Home Posts tagged V4News (Page 778)

ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಕಿರೀಟ ಮುಡಿಗೇರಿಸಿಕೊಂಡ ಅನನ್ಯಾ ಸಿಂಗ್

ಮಂಗಳೂರಿನ ವೆಲೆನ್ಸಿಯಾದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾದ ಅನನ್ಯಾ ಸಿಂಗ್ ಅವರು ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಕಿರೀಟವನ್ನು ಮುಡಿಗೇರಿಸಿದ್ದಾರೆ ನವದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಆಯೋಜಿಸಿರುವ ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್-

ಟೋಲ್‌ಗೇಟ್ ಪಕ್ಕದಲ್ಲೆ ಬಸ್ ನಿಲುಗಡೆ ವಿರೋಧಿಸಿ ಪ್ರತಿಭಟನೆ

ಮಂಜೇಶ್ವರ: ಕೇರಳ ಗಡಿ ಭಾಗದಿಂದ ಪ್ರಯಾಣಿಕರನ್ನು ಹೇರಿಕೊಂಡು ಆಗಮಿಸುತ್ತಿರುವ ಬಸ್ಸುಗಳು ಕೇರಳ ಕರ್ನಾಟಕದ ಗಡಿಯಲ್ಲಿರುವ ಕರ್ನಾಟಕದಲ್ಲಿ ಪ್ರಯಾಣಿಕರನ್ನು ಇಳಿಸಿ ಟೋಲ್ ಗೇಟ್ ಪಕ್ಕದಲ್ಲೇ ನಿಲುಗಡೆಯನ್ನು ನೀಡುವುದನ್ನು ಪ್ರತಿಭಟಿಸಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಸ್ಥಳೀಯ ವ್ಯಾಪಾರಿಗಳ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದರು. ಎಲ್ಲಾ ಖಾಸಗಿ ಬಸ್ಸುಗಳು ಕೊರೊನ ಲಾಕ್ ಡೌನ್ ಗಿಂತ ಮೊದಲು ಯಾವರೀತಿಯಲ್ಲಿ ಯಾವ ಸ್ಥಳಗಳಲ್ಲಿ ನಿಲುಗಡೆಯಾಗುತಿತ್ತೋ ಅದನ್ನೇ

ನ.21ರಿಂದ ಜ.7ರ ತನಕ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ರಂಗಪೂಜೆ

ಪುತ್ತೂರು ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 21 ರಂದು ಆರಂಭಗೊಂಡು ಜನವರಿ 7 ರ ತನಕ ನಿರಂತರ 48  ದಿನಗಳ ಕಾಲ (ಒಂದು ಮಂಡಲ) ಸಂಜೆ ವಿಶೇಷ ರಂಗಪೂಜೆ ನಡೆಯಲಿದೆ. ಮೂರನೇ ವರ್ಷದಲ್ಲಿ ನಡೆಯುತ್ತಿರುವ ಈ ವಿಶೇಷ ರಂಗಪೂಜೆಯು ಕಾರ್ಪಾಡಿ, ಶ್ರೀ. ಸುಬ್ರಹ್ಮಣ್ಯ ಕ್ಷೇತ್ರದ ವಿಶೇಷತೆಗಳಲ್ಲಿ ಒಂದು. ನಿರಂತರ 48 ದಿನಗಳ ಕಾಲ ನಡೆಯುವ ರಂಗಪೂಜೆಯಲ್ಲಿ ಪ್ರತೀದಿನ 12 ಕುಟುಂಬಗಳಿಗೆ ಸೇವೆ ಮಾಡಿಸಲು ಅವಕಾಶವಿದೆ.

