Home Posts tagged V4News (Page 640)

ನ.26ಕ್ಕೆ ಕಟಪಾಡಿ ತ್ರಿಶಾ ಕಾಲೇಜಿನ ವಿದ್ಯಾರ್ಥಿ ನಿಲಯ ಉದ್ಘಾಟನೆ

ವಿದ್ಯೆ ಎನ್ನುವುದು ವ್ಯಾಪಾರವಲ್ಲ, ಕಲಿಯಲು ಆಸಕ್ತಿ ಹೊಂದಿರುವ ಬಡ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ಯವತಿಯಿಂದ ವಿದ್ಯಾರ್ಥಿ ವೇತನ ಸಹಿತ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ದೊರಕುವ ಸವಲತ್ತುಗಳನ್ನು ಸಂಸ್ಥೆ ನಿಗ ವಹಿಸಿ ಅವರಿಗೆ ತೆಗೆಸಿಕೊಳ್ಳುವ ಮೂಲಕ ಮಕ್ಕಳ ವಿದ್ಯಾರ್ಜನೆ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂಬುದಾಗಿ ಸಂಸ್ಥೆಯ ಪ್ರಾಂಶುಪಾಲ ಗುರುಪ್ರಸಾದ್

ನಾಲ್ಕು ವಾರ ಪೂರ್ತಿಗೊಳಿಸಿದ ಹಗಲು ರಾತ್ರಿ ಧರಣಿ

ಟೋಲ್ ಗೇಟ್ ತೆರವಿಗೆ ಆಗ್ರಹಿಸಿ‌ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಇಂದು 28 ದಿನಗಳನ್ನು ಪೂರ್ಣಗೊಳಿಸಿತು. ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳ ಕಾರ್ಯಕರ್ತರು ಇಂದಿನ ಧರಣಿಯಲ್ಲಿ ಪಾಲ್ಗೊಂಡರು. ಅಧಿಸೂಚನೆ ಹೊರಟು ಹನ್ನೆರಡು ದಿನ ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ವಿಫಲವಾಗಿರುವ ಜಿಲ್ಲಾಡಳಿತದ ವಿರುದ್ದ ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಮೊಯ್ದಿನ್ ಬಾವಾ ಸಹಿತ ಭಾಷಣ ಮಾಡಿದ ನಾಯಕರುಗಳು ಸ್ಥಳೀಯ ಶಾಸಕ ಭರತ್ ಶೆಟ್ಟಿಯವರ

ಪಾದಚಾರಿಗೆ ಬೈಕ್ ಢಿಕ್ಕಿ, ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು

ಎರ್ಮಾಳು ಕಲ್ಯಾಣ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಆಸ್ಪತ್ರೆಯಲ್ಲಿ ಮೃತ್ತ ಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.ಮೃತ್ತ ವ್ಯಕ್ತಿಯನ್ನು ಉತ್ತರ ಕನ್ನಡ ಮೂಲದ 46 ವರ್ಷದ ದೇವಪ್ಪ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ 12 ಗಂಟೆಗೆ ಮೃತ್ತ ಪಟ್ಟಿದ್ದಾಗಿ ಪೊಲೀಸ್ಸ್ ಮೂಲಗಳು ತಿಳಿಸಿದೆ.

500 KG ಗಾಂಜಾ ಇಲಿ ತಿಂದಿದೆ!’ ವಿಚಿತ್ರ ಹೇಳಿಕೆ ನೀಡಿದ ಯುಪಿ ಪೊಲೀಸರು

ಶೇರ್‌ಗಡ್‌ ಮತ್ತು ಹೈವೇ ಪೊಲೀಸ್ ಠಾಣೆಯ ಗೋದಾಮುಗಳಲ್ಲಿ ವಶಕ್ಕೆ ಪಡೆದು ಇರಿಸಿದ್ದ 500 ಕೆಜಿಗೂ ಹೆಚ್ಚು ಗಾಂಜಾವನ್ನು ಇಲಿಗಳು ತಿಂದಿವೆ ಎಂದು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್-1985 (ಎನ್‌ಡಿಪಿಎಸ್) ಅಡಿಯಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಉತ್ತರ ಪ್ರದೇಶದ ಮಥುರಾ ಪೊಲೀಸರು ವರದಿ ಸಲ್ಲಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಿಸಲಾದ ಪ್ರಕರಣದಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಒದಗಿಸುವಂತೆ ಮಥುರಾ

ಉಚ್ಚಿಲ ಶ್ರೀ ಮಹಾಲಕ್ಷ್ಮೀಯ ದರ್ಶನ ಪಡೆದ ಗೃಹ ಸಚಿವರು

ಇತ್ತೀಚೆಗೆ ನವಿಕೃತಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯ ಗ್ರೃಹ ಸಚಿವ ಆರಗ ಜ್ಞಾನೇಂದ್ರರವರು ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.ದೇವಳದ ವತಿಯಿಂದ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು.ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಖ್ಯ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀದೇವಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.ದೇವಾಲಯದ ರುವಾರಿ ನಾಡೋಜ ಡಾ. ಜಿ. ಶಂಕರ್

ಗೃಹರಕ್ಷಕ ದಳ ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಮನವರಿಕೆ : ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿರುವ ಗೃಹ ಸಚಿವರು

