Home Posts tagged V4News (Page 817)

ದೇವಸ್ಥಾನಗಳ ತೆರವು ವಿಚಾರ: ಸೆ.16ರಂದು ವಿಶ್ವಹಿಂದೂ ಪರಿಷತ್, ಭಜರಂಗದಳ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ದೇವಸ್ಥಾನಗಳ ತೆರವುಗೊಳಿಸುವ ಸರಿಯಲ್ಲ ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳ ಕೃತ್ಯ ನಡೆಯುತ್ತಿದೆ ಎಂದು ಭಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರ ತಕ್ಷಣವೇ ಅಧಿಕಾರಿಗಳನ್ನು ವಜಾಗೊಳಿಸಬೇಕು. ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ಹಿಂಪಡೆಯಬೇಕು. ಮೈಸೂರಿನಲ್ಲಿ

ದೇವಸ್ಥಾನಗಳ ತೆರವು ವಿಚಾರ: ಸರಕಾರ ಈ ಬಗ್ಗೆ ವಿಮರ್ಶೆ ಮಾಡಬೇಕಿದೆ: ದಯಾನಂದ ಕತ್ತಲ್ ಸಾರ್

ರಾಜ್ಯದಲ್ಲಿ ದೇವಸ್ಥಾನಗಳ ತೆರವು ಕಾರ್ಯಾಚರಣೆ ಸರಿಯಲ್ಲ. ಶತಮಾನಗಳ ಹಿಂದೆ ಆರಾಧಿಸಲ್ಪಟ್ಟ ದೇವಸ್ಥಾನಗಳನ್ನು ಕೆಡವುದು ಸರಿಯಲ್ಲ. ಸರ್ಕಾರ ಈ ಬಗ್ಗೆ ಮತ್ತೆ ವಿಮರ್ಶೆ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ತುಳು ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ಹೇಳಿದರು. ಅವರು ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡುವುದು ಎಲ್ಲರ ಕರ್ತವ್ಯ. ಸರಕಾರ ಈ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡುವ ಕೆಲಸ ಮಾಡಬೇಕು.

ಮಂಗಳೂರಿನ ಮಿಲಾಗ್ರಿಸ್ ಚರ್ಚ್‌ನಲ್ಲಿ ಆಸ್ಕರ್‌ಗೆ ಗಣ್ಯರಿಂದ ಅಂತಿಮ ಗೌರವ

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರಕ್ಕೆ ಮಂಗಳೂರಿನ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿಂದು ಗಣ್ಯರ ಸಮ್ಮುಖದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು. ಇಂದು ಬೆಳಗ್ಗೆ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೈನ್, ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ದೇವಸ್ಥಾನ ತೆರವು: ನಾಟಕ ನಿಲ್ಲಿಸಿ ಬಿಜೆಪಿ ಸರ್ಕಾರ ಜನರಲ್ಲಿ ಕ್ಷಮೆ ಯಾಚಿಸಬೇಕು: ಹರೀಶ್ ಕುಮಾರ್

ದೇವರು, ಜಾತಿ,ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಸರ್ಕಾರ ದೇವಸ್ಥಾನಗಳನ್ನು ಧ್ವಂಸ ಮಾಡುತ್ತಿದೆ. ಇದರಿಂದ ಜನರ ಮುಂದೆ ಬಿಜೆಪಿಯವರ ಬಣ್ಣ ಬಯಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಧರ್ಮದ ರಕ್ಷಕರು, ಹಿಂದೂ ರಕ್ಷಕರು, ಹಿಂದೂಗಳನ್ನು ಗುತ್ತಿಗೆಗೆ ತೆಗೆದುಕೊಂಡವರು, ಹಿಂದೂಗಳ ಮತ ಪಡೆದು ಸರ್ಕಾರ ರಚಿಸಿದವರು ದೇವಸ್ಥಾನಗಳನ್ನು ಧ್ವಂಸ

ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆಗೆ  ಸಿಎಂಗೆ ಆಹ್ವಾನ

ಬೆಂಗಳೂರು: ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು. ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉಸ್ತುವಾರಿ ಯಲ್ಲಿ ಮುಖ್ಯಮಂತ್ರಿ ಯವರಿಗೆ ಮನವಿ ಸಲ್ಲಿಸಿ ಸಮ್ಮೇಳನ

ವ್ಯಾಪಾರ ಜಗತ್ತು ಡಿಜಿಟಲೀಕರಣಕ್ಕೆ ಸಜ್ಜಾಗಿ: ಬಿಸಿಸಿಐ ಯುಎಇ ವೆಬಿನಾರಿನಲ್ಲಿ ರಾಶಿದ್ ಹಜಾರಿ

‘ಡಿಜಿಟಲ್ ರೆವಲ್ಯೂಶನ್ ಆನ್ ಬ್ಯುಸಿನೆಸ್ ಆಂಡ್ ಎಂಟ್ರಪನರ್’ಶಿಪ್’ ಎಂಬ ವಿಷಯದಲ್ಲಿ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಯುಎಇ ವತಿಯಿಂದ ಸೆಪ್ಟೆಂಬರ್ 10ರಂದು‌ ಯಶಸ್ವಿ ವೆಬಿನಾರ್ ನಡೆಯಿತು. ಬಿಸಿಸಿಐ ಯುಎಇ ಚಾಪ್ಟರ್ ಅಧ್ಯಕ್ಷ ಎಸ್.ಎಂ ಬಶೀರ್ ತಮ್ಮ ಸ್ವಾಗತ ಮತ್ತು ಪ್ರಾಸ್ತಾವಿಕ ಭಾಷಣದಲ್ಲಿ ಬಿಸಿಸಿಐನ ಧ್ಯೇಯೋದ್ದೇಶಗಳನ್ನು ಸರಳವಾಗಿ ವಿವರಿಸಿ, ಯುಎಇ ಚಾಪ್ಟರ್ ನ ತಂಡವನ್ನು ಪರಿಚಯಿಸಿದರು.. ಉಪಾಧ್ಯಕ್ಷರಾದ

