Home Posts tagged V4News (Page 633)

ಸುರತ್ಕಲ್ ಟೋಲ್ ಕಾರ್ಮಿಕರಿಗೆ ಉದ್ಯೋಗ ನೀಡಿದ ಪ್ರತಿಭಾ ಕುಳಾಯಿ!

ಇಲ್ಲಿನ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವು ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ಬುಕ್ ನಲ್ಲಿ ಪೋಸ್ಟ್

ಫುಟ್ಬಾಲ್ ದಂತಕತೆ ಡಿಗೊ ಮರಡೋನರ ಹ್ಯಾಂಡ್ ಆಫ್ ಗಾಡ್ : ಮಂಗಳೂರಿಗೆ ಆಗಮಿಸಿದ್ದ ಚಿನ್ನದ ಮೂರ್ತಿ

ಮಾದಕದ್ರವ್ಯ ವಿರುದ್ಧ ನಡೆಸುವ ಹೋರಾಟಕ್ಕಾಗಿ ಡಾ. ಬೋಬಿ ಚೆಮ್ಮನ್ನೂರು ನೇತೃತ್ವದಲ್ಲಿ ಖತರ್‍ಗೆ ಕೊಂಡೊಯ್ಯಲಾಗುವ ಫುಟ್ಬಾಲ್ ದಂತಕತೆ ಡಿಗೊ ಮರಡೋನ ಅವರ ಹ್ಯಾಂಡ್ ಆಫ್ ಗಾಡ್ ಚಿನ್ನದ ಮೂರ್ತಿಯನ್ನು ನಗರದ ಮೈದಾನಕ್ಕೆ ತರಲಾಯಿತು. ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯದ ವಿರುದ್ದ ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದೆ. ದಕ್ಷಿಣ ಕನ್ನಡ ಫುಟ್ಪಾಲ್ ಸಂಸ್ಥೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಚಿತ್ರನಟ ಅರ್ಜುನ್ ಕಾಪಿಕಾಡ್, ಕಾರ್ಪೋರೇಟರ್ ಲತೀಫ್ ಕಂದಕ್

ಪಡುಬಿದ್ರಿ : ಡಾಮಾರು ಹುಡಿಯನ್ನು ರಸ್ತೆಯಲ್ಲೇ ಬಿಟ್ಟ ಪರಿಣಾಮ ಅಪಘಾತ ಹೆಚ್ಚಳ

ಹೆದ್ದಾರಿಗೆ ಹಾಕಲಾದ ಡಾಮಾರಿನ ಒಂದು ಪದರವನ್ನು ಯಂತ್ರದ ಮೂಲಕ ತೆಗೆಯುತಿದ್ದು, ತೆಗೆದ ಡಾಮಾರು ಹುಡಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಪರಿಣಾಮ ದ್ವಿಚಕ್ರ ಸವಾರರು ಬಿದ್ದು ಗಾಯಗೊಳ್ಳುತ್ತಿರುವ ಘಟನೆ ಪಡುಬಿದ್ರಿಯ ಬೀಡು ಬಳಿ ರಾತ್ರಿ ನಡೆದಿದೆ.ಮಂಗಳೂರು ಕಡೆಯಿಂದಲೂ ಹೆದ್ದಾರಿ ಡಾಮಾರಿನ ಪದರವನ್ನು ಯಂತ್ರದ ಮೂಲಕ ತೆಗೆಯುವ ಕಾಮಗಾರಿ ನಡೆಸುತ್ತಿದ್ದು, ರಾತ್ರಿ ಹೊತ್ತು ರಸ್ತೆಯ ಸುಸ್ಥಿತಿ ಗಮನಕ್ಕೆ ಬಾರದೆ ನಿಯಂತ್ರಣ ಕಳೆದುಕೊಳ್ಳುತ್ತಿದ್ದ ಬೈಕ್ ಸವಾರರು

