Home Posts tagged V4News (Page 806)

ಸೇವೆಯೇ ಪರಮ ಗುರಿಯಾಗಿರಲಿ: ಬೆಳ್ಳಾಲ ಗೋಪಿನಾಥ ರಾವ್

ಉಜಿರೆ: ವಿದ್ಯಾರ್ಥಿಗಳಲ್ಲಿ ಹೃದಯವಂತಿಕೆ, ಯೋಚನಾ ಶಕ್ತಿ ಹಾಗೂ ಕಾರ್ಯತತ್ಪರತೆ ಅತ್ಯಗತ್ಯ. ಅವರ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಗೌರವ, ನಿರಂತರ ಕಲಿಕೆ, ಗುರಿ, ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೇ ಪರಮ ಗುರಿಯಾಗಿರಬೇಕು ಹಾಗೂ ಭವ್ಯಭಾರತದ ದಿವ್ಯ ಪ್ರಜೆಯಾಗಿ, ಭಾರತವನ್ನು ಗೆಲ್ಲಿಸುವಂತಾಗಬೇಕು.” ಎಂದು ಭಾರತೀಯ ಸೇನೆಯ ನಿವೃತ್ತ ಯೋಧ

ತುಳುವಿಗೆ ಮಂಗಳೂರು ವಿವಿಯಿಂದ ಶೈಕ್ಷಣಿಕ ಪ್ರೋತ್ಸಾಹ

 ಮಂಗಳೂರು ವಿಶ್ವವಿದ್ಯಾನಿಲಯ ತುಳು ಭಾಷೆಯ ಬಲವರ್ಧನೆಗೆ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ತುಳು ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ತುಳುವಿಗೆ ಅವಕಾಶವನ್ನು ಕಲ್ಪಿಸಿದ್ದು ಮಾತ್ರವಲ್ಲ ತುಳುವಿಗೆ ಸಂಬಂಧಿಸಿದ ಮೌಲಿಕ ರಚನೆಗಳನ್ನು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸಿ ಪ್ರಸಾರಾಂಗದ ಮೂಲಕ ಇದನ್ನು ಪ್ರಕಟಿಸುವ ಕಾರ್ಯದಲ್ಲಿ ತೊಡಗಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಹೇಳಿದರು. ಅವರು ಶುಕ್ರವಾರ ಮಂಗಳೂರು

ಕೇಂದ್ರ ಆಯುಷ್ ಸಚಿವರಿಂದ ಆಯುಷ್ ಆಸ್ಪತ್ರೆ ಉದ್ಘಾಟನೆ

ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು.ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್,

ಬ್ಯಾರೀಸ್ ಗ್ರೂಪ್‍ನಿಂದ ಗ್ರೀನ್ ವಾಕಥಾನ್‍ಗೆ ಚಾಲನೆ

ಕೊಣಾಜೆ: ಬ್ಯಾರೀಸ್ ಗ್ರೂಪ್ ಆಯೋಜಿಸಿರುವ ‘ಗ್ರೀನ್ ವಾಕಥಾನ್ 2021’ಕ್ಕೆ ಕೊಣಾಜೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಮಂಗಳಾ ಸಭಾಂಗಣದ ಮುಂದೆ ಮುಂಜಾನೆ ಚಾಲನೆ ನೀಡಲಾಯಿತು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು ಸಪ್ತಾಹ’- ‘ಗ್ರೀನ್ ವಾಕಥಾನ್’ಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಚಾಲನೆ ನೀಡಿದರು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು

ಯೆನೆಪೋಯ ಆಸ್ಪತ್ರೆಯಿಂದ ಅಪರೂಪದ ಕ್ಯಾನ್ಸರ್ ಕಾಯಿಲೆ ನಿರ್ಮೂಲನೆ….!

ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಕೇರಳದ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ೬ ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಯಾವುದೇ

ಯೆನೆಪೋಯ ವತಿಯಿಂದ ಪತ್ರಕರ್ತರಿಗೆ ಯೆನ್ ಮೀಡಿಯ ಕಾರ್ಡ್ ವಿತರಣೆ

ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯ ವತಿಯಿಂದ ದ.ಕ ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಮತ್ತು ಅವರ ಕುಟುಂಬಸ್ಥರಿಗೆ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಮಾಡಲಾಯಿತು. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಯೆನ್ ಮೀಡಿಯ ಆರೋಗ್ಯ ಕಾರ್ಡ್ ವಿತರಣೆ ಕಾರ್ಯಕ್ರಮ. ಕೊರೊನಾ ಸಂದರ್ಭದಲ್ಲಿ ಪ್ರೆಂಟ್ ಲೈನ್ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸಿದ ಪತ್ರಕರ್ತರಿಗೆ ಸ್ಪೆಷ್ಯಾಲಿಟಿ ಮತ್ತು ಮಲ್ಟಿ ಸ್ಪೆಷ್ಯಾಲಿಟಿ ಆರೋಗ್ಯ ಸೇವೆಯನ್ನ ರಿಯಾಯಿತಿ ದರದಲ್ಲಿ

