Home Posts tagged V4News (Page 653)

ಅನಧಿಕೃತ ಪ್ಲೆಕ್ಸ್ ಬ್ಯಾನರ್ ಅಳವಡಿಕೆ : ಯುವಕ ಬಲಿ : ಪರಿಹಾರ ಒದಗಿಸುವಂತೆ ಆಗ್ರಹ

ಭಾರತೀಯ ಮಜ್ದೂರು ಸಂಘದ ಕುಟುಂಬ ಮಿಲನ ಕಾರ್ಯಕ್ರಮಕ್ಕೆ ಸಂಬಂಧಿಸಿದ ಯಾವುದೇ ಅನುಮತಿ ಇಲ್ಲದ, ಅನಧಿಕೃತ ಫ್ಲಕ್ಸ್ ಬ್ಯಾನರ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಅಪಘಾತ ಸಂಭವಿಸಿ ಅಮಾಯಕ ಯುವಕನೊರ್ವ ಬಲಿಯಾದ ಘಟನೆ ದುರದೃಷ್ಟಕರ ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಬೆಳ್ತಂಗಡಿ ತಾಲೂಕು ಸಮಿತಿ ಹೇಳಿದೆ. ತಾಲೂಕಿನಾದ್ಯಂತ ಪ್ರಚಾರ, ಪ್ರತಿಷ್ಠೆಗೊಸ್ಕರ

ನ.10ರಿಂದ ಬಿ.ಸಿ ರೋಡ್‍ನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ

ಬಂಟ್ವಾಳ: ಕಳೆದ ಮೂರು ತಿಂಗಳ ಹಿಂದೆ ಬಂಟ್ವಾಳ ತಾಲೂಕಿನ ಜನ ಮನ ಗೆದ್ದ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯಿಂದ ವಸ್ತ್ರಗಳ ಮಾರಾಟ ಮೇಳ ನವೆಂಬರ್ 10, ಗುರುವಾರದಿಂದ ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸಭಾಂಗಣದಲ್ಲಿ ಪುನಾರಂಭಗೊಳ್ಳಲಿದೆ. ಗ್ರಾಹಕರ ಬೇಡಿಕೆಗೆ ಸ್ಪಂದಿಸಿ ಮತ್ತೆ ಒಂದು ತಿಂಗಳ ಕಾಲ ಎಲ್ಲಾ ವಯೋಮಾನದ ಜನರ ಮನಕೊಪ್ಪುವ ಬಟ್ಟೆಗಳ ಮಾರಾಟ ಇಲ್ಲಿ ನಡೆಯಲಿದೆ. ಗ್ರಾಹಕರು ಖರೀದಿಸುವ ಪ್ರತಿಯೊಂದು ಬಟ್ಟೆಯ ಬೆಲೆ ಕೇವಲ 199 ಆಗಿದ್ದು ಅತ್ಯಂತ ಉತ್ತಮ

ಕಾರ್ಕಳ: ಚಂದ್ರ ಗ್ರಹಣ ಭಾಗಶಃ ಗೋಚರ

ಕಾರ್ಕಳ: ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಚಂದ್ರ ಗ್ರಹಣದ ಭಾಗಶಃ ಗೋಚರವಾಯಿತು . ಚಂದ್ರಗ್ರಹಣ ಮೋಕ್ಷಕಾಲದ ಬಳಿಕ ಕಾರ್ಕಳದ ಪ್ರಮುಖ ದೇವಾಲಯಗಳಲ್ಲಿಗರ್ಭಗುಡಿ ಸ್ವಚ್ಚ ಗೊಳಿಸಿ ಪೂಜಾ ವಿಧಿವಿಧಾನಗಳು ನಡೆದವು. ಕಾರ್ಕಳ ತಾಲೂಕಿನ ಪ್ರಸಿದ್ದ ವೆಂಕಟರಮಣ ದೇವಾಲಯ , ಅನಂತ ಶಯನ ದೇವಾಲಯ, ಮುಖ್ಯಪ್ರಾಣ ದೇವಾಲಯ, ಹಿರ್ಗಾನ ಮಹಾಲಕ್ಷ್ಮಿ ದೇವಸ್ಥಾನ , ಹೆಬ್ರಿಯ ಅನಂತ ಪದ್ಮನಾಭ ದೇವಾಲಯ , ಅಜೆಕಾರು ವಿಷ್ಣುಮೂರ್ತಿ ದೇವಾಲಯಗಳಲ್ಲಿ ಸ್ವಚ್ಚತಾ ಕಾರ್ಯಗಳು ನಡೆದು ದೇವರಿಗೆ

