Home Posts tagged V4News (Page 827)

ಕಲ್ಲಿಕೋಟೆಯಿಂದ ನೇಪಾಳಕ್ಕೆ ಬೈಕ್ ಯಾತ್ರೆ

ಉಳ್ಳಾಲ: ಡಬ್ಬದಲ್ಲಿ ಹಣವನ್ನು ಕೂಡಿಟ್ಟು, ಸಮಾಜಕ್ಕೆ ಸೌಹಾರ್ದದ ಸಂದೇಶ ಹಾಗೂ ಸಾಯುವ ಮುನ್ನ ಅನಿಸಿದ್ದನ್ನು ಸಾಧಿಸು ಅನ್ನುವ ಉದ್ದೇಶವನ್ನು ಮುಂದಿಟ್ಟು ಕೇರಳದ ಹವ್ಯಾಸಿ ಬೈಕ್ ರೈಡರ್‍ಗಳ ಒಂಭತ್ತು ಮಂದಿಯ ತಂಡ ಕಲ್ಲಿಕೋಟೆಯಿಂದ – ನೇಪಾಳ ಪ್ರವಾಸವನ್ನು ಆರಂಭಿಸಿದೆ. ಆ.27 ರಂದು ಪ್ರವಾಸವನ್ನು ಆರಂಭಿಸಿದ ತಂಡ ಇಂದು ದೇರಳಕಟ್ಟೆಯನ್ನು ತಲುಪಿದೆ. ಅಲ್ಲಿಂದ

ಉಡುಪಿಯಲ್ಲಿ ಸರಳವಾಗಿ ಶ್ರೀಕೃಷ್ಣ ಜನ್ಮಾಷ್ಠಮಿ

ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ.ಶ್ರೀ ಕೃಷ್ಣ ಮಠದಲ್ಲಿ ಕೊವಿಡ್ ನಿಯಮಾವಳಿ ಅನುಸರಿಸಿ ಸರಳವಾಗಿ ಜನ್ಮಾಷ್ಟಮಿ ಅಚರಿಸಲಾಯಿತು. ಪರ್ಯಾಯ ಶ್ರೀಪಾದರಿಂದ ಶ್ರೀ ಕೃಷ್ಣ ದೇವರನ್ನು ವಿಶೇಷವಾಗಿ ಅಲಂಕರಿಸಿ, ತುಳಸಿ ಅರ್ಚನೆಯನ್ನು ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪರ್ಯಾಯ ಶ್ರೀ ಈಶ ಪ್ರಿಯರು, ಅದಮಾರು ಹಿರಿಯ ಶ್ರೀ ಗಳಾದ ವಿಶ್ವ ಪ್ರಿಯ ಶ್ರೀಪಾದರು, ಕೃಷ್ಣಪುರ ಮಠದ ವಿದ್ಯಾ ಸಾಗರ ಶ್ರೀಪಾದರು, ಕಾಣಿಯೂರು ಮಠದ ವಿಶ್ವ ವಲ್ಲಭ ಶ್ರೀ

ಪುತ್ತೂರು ನಗರಸಭೆ ಅಧ್ಯಕ್ಷರಿಗೆ ಪೌರ ಕಾರ್ಮಿಕರಿಂದ ಹುಟ್ಟುಹಬ್ಬದ ಶುಭ ಹಾರೈಕೆ

ಪುತ್ತೂರು: ಸ್ವಚ್ಚ ಪುತ್ತೂರು, ಸುಂದರ ಪುತ್ತೂರಿಗೆ ಆದತ್ಯೆಯ ಗುರಿ ಹೊಂದಿರುವ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ 57 ನೇ ಹುಟ್ಟು ಹಬ್ಬದ ಅಂಗವಾಗಿ ನಗರಸಭೆ ಪೌರ ಕಾರ್ಮಿಕರು ತಮ್ಮ ಕಾಯಕಕ್ಕೆ ಹೊರಡುವ ಮುಂದೆ ನಗರಸಭೆ ಅಧ್ಯಕ್ಷರಿಗೆ ಹೂ ಗುಚ್ಚಗಳನ್ನು ನೀಡುವ ಮೂಲಕ ಹುಟ್ಟುಹಬ್ಬದ ಶುಭಾಶಯಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರೊಂದಿಗೆ ಚಹಾ ಸವಿದು, ಉಪಹಾರ ಮಾಡಿದರು. ನಗರಸಭೆ ಅಧ್ಯಕ್ಷರು ಪ್ರತಿ ದಿನ ಬೆಳಿಗ್ಗೆ ದ್ವಿಚಕ್ರ ವಾಹನದಲ್ಲಿ ಒಂದು

ಕೋರಮಂಗಲದಲ್ಲಿ ಭೀಕರ ಅಪಘಾತ: ಏಳು ಮಂದಿ ಮೃತ್ಯು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಮಿಳುನಾಡಿನ ಹೊಸೂರು ಶಾಸಕ ವೈ ಪ್ರಕಾಶ್ ಅವರ ಪುತ್ರ, ಭಾವಿ ಸೊಸೆ ಸಹಿತ ಏಳು ಮಂದಿ ಮೃತಪಟ್ಟಿರುವ ದುರ್ಘಟನೆ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಹೊಸೂರು ಶಾಸಕ ವೈ.ಪ್ರಕಾಶ್ ಅವರ ಪುತ್ರ ಕರುಣಾಸಾಗರ್, ಭಾವಿ ಸೊಸೆ ಬಿಂದೂ(28), ಕೇರಳ ಮೂಲದ ಅಕ್ಷಯ್ ಗೋಯಲ್, ಇಶಿತಾ(21), ಧನುಷಾ(21), ಹುಬ್ಬಳ್ಳಿಯ ರೋಹಿತ್ ಹಾಗೂ ಹರ್ಯಾಣ ಮೂಲದ ಉತ್ಸವ್ ಮೃತಪಟ್ಟವರು

