Home Posts tagged V4News (Page 826)

ಮಹಿಳಾ ಪೊಲೀಸ್ ಅಧಿಕಾರಿಯ ಅತ್ಯಾಚಾರ, ಹತ್ಯೆ ಖಂಡಿಸಿ : ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

ಮಹಿಳೆಯ ಮೇಲೆ ನಡೆಯುತ್ತಿರುವ ಅತ್ಯಾಚಾರ ಹಾಗೂ ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಮೂಡಬಿದ್ರೆಯಲ್ಲಿ ಎಸ್‌ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಎಸ್‌ಡಿಪಿಐ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆಸಿಫ್ ಕೋಟೆಬಾಗಿಲು,ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಶೀಘ್ರ ಮುಕ್ತಾಯಗೊಳಿಸಿ ಆರೋಪಿಗಳಿಗೆ ಮರಣದಂಡನೆ

ಮುನ್ನೂರು ಗ್ರಾಮದ ಮದನಿ ನಗರದಲ್ಲಿ ತ್ಯಾಜ್ಯ ಸಮಸ್ಯೆ : ರಾತ್ರೋ ರಾತ್ರಿ ಮುಕ್ತಿ ಕಾಣಿಸಿದ ಗ್ರಾಪಂ ಸದಸ್ಯೆ

ಶೈಕ್ಷಣಿಕ ಮತ್ತು ಮೆಡಿಕಲ್ ಹಬ್ ಎಂದೇ ಗುರುತಿಸಲ್ಪಟ್ಟಿರುವ ಕುತ್ತಾರ್-ದೇರಳಕಟ್ಟೆ ಪರಿಸರದ ಪ್ರಮುಖ ರಸ್ತೆಯ ಬದಿ ಅಂದರೆ ಮದನಿ ನಗರದ ಮೂರನೆ ಅಡ್ಡರಸ್ತೆಯ ಬಳಿ ರಾಶಿ ಹಾಕಲಾಗಿದ್ದ ತ್ಯಾಜ್ಯ ವಸ್ತುವನ್ನು ಮುನ್ನೂರು ಗ್ರಾಮದ 5ನೆ ವಾರ್ಡಿನ ಸದಸ್ಯೆ ರೆಹನಾ ಭಾನು ತಡರಾತ್ರಿಯವರೆಗೂ ಸ್ವತಃ ನಿಂತು ತೆರವುಗೊಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದೊಂದು ವಾರದಿಂದ ತ್ಯಾಜ್ಯ ವಸ್ತುಗಳು ರಾಶಿ ಬೀಳುತ್ತಿತ್ತು. ಇದರಿಂದ ಪರಿಸರ ಗಬ್ಬೆದ್ದು ನಾರುತ್ತಿತ್ತಲ್ಲದೆ

ಶೈಕ್ಷಣಿಕ ಸಂಸ್ಥೆಯ ಬೆಳವಣಿಗೆಯಲ್ಲಿ ವೃತ್ತಿಪರತೆ, ತಂಡಸ್ಫೂರ್ತಿ ಅಗತ್ಯ: ಡಾ. ಡಿ.ವೀರೇಂದ್ರ ಹೆಗ್ಗಡೆ

ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳ ವ್ಯಕ್ತಿಗತ ವೃತ್ತಿಪರ ಬದ್ಧತೆಯು ಶೈಕ್ಷಣಿಕ ಸಂಸ್ಥೆ ವ್ಯಾಪಕ ಮನ್ನಣೆ ಗಳಿಸುವುದಕ್ಕೆ ಸಹಾಯಕವಾಗುತ್ತದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಾಪಕರನ್ನು ಉದ್ದೇಶಿಸಿ ಅವರು ಮಾತನಾಡಿದರು. ವೃತ್ತಿಪರ ಬದ್ಧತೆಯೊಂದಿಗೆ

ಬೃಹತ್ ಉಚಿತ ಲಸಿಕಾ ಶಿಬಿರ : ಅರಿವು ಮೂಡಿಸಲು ಜಾಥಾ

ಪುತ್ತೂರು: ಶುಕ್ರವಾರ ಪುತ್ತೂರು ಹಾಗೂ ಕಡಬ ತಾಲೂಕಿನ ಸುಮಾರು 76 ಕಡೆಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದ್ದು, ನಗರಸಭೆ ವ್ಯಾಪ್ತಿಯೊಳಗೆ ಆರು ಕಡೆ ನಡೆಯಲಿದೆ. ಈ ಮೂಲಕ ನಗರಸಭಾ ವ್ಯಾಪ್ತಿಯನ್ನು ಲಸಿಕೆ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಲಸಿಕೆ ಪಡೆಯದ ಎಲ್ಲಾ ಸಾರ್ವಜನಿಕರು ಲಸಿಕೆ ಪಡೆದು ಸಹಕರಿಸುವಂತೆ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ತಿಳಿಸಿದ್ದಾರೆ. ದ.ಕ.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಕಲಾವಿದರು ಕಷ್ಟದಲ್ಲಿದ್ದಾರೆ, ದುಡಿಯಲು ಅವಕಾಶ ಮಾಡಿಕೊಡಿ : ಹಿರಿಯ ಕಲಾವಿರದರ ಒಕ್ಕೊರಲಿನ ಆಗ್ರಹ

ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ. ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ ಸ್ಥಿತಿ ತುಂಬಾ ಕಠಿಣವಾಗಿದೆ. ಹೀಗಾಗಿ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರಾಜ್ಯದ ಮುಖ್ಯಮಂತ್ರಿಯವರಿಗೆ

ಹೆದ್ದಾರಿ ಸೂಚನಾ ಫಲಕಕ್ಕೆ ಅಳವಡಿಸಿದ ಕಟೌಟ್ ಗಳ ತೆರವು:ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಕಾರ್ಯಚರಣೆ

ಹೆದ್ದಾರಿ ಸೂಚನಾ ಫಲಕಗಳಿಗೆ ಅನದಿಕೃತವಾಗಿ ಕಟೌಟ್ ನಿರ್ಮಾಣ ಗುತ್ತಿಗೆ ಪಡೆದ ಮಂದಿ ಅಳವಡಿಸಿದ ಕಟೌಟ್ ಗಳ ಬಗ್ಗೆ ಹೆದ್ದಾರಿ ಸಂಚಾರಿಗಳಿಗೆ ಆಗುತ್ತಿರುವ ಸಮಸ್ಯೆಗಳ ಸವಿಸ್ತಾರವಾಗಿ ವಿ4 ನ್ಯೂಸ್ ವರದಿ ಪ್ರಕಟಿಸಿದ್ದು, ಈ ವರದಿಗೆ ಸ್ಪಂದನೆ ನೀಡಿದ ಹೆದ್ದಾರಿ ಇಲಾಖೆ ಹೆಜಮಾಡಿ ಟೋಲ್ ಪ್ಲಾಜಾ ಸಿಬ್ಬಂದಿಗಳ ಮೂಲಕ ಕಟೌಟ್ ತೆರವು ಕಾರ್ಯ ನಡೆದಿದೆ. ಕಟೌಟ್ ಅಳವಡಿಸಲು ಯಾವುದೇ ಸಂಸ್ಥೆಗಳು ಗುತ್ತಿಗೆ ನೀಡಿದ್ದಲ್ಲಿ ಕಂಬ ಅಳವಡಿಸುವ ಕಷ್ಟ ತಪ್ಪಿಸಲು ಹೆದ್ದಾರಿ ಪಕ್ಕದ

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಅಂಗಾಂಗ ದಾನ

ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ 23 ವರ್ಷದ ಯುವತಿ ಕವನ ಎಂಬವರು ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ರಸ್ತೆ ಅಪಘಾತಕ್ಕೀಡಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೆ.12ರಂದು ಮಧ್ಯಾಹ್ನ ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯದಿಂದ ಅವರ ಮಿದುಳು ನಿಷ್ಕ್ರೀಯಗೊಂಡಿತ್ತು. ಇದನ್ನು ತಿಳಿದ ಕವನಳ ಸಹೋದರಿ ಅಂಗಾಂಗ ದಾನಕ್ಕೆ ಮುಂದಾದರು. ಈ ಮಾಹಿತಿಯನ್ನು ಆಸ್ಪತ್ರೆಯಿಂದ ಜೀವನ ಸಾರ್ಥಕತೆ ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ

ಪುರಾತನ ದೇವಸ್ಥಾನಗಳ ತೆರವು ವಿಚಾರ : ವಿಹಿಂಪ, ಬಜರಂಗದಳದಿಂದ ಪ್ರತಿಭಟನೆ

ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್‍ನ

ಬ್ರಹ್ಮಾವರದಲ್ಲಿ ಆಂಬುಲೆನ್ಸ್ ಟಯರ್ ಸ್ಪೋಟ: ತಪ್ಪಿದ ಭಾರೀ ದುರಂತ

ಕುಂದಾಪುರ: ಅನಾರೋಗ್ಯ ಪೀಡಿತ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಆಂಬುಲೆನ್ಸ್ ನ ಟಯರ್ ಸ್ಪೋಟಗೊಂಡ ಪರಿಣಾಮ ಆಂಬುಲೆನ್ಸ್ ರಸ್ತೆ ವಿಭಾಜಕವೇರಿ ಆವರಣಗೋಡೆಗೆ ಢಿಕ್ಕಿ ಹೊಡೆದ ಘಟನೆ ಬ್ರಹ್ಮಾವರ ತಾಲೂಕಿನ ಮಾಬುಕಳ ಸೇತುವೆಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಉತ್ತರಕನ್ನಡ ಮೂಲದ ಅನಾರೋಗ್ಯಪೀಡಿತ ಮಗುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದ ಆಂಬುಲೆನ್ಸ್‌ನ ಟಯರ್ ಏಕಾಏಕಿ ಸ್ಪೋಟಗೊಂಡಿದ್ದು ಚಾಲಕನ ನಿಯಂತ್ರಣ ತಪ್ಪಿ

ಕರಾವಳಿಯ ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ ಹಾನಿಯಾಗುವುದಿಲ್ಲ : ಶಾಸಕ ವೇದವ್ಯಾಸ್ ಕಾಮತ್

ಧಾರ್ಮಿಕ ಕೇಂದ್ರಗಳ‌ನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ‌ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯು