ಸುಳ್ಯ:ದೇಲಂಪಾಡಿ ಬನಾರಿಯ ಕೀರಿಕ್ಕಾಡು ಸಾಂಸ್ಕೃತಿಕ ಅಧ್ಯಯನ ಕೇಂದ್ರ ಮತ್ತು ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ವತಿಯಿಂದ ಕವಿ,ಅರ್ಥದಾರಿ, ಯಕ್ಷಗಾನ ಗುರುಕುಲದ ರುವಾರಿ ಕೀರಿಕ್ಕಾಡು ಮಾಸ್ತರ್ ವಿಷ್ಣುಭಟ್ಟರ ಹೆಸರಿನಲ್ಲಿ ಪ್ರತಿವರ್ಷವೂ ನೀಡಲಾಗುತ್ತಿರುವ ಪ್ರತಿಷ್ಠಿತ “ಕೀರಿಕ್ಕಾಡು ಪ್ರಶಸ್ತಿ”ಯನ್ನುಶಿಕ್ಷಣ ಕ್ಷೇತ್ರದ ಮಹಾನ್ ಸಾಧಕ,
ವಿನೋದ್ಕುಮಾರ್ ಪಿ. ಇವರ ಪರಿಕಲ್ಪನೆಯಲ್ಲಿ ಮೂಡಿ ಬಂದಿರುವ ಡಾ. ಶಯದೇವಿಸುತೆ ಮರವಂತೆ (ಡಾ. ಜ್ಯೋತಿ ಜೀವನ್ಸ್ವರೂಪ್) ಅವರ ಹೊಚ್ಚ ಹೊಸ ಮಹಾ ಕಾದಂಬರಿಯು ಸಿನಿಮಾ ಶೈಲಿಯ ಬರವಣಿಗೆಗಳಿಂದ ವಿಶೇಷ ಮುಖಪುಟ ವಿನ್ಯಾಸದೊಂದಿಗೆ ಪುನಃ ಸಿದ್ಧತೆಗೊಂಡಿದ್ದು, ಅದನ್ನ ಇತ್ತೀಚೆಗಷ್ಟೇ ದಿನಾಂಕ 28/08/2025ರಂದು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಮಾನ್ಯ ಅಧ್ಯಕ್ಷೆ (ಮಕ್ಕಳ ವೈದ್ಯೆ & ಪ್ರಾಧ್ಯಾಪಕಿ), ಡಾ. ನಾಗಲಕ್ಷ್ಮೀ ಚೌಧರಿಯವರು ಗೌರಿ-ಗಣೇಶ ಚತುರ್ಥಿ ಹಬ್ಬದ
ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ಬಳಿ ಇರುವ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ವಿವಾಹಿತ ಮಹಿಳೆಯೋವ೯ರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ಮಂಗಳೂರು ಬೊಂದೆಲ್ ನಿವಾಸಿ ರೋಹಿತ್ ಫೆರ್ನಾಂಡಿಸ್ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ (24ವ)ಮೃತಪಟ್ಟ ಮಹಿಳೆ. ಈಕೆ ಮೂಡುಬಿದಿರೆಯ ಪ್ಲಾನೆಟ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು.
ಖ್ಯಾತ ಸಂಶೋಧಕ ಸಾಹಿತಿ ನಿವೃತ್ತ ಉಪನ್ಯಾಸಕ ಡಾ. ಕೆ. ಜಿ. ವಸಂತ ಮಾಧವರು ಸೆಪ್ಟಂಬರ್ 17ರ ರಾತ್ರಿ ಬೆಂಗಳೂರಿನ ಮಗಳ ಮನೆಯಲ್ಲಿನಿಧನರಾದರು.ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರೊಫೆಸರ್ ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ) ಅವರು 1937ರ ಏಪ್ರಿಲ್ 9ರಂದು ಜನಿಸಿದರು.ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ‘ಕೆನರಾದ ರಾಜಕೀಯ * ಇತಿಹಾಸ :
ಜೇಸಿಐ ಉಪ್ಪುಂದ ಸುಪ್ರೀಮ್ ಜೇಸಿ ಸಪ್ತಾಹ- 2025-ಸಪ್ತ ಸಂಭ್ರಮ ನಾಗೂರು ಶ್ರೀಕೃಷ್ಣ ಲಲಿತಕಲಾ ಮಂದಿರ ನಾಗೂರಿನಲ್ಲಿ ಸಂಭ್ರಮದಲ್ಲಿ ನಡೆಯಿತು. ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಟ್ರಸ್ಟಿ, ಉದ್ಯಮಿ ತ್ರಾಸಿ ಸುಧಾಕರ ಆಚಾರ್ಯ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿಇಂದಿನ ಯುವ ಜನತೆ ಸುಂದರ ಸಮಾಜ ನಿರ್ಮಾಣದ ಮೂಲಕ ದೇಶವನ್ನು ಕಟ್ಟುವ ಕೆಲಸ ಮಾಡಬೇಕು. ಎಲ್ಲವನ್ನೂ ಕೊಟ್ಟ ಸಮಾಜದ ಋಣವನ್ನು ತೀರಿಸುವ ನೆಲೆಯಲ್ಲಿ ಜಿಸಿಐನಂತಹ ಸಂಘಟನೆಗೆ ಸೇರುವ ಮೂಲಕ