ಅವಳಿ ನಗರಕ್ಕೆ ಮೂಲ ಸೌಕರ್ಯ ಕಲ್ಪಿಸದ ಬಿಜೆಪಿಗೆ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ : ರಕ್ಷಾ ರಾಮಯ್ಯ

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿ ನಗರ ಮೂಲಭೂತ ಸೌಕರ್ಯದಲ್ಲಿ ರಾಜ್ಯದಲ್ಲಿಯೇ ಅತ್ಯಂತ ಪರಮ ನಿರ್ಲಕ್ಷ್ಯಕ್ಕೆ ಒಳಗಾದ ಪ್ರದೇಶವಾಗಿದ್ದು, ಆಡಳಿತ ನಡೆಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರಮುಖರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಆರೋಪಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ದ್ರುವನಾರಾಯಣ್ ಅವರ ಜತೆ

ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ- ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರು ಇಂದು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು

ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿದ ಸಚಿವ ಎಸ್.ಅಂಗಾರ

ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ತುಳು ಸಾಹಿತ್ಯ ಅಕಾಡೆಮಿಯ ಭವನದ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‍ಸರ್ ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ತುಳು ಸಾಹಿತ್ಯ ಅಕಾಡೆಮಿಯ

ರಾಷ್ಟ್ರೀಯ ಶಿಕ್ಷಣ ನೀತಿಗೆ ಸಿಎಫ್‌ ಐನಿಂದ ವಿರೋಧ: ವಿವಿ ಆವರಣದಲ್ಲಿ ಚಾಲನೆ ನೀಡುತ್ತಿದ್ದಂತೆ ಪ್ರತಿಭಟನೆ

ಕೊಣಾಜೆ ವಿವಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುತ್ತಿದ್ದಂತೆಯೇ ಕ್ಯಾಂಪಸ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಗಳಾ ಸಭಾಂಗಣದ ಹೊರಾಂಗಣದಲ್ಲಿ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು ಧಿಕ್ಕಾರ ಘೋಷಣೆ ಕೂಗಿದ್ದಾರೆ. ತಕ್ಷಣ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಸಿಎಫ್‌ಐ

ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್ : ಇಂಡಿಯನ್ ಐಡಲ್ ಪೈನಲಿಸ್ಟ್ ನಿಹಾಲ್ ತಾವ್ರೋಗೆ ಸನ್ಮಾನ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಇಂಡಿಯನ್ ಐಡಲ್ ಫೈನಲಿಸ್ಟ್ ನಿಹಾಲ್ ತಾವ್ರೋ ಅವರಿಗೆ ಭಾನುವಾರ ಉಡುಪಿ ಮಳಿಗೆಯಲ್ಲಿ ಅಭಿನಂದಿಸಲಾಯಿತು. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಸಮಾಜ ಸೇವಕರಾದ ಲೀಲಾಧರ್ ಶೆಟ್ಟಿ ಮಜೂರು,ಹಾಸ್ಯ ಭಾಷಣಕಾರ್ತಿ ಸಂಧ್ಯಾ ಪೈ ಅವರು ನಿಹಾಲ್ ತಾವ್ರೋ ಗೆ ಶಾಲು ಹೊದಿಸಿ ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ವೇಳೆ ಮಾತನಾಡಿದ ಸಂಧ್ಯಾ ಪೈ ನಿಹಾಲ್ ತನ್ನ

ರಂಗ ನಿನ್ನ ಆಲ್ಬಾಂ ಸಾಂಗ್ ಬಿಡುಗಡೆ

ಹಿಂದೂಸ್ತಾನಿಯ ಖ್ಯಾತ ಸಂಗೀತ ಕಲಾವಿದೆ, ಕರಾವಳಿಯ ಪ್ರತಿಭೆ ವಿದ್ವಾನ್ ವಿಭಾ ಎಸ್.ನಾಯಕ್ ಅವರು ಸಂಗೀತ ನಿರ್ದೇಶಿಸಿ, ತಾವೇ ಹಾಡಿರುವ ’ರಂಗ ನಿನ್ನ’ ಎಂಬ ಶ್ರೀಕೃಷ್ಣ ದೇವರ ಕುರಿತ ಭಕ್ತಿ ಪ್ರಧಾನ ಅಲ್ಬಾಂ ಸಾಂಗ್ ಅನಾವರಣಗೊಂಡಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ರಂಗ ನಿನ್ನ ಅಲ್ಬಾಂ ಸಾಂಗ್ ಬಿಡುಗಡೆ ಸಮಾರಂಭ ನಡೆಯಿತು. ಶ್ರೀಕೃಷ್ಣ ಜನ್ಮಾಷ್ಠಮಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣನ ಕುರಿತು ಶ್ರೀ ವ್ಯಾಸರಾಯರು ಬರೆದಿರುವ ಹಾಡಿಗೆ ವಿದ್ವಾನ್ ವಿಭಾ ಎಸ್.ನಾಯಕ’