ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸೋಮವಾರ ಸಾಯಂಕಾಲ ಬೇಟಿ ನೀಡಿದರು.ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಗೃಹ ಸಚಿವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ದೇವಳದ ಹೊರಾಂಗಣದಲ್ಲಿ ನಡೆದ ಉತ್ಸವದಲ್ಲಿ ಪಾಲ್ಗೊಂಡರು. ಕಾರ್ಯನಿರ್ವಹಣಾ ಅಧಿಕಾರಿ ಡಾ.ನಿಂಗಯ್ಯ, ಸಹಾಯಕ
ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ನ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಅಧಿಕಾರಿಗಳು ಉಪಸ್ಥಿತರಿದ್ದರು.
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು ಅವರನ್ನು ಅವರ ಅಭಿಮಾನಿಗಳು ಸ್ವಾಗತಿಸಿದರು. ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಸೋಮವಾರ ಪ್ರದಾನ ಮಾಡಲಾಯಿತು. ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ ಹಾಜಬ್ಬ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಯಿತು. ಗ್ರಾಮೀಣ
ಕೊರೊನಾ ಆತಂಕ ಮರೆಯಾಗುತ್ತಿದ್ದಂತೆ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿದ್ದು, ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಅಂಗನವಾಡಿಗಳಲ್ಲಿ ಮಕ್ಕಳ ಕಲರವ ಮೊಳಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಅಂಗನವಾಡಿ ಶಾಲೆಗಳನ್ನು ಆರಂಭಿಸಲಾಗಿದೆ. ಇಂದು ಶಾಲೆಗೆ ಬಂದ ಮಕ್ಕಳಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಅಂಗನವಾಡಿ ಶಾಲೆಯ ಸಿಬ್ಬಂದಿ ವರ್ಗದವರು ಪುಟಾಣಿ ಮಕ್ಕಳನ್ನು ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಸುರತ್ಕಲ್ ಪರಿಸರಕ್ಕೆ ವೀರ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ : ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ
ಸುರತ್ಕಲ್ ಪರಿಸರಕ್ಕೆ ವೀರಾ ಸಾವರ್ಕರ್ ಹೆಸರಿಡುವ ವಿಚಾರ ಬಗ್ಗೆ ಕಾಂಗ್ರೆಸ್ ಇತರ ಪಕ್ಷಗಳಿಂದ ವಿರೋಧ ಪ್ರತಿಭಟನೆ ವ್ಯಕ್ತವಾಗಿದೆ. ವೀರ ಸಾವರ್ಕರ್ ಹೆಸರು ಇಡುವುದರಲ್ಲಿ ತಪ್ಪೇನಿದೆ. ಅವ್ರೇನು ದೇಶ ದ್ರೋಹಿ ಅಲ್ಲ …ದುರಾದೃಷ್ಟ ಅವರನ್ನು ದೇಶ ದ್ರೋಹಿ ಎಂದು ಬಿಂಬಿಸುತ್ತಾರೆ. ದೇಶದಲ್ಲಿ ಅನೇಕ ಕಡೆ ವಿದೇಶಿಯರ ಹೆಸರಿದೆ ಅದಕ್ಕೆ ಯಾರೂ ವಿರೋಧ ವ್ಯಕ್ತ ಪಡಿಸಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು. ಅವರು ಮಂಗಳೂರಿನ ಬಿಜೆಪಿ
ಬಲ್ಲಾಳ್ ಭಾಗ್ನಲ್ಲಿ ಹಿಂದೂಗಳ ಮೇಲೆ ಅನ್ಯಧರ್ಮದವರಿಂದ ನಡೆದಿರುವ ದೌರ್ಜನ್ಯದ ಬಗ್ಗೆ ಕೂಲಂಕುಷವಾಗಿ ಮತ್ತು ಪಾರದರ್ಶಕವಾಗಿ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುವಂತೆ ಬಲ್ಲಾಳ್ ಭಾಗ್ ಫ್ರೆಂಡ್ಸ್ನ ರಕ್ಷಿತ್ ಕೊಟ್ಟಾರಿ ಅವರು ಆಗ್ರಹಿಸಿದ್ದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಲ್ಲಾಳ್ ಭಾಗ್ ಪರಿಸರದ ಸುತ್ತಮುತ್ತ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಯಾವುದೇ ಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥವಾಗಿ ಸೇವೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಿವೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳ ಕಲರವ ಮನೆಮಾಡಿದೆ. ಇಂದಿನಿಂದ ಅಂಗನವಾಡಿ, ಎಲ್ಕೆಜಿ ಮತ್ತು ಯುಕೆಜಿ ತರಗತಿ ಆರಂಭವಾಗಿದ್ದು ಮಕ್ಕಳ ಶಾಲೆಗಳ ಕಡೆ ಮುಖ ಮಾಡಿದ್ದಾರೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು
ವಿಜಯಪುರ ನಗರದ ಗಾಂಧಿ ಚೌಕ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಖತರ್ನಾಕ್ ಬೈಕ್ ಕಳ್ಳರನ್ನು ಬಂಧಿಸಿ ಅವರಿಂದ 36 ಬೈಕ್ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ವಿಜಯಪುರ ಪೋಲಿಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಅವರು ಒಟ್ಟು 36 ವಿವಿಧ ಕಂಪನಿಯ ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ, ಬೈಕ್ ಕಳ್ಳತನ ನಡೆಸುತ್ತಿದ್ದ ತೌಸೀಫ್ ಮಹಿಬೂಬ ಕಲಾದಗಿ, ಸಮೀರ
ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದರು. ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿದ, ನೂರಾರು
ಕಡಬ : ಕೊಂಬಾರು ಗ್ರಾಮದ ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಅವರ ಮನೆ ಬಳಿಯ ಬಾವಿಯ ದಂಡೆಯ ಮೇಲೆ ಕುಳಿತಿದ್ದ ಕೋಳಿಯನ್ನು ಬೇಟೆಯಾಡಲು ಹೋದ ಚಿರತೆಯೊಂದು ನೀರು ತುಂಬಿದ ಬಾವಿಗೆ ಬಿದ್ದ ಘಟನೆ ರವಿವಾರ ಮುಂಜಾನೆ ಸಂಭವಿಸಿದೆ . ಸುದ್ದಿ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬಂದಿಗಳು ಸುಳ್ಯ ಎಸಿಎಫ್ ಪ್ರವೀಣ್ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸತತ 3 ತಾಸುಗಳ ಕಾರ್ಯಾಚರಣೆ ನಡೆಸಿಚಿರತೆಯನ್ನು ಸುರಕ್ಷಿತವಾಗಿ ಬಾವಿಯಿಂದ ಮೇಲೆತ್ತುವ ಯಶಸ್ವಿಯಾಗಿದ್ದಾರೆ . ಬಾವಿಯ



















