Home Posts tagged V4News (Page 592)

ಆಲೂರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು

ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಪಾಳ್ಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮುಂಜಾನೆ ವೈದ್ಯ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದ ಅಮಾನವೀಯ ಘಟನೆ ನೆಡೆದಿದೆ.ಇದಕ್ಕೆ ಹಲವು ಭಾರಿ ಇಂತಹ ಘಟನೆ ಪ್ರತ್ಯಕ್ಷವಾದರೂ ಹಿರಿಯ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳದಿರುವುದೇ ಪ್ರಮುಖ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂಭಾಗ ರಸ್ತೆತಡೆದು

ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಕಾಂಗ್ರೆಸ್‍ನ್ನು ಅಧಿಕಾರಕ್ಕೆ ತನ್ನಿ
ಮೂಡುಬಿದರೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿಕೆ

ಮೂಡುಬಿದಿರೆ: ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅಭಿವೃದ್ಧಿಯ ನೆಪದಲ್ಲಿ ಪರ್ಸಂಟೇಜ್ ವ್ಯವಹಾರ ನಡೆಯುತ್ತಿದೆ.ಇದನ್ನೆಲ್ಲಾ ಹೋಗಲಾಡಿಸಿ ಭ್ರಷ್ಟಚಾರ ಮುಕ್ತ ಮೂಡುಬಿದಿರೆಯನ್ನಾಗಿ ರೂಪುಗೊಳಿಸಲು ಕಾಂಗ್ರೆಸ್ ನ ಎಂಎಲ್ ಎ ಬರಬೇಕು ಎಂದು ಮಾಜಿ ಸಚಿವ, ಕೆಪಿಸಿಸಿಯ ರಾಜ್ಯ ಉಪಾಧ್ಯಕ್ಷ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಕಾಂಗ್ರೆಸ್ ಪಕ್ಷದ ಬಲಾಢ್ಯ ನಾಯಕರುಗಳು ಜನವರಿ 22 ರಂದು ಮಂಗಳೂರಿಗೆ

ಮದುವೆ ನಿಶ್ಚಯವಾಗಿದ್ದ ಯುವಕ ಆತ್ಮಹತ್ಯೆ

ಮೂಡುಬಿದಿರೆ: ಮದುವೆ ನಿಶ್ಚಯವಾಗಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ಇರುವೈಲಿನಲ್ಲಿ ನಡೆದಿದೆ.ಇರುವೈಲು ಗುಂಡಾಲ ಮನೆಯ ಸದಾನಂದ ಶೆಟ್ಟಿ ಅವರ ಪುತ್ರ ಪ್ರತಾಪ್ ಶೆಟ್ಟಿ( 30)ಆತ್ಮಹತ್ಯೆ ಮಾಡಿಕೊಂಡ ಯುವಕ. ಕೃಷಿಕನಾಗಿದ್ದ ಈತ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಜ.22ರಂದು ಮದುವೆ ನಿಶ್ಚಯವಾಗಿತ್ತು. ಸಾಧು ಸ್ವಭಾವದ ಯುವಕನಾಗಿದ್ದ ಈತನಿಗೆ ಆರ್ಥಿಕವಾಗಿ ತೊಂದರೆ ಇರಲಿಲ್ಲ.ಆದರೆ ವಿಡಿಯೋ

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ, 13ನೇ ಜನವರಿ 2023: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (YDR) ಹಂತ III ಮತ್ತು ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲವು ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್, ಮಣಿಪಾಲ ಇದರ ಸಹಯೋಗದೊಂದಿಗೆ ಯುವ ಮಧುಮೇಹಿಗಳಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ಅನೇಕ ಯುವ ಮಧುಮೇಹಿಗಳು (2-25 ವರ್ಷ

ಜನವರಿ 15:ಮಂಗಳೂರಿಗೆ ಸಂಪೂಜ್ಯ ಸ್ವಾಮಿಪೂರ್ಣಾಮೃತಾನಂದ ಪುರಿ

ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಹಿರಿಯ ಶಿಷ್ಯ ಹಾಗೂ ಮಠದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಂಪೂಜ್ಯ ಸ್ವಾಮಿ ಪೂರ್ಣಾಮೃತಾನಂದ ಪುರಿಯವರು ಜನವರಿ15 ರಂದು ಭಾನುವಾರ ಮಂಗಳೂರಿಗೆ ಆಗಮಿಸಲಿರುವರು.ಅಂದು ಸಂಜೆ ಮಂಗಳೂರು ನಗರದ ಬೋಳೂರಿನಲ್ಲಿರುವ ಅಮೃತ ವಿದ್ಯಾಲಯಂನಲ್ಲಿ ಜರುಗುವ ಆಧ್ಯಾತ್ಮಿಕ ಕಾರ್ಯಕ್ರಮ ” ಅಮೃತ ವೈಭವ” ದಲ್ಲಿ ಭಾಗವಹಿಸಲಿರುವರು. ಸ್ವಾಮಿನಿ ಮಂಗಳಾಮೃತ ಪ್ರಾಣ ಇವರ ಉಪಸ್ಥಿತಿಯಲ್ಲಿ ,ಸ್ವಾಮೀಜಿಯವರ ಸಾರಥ್ಯದಲ್ಲಿ ಶ್ರೀ