ಶ್ರೇಷ್ಠ ಗಾಯಕರ ಸ್ವರ ಅನುಕರಣೆಯೊಂದಿಗೆ ಪ್ರಸಿದ್ಧಿ ಪಡೆದ ಶಾಲಿ

ಮಂಜೇಶ್ವರ: ಸಂಗೀತದಿಂದ ಶಾಂತಿ ಸಾಮರಸ್ಯ ಸಾಧ್ಯ ಎಂಬುದನ್ನು ಸಮಾಜಕ್ಕೆ ತೋರಿಸಿ ಕೊಟ್ಟಿರುವ ಕೇರಳ ಕರ್ನಾಟಕ ಗಡಿ ಪ್ರದೇಶಗಳಲ್ಲಿ ತನ್ನ ಇಂಪಾದ ಮಧುರವಾದ ಕಂಠದಿಂದ ಇಲ್ಲೊಬ್ಬ ಕಲಾವಿದರೊಬ್ಬರು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾಗುತಿದ್ದಾರೆ. ತನ್ನ ಇಂಪಾದ ಹಾಡುಗಳಿಂದ ಹಲವು ವೇದಿಕೆಗಳಲ್ಲಿ ಗುರುತಿಸಿಕೊಂಡಿರುವ ಈ ಕಲಾವಿದ ನೊಂದವರ ಪಾಲಿಗೂ ಆಶಾ ಕಿರಣವಾಗಿ ಚ್ಯಾರಿಟೇಬಲ್ ವತಿಯಿಂದ ನಡೆಸುವ ವೇದಿಕೆಗಳಲ್ಲೂ ಜನ ಮನ ಗೆದ್ದಿದ್ದಾರೆ. ಮಂಗಳೂರು ನಿವಾಸಿಯಾಗಿರುವ ಶಾಲಿ

ಕಾಂಗ್ರೆಸ್ ನಿಂದ DeleteBJPNotVoterID ಅಭಿಯಾನ

ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಆರಂಭಿಸಿದೆ.ರಾಷ್ಟ್ರೀಯ ಚುನಾವಣಾ ಸಂಸ್ಥೆಯು ಸಮಗ್ರ ತನಿಖೆ ನಡೆಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 6.6 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅಂದಾಜಿಸಲಾಗಿದ್ದರೂ, ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಣಿಯನ್ನು ಟೋಲ್ ಫ್ರೀ ಸಂಖ್ಯೆ ಮತ್ತು ವೆಬ್‌ ಸೈಟ್‌ ನೊಂದಿಗೆ ಪರಿಶೀಲಿಸಲು ಇಸಿಐ ಮತದಾರರಿಗೆ ವಿನಂತಿಸಿದೆ. ಬಿಜೆಪಿ

ಮುಂದಿನ ಚುನಾವಣೆಗೆ ಕಾರ್ಕಳದಿಂದಲೇ ಸ್ಪರ್ಧೆ, ಸಚಿವ ವಿ ಸುನಿಲ್ ಕುಮಾರ್ ಹೇಳಿಕೆ

ಕಾರ್ಕಳ: ನಾನು ಮುಂದಿನ ಚುನಾವಣೆಗೆ ಕಾರ್ಕಳದಿಂದಲೆ ಸ್ಪರ್ಧಿಸುತಿದ್ದೆನೆ. ಕಾರ್ಕಳ ವಿಧಾನಸಭಾ ಕ್ಷೇತ್ರ ನನ್ನ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ. ಬೇರೆ ಕ್ಷೇತ್ರಕ್ಕೆ ಓಡಿಹೋಗಲ್ಲ ಎಂದು ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳ ಬಿಜೆಪಿ ಕಾರ್ಕಳ ವತಿಯಿಂದ ಮಂಜುನಾಥ್ ಪೈ ಸಭಾ ಭವನದಲ್ಲಿ ನಡೆದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿಯ ಸರಕಾರದ ಸಾಧನೆಯನ್ನು ಬೂತ್ ಮಟ್ಟದ ಕಾರ್ಯಕರ್ತರು ಮನೆಮನೆಗೆ ತಲುಪಿಸುವಲ್ಲಿ

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಬೆಂಗಳೂರು;ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೈಲ್ಸ್ ಸಂಬಂದಿಸಿದ ಸಣ್ಣ ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಹೆಚ್‌ಎಎಲ್‌ ಮಣಿಪಾಲ್‌ ಆಸ್ಪತ್ರೆಯಲ್ಲಿ ಇಂದು 11 ಗಂಟೆಗೆ ಸಿದ್ದರಾಮಯ್ಯ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಆರೋಗ್ಯವಾಗಿದ್ದರೆ ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್

