Home Posts tagged V4News (Page 622)

ಕುಂದಾಪುರ: ಡಿ.19ರಂದು ಎನ್‍ಪಿಎಸ್ ವಿರುದ್ಧ ಸರ್ಕಾರಿ ನೌಕರರ ಮುಷ್ಕರ

ಎಪ್ರಿಲ್ 1, 2006ರಿಂದ ನಿಯೋಜನೆಗೊಂಡ ಸರ್ಕಾರಿ ನೌಕರರಿಗೆ ಸರ್ಕಾರ ನಿಗಧಿಪಡಿಸಿದ ಷೇರು ಮಾರುಕಟ್ಟೆ ಆಧಾರಿತ ಪಿಂಚಣಿ ಯೋಜನೆಯಾದ ನ್ಯಾಷನಲ್ ಪೆನ್ಷನ್ ಸ್ಕೀಂ (ಓPS) ವಿರೋಧಿಸಿ ಎನ್.ಪಿ.ಎಸ್. ನೌಕರರ ಹೋರಾಟ ವೇಗ ಪಡೆಯುತ್ತಿದೆ. ನವೆಂಬರ್ 23ರಂದು ಉಡುಪಿಯಲ್ಲಿ ನಡೆದ ಕಾಲ್ನಡಿಗೆ ಪ್ರತಿಭಟನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ ರಾಜ್ಯ ಮಟ್ಟದ ಸರ್ಕಾರಿ ಎನ್ .ಪಿ.ಎಸ್

ಶ್ರೀಮತಿ ಶಾಂತಾ ಕುಂಟಿನಿ ಇವರಿಗೆ ಕಾಶಿ ಕನ್ನಡದ ಕಂಪು “ಸಾಧನ ಶ್ರೀ ” ಪ್ರಶಸ್ತಿ ಪುರಸ್ಕಾರ

ಶ್ರೀ ಕಾಶಿ ಜಗದ್ಗುರು ಚಂದ್ರಶೇಖರಶಿವಾಚಾರ್ಯ ಮಹಾ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ಜಂಗಮವಾಡಿಮಠ ವಾರಣಾಸಿ ಕಾಶಿ ಕನ್ನಡದ ಕಂಪು ಸರಣಿಯ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಶಾಂತಾ ಕುಂಟಿನಿ ಇವರ ಸಾಹಿತ್ಯ ಹಾಗೂ ಸಂಘಟನೆ ಕಾರ್ಯವನ್ನು ಗುರುತಿಸಿ “ಸಾಧನಶ್ರೀ ” ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಎಂದುಕಾರ್ಯಕ್ರಮದ ಆಯೋಜಕರುತಿಳಿಸಿರುತ್ತಾರೆ..ಅಂತೆಯೇ ಈ ಕಾರ್ಯಕ್ರಮವನ್ನು ಕಥಾ ಬಿಂದು

ಉಡುಪಿಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕರ ಸಭೆ

ಸುರತ್ಕಲ್ ನಿಂದ ತೆರವುಗೊಳಿಸಿರುವ ಅಕ್ರಮ ಟೋಲ್ ಗೇಟ್ ಅನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲೀನಗೊಳಿಸಿ ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದ್ಯಾದೇಶ ಜಾರಿಗೊಳಿಸಲು ತೆರಮೆರೆಯಲ್ಲಿ ಪ್ರಯತ್ನಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ನಡೆಸಬೇಕಾದ ಹೋರಾಟದ ಕುರಿತು ಚರ್ಚಿಸಲು ಉಡುಪಿ ಅಜ್ಜರಕಾಡಿನಲ್ಲಿ ಇಂದು ಸಮಾನ ಮನಸ್ಕ ಸಂಘಟನೆಗಳ ಸಭೆ ನಡೆಯಿತು. ವಿನಯ ಕುಮಾರ್ ಸೊರಕೆ, ಮುನೀರ್ ಕಾಟಿಪಳ್ಳ, ಅಭಯ ಚಂದ್ರ

ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಡಿಸೆಂಬರ್ 19 ರಂದು ಬೆಳಗಾವಿ ವಿಧಾನಸೌಧದ ಎದುರುಗಡೆ ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಹೋರಾಟದ ಬಗ್ಗೆ ಬೆಂಬಲ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯವರಾದ ಶ್ರೀ ಡಾ.ಕುಮಾರ್ IAS ಇವರಿಗೆ ಮನವಿಯನ್ನು ನೀಡಲಾಯಿತು. ಮಾನ್ಯ ಮುಖ್ಯ

ಲಾರಿಯೊಂದು ಢಿಕ್ಕಿ ಹೊಡೆದು ಆನೆ ಸಾವು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕ ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂಬುವರನ್ನು ಬಂಧಿಸಲಾಗಿದೆ.. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 766ಯಲ್ಲಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ. ಮಂಗಳವಾರ ರಾತ್ರಿ 8