ಕೋವಿಡ್ ಸಂದರ್ಭದಲ್ಲಿ ರೈತರಿಗೆ ನೆರವಾದ ಯು. ಸೋಮಶೇಖರ್ ಗೆ ಎನ್.ಎಸ್.ಎಸ್ ರಾಷ್ಟ್ರೀಯ ಸ್ವಯಂ ಸೇವಕ ಪುರಸ್ಕಾರ

ಧಾರವಾಡ, ಜ, 14: ಕೋವಿಡ್ ಸಾಂಕ್ರಾಮಿಕ ಲೆಕ್ಕಿಸದೇ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ, ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸೋಮಶೇಖರ್ ಯು ಅವರಿಗೆ 2019 – 20 ನೇ ಸಾಲಿನ ಎನ್.ಎಸ್.ಎಸ್ ರಾಷ್ಟ್ರೀಯ ಅತ್ಯುತ್ತಮ ಸ್ವಯಂ ಸೇವಕ [ರಾಷ್ಟ್ರೀಯ ಬೆಸ್ಟ್ ವಾಲೇಂಟರ್] ಪ್ರಶಸ್ತಿ ಸಂದಿದೆ. ಹುಬ್ಬಳ್ಳಿ – ಧಾರವಾಡದಲ್ಲಿ ನಡೆಯುತ್ತಿರುವ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್

ಯುವ ಜನೋತ್ಸವದಲ್ಲಿ “ನೋ ಯುವರ್ ಆರ್ಮಿ” ವಿಶೇಷ ಮಳಿಗೆ

ಧಾರವಾಡ, ಜ, 13; ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ “ನಿಮ್ಮ ಸೇನೆ ಬಗ್ಗೆ ತಿಳಿದುಕೊಳ್ಳಿ” [ನೋ ಯುವರ್ ಆರ್ಮಿ] ಎಂಬ ವಿಶೇಷ ಮಳಿಗೆಗಳು ಗಮನ ಸೆಳೆಯಲಿವೆ. ಯುವ ಜನೋತ್ಸವದ ಅಂಗವಾಗಿ ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನದಲ್ಲಿ ‘ಭಾರತೀಯ ಸೈನ್ಯದ ಕುರಿತು ಒಂದು ಸ್ಟಾಲ್ ನಿರ್ಮಿಸಲಾಗಿದೆ’ ರಾಷ್ಟ್ರದ ಭದ್ರತೆ ಮತ್ತು ಸುರಕ್ಷತೆಗಾಗಿ ಈ ಪಡೆಗಳು ಬಳಸುವ

ಯುವ ಜನೋತ್ಸವದಲ್ಲಿ ಮುಂಜಾನೆ ಯೋಗ ಮತ್ತು ಧ್ಯಾನ ಶಿಬಿರ

ಧಾರವಾಡ, ಜ.13; ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಪ್ರತಿದಿನ ಮುಂಜಾನೆ ಯೋಗ ಮತ್ತು ಧ್ಯಾನ ಕಾರ್ಯಕ್ರಮ ಯುವ ಸಮೂಹದಲ್ಲಿ ನವೋಲ್ಲಾಸ ಮೂಡಿಸುತ್ತಿದೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಕೆ.ಸಿ.ಡಿ ಕಾಲೇಜು ಮೈದಾನದಲ್ಲಿ ಪ್ರತಿದಿನ ಬೆಳಿಗ್ಗೆ 6 ರಿಂದ 8 ಗಂಟೆವರೆಗೆ ಯೋಗ ಮತ್ತು ಧ್ಯಾನ ಶಿಬಿರ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಯೋಗ ಸಂಸ್ಥೆಯ ಪರಿಣಿತರು ಯೋಗ ಮತ್ತು ಧ್ಯಾನದ ಮಹತ್ವ ಕುರಿತು ಯುವ ಸಮೂಹಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ : ಕೆಪಿಸಿಸಿ ವಕ್ತಾರ ಅಮಲಾ ರಾಮಚಂದ್ರ

ಪುತ್ತೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾಮಗಾರಿಗಳು ಕುಸಿತವಾಗುತ್ತಿದೆ. ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ. ರಸ್ತೆಯಲ್ಲಿ ಸಂಚರಿಸುವ ಸಮಯ ಎಲ್ಲಿ ಕುಸಿಯುತ್ತದೆ, ಮೇಲ್ಸೇತುವೆ ಎಲ್ಲಿ ತಲೆಗೆ ಬೀಳುತ್ತದೆ ಎಂದು ಭಯದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಲಾ ರಾಮಚಂದ್ರ ಹೇಳಿದರು. ಈ ಹಿಂದೆ ಇದ್ದ ಯಾವ ಶಾಸಕರ ಅವಧಿಯಲ್ಲೂ ಇಷ್ಟು ಭ್ರಷ್ಟಾಚಾರ ಇರಲಿಲ್ಲ. ಅಕ್ರಮ ಸಕ್ರಮ ಮಂಜೂರಾತಿಯಲ್ಲಿ