Home Posts tagged V4News (Page 761)

ಕಡಲು ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದ್ದು ಎಲ್ಲೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ

ಬೈತಡ್ಕ ಕಾರು ದುರಂತ – ಎರಡನೇ ಮೃತದೇಹವೂ ಪತ್ತೆ

ಬೈತಡ್ಕ ಕಾರು ಹೊಳೆಗೆ – ಎರಡನೇ ಮೃತದೇಹವೂ ಪತ್ತೆ. ಪುತ್ತೂರು : ಕಾಣಿಯೂರು ಹೊಳೆಯಲ್ಲಿ ಒಂದು ಮೃತದೇಹ ಇಂದು ( ಜು 12 ರಂದು ) ಬೆಳಿಗ್ಗೆ ಪತ್ತೆಯಾಗಿದ್ದರೆ , ಅದರ ಅರ್ಧ ಗಂಟೆಯ ಬಳಿಕ ಎರಡನೇ ಮೃತದೇಹವೂ ಪತ್ತೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆ ಸಮೀಪ ಬೈತಡ್ಕ ಸೇತುವೆಯಿಂದ 400 ಮೀಟರ್ ದೂರದ ಮರಕ್ಕಡ ಜೇಡರಕೇರಿ ಮಂಜಯ್ಯ ಆಚಾರ್ಯರ ಮನೆಯ ಬಳಿ ಹೊಳೆಯಲ್ಲಿ ಒಂದು ಮೃತದೇಹ ಪತ್ತೆಯಾಗಿತ್ತು, ಇದೀಗ ಅದರಿಂದ 50 ಮೀಟರ್ ಹಿಂದೆಯೇ ಎರಡನೇ […]

ಕೂಳೂರು ಸೇತುವೆಯಲ್ಲಿ ಹೊಂಡಗುಂಡಿ : ಸಂಚರಿಸುವುದೇ ವಾಹನ ಸವಾರರಿಗೆ ಸವಾಲು

ಕೂಳೂರು ಸೇತುವೆಯಲ್ಲಿ ಹೊಂಡಗುಂಡಿಸಂಚರಿಸುವುದೇ ವಾಹನ ಸವಾರರಿಗೆ ಸವಾಲು ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನ ಸೇತುವೆಯಲ್ಲಿ ಬೃಹತ್ ಗಾತ್ರದ ಹೊಂಡಗಳು ಉಂಟಾಗಿದ್ದು, ವಾಹನಗಳು ಸರಾಗವಾಗಿ ಚಲಿಸಲು ಸಾಧ್ಯವಾಗದೆ ಕೆಲವು ದಿನಗಳಿಂದ ವಾಹನ ದಟ್ಟನೆ ಸಾಮಾನ್ಯವಾಗಿಬಿಟ್ಟಿದೆ.ಸೇತುವೆ ಮೇಲೆ ಹೊಂಡಗಳು ಎದ್ದಿರುವ ಕಾರಣ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದು, ಬೆಳಗ್ಗೆ ಮತ್ತು ಸಂಜೆ ಕಿಲೋಮೀಟರ್ ಗಟ್ಟಲೆ ವಾಹನಗಳ ಸಾಲು ಕಾಣಲಾರಂಬಿಸಿದೆ. ಮಳೆ ಬರುವಾಗ ಸೇತುವೆಯಲ್ಲಿ ನೀರು

ಭಾರೀ ಮಳೆಗೆ ಕುಸಿದ ಮೋರಿ : ಹೊಳೆಯ ಪಾಲಾದ ರಸ್ತೆ

ಬೈಂದೂರು ವಿಧಾನಸಭಾ ಕ್ಷೇತ್ರದ, ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂರಕುಂದ ಸಮೀಪದ ಕಲ್ಮಕ್ಕಿಯಲ್ಲಿ ಕಳೆದ 2-3ದಿನಗಳಿಂದ ಸುರಿದ ಭಾರಿ ಮಳೆಗೆ ರಸ್ತೆಗೇ ಅಳವಡಿಸಿದ್ದ ಮೋರಿ ಕುಸಿದು ಸಂಪರ್ಕ ರಸ್ತೆ ಹೊಳೆಯ ಪಾಲಾಗಿದೆ. ಹಲವಾರು ಮನೆಗೆ ಸಂಪರ್ಕವೇ ಇಲ್ಲದಂತಾಗಿದೆ. ಶಾಸಕರಾದ ಸುಕುಮಾರ ಶೆಟ್ಟಿ ಯವರು ಸ್ಥಳಕ್ಕೆ ಆಗಮಿಸಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಪಟ್ಟಣ ಪಂಚಾಯತ್ ಇಂಜಿನಿಯರ್ ಲ್ಲಿ ಎಸ್ಟಿಮೇಟ್ ಮಾಡಲು ಆದೇಶ ಮಾಡಿದರು.ತಕ್ಷಣಕ್ಕೆ ತುರ್ತು ಅಗತ್ಯ ಕ್ರಮ

