ಬೆಂಗಳೂರು, ಸೆ, 7; ಶಿಕ್ಷಣ ತಜ್ಞ, ಕರ್ಮಯೋಗಿ ಎಂ.ಎಸ್. ರಾಮಯ್ಯ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಟೂರ್ನಿ ಯಶಸ್ವಿಯಾಗಿ ನಡೆಯಿತು. ಬೆಂಗಳೂರು ಗ್ರಾಮೀಣ ಜಿಲ್ಲಾ ಟೇಬಲ್ ಟೆನಿಸ್ ಅಸೋಸಿಯೇಷನ್ ನಿಂದ ಆಯೋಜಿಸಲಾಗಿದ್ದ ಟೇಬಲ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ಹಾಗೂ 17 ವಯೋಮಿತಿ ಬಾಲಕಿಯರ ವಿಭಾಗದಲ್ಲಿ ದೇಶ್ನಾ ಎಂ
ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯು ಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಂಭಾಗ ನಡೆಯಿತು. ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ
ಮರದ ಕೊಂಬೆ ಕಡಿಯುವಾಗ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಕಡಬದಲ್ಲಿ ನಡೆದಿದೆ. ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.ಮನೋಜ್ ಅವರು ಮರದ ಕೊಂಬೆಯೊಂದು ಕಡಿಯುವಾಗ 33 kv ವಿದ್ಯುತ್ ತಂತಿ ತಾಗಿ ದುರ್ಮರಣ ಸಂಭವಿಸಿದೆ. ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತುಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ.ಕಡಬ
ಬೆಂಗಳೂರಿನ ಆಕ್ಸ್ಫರ್ಡ್ ಕಾನೂನು ಕಾಲೇಜಿಸಲಾಗಿದ್ದ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆಯಲ್ಲಿ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಥೇಶ್ವರ ಕಾನೂನು ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ ಲಭಿಸಿದೆ.ಸೆ.1 ರಿಂದ 3ರ ವರೆಗೆ ನಡೆದಿದ್ದ ಈ ಸ್ಪ ರ್ಧೆಯಲ್ಲಿ ಎಸ್ ಡಿ ಎಂ ಕಾನೂನು ಕಾಲೇಜಿನ ವಿದ್ಯಾಥಿಗಳಾದ ಸಚಿನ್ ಹೆಗ್ಡೆ, ವಿನೀತ್ ಹಾಗೂ ಮಯೂರ್ ಅವರು ಭಾಗವಹಿಸಿ ವಿವಿಧ ವಿಭಾಗಳಲ್ಲಿ ವಿಜೇತರಾಗಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಎಂ. ಅತ್ಯತ್ತಮ
ಮೂಡುಬಿದಿರೆ : ತಾಲೂಕಿನ ವಾಲ್ಪಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ವಾಲ್ಪಾಡಿ ಗ್ರಾಮದಲ್ಲಿ ಶ್ರೀ ರಾಜಂದೈವ ಮತ್ತು ಬ್ರಹ್ಮ ಬೈದರ್ಕಳ ದೈವಸ್ಥಾನ ಇಲ್ಲಿ ಮಂಗಳವಾರ ಕೊಡಮಣಿತ್ತಾಯ ಮತ್ತು ಕುಕ್ಕಿನಂತ್ತಾಯ ದೈವಗಳಿಗೆ ಸೋಣದ ಕೋಲ ನಡೆಯಿತು. ಸುಮಾರು 105 ವರ್ಷಗಳ ಇತಿಹಾಸವಿರುವ ಈ ದೈವಸ್ಥಾನವನ್ನು ಏಳ್ನಾಡು ಗುತ್ತಿನವರು ಕಟ್ಟಿ ಬೆಳೆಸಿದ್ದರು. ನಂತರ ನಾಗಣ್ಣ ಹೆಗ್ಡೆ ಅವರ ಅವರ ನೇತೃತ್ವದಲ್ಲಿ ಪುನರ್ ನಿರ್ಮಾಣಗೊಂಡಿದ್ದು ಕಳೆದ 10 ವರ್ಷಗಳಿಂದ ಇಲ್ಲಿ ಸೋಣದ ಕೋಲ
