Home Posts tagged V4News (Page 645)

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಿಪ್ಪಣ್ಣ ಹೆಳವರ ಇವರಿಗೆ ಅಭಿನಂದನಾ ಕಾರ್ಯಕ್ರಮ

ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಖಾನಾಪುರ ಗ್ರಾಮದ ಶ್ರೀ ವೀರಗಂಟಿ ಮಡಿವಾಳೇಶ್ವರ ದೇವಸ್ಥಾನದಲ್ಲಿ 2022-,2023ನೇ ಸಾಲಿನಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ತಿಪ್ಪಣ್ಣ ಹೆಳವರ ನಾಗನೂರ ಇವರಿಗೆ ಖಾನಾಪುರ ಗ್ರಾಮದ ಅಖಿಲ ಕರ್ನಾಟಕ ಹೆಳವ ಸಮಾಜದಿಂದ ಅಭಿನಂದನಾ ಗೌರವದಿಂದ ಸನ್ಮಾನಿಸಿದರು.ಈ ವೇಳೆ ಪೂಜ್ಯ ಶ್ರೀ ಕಲ್ಯಾಣದಯ್ಯ ಸ್ವಾಮೀಜಿಗಳು

ಚಲಿಸುತ್ತಿದ್ದ ಅಟೋರಿಕ್ಷಾದೊಳಗೆ ಸ್ವೋಟ : ಇದೊಂದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತ! -ಡಿಜಿಪಿ

ಚಲಿಸುತ್ತಿದ್ದ ಅಟೋರಿಕ್ಷಾ ಸೊಳಗೆ ಸ್ವೋಟ ಉಂಟಾಗಿ ಪ್ರಯಾಣಿಕ ಮತ್ತು ಚಾಲಕ… ಗಾಯಗೊಂಡಿರುವ ಪುಟನೆ ನಗರದ ಕಂಕನಾಡಿ ಪೆÇಲೀಸ್ ಠಾಣೆ ಸಮೀಪದ ನಾಗುರಿಯಲ್ಲಿ ಶನಿವಾರ ಸಂಜೆ ಸಂಭವಿಸಿದೆರಿಕ್ಷಾದಲ್ಲಿ ಸ್ಫೋಟಗೊಂಡ ಸ್ಥಿತಿಯಲ್ಲಿ ಕುಕ್ಕರ್ ಪತ್ತೆ ಯಾಗಿದೆ. ಆಟೋರಿಕ್ಷಾದ ಒಳಗಿನ ಕೆಲವು ಭಾಗಗಳು ಸುಟ್ಟು ಹೋಗಿವೆ. ಪ್ರಯಾಣಿಕನ ಚೀಲದಲ್ಲಿದ್ದ ಪರಿಕರದಿಂದ ಬೆಂಕಿ ಹತ್ತಿಕೊಂಡಿದೆ’ ಎನ್ನಲಾಗಿದೆ. ರಿಕ್ಷಾಕ್ಕೆ ಆಟೋ ಎಲ್ ಪಿಜಿ ಕಿಟ್ ಅಳವಡಿಸಲಾಗಿತ್ತು ಬೆಂಕಿಗೆ

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022ರ ಅಂಗವಾಗಿ ನವೆಂಬರ್ 20, 2022 ರ ಭಾನುವಾರದಂದು, ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ ‘ಸೈಕಲ್ ಜಾಥಾ’ ನಡೆಯಿತು. ಮಾಹೆ ಮಣಿಪಾಲದ ಉಪಕುಲಪತಿ, ಲೆಫ್ಟಿನೆಂಟ್ ಜನರಲ್ (ಡಾ) ಎಂ. ಡಿ. ವೆಂಕಟೇಶ್ ಅವರು ಈ ಜಾಥಕ್ಕೆ ಚಾಲನೆ ನೀಡಿದರು. ಮಹಾರಾಷ್ಟ್ರ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ನಾಶಿಕ್ ಇಲ್ಲಿನ ಉಪಕುಲಪತಿ ಲೆಫ್ಟಿನೆಂಟ್ ಜನರಲ್

