Home Posts tagged V4News (Page 774)

ಬಾಲ ಮಂದಿರದಿಂದ ಬಾಲಕರು ನಾಪತ್ತೆ

ನಗರದ ಬೋಂದೆಲ್‌ನಲ್ಲಿರುವ ಬಾಲಕರ ಬಾಲ ಮಂದಿರದಿಂದ ನ.26 ರ ರವಿವಾರ ಮುಂಜಾನೆ ಶ್ಯಾಮವೆಲ್ ಟೊಪ್ಪು (16) ಮತ್ತು ವಡಲಮನಿ ಚಿರಂಜೀವ (16) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಸ್ಯಾಮುವೆಲ್ 150 ಸೆಂ.ಮೀ ಎತ್ತರವಿದ್ದು, ಬಿಳಿ ಮೈಬಣ್ಣ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾನೆ. ಎದುರಿನಲ್ಲಿ ಹಳದಿ ಬಣ್ಣದ ಪಟ್ಟಿ ಇರುವ

ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಚಿನ್ನದ ಸರ ಸುಲಿಗೆ

ನಗರದ ನಂತೂರು ಪದವು ಬಳಿ ಬೈಕ್ ಸವಾರನನ್ನು ತಡೆದು ನಿಲ್ಲಿಸಿ ಚಿನ್ನದ ಸರವನ್ನು ಸುಲಿಗೆಗೈದ ಮಂಗಳಮುಖಿಯನ್ನು ಕದ್ರಿ ಠಾಣೆಯ ಪೊಲೀಸರು ನ 29 ರ ಸೋಮವಾರ ಬಂಧಿಸಿದ್ದಾರೆ. ಮೂಲತಃ ಮೈಸೂರಿನ ಅಗ್ರಹಾರದ ಪ್ರಸ್ತುತ ಬೆಂಗಳೂರಿನ ನಿವಾಸಿ ಅಭಿಷೇಕ್ ಯಾನೆ ಗೊಂಬೆ ಯಾನೆ ಅನಾಮಿಕ (27) ಬಂಧಿತ ಆರೋಪಿಯಾಗಿದ್ದಾನೆ. ಗಣೇಶ್ ಶೆಟ್ಟಿ ಎಂಬವರು ಎರಡು ತಿಂಗಳ ಹಿಂದೆ ತನ್ನ ಬೈಕ್‌ನಲ್ಲಿ ನಂತೂರು ಪದವಿನಿಂದ ಬಿಎಸ್‌ಎನ್‌ಎಲ್ ಎಕ್ಸೇಂಜ್ ಬಳಿಯ ರಸ್ತೆಯಲ್ಲಿ ತೆರಳುತ್ತಿದ್ದಾಗ ಹಠಾತ್

ಪೊಲೀಸ್ ಕಾನ್ಸ್ ಸ್ಟೇಬಲ್ ಹುದ್ದೆಗೆ ಹರಿಪ್ರಸಾದ್ ಕೆ. ನೇಮಕ

ಭಾರತೀಯ ಸೇನೆಯಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿ ಇದೀಗ ನಿವೃತ್ತಿಯಾದ ಬಳಿಕ ಮಂಗಳೂರು ಘಟಕದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಪುತ್ತೂರಿನ ಪೆರ್ಲಂಪಾಡಿಯ ಹರಿಪ್ರಸಾದ್ ಕೆ. ಅವರು ನೇಮಕಗೊಂಡಿದ್ದಾರೆ. ಹರಿಪ್ರಸಾದ್ ಕೆ. ಅವರು ಭಾರತೀಯ ಸೇನೆಯಲ್ಲಿ ಸರಿ ಸುಮಾರು 17 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದು, ತಮ್ಮ‌ ಸೇವಾ ಅವಧಿಯಲ್ಲಿ ದೇಶದ ಪಂಜಾಬ್, ಅಸ್ಸಾಂ, ಜಮ್ಮು ಕಾಶ್ಮೀರ, ರಾಜಸ್ತಾನ, ವಡೋದರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸೇವೆಯನ್ನು

ರಾಜ್ಯ ‌ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಗಳಾಗಿ ಚಂದ್ರಕಲಾ ರಾವ್ , ಮಲ್ಲಿಕಾ ಪಕ್ಕಳ, ಜಾಯಿರಾ ಜುಬೈರ್ ನೇಮಕ