ಸುರತ್ಕಲ್‌ ಟೋಲ್‌ಗೇಟ್‌ ತೆರವುಗೊಳಿಸಲು ಸಾಧ್ಯವಾಗದ ಸಂಸದರು ಜನಪ್ರತಿನಿಧಿಯಾಗಲು ಅರ್ಹರಲ್ಲ: ಐವನ್‌ ಡಿಸೋಜಾ

ಸುರತ್ಕಲ್, ನ.೮: ದೇಶದಲ್ಲಿ ೩೬ ಅಕ್ರಮ ಟೋಲ್‌ಗೇಟ್‌ಗಳಿರುವುದನ್ನು ಒಪ್ಪಿಕೊಂಡಿರುವ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿಯವರೇ ತೆರವುಗೊಳಿಸಲಾಗುವುದು ಎಂದು ಲೋಕಸಭೆಯಲಿ ಹೇಳಿದ ಬಳಿಕವೂ ಸಂಸದರಾಗಿ ಸುರತ್ಕಲ್ ಅಕ್ರಮ ಟೋಲ್‌ಗೇಟ್ ತೆರವುಗೊಳಿಸಲು ಸಾಧ್ಯವಾಗದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಜನಪ್ರತಿನಿಧಿಯಾಗಿರಲು ಅರ್ಹರಲ್ಲ ಎಂದು ಐವನ್ ಡಿಸೋಜಾ ಹೇಳಿದರು.ಸುರತ್ಕಲ್ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ

ಮಂಗಳೂರು : ರಾಜ್ಯ ಸರ್ಕಾರದ ಜನಸಂಕಲ್ಪ ಯಾತ್ರೆ ಅಲ್ಲ, ಇದು ಜನ ಸಂಕಟ ಯಾತ್ರೆ-ಮಂಗಳೂರಿನಲ್ಲಿ ಶಾಸಕ ಯು.ಟಿ. ಖಾದರ್ ವಾಗ್ದಾಳಿ

ರಾಜ್ಯದ ಬಿಜೆಪಿ ಸರ್ಕಾರ ಜನಸಂಕಲ್ಪ ಯಾತ್ರೆಯನ್ನು ಆರಂಭಿಸಿದ್ದು, ಇದು ಜನ ಸಂಕಲ್ಪ ಯಾತ್ರೆ ಅಲ್ಲ ಇದು ಜನ ಸಂಕಟ ಯಾತ್ರೆ. ಜನ್ರ ಮುಂಗಡ ಪತ್ರದಲ್ಲಾಗಲಿ ಹೇಳಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಸರ್ಕಾರದ ವೈಫಲ್ಯ ಮರೆಮಾಚಲು ಈ ಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಶಾಸಕ ಯು.ಟಿ. ಖಾದರ್ ವಾಗ್ದಾಳಿ ನಡೆಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆ. ಡಬಲ್ ಇಂಜಿನ್

ವಿಟ್ಲ: ಪೆಟ್ರೋಲ್ ಸುರಿದು ಯುವಕನ ಹತ್ಯೆ

ವಿಟ್ಲ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿದ್ದು, ವಿಚಾರಣೆ ನಡೆಯುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೋಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಟ್ವಾಳ-ವಿಟ್ಲ ಠಾಣಾ ವ್ಯಾಪ್ತಿಯ ಗಡಿ ಭಾಗದ ಸುರಿಬೈಲು ನಿವಾಸಿ ಸಪ್ಪಿ (ಸಮಾದ್) (19) ಮೃತ ಯುವಕ. ಅದ್ರಾಮ ಸಲಿಂಗಕಾಮಿಯಾಗಿದ್ದು, ಮಂಚಿ-ಇರಾ-ಮುಡಿಪು ರಸ್ತೆಯ ನಿರ್ಜನ ಪ್ರದೇಶದ ಗುಡ್ಡದಲ್ಲಿ

