Home Posts tagged V4News (Page 809)

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ

ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು

ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗೆ ಸನ್ಮಾನ ಹಾಗೂ ಕಾರ್ಯಾಗಾರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಗ್ರಾಮಾಂತರ ಮಂಗಳೂರು ತಾಲೂಕು, ಸಾಹಸ್ ಸಂಸ್ಥೆ ಸಹಯೋಗದಲ್ಲಿ ಪೌರ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಹಾಗೂ ಮಾಹಿತಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು. ಇನ್ನು ತಾಲೂಕು ಪಂಚಾಯತ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಸರೋಜನಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಕೋವಿಡ್‍ನಲ್ಲೂ ಸ್ವಚ್ಚತಾ ಕಾರ್ಯಕ್ರಮದಲ್ಲಿ ತನ್ನ

ಉಚ್ಚಿಲ ಬಡಾ ಗ್ರಾ.ಪಂ. ವಾಚನಾಲಯಕ್ಕೆ ಶಾಲಾ ಪಠ್ಯ ಪುಸ್ತಕ ವಿತರಣೆ

ಉಡುಪಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರರವರು ಪಠ್ಯಪುಸ್ತಕ ಸಮಿತಿ ಬೆಂಗಳೂರು ಇದರ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರ ನಿರ್ದೇಶನದ ಮೇರೆಗೆ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ವಾಚನಾಲಯಕ್ಕೆ 5ರಿಂದ 10 ನೇ ತರಗತಿಯ ಹಿಂದಿನ ವರ್ಷದ 2 ಜೊತೆ ಪುಸ್ತಕಗಳನ್ನು ಅಧ್ಯಕ್ಷೆ ಜ್ಯೋತಿ ಗಣೇಶ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಿಡಿಪಿಐ ಎನ್.ಎಚ್.ನಾಗೂರರವರು ಮಾತನಾಡಿ, ರಜಾ ಅವಧಿಯಲ್ಲಿ 1-10ನೇ ತರಗತಿಗಳಲ್ಲಿ

ಬೆಳಪು ಹಾಲು ಉತ್ಪಾದಕರ ವಾರ್ಷಿಕ ಸಭೆ

ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಪಣಿಯೂರು ಇದರ ವಾರ್ಷಿಕ ಮಹಾಸಭೆ ಪಣಿಯೂರು ಸಂಘದ ಆವರಣದಲ್ಲಿ ನಡೆಯಿತು. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ಅನಿಲ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಆರೋಗ್ಯಕರವಾಗಿ ಪಶು ಸಾಕಾಣಿಕೆ ಮಾಡಿ ಗುಣಮಟ್ಟದ ಹಾಲಿನ ಉತ್ಪಾದನೆ ಮೂಲಕ ಹೈನುಗಾರರು ಆರ್ಥಿಕ ಸ್ಥಿರತೆ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು. ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ| ದೇವಿಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಹೈನುಗಾರಿಕೆಯಲ್ಲಿ ಲಾಭ

ಕುಬಣೂರಿನ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆ

ಮಂಜೇಶ್ವರ: ಮಂಗಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕುಬಣೂರಿನಲ್ಲಿ 30 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆಯಾಗಿದ್ದು ನಿತ್ಯ ಸಂಚಾರಿಗಳು ಸಂಕಷ್ಟಕ್ಕೂಳಗಾಗಿದ್ದಾರೆ. ಇದು ಸುವರ್ಣಗಿರಿ ತೋಡಿಗೆ ಕೃಷಿಗಾಗಿ ನಿರ್ಮಿಸಲಾದ ಸೇತುವೆಯಾಗಿದ್ದು ಅಗಲ ಕಿರಿದಾಗಿ ಸುಗಮ ಸಂಚಾರಕ್ಕೂ ಅಡ್ಡಿಯಾಗಿತ್ತು. ಇದರ ಮೇಲೆ ಕೆಂಪು ಕಲ್ಲು ಹಾಗೂ ಜಲ್ಲಿ ಕಲ್ಲು ಮಾಫಿಯಾಗಳು ಲಾರಿಗಳಲ್ಲಿ ಅಧಿಕ ಭಾರಗಳನ್ನು ಹೇರಿ ಸಾಗಾಟ ನಡೆಸುತಿದ್ದದ್ದು