ತೋಕೂರು ಗುತ್ತು ವಾರಿಜಾಕ್ಷಿ ಶೆಟ್ಟಿ ನಿಧನ

ಸುರತ್ಕಲ್ : ತೋಕೂರು ಗುತ್ತು ಮನೆತನದ ಹಿರಿಯ ಚೇತನ ವಾರಿಜಾಕ್ಷಿ ಶೆಟ್ಟಿ. (ದಿ. ಬಂಬ್ರಾಣ ಕೆಳಗಿನಬೈಲು ಶಂಕರ ಶೆಟ್ರ ಧರ್ಮಪತ್ನಿ ) ಯವರು ತಮ್ಮ 90 ನೇ ವಯಸ್ಸಿನಲ್ಲಿ ನವಂಬರ್ 20 ರಂದು ಮುಂಜಾನೆ ಸ್ವಗೃಹದಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. ಮೃತರು ಪುತ್ರರಾದ ಉದ್ಯಮಿ ತೋಕೂರುಗುತ್ತು ಶರತ್ಚಂದ್ರ ಶೆಟ್ಟಿ ಮತ್ತು ರತ್ನಶೇಖರ ಶೆಟ್ಟಿ ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಪಧಾಧಿಕಾರಿಗಳ ಆಯ್ಕೆ

ಉಡುಪಿ: ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಉಡುಪಿ ಜಿಲ್ಲಾ ಮಟ್ಟದ ಪಧಾಧಿಕಾರಿಗಳ ಅಯ್ಕೆಯು ಬ್ರಹ್ಮಾವರದ ಧರ್ಮವರ ಸಭಾಂಗಣದಲ್ಲಿ ನಡೆಯಿತು.ಪಕ್ಷದ ರಾಜ್ಯಧ್ಯಕ್ಷರಾಗಿರುವ ಡಾ.ಅರ್ ಮೋಹನ್ ರಾಜ್ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ಬಳಿಕ ನಡೆದ ಅಯ್ಕೆ ಪ್ರಕ್ರಿಯೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅರ್ ಟಿ ಐ ಸಂಘಟನೆಗಳಲ್ಲಿ ಸಕ್ರಿಯಾಗಿರುವ ಸದಶಿವ ಶೆಟ್ಟಿ ಹೇರೂರು ಇವ ರನ್ನು ಉಡುಪಿ ಜಿಲ್ಲಾದ್ಯಕ್ಷರನ್ನಾಗಿ ಅಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ

ಕನ್ನಡದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿದರೆ ಅಸಾಮಾನ್ಯವಾದದನ್ನು ಸಾಧಿಸಬಲ್ಲರು: ಬಿ.ಸಿ‌.ನಾಗೇಶ್

ಮಂಗಳೂರು: ಶಿಕ್ಷಣದಲ್ಲಿ ಭಾರತೀಯತೆಯನ್ನು ತರುವ ಉದ್ಧೇಶದಿಂದ ಮತ್ತು ಮಕ್ಕಳ ಕೇಂದ್ರಿತ ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಲಾಗಿದೆ. ಮಾತೃ ಭಾಷೆ ಮತ್ತು ಸ್ಥಾನೀಯ ಭಾಷೆಯಲ್ಲೇ ಶಿಕ್ಷಣ ನೀಡುವ ಮೂಲಕ ಮಕ್ಕಳಲ್ಲಿ ಅದಾಗಲೇ ಅಡಗಿರುವ ಸೂಪ್ತ ಪ್ರತಿಭೆಯ ಅನಾವರಣಗೊಳಿಸುವ ಪ್ರಯತ್ನವಾಗುತ್ತಿದೆ. ಸರ್ಕಾರದ ಈ ಪ್ರಯತ್ನಗಳ ಜೊತೆಗೆ ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಕನ್ನಡ ಶಾಲಾ ಮಕ್ಕಳ ಹಬ್ಬದ ಮೂಲಕ ಕನ್ನಡ ಮಾಧ್ಯಮದ ಮಕ್ಕಳಿಗೆ

ಕಾರ್ಕಳ : ಮನೆಗೆ ಬೆಂಕಿ

ಕಾರ್ಕಳ : ಮನೆ ಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ಭಾಗಶಃ ಭಸ್ಮಗೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದ ಕಾಂತಾವರ ಗ್ರಾಮದದಲ್ಲಿ ನಡೆದಿದೆ  ಮನೆಯಲ್ಲಿ ಶನಿವಾರ ಬೆಳಿಗ್ಗೆ 9:30ರ ವೇಳೆ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ತುಂಬಾ ವ್ಯಾಪಿಸಿದೆ.  ಬೆಂಕಿಯ ಕೆನ್ನಾಲಿಗೆಗೆ ಮನೆ ಮೇಲ್ಚಾವಣಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯವರು ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಂದಾಜು 1 ಲಕ್ಷ ರೂ. ನಷ್ಟವುಂಟಾಗಿದೆ.