ಮೂರು ಕೃಷಿ ಮಸೂದೆ ರೈತರ ಹೋರಾಟಕ್ಕೆ ಸಂದ ಜಯ : ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಬಡಗಲಪುರ ನಾಗೇಂದ್ರ

ಕೇಂದ್ರ ಸರ್ಕಾರ ಕೊನೆಗೂ ಮೂರು ಕೃಷಿ ಮಸೂದೆಗಳನ್ನು ವಾಪಸ್ ಪಡೆದಿದೆ. ಇದರಿಂದ ಪ್ರಪಂಚದಲ್ಲಿ ಚಳುವಳಿಗಳಿಗೆ ಜಯ ಯಾವತ್ತೂ ಸಿಗುತ್ತದೆ ಎಂಬುವುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ ಹೇಳಿದರು.ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಮಸೂದೆಯನ್ನು ವಾಪಸ್ ಪಡೆಯುತ್ತೇವೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಇಡೀ ಭಾರತದ ದೇಶದಲ್ಲಿ ಎಲ್ಲಾ ಜನರು ಒಗ್ಗಟ್ಟಾಗಿ ಹೋರಾಟಕ್ಕೆ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಯಿನಾಥ್ ಶೇಟ್ ದೈವಜ್ಞ ಬ್ರಾಹ್ಮಣ ಸಮಾಜ ಕುಂದಾಪುರ ವತಿಯಿಂದ ಸನ್ಮಾನ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸಾಯಿನಾಥ ಶೇಟ್ ಅವರನ್ನು ದೈವಜ್ಞ ಬ್ರಾಹ್ಮಣ ಸಮಾಜ ಕುಂದಾಪುರ ವತಿಯಿಂದ ಸನ್ಮಾನಿಸಲಾಯಿತು. ಇದೆ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ಸ್ವಾತಿ ಜಿ ಶೇಟ್ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾತ್ವಿಕ್ ಕೋಟೇಶ್ವರ ಇವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜ್ಯುವೆಲ್ ಅಸೋಸಿಯೇಷನ್ ಕುಂದಾಪುರ ಇದರ ಅಧ್ಯಕ್ಷರಾದ ಸತೀಶ್ ಶೇಟ್ ನಾಡ, ಅನುಗ್ರಹ

ಸೋಲಿನಿಂದ ಮೋದಿ ಸರ್ಕಾರ ಎಚ್ಚೆತ್ತುಕೊಂಡಿದೆ : ಮಾಜಿ ಸಚಿವ ರಮಾನಾಥ ರೈ

ಉಪಚುನಾವಣೆ ಸೋಲು ಮೋದಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದೆ. ಹಾಗಾಗಿ ರೈತ ವಿರೋಧಿ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಹೇಳಿದರು. ಅವರು, ಕೃಷಿ ಮಸೂದೆ ವಿರೋಧಿಸಿ ಹೋರಾಟ ನಡೆಸಿದ ರೈತರ ಹೋರಾಟಕ್ಕೆ ಗೆಲುವು ಸಿಕ್ಕಿರುವುದಕ್ಕೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿ ಮಾತನಾಡಿದರು. ರೈತರ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಸೋಲಿನಿಂದ ಮೋದಿ ಸರ್ಕಾರ

ಕ.ಸಾ.ಪಗೆ ಒಂದು ಸಾವಿರ ಕೋಟಿ ರೂ ಶಾಶ್ವತ ನಿಧಿ ಸ್ಥಾಪನೆ ತಮ್ಮ ಗುರಿ ; ರಾಜ್ಯಾಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ

ಬೆಂಗಳೂರು, ನ 18; ನಾಡಿನ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಶ್ರೇಯೋಭಿವೃದ್ಧಿಗಾಗಿ ಆರ್ಥಿಕ ಬಲ ತುಂಬುವುದು ತಮ್ಮ ಪ್ರಧಾನ ಆದ್ಯತೆಯಾಗಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಮೊತ್ತದ ಶಾಶ್ವತ ನಿಧಿ ಸ್ಥಾಪಿಸಲು ಶ್ರಮಿಸುವುದಾಗಿ ಪರಿಷತ್ತಿನ ಅಧ್ಯಕ್ಷ ಸ್ಥಾನದ ಸ್ಪರ್ಧಿ ಮಾಯಣ್ಣ ಹೇಳಿದ್ದಾರೆ.ಇದೇ ತಿಂಗಳ 21 ರಂದು ನಡೆಯಲಿರುವ ಕ.ಸಾ.ಪ ಚುನಾವಣೆಗೆ ಬೆಂಗಳೂರು ನಗರದ ಜಿಲ್ಲೆಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಲೇಖಕ ಎಂ. ತಿಮ್ಮಯ್ಯ

ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರಧಾನಿ  ಅವರಿಗೆ ರಕ್ಷಾ ರಾಮಯ್ಯ ಒತ್ತಾಯ ; ರಾಜ್ಯಪಾಲರಿಗೆ ನಿಯೋಗದ ಮೂಲಕ ಮನವಿ ಸಲ್ಲಿಕೆ

ಬೆಂಗಳೂರು, ನ 18; ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ. ತಮ್ಮ ಶಾಲಾ ಒಡನಾಡಿ ಹಾಗೂ ಎಲ್ಲರ ಮೆಚ್ಚಿನ

ಡಿಸೆಂಬರ್ 12 ರಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ

  ಬೆಂಗಳೂರು: ಒಕ್ಕಲಿಗರ ಪ್ರಾತಿನಿಧಿಕ ಸಂಸ್ಥೆಗೆ ಡಿಸೆಂಬರ್ 12 ರಂದು ನಡೆಯಲಿರುವ ಚುನಾವಣೆಗೆ ಸಂಘದ ಮಾಜಿ ಅಧ್ಯಕ್ಷ ಬಿ. ಕೆಂಚಪ್ಪಗೌಡ ನೇತೃತ್ವದ ತಂಡ ಸಜ್ಜಾಗಿದ್ದು, ಸಂಘದ ಗತ ವೈಭವವನ್ನು ಮತ್ತೆ ಮರಳಿ ತರಲು ಕಾರ್ಯೋನ್ಮುಖವಾಗಿದೆ.   2021 – 26 ರ ಅವಧಿಗೆ ನಡೆಯಲಿರುವ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ. ಕೆಂಚಪ್ಪಗೌಡ, 2008 –13 ರ ಸಾಲಿನಲ್ಲಿ ನಮ್ಮ ತಂಡ ಅಭಿವೃದ್ಧಿ ಪರ್ಷಕ್ಕೆ ಚಾಲನೆ ನೀಡಿತ್ತು. ಈ

ಪಡುಬಿದ್ರಿ ಮುಖ್ಯ ಪೇಟೆಯಲ್ಲೇ ಸರಣಿ ಕಳ್ಳತನ

ಪಡುಬಿದ್ರಿ ಪೊಲೀಸ್ ಠಾಣೆಯ ನೂರು ಮೀಟರ್ ಅಂತರ, ಪೇಟೆಭಾಗದ ಪೊಲೀಸ್ ವಾಹನ ತಪಾಸಣಾ ಸ್ಥಳಕ್ಕೆ ಇಪ್ಪತ್ತು ಮೀಟರ್ ಅಂತರದಲ್ಲಿರುವ ಆರು ಅಂಗಡಿಗಳಲ್ಲಿ ಕಳ್ಳರು ಕೈಚಳಕ ತೋರಿಸುವ ಮೂಲಕ ಸರಣಿ ಕಳ್ಳತನ ನಡೆಸಿದ್ದಾರೆ. ಪೊಲೀಸರಿಗೆ ಸವಾಲಾದ ಈ ಕಳ್ಳತನ ಪ್ರಕರಣ ಭೇದಿಸಲು ಪೊಲೀಸರು ಸಿಸಿ ಕ್ಯಾಮಾರಗಳ ಮೊರೆ ಹೋಗಿದ್ದಾರೆ. ಕಳ್ಳತನ ನಡೆದ ಎರಡು ಅಂಗಡಿಗಳ ಅಂಚು ತೆಗೆದು ಒಳ ನುಗ್ಗಿದರೆ, ಉಳಿದ ಹಣ್ಣು ಹಂಪಲು, ಕಬ್ಬಿನ ಜ್ಯೂಸ್, ತರಕಾರಿ, ಹೂವಿನಂಗಡಿ ಇವುಗಳಿಗೆ ಭದ್ರತೆ