ಭಾರೀ ಮಳೆಯಿಂದ ಹರಿಹರ ಪಲ್ಲತ್ತಡ್ಕದಲ್ಲಿ ರಾಶಿ ಬಿದ್ದ ಮರದ ದಿಮ್ಮಿಗಳನ್ನು ತೆರವು ಮಾಡುತ್ತಿದ್ದ ಕ್ರೇನ್ ಆಪರೇಟರ್ ಓರ್ವರು ಹೊಳೆಯ ಪಕ್ಕದಲ್ಲಿ ನಿಂತಿದ್ದ ವೇಳೆ ನೀರಿಗೆ ಬಿದ್ದಿದ್ದು, ಈ ವೇಳೆ ಯುವಕನೋರ್ವ ನದಿಗೆ ಹಾರಿ ಅವರನ್ನು ರಕ್ಷಿಸಿದ ಘಟನೆ ನಡೆದಿದೆ. ಪಂಜ ಸಮೀಪದ ಪಡ್ಪಿನಂಗಡಿ ನಿವಾಸಿ ಶರೀಫ್ ಎಂಬವರ ಕ್ರೇನ್ ಹಾಗೂ ಸ್ಥಳೀಯ ನಿವಾಸಿಯೋರ್ವರ ಜೆಸಿಬಿ
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸರಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಮತ್ತು ಸಖಿ ಒನ್ ಸ್ಟಾಪ್ ಸೆಂಟರ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಂತ್ರಸ್ತ ಪರಿಹಾರ ಕಾರ್ಯಕ್ರಮ ಮತ್ತು ಕಾನೂನು ಅರಿವು ಕಾರ್ಯಾಗಾರ ಸರಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ
ಸುಬ್ರಹ್ಮಣ್ಯದಲ್ಲಿ ದುರಂತ ಸಂಭವಿಸಿ ಮೃತಪಟ್ಟ ಮಕ್ಕಳ ಮನೆಗೆ ಉಸ್ತುವಾರಿ ಸಚಿವ ಸುನಿಲ್ ರವರು ಇಂದು ಭೇಟಿ ನೀಡಿದರು.ಮನೆಗಾಗಿ 95 ಸಾವಿರ ನೀಡಿದ್ದೇವೆ. ಇನ್ನು ಮನೆ ಕಟ್ಟುವುದಿದ್ರೆ 4 ಲಕ್ಷ ಕೊಡಲಾಗುವುದು, ಅಂಗಡಿಗಳಿಗೆ ನೀರು ನುಗ್ಗಿ ಹಾನಿ ಯಾಗಿದ್ರೆ ಹಣ ಕೊಡುವ ಪ್ರಾವಿಶನ್ ಇಲ್ಲ, ಆದ್ರೂ ಮುಖ್ಯ ಮಂತ್ರಿಗಳ ಗಮನಕ್ಕೆ ತಂದು ವಿಶೇಷ ಪ್ಯಾಕೇಜ್ ಘೋಷಣೆ ನೀಡಿ ಅಂಗಡಿಗಳಿಗೂ ಪರಿಹಾರ ನೀಡಲಿದ್ದೇವೆ ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ
ಉಪ್ಪಿನಂಗಡಿ : ಅ 2 : ಕಾರು ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಮಂಗಳವಾರ ( ಅ .2) ಸಂಜೆ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಡಬ ತಾಲೂಕಿನ ರಾಮಕುಂಜ ನಿವಾಸಿಗಳಾದ ಉಪನ್ಯಾಸಕ ಗೋವಿಂದರಾಜ್ ಶರ್ಮಾ(32) ಮತ್ತು ಓಂಕಾರ್ ಪ್ರಸಾದ್ (30) ಗಾಯಗೊಂಡವರು . ಅಪಘಾತವೂ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರು ಹಾಸನ ಜಿಲ್ಲೆಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಹೇರಲಾಗಿರುವ ರಾತ್ರಿ ನಿರ್ಬಂಧವನ್ನು ಇನ್ನೂ ಎರಡು ದಿನಗಳವರೆಗೆ ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಯ ಕೋರಿಕೆಯಂತೆ ನಿರ್ಬಂಧವನ್ನು ಆ.5ರ ಬೆಳಗ್ಗೆ 6 ಗಂಟೆವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ.