ಆಧುನಿಕ ಜ್ಞಾನ – ಭಾರತೀಯ ಸಂಸ್ಕೃತಿಯ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು, ನ, 19; ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಶಿಕ್ಷಣದಿಂದ ನವ ಹಾಗೂ ಸ್ವಾವಲಂಬಿ ಭಾರತ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಸಂತ ಜೋಸೆಫರ ವಾಣಿಜ್ಯ ಮಹಾ ವಿದ್ಯಾಲಯ[ಸ್ವಾಯತ್ತ]ದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು,ಆಧುನಿಕ ಜ್ಞಾನ, ಭಾರತೀಯ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಒಳಗೊಂಡ ಶಿಕ್ಷಣ ಇಂದಿನ ಅಗತ್ಯವಾಗಿದ್ದು, ದೇಶದ ಅಖಂಡತೆ, ಸಾರ್ವಭೌಮತೆಯನ್ನು ಎತ್ತಿಹಿಡಿಯುವ

ಶಾಲಾ ಪಠ್ಯದಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಹೋರಾಟ : ಸಿಎಂ ಬೊಮ್ಮಾಯಿ

ಮಂಗಳೂರು, ನ.19: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕವನ್ನು ಬೆಂಗಳೂರಿನಲ್ಲಿ ಮಾಡುವ ಜೊತೆಗೆ ಅವರ ಹೋರಾಟವನ್ನು ಪಠ್ಯದಲ್ಲಿ ಸೇರಿಸುವ ಕಾರ್ಯವನ್ನು ಸರಕಾರದ ವತಿಯಿಂದ ಶೀಘ್ರವೇ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ, ಸಂಘಟನಾ ಚತುರ, ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಶೌರ್ಯದ ಕಂಚಿನ‌ ಪ್ರತಿಮೆಯನ್ನು ಅನಾವರಣ ಗೊಳಿಸಿದ ಬಳಿಕ ಕರಾವಳಿ ಉತ್ಸದ ಮೈದಾನದಲ್ಲಿ

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022: ಆಂಟಿಬಯೋಟಿಕ್‌ಗಳನ್ನು ಎಚ್ಚರಿಕೆಯಿಂದ ನಿರ್ವಹಿಸಿ

ಮಣಿಪಾಲ 19ನೇ ನವೆಂಬರ್ 2022:ಆಂಟಿಮೈಕ್ರೊಬಿಯಲ್ (ಸೂಕ್ಷ್ಮಜೀವಿ) ನಿರೋಧಕ ದೋಷಗಳಿಂದ ಯಾರಾದರೂ, ಯಾವುದೇ ವಯಸ್ಸಿನವರು , ಯಾವುದೇ ರಾಷ್ಟ್ರದವರು ಸೋಂಕುಗಳಿಗೆ ಬಲಿಯಾಗಬಹುದು. ಸರಿಯಾದ ಮೇಲ್ವಿಚಾರಣೆ ಮತ್ತು ಸಲಹೆಯಿಲ್ಲದೆ ನೀವು ಹೆಚ್ಚು ಪ್ರತಿಜೀವಕಗಳನ್ನು ತೆಗೆದುಕೊಂಡರೆ, ನಿಮ್ಮ ವೈದ್ಯರಿಗೆ ನಿಮ್ಮ ಸೋಂಕಿಗೆ ಚಿಕಿತ್ಸೆ ನೀಡಲು ಕಷ್ಟವಾಗುತ್ತದೆ ಮತ್ತು ಈ ತೊಂದರೆಗೆ ಕಾರಣವೆಂದರೆ ಆಂಟಿಮೈಕ್ರೊಬಿಯಲ್ ಪ್ರತಿರೋಧದಿಂದಾಗುವ ಪರಿಣಾಮ. ಪ್ರತಿ ವರ್ಷ,