ಡಿ.3ರಂದು ಮುಸ್ಲಿಂ ವಿಚಾರ ಸಂಕಿರಣ

ಮುಸ್ಲಿಂ ಸಮುದಾಯಕ್ಕಾಗುವ ದೌರ್ಜನ್ಯ, ಅನ್ಯಾಯ ಹಾಗೂ ನಿಂದನೆಗಳನ್ನು ಗಮನದಲ್ಲಿಟ್ಟುಕೊಂಡು ಮುಸ್ಲಿಂ ಸಮಾಜಕ್ಕೆ ಆಸರೆಯಾಗಲು ಹಾಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮುಸ್ಲಿಂ ಜಸ್ಟೀಸ್ ಫೋರಮ್ ದ.ಕ. ವತಿಯಿಂದ ಡಿ.3ರಂದು ಸಂಜೆ 4ಕ್ಕೆ ಕಂಕನಾಡಿಯಲ್ಲಿರುವ ಜಮ್ಯಿಯ್ಯತುಲ್ ಫಲಾಹ್ ಸಭಾಂಗಣದ ಮರ್ಹೂಂ ಜನಾಬ್ ಅಮೀರ್ ತುಂಬೆ ವೇದಿಕೆಯಲ್ಲಿ ವಿಚಾರ ಸಂಕಿರಣ ನಡೆಯಲಿದೆ ಎಂದು ಸ್ಥಾಪಕಾಧ್ಯಕ್ಷ ರಫೀಯುದ್ದೀನ್ ಕುದ್ರೋಳಿ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಸುರತ್ಕಲ್ ಟೋಲ್ ಪ್ಲಾಜಾ ಯುಗಾಂತ್ಯ : ವಾಹನ ಸವಾರರಿಗೆ ಸಿಹಿ ನೀಡಿ ಸಂಭ್ರಮ

ಕಳೆದ ದಿನಗಳ ಹಿಂದೆ ಸುರತ್ಕಲ್ ಟೋಲ್ ಗೇಟ್ ರದ್ದಾಗ ಬೇಕು ಎಂಬುದಾಗಿ ಸಾಕಷ್ಟು ಸಂಘ-ಸಂಸ್ಥೆ ಸಂಘಟನೆಗಳ ಸಹಕಾರದೊಂದಿಗೆ ಹೋರಾಟದ ಮುಖಂಡತ್ವ ವಹಿಸಿ ಪರಿಣಾಮಕಾರಿ ಹೋರಾಟ ನಡೆಸಿದ ಆಪತ್ತ್ ಭಾಂದವ ಆಸೀಫ್ ಅವರನ್ನು ಮುಚ್ಚಿದ ಟೋಲ್ ಗೇಟ್ ಮುಂಭಾಗ ಸನ್ಮಾನಿಸಿ ಗೌರವಿಸಿದ್ದಲ್ಲದೆ, ವಾಹನ ಸವಾರರಿಗೆ ಸಿಹಿ ನೀಡಿ ಸಂತೋಷ ಸಂಭ್ರಮ ಹಂಚಿಕೊಂಡರು. ಈ ಸಂದರ್ಭ ಮಾತನಾಡಿದ ಆಸೀಫ್ ಆಪತ್ತ್ ಬಾಂಧವ, ನಾನು ಹೋರಾಟ ನಡೆಸಿದ ಆ ದಿನಗಳಲ್ಲಿ ಟೋಲ್ ವಿರುದ್ಧ ಹೋರಾಟಕ್ಕೆ ನನಗೆ ಬೆಂಬಲ

ಉಚ್ಚಿಲ ಬಡಾ ಗ್ರಾ.ಪಂ. ಪ್ರಥಮ ಗ್ರಾಮ ಸಭೆ

ಕೇವಲ ಬೆರಳೆಣಿಕೆಯ ಗ್ರಾಮಸ್ಥರ ಮಧ್ಯೆಯೇ 56ನೇ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ಪ್ರಥಮ ಗ್ರಾಮ ಸಭೆ, ಉಚ್ಚಿಲ ಶ್ರೀ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆದಿದೆ. ಆರಂಭದಲ್ಲೇ ಸಭಾಭವನದಲ್ಲಿ ಸೂಕ್ತ ಧ್ವನಿವರ್ಧಕದ ವ್ಯವಸ್ಥೆ ಇಲ್ಲದೆ ಸಭೆ ಮಾತುಗಳು ಉಪಸ್ಥಿತರಿದ್ದ ಬೆರಳೆಣಿಕೆ ಮಂದಿಗೂ ಕೇಳದೆ ಸಭೆಯಲ್ಲಿ ಗೊಂದಲದ ಸ್ಥಿತಿ ನಿರ್ಮಾಣವಾಗಿತ್ತು.15 ಮಂದಿ ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಅಧಿಕಾರಿ ವರ್ಗ ಮಾತ್ರ ಸಭೆಯಲ್ಲಿ ಕಾಣಿಸುತ್ತಿದ್ದು ಗ್ರಾ.ಪಂ. ಕಾರ್ಯವೈಕರಿ