ನಿನ್ನೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ಸುಳ್ಯ ಹಾಗೂ ಕಡಬ ತಾಲೂಕುಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾತ್ರಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಸುಬ್ರಹ್ಮಣ್ಯ ಸಮೀಪದ ಪರ್ವತಮಿಖಿ ಘಟನಾ ಸ್ಥಳಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಅಧಿಕಾರಿಗಳು, ಸ್ಥಳೀಯಾಡಳಿತ ಅಧಿಕಾರಿಗಕಳಿಂದ ಮಾಹಿತಿ ಪಡೆದರು. ಪುತ್ತೂರು ಎಸಿ ಗಿರೀಶ್ ನಂದನ್, ತಹಶೀಲ್ದಾರ್ ಅನಂತಶಂಕರ, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ,
ಕಾಪು ಸಮೀಪದ ಮಜೂರಿನ ಗೋವರ್ಧನ ಭಟ್ ಅವರು ಜೀವಂತ ನಾಗರ ಹಾವಿಗೆ ತನು ಎರೆದು,ಆರತಿ ಬೆಳಗಿಸಿ ಮಂಗಳವಾರ ನಾಗರಪಂಚಮಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು. ಪ್ರತೀ ವರ್ಷ ನಾಗರ ಪಂಚಮಿಯಂದು ತನ್ನ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವುಗಳಿಗೆ ತನು ಎರೆಯುವ ಗೋವರ್ಧನ ಭಟ್ ಅವರು ಈ ಬಾರಿ ಒಂದು ಹಾವಿಗೆ ಮನೆಯವರ ಜೊತೆಗೂಡಿ ತನು ಎರೆದು, ಪೂಜೆ ಮಾಡಿ, ನಾಗರ ಪಂಚಮಿ ಆಚರಿಸಿದರು. ಕಾಪು ಪರಿಸದಲ್ಲಿ ಅಪಾಯಕ್ಕೆ ಸಿಲುಕಿ ಗಾಯಗೊಳ್ಳುವ ನಾಗರ ಹಾವುಗಳನ್ನು ಮನೆಗೆ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಎರಡು ದಿನದ ಬಳಿಕ ಸುರತ್ಕಲ್ ನಲ್ಲಿ ಕೊಲೆಯಾದ ಫಾಝಿಲ್ ಪ್ರಕರಣದಲ್ಲಿ ನಗರ ಪೆÇಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳವಾರ ಉಡುಪಿ ಉದ್ಯಾವರ ಸಮೀಪ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಜುಲೈ 28ರಂದು
ನಿನ್ನೆ ಸುರಿದ ಭಾರೀ ಮಳೆಗೆ ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಹರಿಯುವ ಹೊಳೆಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ನೀರು ದೇವಾಲಯದ ಒಳಂಗಾಣಕ್ಕೆ ಆವರಿಸಿತ್ತು. ನೀರಿನೊಂದಿಗೆ ಮಣ್ಣು ಹರಿದು ಬಂದು ದೇವಸ್ಥಾನದ ಒಳಾಂಗಣ ಮತ್ತು ಪರಿಸರ ಕೆಸರುಮಯವಾಗಿದೆ. ನೀರಿನಲ್ಲಿ ತೇಲಿಕೊಂಡು ಬಂದ ದೊಡ್ಡ ಗಾತ್ರದ ಮರದ ದಿಮ್ಮಿ ಹೊರಾಂಗಣದ ಕಾಂಪೌಂಡ್ ಬಳಿ ನಿಂತಿದೆ. ಕಾಂಪೌಂಡ್ ಕುಸಿದುಬಿದ್ದು ಅಪಾರ ನಷ್ಟ ಉಂಟಾಗಿರುವುದಾಗಿ ತಿಳಿದುಬಂದಿದೆ.
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಆ.2 ರಂದು ಬಂಧಿಸಿದ್ದಾರೆ. ಬೆಳ್ಳಾರೆ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32ವ) ಮತ್ತು ಹಾರಿಸ್(42ವ) ರವರು ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳಾದ ಶಫೀಕ್ ಮತ್ತು ಜಾಕೀರ್ ಅವರನ್ನು ಜು.28 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಪೆÇಲೀಸರು ಆರೋಪಿಗಳ ಹೆಚ್ಚಿನ ವಿಚಾರಣೆಗೆ ಪೊಲೀಸ್



