ಸರ್ಕಾರಿ ಗೌರವಧನಾಧಾರಿತ ಕ್ಷೇಮಭಿವೃದ್ಧಿ ಮಹಾಸಂಘದ ಪದಾಧಿಕಾರಿಗಳು ಗೃಹ ಸಚಿವರಾದ ಅರಗ ಜ್ಞಾನೇಂದ್ರ ರವರನ್ನು ಭೇಟಿ ಮಾಡಿ ಗೃಹರಕ್ಷಕ ದಳ ಸಿಬ್ಬಂದಿಗಳ ಸಮಸ್ಯೆ ಮತ್ತು ಕುಂದು ಕೊರತೆಗಳ ಬಗ್ಗೆ ಸಚಿವರಿಗೆ ತಿಳಿಸಿ, ಮುಂಬರುವ ಅಧಿವೇಶನದಲ್ಲಿ ಸಿಬ್ಬಂದಿಗಳ ಕೊರತೆಗಳನ್ನು ಚರ್ಚಿಸಿ ನ್ಯಾಯಯುಕ್ತವಾದ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿಕೊಂಡಿದ್ದಾರೆ. ಮನವಿ ಸ್ವೀಕರಿಸಿದ ಗೃಹ ಸಚಿವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ

ವಿಟ್ಲ: ಅಕ್ರಮ ಗೋ ಸಾಗಾಟ ಪತ್ತೆ

ವಿಟ್ಲ: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸ್ರು ಕಾರ್ಯಾಚರಣೆ ನಡೆಸಿ ವಾಹನ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬೆಳ್ಳಂಬೆಳಗ್ಗೆ ವಿಟ್ಲ ಸಮೀಪದ ಬೋಳಂತೂರಿನಲ್ಲಿ ನಡೆದಿದೆ. ರೌಂಡ್ಸ್ ಕರ್ತವ್ಯದಲ್ಲಿದ್ದ ವಿಟ್ಲ ಎಸ್‍ಐ ಸಂದೀಪ್ ಕುಮಾರ್ ಶೆಟ್ಟಿ ಮತ್ತು ಸಿಬ್ಬಂದಿಗಳು ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಸಾಯಿಬು ಬ್ಯಾರಿ ನಗ್ರಿ, ಪ್ರದೀಪ್ ಸಿಕ್ವೇರಾ ಬಂಧಿತರು.ಈ ವೇಳೆ

ಮೂಡುಬಿದಿರೆ: ಕೊಡ್ಯಡ್ಕ ಜಯರಾಮ ಹೆಗ್ಡೆ ನಿಧನ

ಅನಿವಾಸಿ ಉದ್ಯಮಿ, ಹೊಸನಾಡು ಕೊಡ್ಯಡ್ಕ ಶ್ರೀದೇವೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಮತ್ತು ಆಡಳಿತ ಮೊಕ್ತೇಸರ ಡಾ. ಕೊಡ್ಯಡ್ಕ ಜಯರಾಮ ಹೆಗ್ಡೆ (73) ಅನಾರೋಗ್ಯದಿಂದ ನ.23, ಮಂಗಳವಾರ ಮಧ್ಯಾಹ್ನ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ನಿಧನ ಹೊಂದಿದರು. ಪತ್ನಿ, ಪುತ್ರ , ಪುತ್ರಿಯನ್ನು ಅವರು ಅಗಲಿದ್ದಾರೆ. 23ನೇ ವಯಸ್ಸಿನಲ್ಲಿ ಮಸ್ಕತ್ ಗೆ ತೆರಳಿ ಇಲೆಕ್ಟ್ರಿಕಲ್ ಹಾರ್ಡ್ ವೇರ್ ಶೋರೂಮ್ ಆರಂಭಿಸಿದ್ದರು. ನಂತರ ಹೋಟೇಲ್ ಉದ್ಯಮಕ್ಕೆ ಕಾಲಿರಿಸಿ

ಮೈಸೂರು ದಸರಾ ಆನೆ ಗೋಪಾಲಸ್ವಾಮಿ ಇನ್ನಿಲ್ಲ

ದಸರಾದ ಆನೆಗಳಲ್ಲಿ ಒಂದಾದ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರು ಎಳೆದಿದೆ.ನಾಗರಹೊಳೆ ಮತ್ತಿಗೋಡು ಆನೆ ಶಿಬಿರದಲ್ಲಿ ಗೋಪಾಲಸ್ವಾಮಿ ಆನೆ ಮಂಗಳವಾರ ಕಾಡಿಗೆ ಮೇಯಲು ಹೋಗಿದ್ದಾಗ ಕಾಡಾನೆಗಳ ದಾಳಿಗೆ ಸಿಲುಕಿತ್ತು. 40ರ ಆಸುಪಾಸು ವಯಸ್ಸಿನ ಆಕರ್ಷಕ ಮೈಕಟ್ಟು ಹೊಂದಿದ್ದ ಗೋಪಾಲಸ್ವಾಮಿ ಅಪಾರ ಅಭಿಮಾನಿಗಳನ್ನು ಹೊಂದಿತ್ತು. ದಸರಾ ಗಜಪಡೆಯಲ್ಲಿ ಅತಿ ಎತ್ತರವಾದ ಹಾಗೂ 5400 ಕೆ.ಜಿ. ತೂಕ ಹೊಂದಿದ್ದ ಗೋಪಾಲಸ್ವಾಮಿ ಆನೆಯು ಅಭಿಮನ್ಯುವಿನ ನಂತರ ದಸರಾ

ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸಾವು ; ಏಳು ಜನರಿಗೆ ಗಂಭೀರ ಗಾಯ

ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