Home Posts tagged V4News (Page 680)

ಕೋಟೇಶ್ವರ ಗ್ರಾ.ಪಂ. ಮುಂಭಾಗದ ನಿರುಪಯುಕ್ತ ಬೃಹತ್ ಟ್ಯಾಂಕ್ ತೆರವು

ಕುಂದಾಪುರ : ಕಳೆದ ಹದಿನೈದು ವರ್ಷಗಳಿಂದ ನಿರುಪಯುಕ್ತವಾಗಿದ್ದ ನೀರಿನ ಬೃಹತ್ ಟ್ಯಾಂಕ್ ತೆರವುಗೊಳಿಸುವ ಕಾರ್ಯಾಚರಣೆ ಕೋಟೇಶ್ವರ ಗ್ರಾಪಂ ವತಿಯಿಂದ ವಿವಿಧ ಇಲಾಖೆಗಳ ಸಹಕಾರದಲ್ಲಿ ಮಂಗಳವಾರ ನಡೆಯಿತು. ಸತತ 9 ಗಂಟೆಗಳ ನಿರಂತರ ಕಾರ್ಯಾಚರಣೆಯಿಂದಾಗಿ ಟ್ಯಾಂಕ್ ನೆಲಕ್ಕುರುಳಿದ್ದು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.ಈ ಬೃಹತ್ ನೀರಿನ ಟ್ಯಾಂಕ್ ಇದ್ದು,

ಬೆಳ್ಳಾರೆ; ಯುವತಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿಯ ಬಂಧನ

ಬೆಳ್ಳಾರೆ :ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.ಕಡಬ ತಾಲೂಕಿನ ಎಡಮಂಗಲ ಗ್ರಾಮದ ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ನೆರಮನೆಯ ಯುವಕ ಗೋಪಾಲಕೃಷ್ಣ ಎಂಬವನು ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು . ಅದರಂತೆ ಬೆಳ್ಳಾರೆ ಠಾಣೆ ಯಲ್ಲಿ ಯುವತಿಯ ಮನೆಯವರು ನೀಡಿರುವ ದೂರಿನ ಅನ್ವಯ ಲೈಂಗಿಕ ದೌರ್ಜನ್ಯ ಅಟ್ರಾಸಿಟಿ ಕೇಸು ನೀಡಿದ್ದು ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ

ಅಮೃತ ನಗರೋತ್ಥಾನ ಯೋಜನೆ : 15 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಯ ಅಂದಾಜು ಪಟ್ಟಿ

ಪುತ್ತೂರು: ಅಮೃತ ನಗರೋತ್ಥಾನ ಯೋಜನೆಯಲ್ಲಿ ಈಗಾಗಲೇ ರೂ. 15 ಕೋಟಿ ಅಭಿವೃದ್ಧಿ ಯೋಜನೆಗಳ ಅಂದಾಜು ಪಟ್ಟಿ ತಯಾರಿಸಲಾಗಿದೆ. ಉಳಿಕೆ 10 ಕೋಟಿಗೆ ಶೀಘ್ರ ಅಂದಾಜು ಪಟ್ಟಿ ತಯಾರಿಸಲಾಗುವುದು ಎಂದು ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್ ತಿಳಿಸಿದ್ದಾರೆ. ನಗರಸಭೆ ಸಾಮಾನ್ಯ ಸಭೆಯು ಅಧ್ಯಕ್ಷ ಕೆ. ಜೀವಂಧರ್ ಜೈನ್ ಅಧ್ಯಕ್ಷತೆಯಲ್ಲಿ ನಡೆಯಿತು. ಹಾರಾಡಿ -ರೈಲ್ವೇ ನಿಲ್ದಾಣ ರಸ್ತೆಯನ್ನು 82 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಜಿಲ್ಲಾಧಿಕಾರಿಯವರ

ಮೂಡುಬಿದರೆ ಕಡಲಕೆರೆಗೆ ಮೀನುಮರಿಗಳ ಸಮರ್ಪಣೆ

ಮೂಡುಬಿದಿರೆ: ಒಂಟಿಕಟ್ಟೆಯಲ್ಲಿರುವ ಕಡಲಕೆರೆಗೆ ವಿವಿಧ ಜಾತಿಯ 25,000 ಮೀನಿನ ಮರಿಗಳನ್ನು ಸಮರ್ಪಿಸಲಾಯಿತು.ಶಾಸಕ ಉಮಾನಾಥ ಕೋಟ್ಯಾನ್ ಮೀನಿನ ಮರಿಗಳನ್ನು ಸಮರ್ಪಿಸಿ, ದೋಣಿ ವಿಹಾರಕ್ಕೆ ಚಾಲನೆ ನೀಡಿದರು. ಶಾಸಕ ಉಮಾನಾಥ ಕೋಟ್ಯಾನ್ ಅವರು ಮಾತನಾಡಿ ಪ್ರವಾಸಿಗರನ್ನು ಸೆಳೆಯುವ ಕಡಲಕೆರೆಯನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಗೊಳಿಸುವ ಯೋಜನೆಯಿದ್ದು ಈಗಾಗಲೇ ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು. ಅರಣ್ಯ ಇಲಾಖೆಯ ಕುಂದಾಪುರ

ಬಾವಿಗೆ ಹಾರಿದ ಯುವತಿಯ ರಕ್ಷಣೆ

ಮೂಡುಬಿದಿರೆಯ ವಿಶಾಲನಗರದ ನಿವಾಸಿ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದು ಅವಳನ್ನು ಮೂಡುಬಿದಿರೆ ಅಗ್ನಿಶಾಮಕದಳದ ಸಿಬಂದಿಗಳು ರಕ್ಷಿಸಿದ ಘಟನೆಮೂಡುಬಿದಿರೆ ಪೋಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ್ಯದಲ್ಲಿ ನಡೆದಿದೆ. ತಮಿಳುನಾಡು ಮೂಲದ ವಿಶಾಲ್ ನಗರದ ನಿವಾಸಿ ರಾಬಿತ್ ಎಂಬವರ ಪುತ್ರಿ 22ರ ಹರೆಯದ ನಿವೇತಾ ಬಾವಿಗೆ ಹಾರಿದ ಯುವತಿ. ಈಕೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಬೆಳಗಿನ ವೇಳೆ ಪ್ರಾಂತ್ಯದ

ಜನತೆಯಲ್ಲಿ ಆತಂಕ ಮೂಡಿಸಿದ್ದ ಕಾಳಿಂಗ ಸರ್ಪ ಕೊನೆಗೂ ಸೆರೆ

ಕಾರ್ಕಳ: ಕಳೆದ ಕೆಲ ದಿನಗಳಿಂದ ಕಾರ್ಕಳದ ಜನತೆಯಲ್ಲಿಆತಂಕ ಮೂಡಿಸಿದ್ದ ಕಾಳಿಂಗ ಸರ್ಪವನ್ನು ಅನಿಲ್ ಪ್ರಭು ಸೆರೆಹಿಡಿದ್ದಾರೆ.ಅನಂತಶಯನ ತೆಳ್ಳಾರು ರಸ್ತೆಯ ವಕೀಲರ ಮನೆಯೊಂದರ ಬಳಿ ತಿರುಗಾಡುತ್ತಿದ್ದನ್ನು ಪುರಸಭಾ ಸದಸ್ಯ ಶುಭೋದ್ ರಾವ್ ಗಮನಕ್ಕೆ ತಂದಿದ್ದು ಕೂಡಲೇ ಅನಿಲ್ ಪ್ರಭು ರವರನ್ನು ಸಂಪರ್ಕಿಸಿ ಕಾಳಿಂಗ ಸರ್ಪವನ್ನು ಸೆರೆಹಿಡಿಯಲಾಯಿತು. ಈ ಸಂದರ್ಭ ಮಾತನಾಡಿದ ಪುರಭ ಸದಸ್ಯ ಶುಭದ ರಾವ್ ”ಅನೇಕ ಸಮಯಗಳಿಂದ ಕಾಳಿಂಗ ಸರ್ಪಗಳು ನಗರ ಪ್ರದೇಶಕ್ಕೆ ಬರಲು