ರಾಜ್ಯ ಮಹಿಳಾ ಕಾಂಗ್ರೆಸ್ ಗೆ ಹೊಸದಾಗಿ 17 ಮಂದಿ ಪದಾಧಿಕಾರಿಗಳನ್ನು ಸೇರ್ಪಡೆಗೊಳಿಸಲಾಗಿದೆ. ಈ ಸೇರ್ಪಡೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಮಹಿಳೆಯರು ಸ್ಥಾನ ಪಡೆದಿದ್ದಾರೆ. ಚಂದ್ರಕಲಾ ದೀಪಕ್ ರಾವ್ ಮತ್ತು ಮಲ್ಲಿಕಾ ಪಕ್ಕಳ ಹಾಗೂ ಸಾಯಿರಾ ಜುಬೇರ್ ಅವರು ಅವರು ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸ ವೈರಸ್ ಪ್ರಬೇಧ ಪತ್ತೆ ಹಿನ್ನೆಲೆ : ಕೇರಳ-ಕರ್ನಾಟಕ ಗಡಿಯಲ್ಲಿ ಮತ್ತೆ ತಪಾಸಣೆ ಬಿಗಿ

  ಮಂಜೇಶ್ವರ: ಹೊಸ ವ್ಯೆರಸ್ ಪ್ರಬೇಧ ಓಮಿಕ್ರಾಮ್ ಭೀತಿಯ ನಡುವೆ ಕರ್ನಾಟಕ ಬಿಗು ನಿಯಂತ್ರಣ ಹೇರಿದ್ದು, ಅಂತರ್ ರಾಜ್ಯ ಗಡಿಗಳಲ್ಲಿ ಕಠಿಣ ತಪಾಸಣೆ ಬಿಗಿಗೊಳಿಸಿದೆ. ಕರ್ನಾಟಕ ಸರ್ಕಾರ ತುಸು ಹೆಚ್ಚೇ ಕಾಳಜಿ ವಹಿಸತೊಡಗಿದ್ದು, ಗಲಿಬಿಲಿಗೊಳಗಾದಂತೆ ಕಂಡುಬಂದಿದೆ. ಜೊತೆಗೆ ದಕ್ಷಿಣ ಕನ್ನಡ ಸಹಿತ ಅಂತರ್ ರಾಜ್ಯ ಗಡಿಗಳಲ್ಲಿ ನಿಗಾ ವಹಿಸಲು ಸೂಚಿಸಲಾಗಿದೆ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತೆ ತಲಪಾಡಿ ಗಡಿಯಲ್ಲಿ ಕೇರಳದ ಕಡೆಯಿಂದ ಆಗಮಿಸುವ ವಾಹನ ಸಂಚಾರಕ್ಕೆ

ಪುತ್ತೂರಿನ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಳದಲ್ಲಿ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ. ಈ ಮಹಾಕಾರ್ಯ ಎಲ್ಲರಿಗೂ ಸಿಗುವುದಿಲ್ಲ. ಜೀವನದಲ್ಲಿ ಭಗವಂತ ಕೊಟ್ಟ ಅವಕಾಶದಲ್ಲಿ ಶ್ರದ್ಧೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಡಿ.21ರಿಂದ 28 ರವರೆಗೆ ನಡೆಯಲಿರುವ ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿ

ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ವಹಿಸಲಿ : ಯು.ಟಿ. ಖಾದರ್

ಹೊಸ ತಳಿಯ ಒಮಿಕ್ರಾನ್ ಸೋಂಕಿನ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅದನ್ನು ತಡೆಗಟ್ಟಲು ಶೀಘ್ರದಲ್ಲಿ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಒತ್ತಾಯಿಸಿದರು. ಅವರು ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೈರಾಣುಗಳು ರೂಪಾಂತರಿಯಾಗಿ ಬದಲಾಗುತ್ತಾ ಇರುತ್ತದೆ. ಅದಕ್ಕೆ ಮುನ್ನೆಚ್ಚರಿಕೆಯಾಗಿ ರಾಜ್ಯ ಸರ್ಕಾರ ಎಲ್ಲಾ ತಯಾರಿಯನ್ನು ಮಾಡಿಕೊಳ್ಳಬೇಕು. ಜನರನ್ನು ಗೊಂದಲ ಸೃಷ್ಠಿಸುವ ಬದಲು

