ಕಡಬ : ಕಾರುಗಳೆರಡರ ಓವರ್ ಟೇಕ್ ಭರದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದ ಘಟನೆ ಕಡಬ ಸಮೀಪದ ಮರ್ಧಾಳದ ಬ್ರಾಂತಿಕಟ್ಟೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ ಗೆ ಬ್ರಾಂತಿಕಟ್ಟೆ ತಿರುವಿನಲ್ಲಿ ಕಾರೊಂದು ಓವರ್ಟೇಕ್ ಮಾಡುವಾಗ ಹೊಡೆದು
ಲಕ್ನೋ : ಉತ್ತರ ಪ್ರದೇಶದ ಔರೈಯ ಜಿಲ್ಲೆಯ ಶಾಲೆಯೊಂದರಲ್ಲಿ ದಲಿತ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ತಪ್ಪು ತಪ್ಪಾಗಿ ಬರೆದಿದ್ದಾನೆ ಎಂದು ಶಿಕ್ಷಕರೊಬ್ಬರು ಕೋಪಗೊಂಡು ಹಿಗ್ಗಾ ಮುಗ್ಗಾ ಥಳಿಸಿ ಗಂಭೀರ ಗಾಯಗೊಂಡಿದ್ದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತಪಟ್ಟ ವಿದ್ಯಾರ್ಥಿಯನ್ನು ನಿಖಿತ್ ಕುಮಾರ್(10 ನೇ ತರಗತಿ) ಎಂದು ಗುರುತಿಸಲಾಗಿದ್ದು, ಶಾಲೆಯ ಶಿಕ್ಷಕನನ್ನು ಅಶ್ವಿನಿ ಸಿಂಗ್ ಎನ್ನಲಾಗಿದೆ.ಇನ್ನು ನಿಖಿತ್ ಕುಮಾರ್ ಸಮಾಜ ವಿಜ್ಞಾನ ಪರೀಕ್ಷೆಯ ಉತ್ತರ
ದ.ಕ ಜಿಲ್ಲೆಯಾದ್ಯಂತ ಈವರೆಗೆ 11 ಪಿಎಫ್ ಐ ನಾಯಕರ ಬಂಧನ ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹ್ಮದ್, ಮುಖಂಡರಾದ ಫಿರೋಜ್ ಖಾನ್, ರಾಜಿಕ್, ಮುಜಾವರ್, ನೌಫಲ್, ಇಸ್ಮಾಯಿಲ್ ಬಜಪೆ, ನಜೀರ್ ಬಜಪೆ ಸೇರಿ 11 ಮಂದಿ ವಶಕ್ಕೆ ಮಂಗಳೂರು ಕಮಿಷನರೇಟ್ ಮತ್ತು ದ.ಕ ಜಿಲ್ಲಾ ಪೊಲೀಸರ ಕಾರ್ಯಾಚರಣೆ ಸಿಆರ್ ಪಿಸಿ 107 ಮತ್ತು 151ರಡಿ ವಶಕ್ಕೆ ಪಡೆದ ಪೊಲೀಸರು ಪ್ರತಿಭಟನೆ ಮತ್ತು ಗಲಭೆ ನಡೆಸುವ ಸಾದ್ಯತೆ ಹಿನ್ನೆಲೆ ವಶಕ್ಕೆ ಮಂಗಳೂರಿನ ಉಳ್ಳಾಲ, ಕಾವೂರು, ಸುರತ್ಕಲ್, ಬಜಪೆ ಹಾಗೂ