ಉಡುಪಿ: ಉಡುಪಿ ಸಮೀಪದ ಆತ್ರಾಡಿ ಗ್ರಾಮ ಪಂಚಾಯತ್ ಸದಸ್ಯನೋರ್ವ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿವಾಗಿ ಹಲ್ಲೆ ನಡೆಸಿದ ಪ್ರಸಂಗ ನಡೆದಿದೆ. ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಿಸಲು ತಡೆಯೊಡ್ಡಿದ್ದಕ್ಕಾಗಿ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಆತ್ರಾಡಿ ಪರೀಕದ ಪಡುಮನೆ ನಾಗಬನ ನಿವಾಸಿ ಆರತಿ (45) ಹಲ್ಲೆಗೊಳಗಾದ ಮಹಿಳೆಯಾಗಿದ್ದು,ಆರತಿಯವರ ಹೆಸರಿನಲ್ಲಿರುವ ಜಾಗದಲ್ಲಿ ಆತ್ರಾಡಿ ಗ್ರಾಮ ಪಂಚಾಯತ್ ವಿರೋಧದ ನಡುವೆಯೂ ಕಾಂಕ್ರೀಟ್
ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿಯವರು ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದಿನ ಪೂರ್ತಿ ಚೆನ್ನಾಗಿಯೇ ಇದ್ದ ಉಮೇಶ್ ಕತ್ತಿ, ಬೆಂಗಳೂರಿನ ಡಾಲರ್ಸ್ ಕಾಲನಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದಿದ್ದರು. ಆದರೆ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಅಲ್ಲಿಯೇ ಹತ್ತಿರದಲ್ಲಿದ್ದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.
ಪಾಣೆಮಂಗಳೂರು ಗ್ರಾಮ ರೈತ ಘಟಕ ರಚನೆ ಕುರಿತಾಗಿ ದಿನಾಂಕ 06-09-2022ರ ಮಂಗಳವಾರ ಮೇಲ್ಕಾರಿನ ಬಿರ್ವ ಸಂಕೀರ್ಣದ ಸಭಾಭವನದಲ್ಲಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪ್ರೇಮನಾಥ ಶೆಟ್ಟಿ ಬಾಳ್ತಿಲ ಇವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತುರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರವಿಕಿರಣ್ ಪುಣಚ ಪ್ರಾಸ್ತವಿಕವಾಗಿ ಮಾತಾನಾಡಿ ರೈತಸಂಘದ ಹುಟ್ಟು ,ಸೈದ್ಧಾಂತಿಕ ಹಿನ್ನೆಲೆ, ವೈಚಾರಿಕತೆ, ಮತ್ತು ಮುಂದಿನ ಗುರಿಗಳ
ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯೊಳಗೆ ಮಲಗಿದ್ದ ಯಜಮಾನ ಜೀವಂತ ದಹನವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆಯೊಂದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಪರ್ಲಿಕಜೆ ಸುಧಾಕರ (47) ದುರ್ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ. ಇಂದು ಬೆಳಿಗ್ಗೆ ಸುಧಾಕರರು ಮನೆಯಲ್ಲಿ ಮಲಗಿದ್ದು, ಪತ್ನಿ ಟ್ಯಾಪಿಂಗ್ಗೆಂದು ಹೋಗಿದ್ದರು. ಮಗಳು ಶಾಲೆಗೆ ತೆರಳಿದ್ದಳು. ಈ ಹೊತ್ತಿನಲ್ಲಿ ಬೆಂಕಿ ಮನೆಯ ಒಂದು
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ಉಡುಪಿ ರಾಜ್ಯ ಹೆದ್ದಾರಿ 37ರ ಕುಲ್ಕುಂದದಿಂದ ವೆಂಕಟಪುರ ಮತ್ತು ಕೈಕಂಬದಿಂದ ನೆಟ್ಟಣ ಒಟ್ಟಾಗಿ 7.08

