ರಕ್ತದಾನದಿಂದ ಪುಣ್ಯ ಪ್ರಾಪ್ತಿ : ರಕ್ತದಾನ ಶಿಬಿರ ಉದ್ಘಾಟಿಸಿ, ನಾಗರಾಜ್ ಶೇಟ್

ಮಂಗಳೂರು :  ದೈವಜ್ಞ ಬ್ರಾಹ್ಮಣರ  ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ದಶಮಾನೋತ್ಸವ ಪ್ರಯುಕ್ತ ರಕ್ತದಾನ ಶಿಬಿರವು ರವಿವಾರ ( 10-07-2022)  ನಗರದ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆಯಿತು. ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಸಮಾಜ ಸೇವಕ, ನೂತನ್ ಗ್ಯಾಸ್ ಡೀಲರ್ ಮಾಲಕ ನಾಗರಾಜ್ ಶೇಟ್ ಅವರು   ರಕ್ತದಾನ ಅತೀ ಶ್ರೇಷ್ಠ ದಾನವಾಗಿದ್ದು, ರಕ್ತದಾನ ಮಾಡುವುದರಿಂದ ಇನ್ನೊಬ್ಬರ ಪ್ರಾಣ ಉಳಿಸ ಬಹುದು. ಇದರಿಂದ ರಕ್ತದಾನ ಮಾಡುವವರಿಗೂ ಪುಣ್ಯ

ಬೆಳ್ಳಾರೆಯ ನೆಟ್ಟಾರು ಎಂಬಲ್ಲಿ ಗುಡ್ಡ ಕುಸಿತ

ಪುತ್ತೂರು -ಬೆಳ್ಳಾರೆ ರಾಜ್ಯ ಹೆದ್ದಾರಿಯ ನೆಟ್ಟಾರ್  ಎಂಬಲ್ಲಿ ಗುಡ್ಡ ಕುಸಿದು ರಾಜ್ಯ ಹೆದ್ದಾರಿಗೆ ಗುಡ್ಡದ ಮಣ್ಣು ಮತ್ತು ಮರ  ಅಪಾಯದ ಅಂಚಿನಲ್ಲಿ ಇರುವುದನ್ನು ಮನಗಂಡು ತಕ್ಷಣ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತಿ  ಪಿಡಿಒ ಅನುಸೂಯ, ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಪರಮೇಶ್ವರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಜೂನಿಯರ್ ಇಂಜಿನಿಯರ್ ಪ್ರಸಾದ್, ಹಾಗೂ ಪೆರುವಾಜೆ  ಅರಣ್ಯಧಿಕಾರಿ ಪ್ರಸಾದ್  ಗ್ರಾಮಕರಣಿಕರ

ಮೂಡಬೆಳ್ಳೆ ವ್ಯಾಪ್ತಿಯಲ್ಲಿ ಸಂಪೂರ್ಣ ಬೆಳೆ ನಾಶ

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿಗದ್ದೆಯಲ್ಲಿ ನೀರು ನಿಂತು ಕಷ್ಟಪಟ್ಟು ಮಾಡಿದ ಸಹಸ್ರಾರು ಎಕ್ರೆ ಕೃಷಿ ನಾಶಗೊಂಡಿದೆ.ಈ ಬಗ್ಗೆ ಮಾತನಾಡಿದ ಉಡುಪಿ ತಾ.ಪಂ. ಮಾಜಿ ಅಧ್ಯಕ್ಷ ದೇವದಾಸ್ ಹೆಬ್ಬಾರ್, ಮಳೆಯ ಆರ್ಭಟಕ್ಕೆ ಕೃಷಿ ಭೂಮಿಯಲ್ಲಿ ನೀರು ನಿಂತು ಬಹಳಷ್ಟು ಖರ್ಚು ಮಾಡಿ ಮಾಡಿದ ನಾಟಿ, ನೀರಿನಡಿಯಲ್ಲಿ ಕೊಳೆಯುತ್ತಿದ್ದು, ಕೃಷಿಕರು ಕಂಗ್ಗಲಾಗಿದ್ದಾರೆ. ಅಳಿವಿನ ಹಂತದಲ್ಲಿರುವ ಕೃಷಿ ಚಟುವಟಿಕೆಗಳನ್ನು ನಡೆಸಿ ಕೈ ಸುಟ್ಟುಕೊಂಡಿರುವ ಕೃಷಿಕರ ನೆರವಿಗೆ