ಅಸೈಗೋಳಿ:ಮೆಡಿಕಲ್ ರೆಪ್ ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಅಸೈಗೋಳಿ ನಿವಾಸಿ ಜಯರಾಮ್ ಶೆಟ್ಟಿ ಎಂಬವರ ಪುತ್ರ ಅಭಿಲಾಷ್(35) ಆತ್ಮಹತ್ಯೆಗೆ ಶರಣಾದವರು. ಬೆಳಿಗ್ಗೆ ಎಂದಿನಂತೆ ವಾಕಿಂಗ್ ಗೆ ತೆರಳಿದ್ದ ಅಭಿಲಾಷ್ , ವಾಪಸ್ಸಾಗಿ ಮನೆಯಲ್ಲೆ ಇದ್ದರು. ತಾಯಿ ಮದುವೆಗೆಂದು ತೆರಳಿದ್ದ ಸಂದರ್ಭ, ತಂದೆ ಮನೆಯ ಹೊರಗೆ ಕುಳಿತಿದ್ದ ಸಂದರ್ಭ ಅಭಿಲಾಷ್ ಮನೆಯ ಕೋಣೆಯೊಳಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ

ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷ ಪ್ರಾಯದ ಬಾಲಕನ ಧಾರುಣ ಅಂತ್ಯ

ಮಂಜೇಶ್ವರ : ತ್ಯಾಜ್ಯ ಗುಂಡಿಗೆ ಬಿದ್ದು ಎರಡು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ನಗರದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಸಮದ್ ಎಂಬವರ ಪುತ್ರ ಶೆಹಝಾದ್ (2) ಸಾವನ್ನಪ್ಪಿದ ದುರ್ದೈವಿ. ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿದೆ. ಶುಚೀಕರಣಕ್ಕಾಗಿ ತೆರೆದಿಟ್ಟ ಮನೆಯ ಅಂಗಳದ ಹಿಂಬಾಗದಲ್ಲಿರುವ ತ್ಯಾಜ್ಯ ಗುಂಡಿಗೆ ಬಾಲಕ ಆಟವಾಡುತ್ತಿರುವ ಮಧ್ಯೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಬಾಲಕನನ್ನು ಮೇಲಕ್ಕೆತ್ತಿ ಆಸ್ಪತೆಗೆ ಸಾಗಿಸಿದರೂ

ಡಿ.16, 17ರಂದು ಮಂಗಳೂರು ಟೆಕ್ನೋವಾನ್‍ಝ

ಕರ್ನಾಟಕ ಡಿಜಿಟಲ್ ಎಕಾನಮಿ, ಮಿಷನ್, ಕೆ-ಟೆಕ್ ಮತ್ತು ಬಿಯಾಂಡ್ ಬೆಂಗಳೂರು ಸಹಯೋಗದಲ್ಲಿ ಮಂಗಳೂರು ಟೆಕ್ನೋವಾನ್‍ಝ ಡಿಸೆಂಬರ್ 16 ಮತ್ತು 17ರಂದು ನಗರದ ಡಾ. ಟಿಎಂಎಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ನಡೆಯಲಿದೆ. ಡಿ.17ರಂದು ಬೆಳಿಗ್ಗೆ 6.30ಕ್ಕೆ ವಾಕಥಾನ್ ನಡೆಯಲಿದೆ. ಬೆಳಗ್ಗೆ 10ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ, ಇಲೆಕ್ಟ್ರಾನಿಕ್ಸ್, ಐಟಿ-ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ

ಬಂಟ್ವಾಳ : ಶಾಲಾ ಮಕ್ಕಳ ಕಿಡ್ನಾಪ್ ಯತ್ನ? : ಸೂಕ್ತ ತನಿಖೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಮನವಿ

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ದ.ಕ.ಜಿ.ಪ.ಹಿ.ಪ್ರಾ ಶಾಲೆ ಕುಟ್ಟಿಕಳ ಶಾಲೆಯ ಮಕ್ಕಳನ್ನು ಅಪಹರಣ ಮಾಡಲು ವಿಫಲಯತ್ನ ಮಾಡಿದವರನ್ನು ತಕ್ಷಣ ಪತ್ತೆ ಹಚ್ಚಿ ಸೂಕ್ತ ತನಿಖೆ ನಡೆಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ವಾಳ ವತಿಯಿಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ಮನವಿಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಬಜರಂಗದಳ ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ವಿಶ್ವ ಹಿಂದೂ ಪರಿಷದ್ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ, ಪ್ರಖಂಡ

ಟ್ರಾಕ್ಟರ್‍ಗೆ ಕಂಟೈನರ್ ಲಾರಿ ಢಿಕ್ಕಿ ; ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪಾರು

ಉಪ್ಪಿನಂಗಡಿ: ಓವರ್‍ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್‍ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಟ್ರಾಕ್ಟರ್‍ನ ಹಿಂಬದಿಯ ಟ್ರಾಲಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ಮಂಗಳವಾರ ಸಂಜೆ ಸಂಭವಿಸಿದ್ದು, ಘಟನೆಯಿಂದ ಅದೃಷ್ಟವಶಾತ್ ಟ್ರಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ನೆಲ್ಯಾಡಿ ಕಡೆಯಿಂದ ಬಿ.ಸಿ.ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಅದೇ ಮಾರ್ಗವಾಗಿ