪುತ್ತೂರಿಗೆ ಸಮಗ್ರ ಕುಡಿಯುವ ನೀರು ಪೂರೈಕೆ ಮಾಡಲು ಸುಮಾರು 117 ಕೋಟಿ ರೂ. ವೆಚ್ಚದಲ್ಲಿ ನಡೆಯುತ್ತಿರುವ ಜಲಸಿರಿ ಯೋಜನೆಯ ಕಾಮಗಾರಿಯಲ್ಲಿ ಹೆಜ್ಜೆ ಹೆಜ್ಜೆಗೂ ಸಾರ್ವಜನಿಕರಿಗೆ ಕಿರಿಕಿರಿ ಆಗುತ್ತಿರುವ ವಿಚಾರ ಬೆಳಕಿಗೆ ಬಂದಿದ್ದು, ಕಾಮಗಾರಿ ಅನುಷ್ಠಾನದಲ್ಲಿ ವ್ಯಾಪಕ ಅಸಮರ್ಪಕತೆ ತೋರುತ್ತಿರುವ ಅಂಶಗಳು ಬಯಲಾಗಿವೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆಯಲ್ಲಿ ಶುಕ್ರವಾರ ನಗರಸಭೆಯಲ್ಲಿ ನಡೆದ ಜಲಸಿರಿ ಯೋಜನೆಯ ಪರಿಶೀಲನಾ ಸಭೆಯಲ್ಲಿ ಈ ಅಂಶ ತೀವ್ರ



