ಪುತ್ತೂರು: ಬಾಲವನದಲ್ಲಿ ಬಾಲರು” ಸಂಭ್ರಮದ ಮಕ್ಕಳ ದಿನಾಚರಣೆ -ನ.14 : ಡಾ.ಶಿವರಾಮ ಕಾರಂತ ಬಾಲವನದಲ್ಲಿ ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ.ಶಿವರಾಮ ಕಾರಂತ ಬಾಲವನ ಸಮಿತಿ ಹಾಗೂ ಪುತ್ತೂರು ಸಹಾಯಕ ಆಯುಕ್ತರ ಕಾರ್ಯಾಲಯದ ಜಂಟಿ ಆಶ್ರಯದಲ್ಲಿ “ಬಾಲವನದಲ್ಲಿ ಬಾಲರು” ಸಂಭ್ರಮದ ಮಕ್ಕಳ ದಿನಾಚರಣೆ ನ.14 ಸೋಮವಾರ ಬೆಳಗ್ಗೆ 9 ರಿಂದ ಪರ್ಲಡ್ಕ ಡಾ.ಶಿವರಾಮ ಕಾರಂತ ಬಾಲವನದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಕಾರ್ಯಕ್ರಮದ

ವಿಟ್ಲ :ಶಿಥಿಲಾವಸ್ಥೆಯಲ್ಲಿ ಕುಳಾಲು ಸರ್ಕಾರಿ ಶಾಲೆಯ ಕಟ್ಟಡ-ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳು -ಶಾಸಕರಿಗೆ ಮನವಿ ನೀಡಿದರೂ ಸ್ಪಂದಿಸಿಲ್ಲ

ವಿಟ್ಲ : ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ÷್ಯದಿಂದಾಗಿ 92ವರ್ಷಗಳ ಇತಿಹಾಸ ಹೊಂದಿದ ಕುಳಾಲು ಸರಕಾರಿ ಶಾಲೆಯ ಕಟ್ಟಡ ಕುಸಿಯುತ್ತಿದ್ದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ ಶತಮಾನದತ್ತ ದಾಪುಗಾಲು ಹಾಕುತ್ತಿದೆ. ಆದರೆ ಕುಸಿಯುವ ಹಂತದಲ್ಲಿರುವ ನಾಲ್ಕು ಕೊಠಡಿಗಳನ್ನು ತೆರವುಗೊಳಿಸಿ ಆರು ಹೊಸ ಕೊಠಡಿಗಳನ್ನು ನೀಡುವಂತೆ

ಗಟ್ಟಿ ಸಮಾಜದ ನಾಯ್ಗರು ಮತ್ತು ಮೇಲ್ಡರಿಗೆ ಗಡಿ ಪ್ರಸಾದ ಪ್ರಧಾನ

ಮಂಗಳೂರು : ಗಟ್ಟಿ ಸಮಾಜದ ನಾಯ್ಗರು ಮತ್ತು ಮೇಲ್ಡರಿಗೆ ಗಡಿ ಪ್ರಸಾದ ಪ್ರಧಾನ ಕಾರ್ಯಕ್ರಮವು ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದಲ್ಲಿ ಸೋಮವಾದಂದು ಲಕ್ಷದೀಪೋತ್ಸವದ ಸಂದರ್ಭದಲ್ಲಿ ಗಟ್ಟಿ ಸಮಾಜದ ಹಾಗೂ ಊರವರ ಉಪಸ್ಥಿತಿಯಲ್ಲಿ ಶ್ರದ್ಧಾ ಭಕ್ತಿಯಿಂದ ನಡೆಯಿತು.ಪ್ರಸ್ತುತ ಗಟ್ಟಿ ಸಮಾಜದ ನಾಯ್ಗರಾಗಿ ಕಾರ್ಯನಿರ್ವಹಿಸುತ್ತಿರುವ ಹರೀಶ್ಚಂದ್ರ ಗಟ್ಟಿ ಬೊಂಬಾಯಿಮನೆ ಹಾಗೂ ಮೇಲ್ಡರಾಗಿ ಕಾರ್ಯನಿರ್ವಹಿಸುತ್ತಿರುವ ಯಾದವ ಗಟ್ಟಿ ಪಿಲಾರ್ ಅವರಿಗೆ ಗಡಿ ಪ್ರಸಾದವನ್ನು ಪ್ರಧಾನ

ಕುಂದಾಪುರ : ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

. ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ ಸರ್ಕಾರವಲ್ಲ, ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