Home Posts tagged V4News (Page 816)

ರೈತರಿಂದ ಭಾರತ್ ಬಂದ್ : ಹಲವು ರಾಜ್ಯಗಳಲ್ಲಿ ಯಶಸ್ವಿ

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್‌ಗೆ ದೇಶಾದಂತ್ಯ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗೆ 6 ಗಂಟೆಗೆ ಜನ ಬೀದಿಗಿಳಿದು ರೈತರಿಗೆ ಬೆಂಬಲ ನೀಡಿದ್ದಾರೆ. ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ವಿವಾದಿತ ಕೃಷಿ ಕಾನೂನುಗಳ ಜಾರಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ರೈತ ಸಂಘಟನೆಗಳು “ಭಾರತ್ ಬಂದ್” ಗೆ ಕರೆ ನೀಡಿವೆ.

ಪುತ್ತೂರಿನಲ್ಲಿ ಅಕ್ರಮವಾಗಿ ದಾಸ್ತಾನಿಟ್ಟ ಮರದ ದಿಮ್ಮಿಗಳ ವಶ

ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಅರುಣ್ ಕುಮಾರ್ ಪಿ ರವರ ಮನೆಯಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ,ಹಲಸು ಹಾಗೂ ಇನ್ನಿತರ ಜಾತಿಯ ಸೈಜು ಮತ್ತು ದಿಮ್ಮಿಗಳನ್ನು ದಾಸ್ತಾನಿಟ್ಟ ಬಗ್ಗೆ ಬಂದ ಖಚಿತ ವರ್ತಮಾನದಂತೆ ಒಟ್ಟು 2.242 ಘನ ಮೀಟರ್ ಸೈಜುಗಳು ಮತ್ತು ಮೋಪನ್ನು ಹಾಗೂ ಅವುಗಳನ್ನು ಸಾಗಾಟ ಮಾಡಲು ಬಳಸಿದ ವಾಹನ ಜೀಪು ಸಂಖ್ಯೆ ಕೆಎ 31 ಎಮ್ 0446 ನ್ನು ಇಲಾಖಾ ಪರ ಅಮಾನತು ಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಹಾಗೂ ವಾಹನ ಮೌಲ್ಯ 3 ಲಕ್ಷ […]

ಮಂಗಳೂರಿಗೆ ಪ್ರವಾಸಿಗರ ದಂಡು ಆಗಮನ

ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.

ಕಾರ್ಕಳದಲ್ಲಿ ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ರೈತರು ಭಾರತ್ ಬಂದ್‌ಗೆ ಕರೆ ನೀಡಿದ್ದು, ಕಾರ್ಕಳದಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂತು. ಕಾರ್ಕಳ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರು ಬೆಳಿಗ್ಗೆ ಫುಲ್ ಕೆರಿ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಯದರ್ಶಿ ಸುಶಾಂತ್ ಸುಧಾಕರ್, ಜನವಿರೋಧಿ ರೈತ ವಿರೋಧಿ ಸರ್ಕಾರದ ಆಡಳಿತದಿಂದ ಜನಸಾಮಾನ್ಯ ರು ಕಂಗಾಲಾಗಿದ್ದಾರೆ. ನಿರಂತರ ಬೆಲೆಯೇರಿಕೆಯಿಂದ, ನಿರುದ್ಯೋಗದ ಸಮಸ್ಯೆಯಿಂದ

ಸೇವೆಯೇ ಪರಮ ಗುರಿಯಾಗಿರಲಿ: ಬೆಳ್ಳಾಲ ಗೋಪಿನಾಥ ರಾವ್

ಉಜಿರೆ: ವಿದ್ಯಾರ್ಥಿಗಳಲ್ಲಿ ಹೃದಯವಂತಿಕೆ, ಯೋಚನಾ ಶಕ್ತಿ ಹಾಗೂ ಕಾರ್ಯತತ್ಪರತೆ ಅತ್ಯಗತ್ಯ. ಅವರ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಗೌರವ, ನಿರಂತರ ಕಲಿಕೆ, ಗುರಿ, ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೇ ಪರಮ ಗುರಿಯಾಗಿರಬೇಕು ಹಾಗೂ ಭವ್ಯಭಾರತದ ದಿವ್ಯ ಪ್ರಜೆಯಾಗಿ, ಭಾರತವನ್ನು ಗೆಲ್ಲಿಸುವಂತಾಗಬೇಕು.” ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಮಂಗಳೂರಿನ ರಾಮಕೃಷ್ಣ ಆಶ್ರಮದ ‘ಸ್ವಚ್ಛ ಮನಸ್’ ಕಾರ್ಯಕ್ರಮದಸಂಪನ್ಮೂಲ ವ್ಯಕ್ತಿ

