Home Posts tagged V4News (Page 693)

ಕುಂಭಾಶಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

ಕುಂದಾಪುರ: ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಕ್ಕೆ ಒಳಪಟ್ಟಿರುವ ಕುಂಭಶ್ರೀ ಶ್ರೀ ನಾಗಾಚಲ ಅಯ್ಯಪ್ಪಸ್ವಾಮಿ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ಶ್ರೀ ಶಾರದಾ ಪೀಠ ಶೃಂಗೇರಿಯ ಪ್ರಾಂತೀಯ ಧರ್ಮಾಧಿಕಾರಿಗಳು, ವೇದಮೂರ್ತಿ ಲೋಕೇಶ್

ಶಾಂತಿ ಸಾಮರಸ್ಯ ಹದಗೆಡುವ ಸಂಘಟನೆಗಳ ವಿರುದ್ದ ಕ್ರಮಕೈಗೊಳ್ಳಲಿ : ಯು.ಟಿ.ಖಾದರ್

ದೇಶದಲ್ಲಿ ಶಾಂತಿ ಸಾಮರಸ್ಯ ಹದಗೆಡಿಸುವ ಯಾವುದೇ ಸಂಘಟನೆ ವಿರುದ್ಧ ಕ್ರಮ ಆಗಬೇಕು. ಇದು ಸರ್ಕಾರದ ಜವಾಬ್ದಾರಿ, ಹಾಗಾಗಿ ಎಲ್ಲಾ ಸಂಘ ಸಂಸ್ಥೆಗಳ ಮೇಲೆ ಕ್ರಮ ಆಗಲಿ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಹಲ್ಲೆ, ಅಶಾಂತಿ, ಕೋಮುದ್ವೇಷದ ಸಂಘಟನೆ ವಿರುದ್ದ ಕ್ರಮ ಕೈಗೊಳ್ಳಲಿ. ತಾರತಮ್ಯ ಮಾಡದೇ ಸದುದ್ದೇಶದಿಂದ ಕ್ರಮ ವಹಿಸಲಿ. ಒಂದು ಕ್ರಮದ ಮೂಲಕ ಸಮಾಜದಲ್ಲಿ ಅಶಾಂತಿ ಕಡಿಮೆಯಾಗಬೇಕು. ಉತ್ತಮ ಸಮಾಜ

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ 30ನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 24, 2022 ರ ಶನಿವಾರದಂದು ಸಂಘದ ಕೋಟೇಶ್ವರ ಗೋವಿಂದ್ರಾಯ ವಿಠ್ಠಲ ಕಾಮತ್ ಸಭಾಂಗಣದಲ್ಲಿ ಜರುಗಿತ್ತು. ಶ್ರೀ ಕೆ ಪ್ರಶಾಂತ್ ಬಾಳಿಗಾ, ಕೆ.ಕೆ. ಫಿಶ್ ನೆಟ್ ಕೋ, ನೇಜಾರ್ ಇವರು 2022-23 ನೇ ಸಾಲಿನ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ, ಶ್ರೀ ಹರೀಶ್ ಕುಂದರ್, ಶ್ರೀ ಯು ಅಜಿತ್ ಕುಮಾರ್ ಶೆಣೈ, ಶ್ರೀ ಎಂ ವಸಂತ ಕಿಣಿ, ಕಾರ್ಯದರ್ಶಿಯಾಗಿ ಶ್ರೀ ಎಂ

ಕಾರ್ಕಳ ಪುರಸಭೆ : ಬೀದಿ ನಾಯಿಗಳ ಉಪಟಳಕ್ಕೆ ಕಡಿವಾನ ಹಾಕುವಂತೆ ಆಗ್ರಹ

ಕಾರ್ಕಳ: ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಎಲ್ಲೆಮೀರಿದೆ. ಅದಕ್ಕೆ ಕಡಿವಾಣ ಹಾಕುವುದಕ್ಕೆ ಇನ್ನೂ ಸಾಧ್ಯವಾಗಿಲ್ಲ. ಒಂದೊಂದು ಕಾರಣಗಳನ್ನು ಅಧಿಕಾರಿಗಳು ಸಭೆಗೆ ನೀಡುತ್ತಿರುವುದರಿಂದ ಸಮಸ್ಯೆ ಶಾಶ್ವತವಾಗಿ ಉಳಿದಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಪುರಸಭಾ ಪ್ರತಿಪಕ್ಷ ಮುಖಂಡ ಅಶ್ಪಕ್ ಅಹಮ್ಮದ್ ಆಗ್ರಹಿಸಿದಾರೆ.ಕಾರ್ಕಳ ಪುರಸಭೆಯ ಅಧ್ಯಕ್ಷೆ ಸುಮಾ ಅಧ್ಯಕ್ಷತೆಯಲ್ಲಿ ಬಿ.ಮಂಜುನಾಥ ಪೈ ಸಭಾಂಗಣದಲ್ಲಿ ಜರುಗಿದ್ದ ಸಾಮಾನ್ಯ ಸಭೆಯಲ್ಲಿ ಮೇಲಿನ

7 is Not Even ಕಿರುಚಿತ್ರದ ಪೋಸ್ಟರ್ ಬಿಡುಗಡೆ

ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಕೆ. ನಂದಿಕೇಶ ಹೆಗ್ಡೆಯವರು ನಿರ್ಮಿಸಿ ಜಗದೀಶ್ ಶೆಟ್ಟಿಯವರು ನಿರ್ದೇಶಿಸಿರುವ 7 is Not Even ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಮಂಗಳೂರು ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪೋಸ್ಟರ್ ಬಿಡುಗಡೆ ಗೊಳಿಸಿ ಸಿನಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಿರುಚಿತ್ರದ ತಂಡ ಉಪಸ್ಥಿತರಿದ್ದರು.

