ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ. ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ
ಹೆದ್ದಾರಿ ಸೂಚನಾ ಫಲಕಗಳಿಗೆ ಅನದಿಕೃತವಾಗಿ ಕಟೌಟ್ ನಿರ್ಮಾಣ ಗುತ್ತಿಗೆ ಪಡೆದ ಮಂದಿ ಅಳವಡಿಸಿದ ಕಟೌಟ್ ಗಳ ಬಗ್ಗೆ ಹೆದ್ದಾರಿ ಸಂಚಾರಿಗಳಿಗೆ ಆಗುತ್ತಿರುವ ಸಮಸ್ಯೆಗಳ ಸವಿಸ್ತಾರವಾಗಿ ವಿ4 ನ್ಯೂಸ್ ವರದಿ ಪ್ರಕಟಿಸಿದ್ದು, ಈ ವರದಿಗೆ ಸ್ಪಂದನೆ ನೀಡಿದ ಹೆದ್ದಾರಿ ಇಲಾಖೆ ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಮೂಲಕ ಕಟೌಟ್ ತೆರವು ಕಾರ್ಯ ನಡೆದಿದೆ. ಕಟೌಟ್ ಅಳವಡಿಸಲು ಯಾವುದೇ ಸಂಸ್ಥೆಗಳು ಗುತ್ತಿಗೆ ನೀಡಿದ್ದಲ್ಲಿ ಕಂಬ ಅಳವಡಿಸುವ ಕಷ್ಟ ತಪ್ಪಿಸಲು ಹೆದ್ದಾರಿ ಪಕ್ಕದ
ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ 23 ವರ್ಷದ ಯುವತಿ ಕವನ ಎಂಬವರು ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ರಸ್ತೆ ಅಪಘಾತಕ್ಕೀಡಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೆ.12ರಂದು ಮಧ್ಯಾಹ್ನ ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯದಿಂದ ಅವರ ಮಿದುಳು ನಿಷ್ಕ್ರೀಯಗೊಂಡಿತ್ತು. ಇದನ್ನು ತಿಳಿದ ಕವನಳ ಸಹೋದರಿ ಅಂಗಾಂಗ ದಾನಕ್ಕೆ ಮುಂದಾದರು. ಈ ಮಾಹಿತಿಯನ್ನು ಆಸ್ಪತ್ರೆಯಿಂದ ಜೀವನ ಸಾರ್ಥಕತೆ ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ
ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್ನ
ಕುಂದಾಪುರ: ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ನ ಟಯರ್ ಸ್ಪೋಟಗೊಂಡ ಪರಿಣಾಮ ಆಂಬುಲೆನ್ಸ್ ರಸ್ತೆ ವಿಭಾಜಕವೇರಿ ಆವರಣಗೋಡೆಗೆ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ತಾಲೂಕಿನ ಮಾಬುಕಳ ಸೇತುವೆಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರಕನ್ನಡ ಮೂಲದ ಅನಾರೋಗ್ಯಪೀಡಿತ ಮಗುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದ ಆಂಬುಲೆನ್ಸ್ನ ಟಯರ್ ಏಕಾಏಕಿ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ
ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯು
ಕೇಂದ್ರ ಸರಕಾರ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಬಂದ್ ಸೆಪ್ಟಂಬರ್ 27ರಂದು ಬಿ.ಸಿ. ರೋಡ್ನಲ್ಲಿ ನಡೆಯಲಿದೆ. ಕೇಂದ್ರ ಸರಕಾರ ತಂದಿರು ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಬೆಳೆಗಳಿಗೆ ಕನಿಷ್ಟ ಬೆಂಬಲಬೆಲೆಯನ್ನು ಕಾನೂನಾತ್ಮಕ ಗೊಳಿಸಲು ಆಗ್ರಹಿಸಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರು ನಿರಂತರ ಹೋರಾಟಕ್ಕೆ ಸೆಪ್ಟೆಂಬರ್ 26ಕ್ಕೆ 10 ತಿಂಗಳು ತುಂಬುತ್ತದೆ.ಈ ನಿಟ್ಟಿನಲ್ಲಿ ಸಂಯುಕ್ತ
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಖಾಸಗಿ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಬುಡೋಳಿಯ ಬೊಳ್ಳುಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಸುಮಾರು ೫ ಕಿ.ಮೀ ದೂರದಲ್ಲಿ ಲಾರಿಯನ್ನು ಬೆನ್ನಟ್ಟಿದ ತಂಡ
ರಾಷ್ಟ್ರೀಯ ಹೆದ್ದಾರಿ ಸಂಚಾರಿಗಳಿಗೆ ಹೆದ್ದಾರಿಯ ಬಗೆಗಿನ ಮಾಹಿತಿ ನೀಡುತ್ತಿರುವ ಸೂಚನಾ ಫಲಕಗಳಿಗೆ ಕಟೌಟ್ ಗಳನ್ನು ಅಳವಡಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದರೂ ಹೆದ್ದಾರಿ ಇಲಾಖೆ ಮೌನವಾಗಿರುದು ಗಮನಿಸಿದರೆ ಇದರಿಂದ ಇಲಾಖೆ ಲಾಭ ಪಡೆಯುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇಂಥಹುದೇ ಕೃತ್ಯವನ್ನು ದೇವಸ್ಥಾನವೊಂದರ ಕಾರ್ಯಕ್ರಮದ ಕಟೌಟ್ ಅಳವಡಿಸುವ ಮೂಲಕ ಚಾಲನೆ ನೀಡಿದ್ದು ಇಲ್ಲಿ ಸ್ಮರಿಸ ಬಹುದಾಗಿದೆ. ಇದೀಗ ಅದು ಮುಂದುವರಿದು ಆಸ್ಕರ್ ನಿಧನದ ಕಟೌಟ್
ಕೋವಿಡ್ ಹಿನ್ನೆಲೆಯಲ್ಲಿ ವಾರದ ಸಂತೆ ನಡೆಸಲಾರದೆ ಪುತ್ತೂರು ನಗರಸಭೆ ಆದಾಯಕ್ಕೆ ಕುತ್ತು ಬರುವ ಸ್ಥಿತಿ ನಿರ್ಮಾಣವಾಗಿದ್ದು, ಸಂತೆ ವರಿ ವಸೂಲಿಟೆಂಡರ್ ಪಡೆದುಕೊಂಡ ಬಿಡ್ದಾರರು ತಾವು ಕಟ್ಟಿದ ಹಣವನ್ನು ಮರಳಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಬಿಡ್ದಾರರನ್ನು ಕರೆಸಿ ಮಾತುಕತ ನಡೆಸಿ ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಬಗ್ಗೆ ಪುತ್ತೂರು ನಗರಸಭೆಯ ವಿಶೇಷ ಸಾಮಾನ್ಯ ಸಭೆ ನಿರ್ಣಯಿಸಿದೆ.ಅಧ್ಯಕ್ಷರಾದ ಜೀವಂಧರ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆದ
