ರಾಜ್ಯ ಸರಕಾರದ ಇಲಾಖೆಗಳಲ್ಲಿ ಶೇ40 ಕಮಿಷನ್ ಪಡೆಯಲಾಗಿದೆ ಎಂದು ಗುತ್ತಿಗೆ ದಾರರು ಪ್ರಧಾನಿ ಮೋದಿಗೆ ನೀಡಿದ ದೂರಿನ ಬಗ್ಗೆ ಹಾಲಿ ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶ ರ ಮೂಲಕ ತನಿಖೆ ನಡೆಯಲಿ’ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ‘ರಾಜ್ಯದಲ್ಲಿ 40 ಶೇ. ಕಮೀಷನ್ ಪಡೆಯುವ ಆರೋಪ ಹೊಂದಿರುವ ಇಲಾಖೆಗಳ ಮೇಲೆ ಐ.ಟಿ, ಇ.ಡಿ ದಾಳಿ ಏಕೆ ನಡೆಯುತ್ತಿಲ್ಲ. ಮೋದಿ ಅಧಿಕಾರಕ್ಕೆ ಬರುವ ಮೊದಲು ದೇಶದ ಜನಕ್ಕೆ
ಮಂಗಳೂರಿನ ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಉತ್ಸವಕ್ಕೆ ಇಂದು ಸಡಗರದಿಂದ ಚಾಲನೆ ಸಿಕ್ಕಿತ್ತು.ಕ್ಷೇತ್ರದ ದಸರಾ ದರ್ಬಾರು ಸ್ವರ್ಣಮಯ ಕಲಾ ಮಂಟಪದಲ್ಲಿ ನವದುರ್ಗೆಯರು ಹಾಗೂ ಗಣಪತಿ ದೇವರ ಮೂರ್ತಿಯ ಪ್ರತಿಷ್ಠಾಪನೆಯ ಬಳಿಕ, ನವರಾತ್ರಿ ಉತ್ಸವದ ವಿಶೇಷ ಆಕರ್ಷಣೆ ಹಾಗೂ 9 ದಿನಗಳ ಕಾಲ ವಿಶೇಷವಾಗಿ ಆರಾಧಿಸ್ಪಡುವ ಶಾರದಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಕುದ್ರೋಳಿ ಕ್ಷೇತ್ರದ ನವೀಕರಣದ ರುವಾರಿ, ಕೇಂದ್ರದ ಮಾಜಿ ಸಚಿವ
ದೇರಳಕಟ್ಟೆ, : ಮೇಲ್ತೆನೆ (ಬ್ಯಾರಿ ಲೇಖಕರು ಮತ್ತು ಕಲಾವಿದರ ಕೂಟ)ಯ ವತಿಯಿಂದ ದೇರಳಕಟ್ಟೆಯ ‘ಕಣಚೂರು ಪಬ್ಲಿಕ್ ಸ್ಕೂಲ್’ ಕ್ಯಾಂಪಸ್ನಲ್ಲಿ ಅಕ್ಟೋಬರ್ 15ರಂದು ನಡೆಯುವ ಉಳ್ಳಾಲ ತಾಲೂಕು 2ನೆ ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಲೇಖಕ, ಸಂಘಟಕ, ಅಡ್ವಕೇಟ್ ಬಿ.ಎ. ಮುಹಮ್ಮದ್ ಹನೀಫ್ ಆಯ್ಕೆಯಾಗಿದ್ದಾರೆ. ಪರಿಚಯ: 1965ರ ಜುಲೈ 1ರಂದು ಬಿ.ಎಂ. ಅಬ್ದುಲ್ ರಹ್ಮಾನ್-ಖತೀಜಾ ದಂಪತಿಯ ಪುತ್ರನಾಗಿ ಜನಿಸಿದ ಬಿ.ಎ. ಮುಹಮ್ಮದ್ ಹನೀಫ್ ಬೆಳ್ತಂಗಡಿ ತಾಲೂಕಿನ
ಹೆಸರಾಂತ ಸ್ವರ್ಣಾಭರಣ ಸಂಸ್ಥೆಯಾದ ಜೋಸ್ಅಲುಕ್ಕಾಸ್ನ ಪುತ್ತೂರಿನ ಶಾಖೆಯು ಯಶಸ್ವಿಯಾಗಿ 4 ವರ್ಷಗಳನ್ನು ಪೂರೈಸಿದ್ದು ಇದರ ವಾರ್ಷಿಕೋತ್ಸವ ಸಂಭ್ರಮವನ್ನು ಮಳಿಗೆಯಲ್ಲಿ ಆಚರಿಸಿದರು. ಕಾರ್ಯಕ್ರಮವನ್ನು ಪುತ್ತೂರು ವಿಧಾನಾಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಅವರು ದೀಪ ಬೆಳಗಿಸಿ ಉದ್ಘಾಟಿಸಿ ಸಂಸ್ಥೆಗೆ ಶುಭ ಹಾರೈಸಿದರು. ಖ್ಯಾತ ತುಳು ಚಿತ್ರದ ನಟಿ ರಂಗ ಕಲಾವಿದೆ ಎಕ್ಕ ಸಕ್ಕ ಮತ್ತು ರಾಜ್ ಸೌಂಡ್ಸ್ ಖ್ಯಾತಿಯ ಚೈತ್ರ ಶೆಟ್ಟಿ ಹಾಗೂ ಈ ವರ್ಷದ
ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಪೂಜಿಸಲ್ಪಡುವ ಶ್ರೀ ಮೂಲ ವೆಂಕಟರಮಣ , ಗೋಪಾಲಕೃಷ್ಣ ಹಾಗೂ ಹಯಗ್ರೀವ ದೇವರಿಗೆ ಸಮಾಜ ಭಾಂದವರಿಂದ ಸೇವಾರೂಪದಲ್ಲಿ ನೂತನವಾಗಿ ನಿರ್ಮಿಸಲಾದ ಸ್ವರ್ಣ ಕವಚಗಳನ್ನು ನವರಾತ್ರಿಯ ಪರ್ವ ದಿನವಾದ ಇಂದು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶ್ರೀ ದೇವರಿಗೆ ಸಮರ್ಪಿಸಲಾಯಿತು . ಈ ಸಂದರ್ಭದಲ್ಲಿ ದೇವಳದ ಆಡಳಿತ ಮೊಕ್ತೇಸರರಾದ ಅಡಿಗೆ ಬಾಲಕೃಷ್ಣ ಶೆಣೈ , ಸಾಹುಕಾರ್ ಕಿರಣ್ ಪೈ , ಸತೀಶ್ ಪ್ರಭು ,
ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ ಸಾರ್ವಜನಿಕ ಸೇವೆಯಲ್ಲಿ ಸಂಘವು ವರ್ಷದಲ್ಲಿ ಎಲ್ಲ ವ್ಯವಹಾರಗಳಲ್ಲೂ ಗುರಿ ಮೀರಿದ ಸಾಧನೆಯನ್ನು ಮಾಡಿದೆ. ವರದಿ ವರ್ಷದಲ್ಲಿ ಸಂಘವು ರು.4.69ಕೋಟಿ ಲಾಭಗಳಿಸಿದ್ದು ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಿ, ತಾಲೂಕು ವ್ಯಾಪ್ತಿಗೆ
ಮೂಡುಬಿದಿರೆ: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಸ್ವಚ್ಛತಾ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮೂಡುಬಿದಿರೆಯನ್ನು ತ್ಯಾಜ್ಯ ಮುಕ್ತ ಸ್ವಚ್ಛ -ಸುಂದರ ನಗರವನ್ನಾಗಿಸಲು ಹೊರಟಿರುವ ನೇತಾಜಿ ಬಿಗ್ರೇಡ್ (ರಿ) ಸಂಘಟನೆಯು ದಸರಾ ಹಬ್ಬದ ಪ್ರಯುಕ್ತ ಭಾನುವಾರದಂದು ಸ್ವರಾಜ್ಯ ಮೈದಾನದಲ್ಲಿರುವ ಶ್ರೀ ಆದಿಶಕ್ತಿ ಮಹಾದೇವಿ ದೇವಸ್ಥಾನದ ಪರಿಸರದಲ್ಲಿ ಸ್ವಚ್ಛತೆಯ ಕೈಂಕರ್ಯವನ್ನು ಕೈಗೊಂಡು ಸಂಚುರಿ (100) ವಾರವನ್ನು ಪೂರೈಸಿದೆ. ನೇತಾಜಿ

