ಉಜಿರೆಯಲ್ಲಿ ಮಾಹಿತಿಕಾರ್ಯಾಗಾರ : ‘ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಎಸ್.ಡಿ.ಎಂ ಸನ್ನದ್ಧ’

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿರಾಷ್ಟ್ರೀಯ ಶಿಕ್ಷಣ ನೀತಿಯ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿಎಸ್.ಡಿ.ಎಂಕಾಲೇಜಿನ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಪ್ರಯತ್ನಗಳು ತೀವ್ರಗೊಂಡಿವೆಎಂದುಎಸ್.ಡಿ.ಎಂಕಾಲೇಜಿನ ಪ್ರಾಚಾರ್ಯರಾದಡಾ.ಸತೀಶ್ಚಂದ್ರ ತಿಳಿಸಿದರು. ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದಲ್ಲಿಪದವಿಪೂರ್ವ, ಪದವಿ ಹಂತದಅಧ್ಯಾಪಕರು, ಪ್ರಸಕ್ತ ಸಾಲಿಗೆ ಪ್ರವೇಶಾತಿ

ಸಿಎ ಪರೀಕ್ಷೆಯಲ್ಲಿ ರುಥ್ ಕ್ಲೇರ್ ಡಿ ಸಿಲ್ವ ಪ್ರಥಮ ರ್‍ಯಾಂಕ್

ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ಜುಲೈಯಲ್ಲಿ ನಡೆಸಿದ ಅಖೀಲ ಭಾರತ ಸಿಎ ಅಂತಿಮ ಪರೀಕ್ಷೆಯಲ್ಲಿ ನಗರದ ರುಥ್ ಕ್ಲೇರ್ ಡಿ’ಸಿಲ್ವ ಅವರು ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ನಗರದ ಮಲ್ಲಿಕಟ್ಟೆ ನಿವಾಸಿ ರುಥ್ ಅವರು ರೋಸಿ ಮರಿಯಾ ಡಿ’ಸಿಲ್ವ ಮತ್ತು ರಫೆರ್ಟ್ ಡಿ’ಸಿಲ್ವ ಅವರ ಪುತ್ರಿ. ನಗರದ ಸಂತ ತೆರೆಸಾ ಸ್ಕೂಲ್‌ನಲ್ಲಿ ಶಿಕ್ಷಣ ಪಡೆದು ಮಂಗಳೂರು ವಿ.ವಿ.ಯಿಂದ ದೂರ ಶಿಕ್ಷಣ ಮೂಲಕ ಪದವಿ ಪೂರ್ಣಗೊಳಿಸಿದ್ದಾರೆ.  ಈ ಬಗ್ಗೆ ಮಾತನಾಡಿದ ರ್‍ಯಾಂಕ್ ಪಡೆದ ರುಥ್ ಕ್ಲೇರ್ ಡಿ

ದ.ಕ. ಜಿಲ್ಲೆಯಲ್ಲಿ ಸೆ.17ರಂದು ಮೆಗಾ ಲಸಿಕಾ ಮೇಳ

ದ.ಕ. ಜಿಲ್ಲೆಯು ಕೋವಿಡ್ ವಿರುದ್ಧದ ಲಸಿಕೀಕರಣದಲ್ಲಿ ರಾಜ್ಯದಲ್ಲಿ ಪ್ರಸಕ್ತ 4ನೆ ಸ್ಥಾನದಲ್ಲಿದ್ದು, ಸೆ. 17ರಂದು ಮೆಗಾ ಲಸಿಕಾ ಮೇಳದ ಮೂಲಕ 1.50 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಈವರೆಗೆ ಶೇ. 80ರಷ್ಟು ಮಂದಿ ಪ್ರಥಮ ಡೋಸ್ ಪಡೆದಿದ್ದಾರೆ. ಸುಮಾರು 56,000 ಮಂದಿ ಪ್ರಸಕ್ತ ಎರಡನೆ ಡೋಸ್ ಪಡೆಯಲು ಅರ್ಹತೆ

ಮಂಗಳೂರಿನಲ್ಲಿ ರೋಗಿಗೆ ನಿಫಾ ವೈರಸ್ ಲಕ್ಷಣ ಪತ್ತೆ ವಿಚಾರ : ಉಡುಪಿ ಮತ್ತು ಕಾರವಾರ ಅಲರ್ಟ್

ಕೊರೊನಾದೊಂದಿಗೆ ನಿಫಾ ವೈರಸ್ ಮತ್ತಷ್ಟು ಆತಂಕ ತಂದೊಡ್ಡಿದ್ದು, ಇದೀಗ ಕಾರವಾರದ ವ್ಯಕ್ತಿಯೊಬ್ಬಗೆ ಸೋಂಕಿನ ಕೆಲ ಲಕ್ಷಣ ಕಂಡು ಬಂದಿದೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕಾರವಾರದ ವ್ಯಕ್ತಿ ಗೋವಾದ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದು, ಕಾರವಾರಕ್ಕೆ ಬೈಕ್ ನಲ್ಲಿ ಮಳೆಯಲ್ಲಿ ಬಂದಿದ್ದು, ಆತನಿಗೆ ನಿಫಾ ಸೋಂಕಿನ ಶಂಕೆ ಇಲ್ಲದಿದ್ದರೂ ನಿರ್ಲಕ್ಷ ಮಾಡಲು