ಸುಳ್ಯ : ಅನಾಥ ಶವ ದಹನ

ಆರಂತೋಡು ಅಡ್ಡಕ್ಕ ಎಂಬಲ್ಲಿ ಮಹಿಳೆ ಯೊಬ್ಬರು ಸುಮಾರು 10 ದಿನದ ಹಿಂದೆ ಮೃತಾರಾಗಿದ್ದು ಕೊಳೆತ ಸ್ಥಿತಿ ಯಲ್ಲಿ ಪತ್ತೆ ಯಾಗಿದ್ದು ವ್ಯಕ್ತಿ ಯೊಬ್ಬರು ನೋಡಿ ವಿಪತ್ತು ನಿರ್ವಹಣ ಘಟಕ ಸದಸ್ಯರ ಗಮನಕೆ ತಂದಾಗ ತಕ್ಷಣ ಸ್ಪಂದಿಸಿ ವಿಪತ್ತು ನಿರ್ವಹಣ ಸದಸ್ಯ ಅಬ್ದುಲ್ ರಜಾಕ್ ಮತ್ತು ಸದಸ್ಯರು ಸೇರಿ ತಮ್ಮ ಆಂಬುಲೆನ್ಸ್ ನಲ್ಲಿ ಹೋಗಿ ಶವ ತೆಗಿದು ಕೊಂಡು ಸುಳ್ಯ ವಿಮುಕ್ತಿ ಧಾಮಕ್ಕೆ ತಂದು ಸದಸ್ಯರಾದ ಪ್ರಸನ್ನ ರವರ ಪಿಕಪ್ ವಾಹನದಲ್ಲಿ ಸುಮಾರು 200 ಕೆಜಿ ಚಿಪ್ಪಿ ತಂದು

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಇದರ 2022 -23ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ್ ಸಿ. ಪೆರ್ನೆ ಮರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ರಾಧಾಕ್ರಷ್ಣ ಬಂಟ್ವಾಳ, ಪ್ರಧಾನಕಾರ್ಯದರ್ಶಿಯಾಗಿ ಕೇಶವ ಮಾಸ್ಟರ್, ಕೋಶಾಧಿಕಾರಿಯಾಗಿ ನಾಗೇಶ ಬಾಳೆಹಿತ್ಲು, ಜತೆಕಾರ್ಯದರ್ಶಿಯಾಗಿ ಜಯಗಣೇಶ್, ಮೀನಾಕ್ಷಿ ಪದ್ಮನಾಭ, ಸಂಘಟನಾಕಾರ್ಯದರ್ಶಿ ಸತೀಶ್ ಸಂಪಾಜೆ, ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ , ದಾಮೋದರ ಏರ್ಯ, ಯೋಗೀಶ್ ಬಂಗೇರ, ಮನೋಹರ ನೇರಂಬೋಳು, ದಯಾನಂದ

ದೇಶ ಸೇವೆ ಸಲ್ಲಿಸಿ ತಾಯ್ನಾಡಿಗೆ ಮರಳಿದ ಮೇಜರ್ ವಿಜಯ್‍ಚಂದ್ರ

ಮಂಗಳೂರು: ದೇಶ ಸೇವೆ ಸಲ್ಲಿಸಿ ಊರಿಗೆ ಬಂದ ಯೋಧ ಮೇಜರ್ ವಿಜಯ್ ಚಂದ್ರ ಅವರಿಗೆ ಅದ್ದೂರಿ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮ ಮಂಗಳೂರಿನ ಪಂಪ್ವೆಲ್ ಬಳಿ ನೆರವೇರಿತು. ಕಳೆದ 12 ವರ್ಷಗಳಿಂದ ದೇಶ ಸೇವೆಯಲ್ಲಿ ನಿರತರಾಗಿದ್ದ ಯೋಧ ತನ್ನ ತಾಯಿ ನಾಡಿಗೆ ಮರಳಿದ ವೇಳೆ ಊರಿನ ಬಂಧುಗಳಿಂದ ಅದ್ದೂರಿ ಸ್ವಾಗತದ ಮೂಲಕ ಪಂಪ್ವೆಲ್ ನಿಂದ ಬಜಾಲ್ ವೀರನಗರದ ವರೆಗೆ ಮೆರವಣಿಗೆ ಸಾಗಿತು.

ಕುಂದಾಪುರ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ

ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ಚಿರತೆಯೊಂದು ಆಹಾರ ಹುಡುಕಿಕೊಂಡು ಬಂದು ಮಾಸ್ತಿ ಎಂಬುವವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯು ನಾಜೂಕಿನಿಂದ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ಬೋನಿನೊಳಗೆ ಹಾಕಿ ಮೇಲೆಕ್ಕೆತ್ತಿ ರಕ್ಷಿಸಲಾಗಿದೆ. ಇದೀಗ ಗುಡ್ಡಿಹೋಟಲ್, ಜಡ್ಡಾಡಿ ಕೋಣ್ಕಿ, ಬಡಾಕೆರೆ ತಾರೀಬೇರುನಲ್ಲಿ ಮುಂತಾದ ಸ್ಥಳದಲ್ಲಿ ಪದೇ ಪದೇ ಜನ ವಾಸ್ತವ ಸ್ಥಳದಲ್ಲಿ ಚಿರತೆಗಳು ಕಾಣಿಸಿಕೊಂಡು ಜನರು ಭಯ