PFI ಪರ ಮಾತನಾಡಿದರೆ ಕಠಿಣ ಕ್ರಮ: ಡಿಜಿಪಿ ಪ್ರವೀಣ್ ಸೂದ್

ದೇಶದಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ನಿಷೇಧವನ್ನು ಹೊರಡಿಸಿರುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ಪ್ರವೀಣ್ ಸೂದ್ ತಿಳಿಸಿದ್ದಾರೆ.ರಾಜ್ಯದಲ್ಲಿ ಪಿಎಫ್ ಐ ಚಟುವಟಿಕೆಗಳನ್ನು ನಡೆಸುವುದಾಗಲಿ, ಆ ಸಂಘಟನೆ ಪರವಾಗಿ ಮಾತನಾಡುವುದಾಗಲೀ ಮಾಡಬಾರದು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ ರಾಜ್ಯದ ನಾನಾ

ನಗರೋತ್ಥಾನ ಯೋಜನೆಯಡಿ ಕಮಿಷನ್ ದಂಧೆ

ಮೂಡುಬಿದಿರೆ: ಇಲ್ಲಿನ ಪುರಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಸರಕಾರದಿಂದ ರೂ 1 ಕೋಟಿ ಅನುದಾನ ಬಂದಿದ್ದು ಈ ಕಾಮಗಾರಿಯಲ್ಲಿ ಶೇ. 20ರಷ್ಟು ಕಮೀಷನ್ ವ್ಯವಹಾರ ನಡೆದಿದೆ ಎಂದು ವಿಪಕ್ಷೀಯ ಸದಸ್ಯ ಸುರೇಶ್ ಕೋಟ್ಯಾನ್, ಶಂಕ ವ್ಯಕ್ತಪಡಿಸಿ, ಆರೋಪಿಸಿದ ಘಟನೆ ನಡೆದಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆಡಳಿತ ಪಕ್ಷದ ಸದಸ್ಯರು ಆರೋಪಕ್ಕೆ ಸಾಕ್ಷಿ ಸಮೇತ ದಾಖಲೆ ನೀಡಿ ಆಗ ನಾವೂ ಬೆಂಬಲಿಸುತ್ತೇವೆ. ಸುಳ್ಳು ಆರೋಪ ಮಾಡಬೇಡಿ ದಾಖಲೆ ನೀಡುವಂತೆ ಪಟ್ಟು

ಮೂಡುಬಿದಿರೆ: ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ಲೋಕಾಯುಕ್ತ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ನಂತರ ಲೋಕಾಯುಕ್ತ ಡಿವೈಎಸ್‍ಪಿ ಕಲಾವತಿ ಮಾಧ್ಯಮದವರಿಗೆ ಮಾಹಿತಿ ನೀಡಿ ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 8 ದೂರುಗಳು ಸಾರ್ವಜನಿಕರಿಂದ ಬಂದಿದ್ದು, ಆರ್ ಟಿಸಿ ಸಂಬಂಧಪಟ್ಟಂತೆ ಒಂದು ಪ್ರಕರಣವನ್ನು ಮಂಗಳವಾರ ಇತ್ಯರ್ಥ ಮಾಡಲಾಗಿದೆ. ಮೂರು ದೂರುಗಳಿಗೆ ಸೂಕ್ತ ನಮೂನೆ `ಸಲ್ಲಿಸುವಂತೆ ದೂರುದಾರರಿಗೆ ಸೂಚಿಸಲಾಗಿದೆ,

ಇನ್ನು 5 ವರ್ಷ PFI ಬ್ಯಾನ್

ನವದೆಹಲಿ; ದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಪಿಎಫ್ ಐ ಯನ್ನು ಕೇಂದ್ರ ಗೃಹ ಇಲಾಖೆ ಘೋಷಿಸಿದ ಬಗ್ಗೆ ANI ಟ್ವೀಟ್ ಮಾಡಿದೆ.ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ ಎಂದು

100 ನೇ ವರ್ಷದ ಮಂಗಳೂರು ಶಾರದಾ ಮಹೋತ್ಸವ ವಿಶೇಷ ಅಂಚೆ ಚೀಟಿ ಬಿಡುಗಡೆ

ಮಂಗಳೂರು: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ ಆಚಾರ್ಯ ಮಠದ ವಠಾರದಲ್ಲಿ ಪೂಜಿಸಲ್ಪಡುವ ಮಂಗಳೂರು ಶಾರದಾ ಮಹೋತ್ಸವದ ಶತಮಾನೋತ್ಸವ ಸವಿನೆನಪಿಗಾಗಿ ಸೋಮವಾರ ಕ್ಷೇತ್ರದ ಸರಸ್ವತಿ ಕಲಾ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ವಿಶೇಷ ಅಂಚೆ ಲಕೋಟೆ ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಲಾಯಿತು. ಅಂಚೆ ಇಲಾಖೆಯ ಹಿರಿಯ ಅಂಚೆ ಅಧೀಕ್ಷಕ ಹರ್ಷ, ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ಎನ್. ಡಾ.ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಕೋಶಾಧಿಕಾರಿ ಪಂಡಿತ ವಿಠಲ