ಪುತ್ತೂರು: ಬನ್ನೂರಿನ ದೈವಸೇವಕಾರ್ಯದ ಮಧ್ಯಸ್ಥ ಭರತ್ ಭಂಡಾರಿ ವಿಧಿವಶ

ಪುತ್ತೂರು: ದೈವ ಸೇವಾಕಾರ್ಯದಲ್ಲಿ ಮಧ್ಯಸ್ಥರಾಗಿ ಸೇವೆ ಮಾಡುತ್ತಿದ್ದ ಬನ್ನೂರು ನಿವಾಸಿ ಭರತ್ ಭಂಡಾರಿ ಅನಾರೋಗ್ಯದಿಂದ ನ.29ರ ನಸುಕಿನ ಜಾವ ದೇರಳಕಟ್ಟೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಕ್ಷಗಾನ ಕಲಾವಿದ ಗಂಗಾಧರ ಭಂಡಾರಿಯವರ ಪುತ್ರ ಭರತ್ ಭಂಡಾರಿ ಅವರು ದೈವ ಸೇವಾ ಕಾರ್ಯದಲ್ಲಿ ಮಧ್ಯಸ್ಥರಾಗಿ ತೊಡಗಿಸಿಕೊಂಡು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಇತ್ತೀಚೆಗೆ ಅವರು ಜಾಂಡೀಸ್ ಖಾಯಿಲೆಗೆ ತುತ್ತಾಗಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಮೃತರು ತಂದೆ

ಶಿರ್ವ ನಡಿಬೆಟ್ಟು ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಂಪನ್ನ

ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ 26 ನೇ ವರ್ಷದ ಸುಪ್ರಸಿದ್ಧ ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಜೋಡುಕರೆ ಕಂಬಳವು ಭಾನುವಾರ ಶಿರ್ವ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನೆರವೇರಿತು.ಶಿರ್ವ ನಡಿಬೆಟ್ಟು ಸೂರ್ಯ – ಚಂದ್ರ ಜೋಡುಕರೆ ಸಾಂಪ್ರದಾಯಿಕ ಕಂಬಳೊತ್ಸವವನ್ನು ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರು ಗುತ್ತು ಪ್ರಫುಲ್ಲ ಶೆಟ್ಟಿಯವರು ಉದ್ಘಾಟಿಸಿದರು. ಬೆಳಿಗ್ಗೆ ಸಾಂಪ್ರದಾಯಿಕವಾಗಿ ನಡೆದ ಬಂಟ ಕೋಲದ ಬಳಿಕ

ಗ್ರಂಥಾಲಯದಲ್ಲೇ ತ್ಯಾಜ್ಯಗಳ ರಾಶಿ..

ಗ್ರಾಮದಲ್ಲಿ ಸಂಗ್ರಹಿಸಿದ ತ್ಯಾಜ್ಯಗಳನ್ನ ವಿಲೇವಾರಿ ಮಾಡೋ ಬದಲು ಗ್ರಾಮ ಪಂಚಾಯಿತಿನ ಗ್ರಂಥಾಲಯದಲ್ಲಿ ತುಂಬಿಸಿಟ್ಟಿದ್ದಾರೆ.ಇಲ್ಲಿ ಗ್ರಾಮಸ್ಥರು ಪುಸ್ತಕಗಳನ್ನು ದಿನಪತ್ರಿಕೆಗಳನ್ನ ಓದಬೇಕಾದರೆ ಈ ಕಸದ ರಾಶಿಗಳ ಮಧ್ಯೆ ಹಾಕಿರುವ ಟೇಬಲ್ ನಲ್ಲಿ ಮೂಗುಮುಚ್ಚಿಕೊಂಡು ಓದಬೇಕಾದ ಪರಿಸ್ಥಿತಿ ನಿರ್ಮಿಸಿದೆ. ಇದು ಅಂಬಲಪಾಡಿ ಗ್ರಾಮ ಪಂಚಯತ್ ವ್ಯಾಪ್ತಿಯ ಅವ್ಯವಸ್ಥೆ.   ಸ್ವಚ್ಚ ಭಾರತ ಯೋಜನೆಯಡಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಬೇಕಾದ ಗ್ರಾಮ ಪಂಚಯತ್ ಅಧಿಕಾರಿಗಳು