ಸುರತ್ಕಲ್ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆಯಿಂದ ಕೂಳೂರು ಮೇಲ್ಸೇತುವೆ ದುರಸ್ತಿಗೆ ಆಗ್ರಹ

ಸುರತ್ಕಲ್: ಕೂಳೂರು ಮೇಲ್ಸೇತುವೆ ದುರಸ್ತಿಗೆ ಒತ್ತಾಯಿಸಿ ಸುರತ್ಕಲ್ ಆಪದ್ಭಾಂಧವ ಸಮಾಜ ಸೇವಾ ಸಂಸ್ಥೆ ಯಿಂದ ಮಂಗಳೂರು ಉತ್ತರ ಸಂಚಾರಿ ಠಾಣಾ ನಿರೀಕ್ಷಕ ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಕಳೆದ ಎರಡು ವಾರಗಳಿಂದ ಗಂಟೆಗೂ ಹೆಚ್ಚು ಕಾಲ ಹೆದ್ದಾರಿ 66ರ ಕೂಳೂರು ಮೇಲ್ಸೇತುವೆಯಲ್ಲಿ ಟ್ರಾಫಿಕ್ ಜಾಂ ಸಂಭವಿಸುತ್ತಿದೆ.ಆಂಬುಲೆನ್ಸ್  ಸಿಲುಕಿಕೊಳ್ಳುತ್ತಿದ್ದು ರೋಗಿಗಳು ಒದ್ದಾಡುವಂತಾಗಿದೆ.ಕೆಲಸಕ್ಕೆ ಹೋಗುವವರಿಗೆ ತೊಂದರೆ ಯಾಗುತ್ತಿದೆ.ಕಳಪೆ

ಮಾರ್ಚ್ ಒಳಗಡೆ ಕಂಬಳಕೂಟ ಮುಕ್ತಾಯಕ್ಕೆ ನಿರ್ಧಾರ

ಮೂಡುಬಿದಿರೆ: 24 ಗಂಟೆಯೊಳಗಡೆ ಕಂಬಳ ಮುಗಿಸುವುದು, ರೆಫ್ರಿಗಳಿಗೆ ಭದ್ರತೆ, ವ್ಯವಸ್ಥಾಪಕರಿಂದ ಸೂಕ್ತ ವ್ಯವಸ್ಥೆ, ಕೋಣಗಳನ್ನು ಕಟ್ಟುವ ವ್ಯವಸ್ಥೆ, ವ್ಯವಸ್ಥಿತ ಕಂಬಳವನ್ನು ಆಯೋಜಿಸುವ ಬಗ್ಗೆ ಹಾಗೂ ನವೆಂಬರ್ ತಿಂಗಳಿನಲ್ಲಿ ಪ್ರಾರಂಭಗೊಳ್ಳುವ ಕಂಬಳಕೂಟಗಳನ್ನು ಕೋಣಗಳ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ವಿಚಾರಗಳನ್ನು ಗಣನೆಗೆ ತೆಗೆದುಕೊಂಡು ಮುಂದಿನ ವರ್ಷದ ಮಾರ್ಚ್ನೊಳಗಡೆ ಮುಕ್ತಾಯಗೊಳಿಸುವ ಕುರಿತು ಸಮಾಜಮಂದಿರದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು

ಮರ ಬಿದ್ದು ಸಂಚಾರಕ್ಕೆ ಅಡ್ಡಿ : ಬಂಟ್ವಾಳ-ಮೂಡುಬಿದಿರೆ ಸಂಚಾರಕ್ಕೆ ತೊಡಕು

ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಬಿರಾವು ಎಂಬಲ್ಲಿ ಭಾನುವಾರ ಸುರಿದ ಗಾಳಿ ಮಳೆಗೆ ಬೃಹತ್ ಆಲದ ಮರ ಬಿದ್ದು, ಕೆಲ ಸಮಯ ಬಂಟ್ವಾಳ-ಮೂಡುಬಿದಿರೆ ಸಂಚಾರಕ್ಕೆ ತೊಂದರೆಯಾಯಿತು.ಮರ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು, ಇಂಟರ್ನೆಟ್ ಸಂಪರ್ಕ ತಂತಿಗಳು ಕಡಿದು ಬಿದ್ದಿದ್ದು, ಭಾನುವಾರ ಮಧ್ಯಾಹ್ನದಿಂದ ಬಿರಾವು, ತಾಕೋಡೆ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಅವರ ಮುತುವರ್ಜಿಯಲ್ಲಿ ಮರವನ್ನು ಒಂದು