ಸುರತ್ಕಲ್: “ನಾನೇ ಒರಿಜಿನಲ್ ನಾಗವಲ್ಲಿ, ಮೊನ್ನೆ ಸುರತ್ಕಲ್ ಟೋಲ್ ಗೇಟ್ ಬಳಿ ನೀವು ನೋಡಿದ್ದು ಕಾಂತಾರ ಚಿತ್ರದ ಎರಡನೇ ಭಾಗವಲ್ಲ ಮೂರನೇ ಭಾಗ” ಎಂದು ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಮಾಧ್ಯಮಗಳ ಮುಂದೆ ಹೇಳಿದರು. ಸುರತ್ಕಲ್ ಟೋಲ್ ವಿರೋಧಿ ಪ್ರತಿಭಟನೆ ಸಂದರ್ಭದ ತಮ್ಮ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾಗಳ ಟೈಟಲ್ ಕೊಟ್ಟು
ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಹಾಗೂ ಕೊರೊನಾ ಸಂದರ್ಭದಲ್ಲಿ ಉತ್ತಮವಾಗಿ ಅಧಿಕಾರ ನಿಭಾಯಿಸಿದ ರಾಜೇಂದ್ರ ಕೆವಿ ಅವರು ಸಾಂಸ್ಕೃತಿಕ ನಗರಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ದ.ಕ. ಜಿಲ್ಲಾಧಿಕಾರಿ ಆಗಿ ಜಿಪಂ ಸಿಇಓ ಡಾ.ಕುಮಾರ್ ಪ್ರಭಾರ ಅವರು ಚಾರ್ಜ್ ತೆಗೆದುಕೊಳ್ಳಲಿದ್ದಾರೆ
ಶಾಲಾ ವಿಜ್ಞಾನ ಮೇಳ ಕಾರ್ಯಕ್ರಮ ನಡೆಯುತ್ತಿದ್ದಾಗ ಚಪ್ಪರ ಕುಸಿದು ಹಲವಾರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ಉಪ್ಪಳ ಸಮೀಪದ ಬೇಕೂರು ಶಾಲೆಯಲ್ಲಿ ನಡೆದಿದೆ. ಬೇಕೂರು ಸರಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಮೂರು ದಿನಗಳ ವಿಜ್ಞಾನ ಮೇಳ ಆಯೋಜಿಸಲಾಗಿದ್ದು, ಎರಡನೇ ದಿನವಾದ ಇಂದು ಈ ಅವಘಡ ನಡೆದಿದೆ. ತಗಡು ಶೀಟ್ನ ಚಪ್ಪರ ದಿಢೀರನೆ ಕುಸಿದು ಬಿದ್ದಿದೆ. ಈ ಸಂದರ್ಭ 200 ಕ್ಕೂ ಅಧಿಕ ವಿದ್ಯಾರ್ಥಿಗಳು
ಪುತ್ತೂರು: ಬಿಜೆಪಿ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಕಾರಣಕರ್ತರಾದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಒಟ್ಟು ಸೇರಿಸಿ ಬೆಳಕಿನ ಹಬ್ಬದ ಸಂಭ್ರಮಾಚರಣೆ ಹಾಗೂ ಎಲ್ಲರಿಗೂ ಗೌರವಾರ್ಪಣೆ ಮಾಡುವ ಕಾರ್ಯಕ್ರಮ ಅ.23ರಂದು ಪುತ್ತೂರಿನ ಕೊಟೇಚಾ ಸಭಾಭವನದಲ್ಲಿ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ತಿಳಿಸಿದರು. ಶುಕ್ರವಾರ ಪುತ್ತೂರಿನ ಬಿಜೆಪಿ
ಮಂಗಳೂರಿನ ಶರ್ಬತ್ಕಟ್ಟೆಯಲ್ಲಿರುವ ಶ್ರೀ ಅನಘ ಸುಝುಕಿಯಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಆಫರ್ಗಳನ್ನು ಘೋಷಿಸಿದ್ದಾರೆ. ನಗರದ ಪ್ರತಿಷ್ಠಿತ ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಶ್ರೀ ಅನಘ ಸುಝುಕಿ ಶೋರೂಂನಲ್ಲಿ ಗ್ರಾಹಕರಿಗೆ ದೀಪಾವಳಿ ಪ್ರಯುಕ್ತ ವಿಶೇಷ ಆಫರ್ಗಳನ್ನು ಘೋಷಿಸಿದ್ದಾರೆ. ಕಡಿಮೆ ಡೌನ್ಪೆಮೆಂಟ್, ಎಕ್ಸೇಂಜ್ ಬೋನಸ್, 5 ವರ್ಷಗಳ ಉಚಿತ ವಿಸ್ತರಿತ ವ್ಯಾರಂಟಿ, ಏಸಸರೀಸ್ ಆಫರ್, ಹೆಲ್ಮೆಟ್