ತಾಲೂಕು ಆಡಳಿತ ಸೌಧ ಬೈಂದೂರು, ತಾಲೂಕು ಪಂಚಾಯತ್ ಬೈಂದೂರು ವತಿಯಿಂದ ವಿಶ್ವಕರ್ಮ ಜಯಂತಿ ಬುಧವಾರ ಬೈಂದೂರು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು. ಉಪ್ರಳ್ಳಿ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರರ ಕಳಿ ಚಂದ್ರಯ್ಯ ಆಚಾರ್ಯ ವಿಶ್ವಕರ್ಮ ಜಯಂತಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವಕರ್ಮ ಜಯಂತಿಯು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಇಡೀ ವಿಶ್ವಕ್ಕೆ ಗುರುವಾದ, ದೇವಲೋಕ, ಸ್ವರ್ಗಲೋಕವನ್ನು ಹಾಗೂ ದೇವತೆಗಳಿಗೆ ವಾಹನಗಳನ್ನು
ಮೂಡುಬಿದಿರೆ : ಕೊಣಾಜೆಕಲ್ಲಿಗೆ ಟ್ರಕ್ಕಿಂಗ್ ಗೆ ಬಂದ ಯುವಕನೊಬ್ಬ ಹೃದಯಾಘಾತವಾಗಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.ಪುತ್ತೂರು ಬೆಟ್ಟಂಪ್ಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಮನೋಜ್ ಎನ್. (25ವ) ಹೃದಯಾಘಾತಕ್ಕೆ ಬಲಿಯಾದ ಯುವಕ.ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಡುಬಿದಿರೆ: ಬ್ರಹ್ಮಾವರದ ಎಸ್ಎಮ್ಎಸ್ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಕ್ರಾಸ್ಕಂಟ್ರಿ ಚಾಂಪಿಯನ್ಶಿಪ್ನ ಪುರುಷ ಹಾಗೂ ಮಹಿಳಾ ವಿಭಾಗಗಳೆರಡರಲ್ಲೂ ಚಾಂಪಿಯನ್ ಆಗಿ ಆಳ್ವಾಸ್ ಕಾಲೇಜು ಸತತ 21ನೇ ವರ್ಷ ಸಮಗ್ರ ಪ್ರಶಸ್ತಿ ಪಡೆದಿದೆ.ಪುರುಷರ ವಿಭಾಗದಲ್ಲಿ ಮೊದಲ 5 ಸ್ಥಾನಗಳನ್ನು ಆಳ್ವಾಸ್ ಕಾಲೇಜಿನ ಓಟಗಾರರು ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಮೋಹಿತ್ (ಪ್ರಥಮ), ಆದೇಶ್ ಕುಮಾರ್ (ದ್ವಿತೀಯ), ಶುಭಂ(ತೃತೀಯ), ರೋಹಿತ್(4ನೇ
ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಮೂವರನ್ನು ವಿಟ್ಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ವಿಟ್ಲದ ಮಂಗಳಪದವು ನಿವಾಸಿ ಸನತ್ ಕುಮಾರ್, (23) , ವಿಟ್ಲ ಕಸಬಾ ಗ್ರಾಮದ ರಾಝಿಕ್ (23)ಮತ್ತು ಮಂಗಳಪದವು ನಿವಾಸಿ ಚೇತನ್ (23) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ 6.27 ಗ್ರಾಂ ಗಾಂಜಾ, 3 ಮೊಬೈಲ್ ಗಳು ಸಣ್ಣ ಚೂರಿ, ದ್ವಿಚಕ್ರ ವಾಹನ ವಶಪಡಿಸಿಕೊಂಡು ಪ್ರಕರಣ
ಮೂಡುಬಿದಿರೆ : ಬ್ಲಾಕ್ ಕಾಂಗ್ರೆಸ್ ವಕ್ತಾರ, ರಂಗನಟ,ವಾಗ್ಮಿ ರಾಜೇಶ್ ಕಡಲಕೆರೆ ಅವರು ಕನ್ನಡ ಜಾಗೃತಿ ಸಮಿತಿ ದ.ಕ.ಜಿಲ್ಲಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರಕಾರ ಪ್ರತೀ ಜಿಲ್ಲಾ ಮಟ್ಟದಲ್ಲಿ ಈ ಸಮಿತಿಯನ್ನು ರಚಿಸಿದ್ದು ದ.ಕ.ಜಿಲ್ಲೆಯಿಂದ 5 ಮಂದಿ ಸದಸ್ಯರ ಪೈಕಿ ಮೂಡುಬಿದಿರೆಯಿಂದ ರಾಜೇಶ್ ಕಡಲಕೆರೆ ಅವರನ್ನು ನೇಮಕ ಮಾಡಲಾಗಿದೆ. ಹಲವಾರು ತುಳು,ಕೊಂಕಣಿ




























