ಆಸ್ಕರ್ ಫೆರ್ನಾಂಡಿಸ್ ಮೃತದೇಹ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ತಲುಪಿದ್ದು ಆಸ್ಕರ್ ಮೃತದೇಹ ತಲುಪಿದ್ದು ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ, ಫಾದರ್ ಡೆನ್ನಿಸ್, ಫಾದರ್ ಚಾರ್ಲ್ಸ್ ಉಪಸ್ಥಿತಿಯಲ್ಲಿ ಪ್ರಾರ್ಥನೆ ನಡೆಯಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಆಗಮಿಸಿದ್ದಾರೆ. ಬಳಿಕ ಅವರ ಪಾರ್ಥಿವ
ಉಡುಪಿ: ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮಂಗಳೂರಿನ ಎನಾಪೋಯ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ಇಂದು ಬೆಳಗ್ಗೆ 9:15 ಕ್ಕೆ ಉಡುಪಿ ಶೋಕ ಮಾತಾ ದೇವಾಲಯಕ್ಕೆ ಆಗಮಿಸಲಿದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಕುಟುಂಬದ ಇಚ್ಛೆಯಂತೆ ಬೆಳಿಗ್ಗೆ 9:30 ಕ್ಕೆ ಪ್ರಾರ್ಥನಾ ವಿಧಿಗಳನ್ನು
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿನ್ನೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ,
ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದ್ದಾರೆ.ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸೆಪ್ಟೆಂಬರ್ 17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ,
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭಾ ಸಂಸದ ಆಸ್ಕರ್ ಫೆರ್ನಾಂಡೀಸ್ ರ ನಿಧನದಿಂದ ದುಃಖವಾಗಿದೆ. ಈ ನೋವಿನ ವೇಳೆಯಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಪ್ರಾರ್ಥನೆ ಮತ್ತು ಸಂತಾಪಗಳನ್ನು
ಭೋಪಾಲ್: ಭೂಪೇಂದ್ರಬಾಯ್ ಪಟೇಲ್ ಸೋಮವಾರ ಮಧ್ಯಾಹ್ನ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲರಾದ ಆಚಾರ್ಯ ದೇವವ್ರತ ಅವರು ಪ್ರಮಾಣವಚನ ಬೋಧಿಸಿದರು. ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷವು ಅವರನ್ನು ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಿತು. ರಾಜ್ಯ ವಿಧಾನಸಭೆಯಲ್ಲಿ ಒಟ್ಟು 182 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 112 ಸದಸ್ಯರನ್ನು ಹೊಂದಿದೆ. ಅವರೆಲ್ಲ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು. ಶನಿವಾರ
ಮಂಗಳೂರು:ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶರಾಗಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಹಿನ್ನೆಲೆಯಲ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.
ನಟನೆ ಎಂಬುವುದು ಒಂದು ಕಲೆ ಆ ಕಲೆಯನ್ನು ಪ್ರದರ್ಶಿಸುವ ಜಾಣ್ಮೆ ಎಲ್ಲರಲ್ಲಿಯೂ ಇರುವುದಿಲ್ಲ, ಇನ್ನೂ ಕೆಲವರಿಗೆ ಅವಕಾಶ ದೊರೆಯುವುದಿಲ್ಲ, ಅದರೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡವರು ಉತ್ತಮ ನಟನಾಗಬಹುದು. ನಟನೆ ಎಂಬುವುದು ಜೀವವಿಲ್ಲದ ಪಾತ್ರಕ್ಕೆ ಜೀವ ತುಂಬುವುದು. ತನನ್ನು ತಾನು ಆ ಪಾತ್ರಕ್ಕೆ ಅರ್ಪಿಸಿಕೊಳ್ಳಬೇಕಾಗುತ್ತದೆ. ಎಂತಹ ಪಾತ್ರವಾದರು ನಿರ್ವಹಿಸುತ್ತೇನೆ ಎಂಬ ಗಟ್ಟಿ ನಿರ್ಧಾರ ನಮ್ಮಲ್ಲಿರಬೇಕು ಆಗ ಮಾತ್ರ ಆ ಪಾತ್ರಕ್ಕೆ ಜೀವ ಬರುತ್ತದೆ. ಅಂತಹ
ಬೆಂಗಳೂರು: ದೇಶದಲ್ಲಿ ದಿನದಿಂದ ದಿನಕ್ಕೆ ನಿರುದ್ಯೋಗ ಸಮಸ್ಯೆ ಬಿಗಡಾಯಿಸುತ್ತಿದ್ದು, ತಕ್ಷಣ ಉದ್ಯೋಗ ಒದಗಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲು ಸೆಪ್ಟೆಂಬರ್ 17 ರಂದು “ರಾಷ್ಟ್ರೀಯ ನಿರುದ್ಯೋಗ ದಿನ” ಆಚರಿಸಲಾಗುವುದು ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ
ನಮ್ಮ ದೇಶದ ಸಂಸ್ಕೃತಿಯಲ್ಲಿ ಮಹಿಳೆಯರನ್ನು ಹೆಚ್ಚಾಗಿ ಗೌರವಿಸಲಾಗುತ್ತದೆ. ಇಂದು ಮಹಿಳೆಯರು ಹಲವಾರು ರಂಗಗಳಲ್ಲಿ, ವಿವಿಧ ವ್ಯವಹಾರ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ತಮ್ಮನ್ನು ರಾಜಕೀಯ ರಂಗದಲ್ಲಿಯೂ ಪ್ರತಿನಿಧಿಸುತ್ತಿದ್ದಾರೆ. ಹಾಗಿದ್ದರೂ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ದಿನೇ ದಿನೇ ಹೆಚ್ಚುತ್ತಿರುವ ಆತಂಕಕಾರಿ ಘಟನೆಗಳು, ಅವರ ಮೇಲೆ ಅವ್ಯಾಹತವಾಗಿ ನಡೆಯುತ್ತಿರುವ ದೌರ್ಜನ್ಯಗಳು ನಮ್ಮ ಸಭ್ಯ ಸಮಾಜವನ್ನು ಕಂಗೆಡಿಸಿದೆ. ನಮ್ಮ


