ಪುತ್ತೂರಿನಲ್ಲಿ ಪೌರ ಕಾರ್ಮಿಕ ದಿನಾಚರಣೆ

ಪುತ್ತೂರು: ಪೌರ ಕಾರ್ಮಿಕರ ಜೊತೆಗೆ ನಾಗರಿಕರು ಸಹಕರಿಸಿದಾಗ ಮಾತ್ರ ಸ್ವಚ್ಚ ನಗರ ನಿರ್ಮಾಣ ಸಾಧ್ಯವಿದ್ದು, ನಮ್ಮ ಕಸವನ್ನು ನಾವೇ ನಿರ್ವಹಿಸುವಂತಹ ಮನೋಭಾವ ಪ್ರತಿಯೊಬ್ಬರಲ್ಲಿಯೂ ಬೆಳೆಯಬೇಕು ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದರು. ಅವರು ಪುತ್ತೂರಿನ ಪುರಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಾಗರಿಕ ಜವಾಬ್ದಾರಿ

ಘನತ್ಯಾಜ್ಯ ನಿರ್ವವಣೆ ಮಾಡದೆ ಜನರ ಮೇಲೆ ಬರೆ : ಪಾಲಿಕೆ ವಿಪಕ್ಷ ನಾಯಕ ಎ.ಸಿ. ವಿನಯ್ ರಾಜ್ ಆರೋಪ

ರಾಜ್ಯ ಮತ್ತು ನಗರದ ಆಡಳಿತದಲ್ಲಿ ಪರ್ಸಂಟೆಜ್ ಸರಕಾರವಿದೆ.ಸರಿಯಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡದೆ ಜನರ ಮೇಲೆ ಬರೆ ಎಳೆದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಎ.ಸಿ.ವಿನಯ್ ರಾಜ್ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಪಾಲಿಕೆ ಘನ ತ್ಯಾಜ್ಯ ನಿರ್ವಹಣೆಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದ್ರೆ ಅದರ ನಿರ್ವಹಣೆಯ ಕೊರತೆ ಎದ್ದು ಕಾಣುತ್ತಿದೆ. ಮಂಗಳೂರು ನಗರ ಸ್ವಚ್ಛ ಮಂಗಳೂರು

ಮಂಗಳೂರು ಸ್ವಚ್ಛ ನಗರ ಎಂಬ ಹೆಸರಿಗೆ ಚ್ಯುತಿ ಬಂದಿದೆ : ಜೆ.ಆರ್. ಲೋಬೋ

ಮಂಗಳೂರು ನಗರ ಸ್ವಚ್ಛ ನಗರ ಎಂಬುದಕ್ಕೆ ಹಲವು ಬಾರಿ ಪ್ರಶಸ್ತಿ ಪಡೆದಿದೆ. ಆದರೆ ಇತ್ತಿಚೀನ ದಿನಗಳಲ್ಲಿ ಆ ಹೆಸರಿಗೆ ಚ್ಯುತಿ ಬಂದಿದೆ. ಕಸ ವಿಲೇವಾರಿಯ ನಿರ್ವಹಣೆ ನಗರದಲ್ಲಿ ಸಮರ್ಪಕವಾಗಿಲ್ಲ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಕಸವನ್ನ ವಿಲೇವಾರಿಗೆ ಬಳಸಲು ಮುಂದಾಗಿದೆ. ಪಾಲಿಕೆ 38 ಕೋಟಿ ಕಸ ವಿಲೇವಾರಿ ವಾಹನ ಖರೀದಿಸಿ ವಾಹನ

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆ

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ “” ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್ ಮನ್ನಾರ್ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು ದೇಶದಲ್ಲಿ ಬಿಜೆಪಿ ಫ್ಯಾಸಿಸ್ಟ್ ಆಡಳಿತದಿಂದ ಜನರು ಬೇಸತ್ತಿದ್ದು ಯುವಕರನ್ನು ನಿರುದ್ಯೋಗಳನ್ನಾಗಿ ಮಾಡಿ ಅವರನ್ನು

ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021 : ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಅವರಿಗೆ ಪ್ರಶಸ್ತಿ

ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ ಆಚಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.