Home Posts tagged V4News (Page 654)

ಶ್ರೀ ಮನೋಹರ್ ಕೆ ಪುತ್ರನ್ ಮುಂಬೈ(75) ನಿಧನ

ಮೂಲತ: ಎರ್ಮಾಳು ತೆಂಕ ದವರಾದ ಇವರು ತಮ್ಮ ವಿದ್ಯಾಭ್ಯಾಸವನ್ನು ಊರಿನಲ್ಲಿ ಮುಗಿಸಿ ಮುಂಬೈಯಲ್ಲಿ ಉನ್ನತ ವ್ಯಾಸಂಗ ವನ್ನು ಮಾಡಿ ಪ್ರತಿಷ್ಠಿತ ಟಾಟಾ ಮೋಟಾರ್ಸ್ ಕಂಪನಿ ಯಲ್ಲಿ 35 ವರ್ಷ ಉನ್ನತ ಹುದ್ದೆ ಯಲ್ಲಿ ಇದ್ದು ನಿವೃತ್ತಿಯನ್ನು ಹೊಂದಿರುತ್ತಾರೆ.ಮುಂಬೈ ಯಲ್ಲಿ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದು ಎರ್ಮಾಳು ತೆಂಕ ಮೊಗವೀರ ಸಭಾ ಮುಂಬೈ ಇದರ

ತಲಪಾಡಿ : RTO ಕಚೇರಿಗೆ ಲೋಕಾಯುಕ್ತ ದಾಳಿ

ಉಳ್ಳಾಲ: ತಲಪಾಡಿ ಆರ್ ಟಿ ಓ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳಿಂದ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಕೇರಳ – ಕರ್ನಾಟಕ ಗಡಿಭಾಗ ಮೇಲಿನ ತಲಪಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ತಲಪಾಡಿ ತನಿಖಾ ಠಾಣೆಗೆ ಲೋಕಾಯುಕ್ತ ದಾಳಿ ನಡೆಸಿದೆ. ಲಾರಿ ಚಾಲಕರಿಂದ ಲಂಚ ಪಡೆಯುವ ಆರೋಪಗಳು ಈ ಹಿಂದೆ ಹಲವು ಬಾರಿ ವ್ಯಕ್ತವಾಗಿತ್ತು. ಈ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ

ಸಮಾಜಸೇವಕ ವಾಸುದೇವ ಆರ್. ಕೋಟ್ಯಾನ್ ನಿಧನ

ಭಾರತ್ ಕೋಅಪರೇಟಿವ್ ಬ್ಯಾಂಕ್ ಮುಂಬಯಿಯ ಮಾಜಿ ಅಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಹೆಜಮಾಡಿ, ಬಿಲ್ಲವರ ಸಂಘ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿ ಇದರ ಗೌರವಾಧ್ಯಕ್ಷರಾಗಿ, ಮಾರ್ಗದರ್ಶಕರಾಗಿ, ಸಂಘದ ಹಾಗೂ ಗಡಿಯ ಸಮಗ್ರ ಅಭಿವೃದ್ಧಿಗೆ ತಮ್ಮ ಜೀವನವನ್ನೇ ಮುಡುಪಾಗಿಸಿಕೊಂಡ ವಾಸುದೇವ ಆರ್. ಕೋಟ್ಯಾನ್ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಮುಂಬಯಿಯಲ್ಲಿ ಇಂದು ಸಂಜೆ 7 ಗಂಟೆಗೆ ಜರುಗಲಿದೆ.

ಕೆಳಮಟ್ಟದ ರಾಜಕಾರಣ ಯಾರೂ ಮಾಡಬಾರದು : ಗೋಪಾಲ ಪೂಜಾರಿ

ಕುಂದಾಪುರ: ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಾನು ಶಾಸಕನಾಗಿದ್ದ ಸಂದರ್ಭದಲ್ಲಿ ಮಂಜೂರು ಮಾಡಿದ ಕೆಲವು ಯೋಜನೆಗಳನ್ನು ಇಂದು ಮುಖ್ಯಮಂತ್ರಿಗಳ ಮೂಲಕ ಶಂಕುಸ್ಥಾಪನೆ ಮಾಡಲಾಗುತ್ತಿದೆ. ಕ್ಷೇತ್ರದ ಶಾಸಕರು ಹಾಗೂ ಜಿಲ್ಲಾಡಳಿತ ಜನತೆಗೆ ತಪ್ಪು ಮಾಹಿತಿ ಕೊಡುವುದನ್ನು ಮೊದಲು ನಿಲ್ಲಿಸಬೇಕು. ಇಂತಹ ಕೆಳಮಟ್ಟದ ರಾಜಕಾರಣ ಹಿಂದೆ ಯಾವೊಬ್ಬ ಜನಪ್ರತಿನಿಧಿಯೂ ಮಾಡಿಲ್ಲ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ

ಅಡಕೆ ಬೆಳೆಯಲ್ಲಿ ಬಿಳಿಚುಕ್ಕಿ ರೋಗ : ವೈಜ್ಞಾನಿಕ ಕಾರಣ ಪತ್ತೆ ಹಚ್ಚಿ ನಿವಾರಣೆಗೆ ಕ್ರಮ : ಕುಂದಾಪುರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ

ಕುಂದಾಪುರ: ಅಡಕೆ ಬೆಳೆಯಲ್ಲಿ ಬಿಳಿಚುಕ್ಕೆ ರೋಗ ಕಾಣಿಸಿಕೊಳ್ಳುತ್ತಿದ್ದು, ಕೃಷಿಕರು ಆತಂಕದಲ್ಲಿದ್ದಾರೆ. ಈ ರೋಗದ ಬಗ್ಗೆ ಕೃಷಿ ವಿಶ್ಯವಿದ್ಯಾಲಯ ಹಾಗೂ ಕೇಂದ್ರ ಸರ್ಕಾರದ ತಂಡ ಪರಿಶೀಲನೆ ನಡೆಸುತ್ತಿದ್ದು, ವೈಜ್ಞಾನಿಕವಾದ ಕಾರಣವನ್ನು ಪತ್ತೆ ಹಚ್ಚಿ ಬಳಿಕ ಅದರ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ರೋಗ ಹರಡದಂತೆ ವಿಜ್ಞಾನಿಗಳು ತಿಳಿಸಿರುವ ಔಷಧಿಯ ಸಿಂಪಡನೆ ಕಾರ್ಯಕ್ಕೆ ಸರ್ಕಾರ ಸಹಕಾರ ನೀಡಲಿದೆ. ಮೂಲರೋಗವನ್ನು ಪತ್ತೆಹಚ್ಚಿ ಅದರ ನಿವಾರಣೆಗೆ ಔಷಧಿಯನ್ನೂ

ಮೂಡುಬಿದಿರೆ ಪುರಪ್ರವೇಶಗೈದ ಶ್ರೀರಾಮ ದಿಗ್ವಿಜಯ ರಥಯಾತ್ರೆ

ಮೂಡುಬಿದಿರೆ: ‘ಶ್ರೀ ರಾಮದಾಸ, ಆಶ್ರಮದ ನೇತೃತ್ವದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಸಾಧು-ಸಂತರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶ್ರೀರಾಮ ದಿಗ್ವಿಜಯ ರಥಯಾತ್ರೆಯು ಮೂಡುಬಿದಿರೆಗೆ ಆಗಮಿಸಿತು. ಶ್ರೀ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಶ್ರೀ ವಿದ್ಯಾ ನಂದ ಸ್ವಾಮೀಜಿ, ಮೂಡುಬಿದಿರೆ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ , ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ವಿಹಿಂಪ ಬಜರಂಗದಳದ

ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ : ಬೊಮ್ಮಾಯಿ

ಕುಂದಾಪುರ: ಜನಪ್ರಿಯ ಸರ್ಕಾರವಿದ್ದರೆ, ಜನಪರ ನಾಯಕ ಅದರ ಮುಖ್ಯಸ್ಥನಾದರೆ ಯಾವ ರೀತಿ ಜನಸ್ಪಂದನೆ ಸಿಗುತ್ತದೆ ಎನ್ನುವುದಕ್ಕೆ ಈ ಬೈಂದೂರಿನ ಅಭಿವೃದ್ದಿಯ ಕತೆಯೇ ಸಾಕ್ಷಿ. ನಮ್ಮ ಸರ್ಕಾರದÀ ಅಭಿವೃದ್ದಿಯ ಕೆಲಸಗಳು ನಿಮ್ಮ ಮುಂದಿವೆ. ಕೇಂದ್ರ, ರಾಜ್ಯ ಸರ್ಕಾರದಂತೆ ಬೈಂದೂರಿನಲ್ಲಿಯೂ ಸಂಸದ ಹಾಗೂ ಶಾಸಕರ ಡಬಲ್ ಇಂಜಿನ್ ಸಮನ್ವಯತೆ ಇದೆ. ಇದು ಕೇವಲ ಬಾಯಿ ಮಾತಿನ ಸರ್ಕಾರವಲ್ಲ, ನಮ್ಮದು ಜನರಿಗೆ ಸ್ಪಂದಿಸುವ ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಿಗ್ ಬಾಸ್ ಸ್ವರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ

ಮಂಗಳೂರು: ತುಳು ಸಿನಿಮಾ ನಟ, ಬಿಗ್ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ. ಬೆದರಿಕೆ ಬಗ್ಗೆ ರೂಪೇಶ್ ಕುಟುಂಬದ ಸದಸ್ಯರು ಮಂಗಳೂರು ಪೆÇಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಬಿಗ್ಬಾಸ್ನಲ್ಲಿ ರೂಪೇಶ್ ಹೇಳಿರುವ ಹೇಳಿಕೆಗಳ ಹಿನ್ನೆಲೆ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ರೂಪೇಶ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು,

ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿ

ಬೆಳ್ತಂಗಡಿ ಪಟ್ಟಣದಲ್ಲಿರುವ ಶ್ರೀ ನಾರಾಯಣ ಗುರು ವಾಣಿಜ್ಯ ಸಂಕೀರ್ಣದ ಮುಂಭಾಗದಲ್ಲಿರುವ ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಗುಂಡಿಯೊಂದು ನಿರ್ಮಾಣವಾಗಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಕೊಯ್ಯೂರು ಖಾಸಗಿ ರಿಕ್ಷಾ ನಿಲ್ದಾಣದಲ್ಲಿ ಈ ಅಪಾಯಕಾರಿ ಗುಂಡಿ ನಿರ್ಮಾಣವಾಗಿದೆ. ಈಗಾಗಲೇ ಗುಂಡಿ ಬಿದ್ದು ವಾರವಾಗಿದ್ದರೂ ಕೂಡ ಪಟ್ಟಣ ಪಂಚಾಯತ್ ಆಡಳಿತ ಮೌನವಾಗಿದೆ. ಇಲ್ಲಿ ದಿನನಿತ್ಯ ನೂರಾರು ವಾಹನಗಳು ಚಲಿಸುತ್ತದೆ. ಸಮೀಪದ

ಪಂಚಾಯತ್‍ಗೆ ಬರುವ ಅನುದಾನದಲ್ಲಿ ಹಸ್ತಕ್ಷೇಪ : ನಮ್ಮ ಹಕ್ಕಿಗೆ ಚ್ಯುತಿ ಬಾರದಂತೆ ಪ್ರತಿಭಟಿಸುತ್ತೇವೆ : ಸುಭಾಶ್ರಚಂದ್ರ ಶೆಟ್ಟಿ

ಪಂಚಾಯತ್‍ರಾಜ್ ವ್ಯವಸ್ಥೆಯನ್ನು ಬುಡಮೇಲು ಮಾಡುವ ಮೂಲಕ ಬಿಜೆಪಿ ಸರಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುವ ನಿಟ್ಟಿನಲ್ಲಿ ಒಂದೊಂದು ಕೆಲಸಗಳನ್ನು ಮಾಡುತ್ತಿದೆ ಎಂದು ರಾಜೀವಗಾಂಧಿ ಪಂಚಾಯತ್‍ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಸುಭಾಶ್ರಚಂದ್ರ ಶೆಟ್ಟಿ ಆರೋಪಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಕುರಿತು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರತಿಭಟನೆ ಮೂಲಕ ಕಾಂಗ್ರೆಸ್ ತನ್ನ ಮೇಲೆ ಅಪಪ್ರಚಾರ ಮಾಡುತ್ತಿದೆ ಎಂದು ಶಾಸಕರು