ಅಸ್ಸಾಂ ಗೋಲಿಬಾರ್ ದೌರ್ಜನ್ಯ, ಗ್ರಾಮಸ್ಥರ ಹತ್ಯೆ ಖಂಡನೆ : ಡಿವೈಎಫ್‍ಐ ಸಮಿತಿಯಿಂದ ಪ್ರತಿಭಟನೆ

ದೇರಳಕಟ್ಟೆ: ಅಸ್ಸಾಂ ಗೋಲಿಬಾರ್ ದೌರ್ಜನ್ಯ ಗ್ರಾಮಸ್ಥರ ಹತ್ಯೆ ಖಂಡಿಸಿ ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ದೇರಳಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು. ಡಿವೈ ಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಪ್ರತಿಭಟನೆ ಉದೇಶಿಸಿ ಮಾತನಾಡಿ ಅಸ್ಸಾಂ ದರಾಂಗ್ ಜಿಲ್ಲೆಯಲ್ಲಿ ಅಮಾನುಷವಾಗಿ ಪೆÇಲೀಸರು ನಾಗರಿಕನನ್ನು ಹತ್ಯೆ ನಡೆಸಿರುವುದು ಮಾನವ ಕುಲ ತಲೆತಗ್ಗಿಸಬೇಕಾದ ವಿಚಾರ. ಜನರ ಮನವೊಲಿಸದೆ ಭೂಮಿಯನ್ನು ಬಿಟ್ಟುಕೊಡಲು ಒತ್ತಡ ಹಾಕಿ ಕಸಿಯುವ ಪ್ರಯತ್ನ ನಡೆದಿದೆ ಎಂದು

ತಣ್ಣೀರು ಬಾವಿಯಲ್ಲಿ ಗ್ಯಾಸ್ ಟರ್ಮಿನಲ್‍ಗೆ ಚಿಂತನೆ : ಕೇಂದ್ರ ಸಚಿವ ಸರ್ಬಾನಂದ್ ಸೋನೋವಾಲ್ ಹೇಳಿಕೆ

ನವಮಂಗಳೂರು ಬಂದರು ಟ್ರಸ್ಟ್ ವತಿಯಿಂದ ಯು.ಎಸ್. ಮಲ್ಯ ಗೇಟ್ ನವೀಕರಣ ಕಾಮಗಾರಿಗೆ ಶಿಲಾನ್ಯಾಸ, ಬಂದರಿನಲ್ಲಿ ಟ್ರಕ್ ಟರ್ಮಿನಲ್‍ಗೆ ಶಿಲಾನ್ಯಾಸ ಹಾಗೂ ಬಂದರಿನಲ್ಲಿ ವ್ಯಾಪಾರ ಅಭಿವೃದ್ದಿ ಕೇಂದ್ರದ ಕಟ್ಟಡ ಲೋಕಾರ್ಪಣೆ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಆಚರಣೆ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಮಂಗಳೂರು ನವಬಂದರು ಪರಿಸರದಲ್ಲಿ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು

ನಿಟ್ಟೆ (ಪರಿಗಣಿತ) ವಿಶ್ವವಿದ್ಯಾಲಯದ ಕೆ. ಎಸ್. ಹೆಗ್ಡೆ ಆಸ್ಪತ್ರೆ : ಅಣ್ಣ ತಂಗಿಯರಿಗೆ ಯಶಸ್ವಿ ಕೀಹೋಲ್ ಶಸ್ತ್ರಚಿಕಿತ್ಸೆ

ಸುಮಾರು 6 ತಿಂಗಳ ಹಿಂದೆ, ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಮಕ್ಕಳ ತಾಯಿಯು, ತನ್ನ 16ವರ್ಷದ ಮಗಳ ಅಧಿಕ ತೂಕದ ಬಗ್ಗೆ ಚಿಂತೆಗೊಂಡು ವೈದ್ಯಕೀಯ ನೆರವಿಗಾಗಿ ಕೆ. ಎಸ್. ಹೆಗ್ಡೆ ಆಸ್ಪತ್ರೆಯ ಮುಖ್ಯ ಅಂತಃಸ್ರಾವಶಾಸ್ತ್ರಜ್ಞ ಡಾ| ಶ್ರೀಕೃಷ್ಣ ಆಚಾರ್ಯರನ್ನು ಸಂಪರ್ಕಿಸಿದರು. ಆಕೆಯನ್ನು ಕೂಲಂಕುಷವಾಗಿ ಪರೀಕ್ಷಿಸಿದಾಗ ಆಕೆಗೆ ಕುಶಿಂಗ್ಸ್ ಸಿಂಡ್ರೋಮ್ ಇರುವುದು ಪತ್ತೆಯಾಗಿದ್ದು, ಈ ಸ್ಥಿತಿಯು ಟ್ರಂಕಲ್ ಬೊಜ್ಜಿನ ಲಕ್ಷಣವಾಗಿದ್ದು, ದೇಹದಲ್ಲಿ ಅಧಿಕ ಸ್ಟಿರೋಯ್ಡ್ ನಿಂದಾಗಿ