ಮಂಗಳೂರು ವಿವಿಯಿಂದ ವಿದ್ಯಾರ್ಥಿಗಳಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತಿದ್ದು, ವಿಶ್ವವಿದ್ಯಾಲಯ ಈ ಕೂಡಲೇ ಸಮಸ್ಯೆಗಳನ್ನು ಬಗೆ ಹರಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಂಗಳೂರು ಕ್ಲಾಕ್ ಟವರ್ ಮುಂಭಾಗ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಹಲವು ಕಾಲೇಜ್ನ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಎಬಿವಿಪಿ ಮುಖಂಡ ಮಣಿಕಂಠ ಮಾತನಾಡಿ, ವಿಶ್ವ ವಿದ್ಯಾನಿಲಯ ಅಂಕಪಟ್ಟಿಯನ್ನು ನೀಡದೆ ವಿದ್ಯಾರ್ಥಿಗಳ ಭವಿಷ್ಯದ ಜತೆ ಆಟವಾಡುತ್ತಿದೆ ಅದೇ
ಮಂಗಳೂರಿನ ಈಜುಪಟುವೊಬ್ಬರು ಇದೀಗ ತನ್ನ ಹೆಸರನ್ನು ಇಂಡಿಯಾ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲಿಸುವ ಮೂಲಕ ಹೆಗ್ಗಳಿಕೆ ಮೂಡಿಸಿದ್ದಾರೆ. ಇವರೇ ಕೆ. ಚಂದ್ರಶೇಖರ ರೈ ಸೂರಿಕುಮೇರು. ತನ್ನ 49ರ ಹರೆಯದಲ್ಲಿ ಸೆಪ್ಟೆಂಬರ್ 15ರಂದು ತನ್ನ ಕೌಶಲ್ಯ ತೋರಿದ್ದಾರೆ. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮುಂಭಾಗಕ್ಕೆ ಒಂದೇ ಉಸಿರಿನಲ್ಲಿ 29 ಮುಂಭಾಗದ ತಿರುವು ಮಾಡಿದ್ದೇನೆ. ಇದನ್ನು ಇಂಡಿಯನ್ ಬುಕ್ ಆಫ್
ಬಂಟ್ವಾಳ: ಮಣಿಹಳ್ಳದಲ್ಲಿ ಕಾರು ಮತ್ತು ಬಸ್ಸಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂನ ಎಇಇ ಪ್ರವೀಣ್ ಜೋಶಿ ಅವರು ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ಎರಡು ಕಾರು ಹಾಗೂ ಬಸ್ಗಳ ನಡುವೆ ಅಪಘಾತ ನಡೆದಿದ್ದು, ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ವಗ್ಗದ ಮದ್ವ ಮನೆಯಿಂದ
ಹಾಸನ ಜಿಲ್ಲೆ ಆಲೂರು ತಾಲೂಕಿನಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯದಿಂದ ಎ.ಐ.ಸಿ.ಸಿ ರಾಷ್ಟಿçÃಯ ಅಧ್ಯಕ್ಷರಾಗಿ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಹುಮತದೊಂದಿಗೆ ಆಯ್ಕೆ ಮಾಡಿರುವುದಕ್ಕೆ ನಗರದ ಕೇಂದ್ರ ಭಾಗದಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಗನಾಥ್ ಅವರು ಮಾತನಾಡಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ರಾಷ್ಟಿಯ ಅಧ್ಯಕ್ಷ ಸ್ಥಾನ ಕಲ್ಪಿಸಿದ್ದು
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಇನ್ನಷ್ಟು ನಿಮ್ಮ ಪರವಾಗಿ ನಿಲ್ಲಲು ಮತ್ತು ಸಾಮಾಜಿಕ ಹೋರಾಟಗಳಲ್ಲಿ

