ತುಳುವಿಗೆ ಮಂಗಳೂರು ವಿವಿಯಿಂದ ಶೈಕ್ಷಣಿಕ ಪ್ರೋತ್ಸಾಹ

 ಮಂಗಳೂರು ವಿಶ್ವವಿದ್ಯಾನಿಲಯ ತುಳು ಭಾಷೆಯ ಬಲವರ್ಧನೆಗೆ ಶೈಕ್ಷಣಿಕ ಪ್ರೋತ್ಸಾಹ ನೀಡುತ್ತಾ ಬರುತ್ತಿದೆ. ತುಳು ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ತುಳುವಿಗೆ ಅವಕಾಶವನ್ನು ಕಲ್ಪಿಸಿದ್ದು ಮಾತ್ರವಲ್ಲ ತುಳುವಿಗೆ ಸಂಬಂಧಿಸಿದ ಮೌಲಿಕ ರಚನೆಗಳನ್ನು ಪಠ್ಯಪುಸ್ತಕಗಳಲ್ಲಿ ಸೇರ್ಪಡೆಗೊಳಿಸಿ ಪ್ರಸಾರಾಂಗದ ಮೂಲಕ ಇದನ್ನು ಪ್ರಕಟಿಸುವ ಕಾರ್ಯದಲ್ಲಿ ತೊಡಗಿದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್ ಯಡಪಡಿತ್ತಾಯ ಹೇಳಿದರು. ಅವರು ಶುಕ್ರವಾರ ಮಂಗಳೂರು

ಕೇಂದ್ರ ಆಯುಷ್ ಸಚಿವರಿಂದ ಆಯುಷ್ ಆಸ್ಪತ್ರೆ ಉದ್ಘಾಟನೆ

ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ಸೆ.25ರ ಶನಿವಾರ ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಲೋಕಾರ್ಪಣೆ ಮಾಡಿದರು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಅಧ್ಯಕ್ಷತೆ ವಹಿಸಿದ್ದರು.ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್,

ಬ್ಯಾರೀಸ್ ಗ್ರೂಪ್‍ನಿಂದ ಗ್ರೀನ್ ವಾಕಥಾನ್‍ಗೆ ಚಾಲನೆ

ಕೊಣಾಜೆ: ಬ್ಯಾರೀಸ್ ಗ್ರೂಪ್ ಆಯೋಜಿಸಿರುವ ‘ಗ್ರೀನ್ ವಾಕಥಾನ್ 2021’ಕ್ಕೆ ಕೊಣಾಜೆ ಮಂಗಳಗಂಗೋತ್ರಿಯ ವಿಶ್ವವಿದ್ಯಾನಿಲಯ ಮಂಗಳಾ ಸಭಾಂಗಣದ ಮುಂದೆ ಮುಂಜಾನೆ ಚಾಲನೆ ನೀಡಲಾಯಿತು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು ಸಪ್ತಾಹ’- ‘ಗ್ರೀನ್ ವಾಕಥಾನ್’ಗೆ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಚಾಲನೆ ನೀಡಿದರು.ಬಿಐಟಿ ಮತ್ತು ಬೀಡ್ಸ್ ಹಮ್ಮಿಕೊಂಡ ‘ವಿಶ್ವ ಹಸಿರು

ಯೆನೆಪೋಯ ಆಸ್ಪತ್ರೆಯಿಂದ ಅಪರೂಪದ ಕ್ಯಾನ್ಸರ್ ಕಾಯಿಲೆ ನಿರ್ಮೂಲನೆ….!

ಯೆನೆಪೋಯ ಆಸ್ಪತ್ರೆಯಿಂದ ಎದೆಗೂಡಿನ ಅಪರೂಪದ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಸುದ್ದಿಗೋಷ್ಟಿಯಲ್ಲಿ ಸರ್ಜಿಕಲ್ ಆಂಕೋಲಜಿ ವಿಭಾಗ ಮುಖ್ಯಸ್ಥರಾದ ಡಾ. ಜಲಾಲುದ್ದೀನ್ ಅಕ್ಬರ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು ೩೨ ವರ್ಷದ ಶ್ವೇತಾ ಎಂಬ ಮಹಿಳೆಯಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಕೇರಳದ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ೬ ಬಾರಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಯಾವುದೇ