Home Posts tagged V4News (Page 831)

ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಂತೆ ದ.ಕ. ಜಿಲ್ಲಾ ಶ್ರೀರಾಮ ಸೇನೆ ಒತ್ತಾಯ

ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ

ದೇರಳಕಟ್ಟೆಯಲ್ಲಿ ಗೂಡ್ಸ್ ವಾಹನ ಪಲ್ಟಿ: ಚಾಲಕ ಅಪಾಯದಿಂದ ಪಾರು

ದೇರಳಕಟ್ಟೆ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿರುವ ಘಟನೆ ಕುತ್ತಾರು ನಿತ್ಯಾನಂದನಗರ ಬಳಿ ಇಂದು ನಡೆದಿದೆ. ದೇರಳಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ಹಣ್ಣುಹಂಪಲುಗಳನ್ನು ಸಾಗಾಟ ನಡೆಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರಳಿದೆ. ಟೆಂಪೋದಲ್ಲಿ ಚಾಲಕ ಮಾತ್ರ ಇದ್ದು, ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ,ಅಡ್ಡಿಯುಂಟಾಗಿದ್ದ ರಸ್ತೆ ಸಂಚಾರವನ್ನು

ಪತ್ರಕರ್ತ ಧೀರಜ್ ಪೊಯ್ಯಕಂಡ “ಪರಾಶರ” ಕಾದಂಬರಿ ಬಿಡುಗಡೆ

ಮಂಗಳೂರು: ಪತ್ರಕರ್ತ ಧೀರಜ್ ಪೊಯ್ಯಕಂಡ ಅವರ ಎರಡನೇ ಕಾದಂಬರಿ ’ಪರಾಶರ’ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಂಡಿತು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಹಾಗೂ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್ ಆರ್. ಅವರು ಕಾದಂಬರಿಯನ್ನು ಬಿಡುಗಡೆಗೊಳಿಸಿದರು. ಲೇಖಕ ಧೀರಜ್ ಪೊಯ್ಯಕಂಡ ಅವರು ಮಾತನಾಡಿ, ಸೋಶಿಯಲ್ ಮಿಡಿಯಾಗಳ ದುರ್ಬಳಕೆ ಹಾಗೂ ಅದರಿಂದಾಗುವ ದುಷ್ಪರಿಣಾಮದ ಎಳೆಯನ್ನಿಟ್ಟುಕೊಂಡು ಈ ಕೈಂ, ಸಸೆನ್ಸ್ ಕಾದಂಬರಿ ರಚಿಸಲಾಗಿದೆ. ಪ್ರಸ್ತುತ

ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆ: 2021 ನೇ ಸಾಲಿನ ನೊಂದಾವಣಿ ಪ್ರಕ್ರಿಯೆ ಪ್ರಾರಂಭ

ಮಂಗಳೂರು: ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ 2021ನೇ ಸಾಲಿನ ದಾಖಲಾತಿಯು ಪ್ರಾರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅತ್ತಾವರ ಕೆ.ಎಂ.ಸಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಜಾನ್ ರಾಮಪುರಮ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯು ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ

ಅಘ್ಫಾನ್‌ನಲ್ಲಿ ಮಂಗಳೂರಿಗರು ಬಾಕಿಯಾಗಿದ್ದಲ್ಲಿ ನೆರವಿಗೆ ಕ್ರಮ : ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ 

ಮಂಗಳೂರು ಕಮೀಷರೇಟ್ ವ್ಯಾಪ್ತಿಯ ಒಟ್ಟು 7 ಮಂದಿ ಅಘ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ.  ಕಳೆದ ಕೆಲ ಸಮಯದಿಂದ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗಳ ಹಿನ್ನೆಲೆಯಲ್ಲಿ ಕಾಬೂಲ್‌ನಿಂದ ದಿಲ್ಲಿಗೆ ಏರ್‌ಲಿಫ್ಟ್ ಆಗಿ ಕಳೆದರಡು ದಿನಗಳಿಂದ ತಮ್ಮ ಮನೆಗಳಿಗೆ ಆಗಮಿಸಿರುವ ಏಳು ಮಂದಿ ಮಂಗಳೂರಿಗರ ಜತೆ ತಮ್ಮ ಕಚೇರಿಯಲ್ಲಿ ಅವರ ಕುಶೋಲಪರಿ ನಡೆಸಿದರು. ಪ್ರಸಾದ್ ಆನಂದ್, ದಿನೇಶ್

ಗಂಗೊಳ್ಳಿಯಲ್ಲಿ ಗಾಂಜಾ ಹಂಚಿಕೆಯಲ್ಲಿ ತೊಡಗಿದಾತನ ಬಂಧನ

ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಹಂಚಿಕೆಯಲ್ಲಿ ತೊಡಗಿಸಿಕೊಂಡಿದ್ದ ರವಿರಾಜ್ ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ಎಸ್ಪಿ, ಡಿಎಸ್ಪಿ, ಮಾರ್ಗದರ್ಶನದಲ್ಲಿ ಗಂಗೊಳ್ಳಿ ಪೊಲೀಸ್ ಠಾಣಾಧಿಕಾರಿ ನಂಜಾ ನಾಯ್ಕ ಹಾಗೂ ಎಎಸ್ಐ ರಘುರಾಮ್ ಮತ್ತು ಪೊಲೀಸ್ ಸಿಬ್ಬಂದಿಗಳ ಜಂಟಿ ಕಾರ್ಯಾಚರಣೆಯಲ್ಲಿ ಆಪಾದಿತ ರವಿರಾಜ್ ಎಂಬಾತನನ್ನು ಬಂಧಿಸಿ ಮಾರಾಟ ಮಾಡುತ್ತಿದ್ದ ಗಾಂಜಾವನ್ನು ವಶ ಪಡಿಸಿಕೊಂಡು ಪ್ರಕರಣವನ್ನು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ

ಮೈಸೂರಿನಲ್ಲಿ ವಿದ್ಯಾರ್ಥಿ ಮೇಲೆ ಗ್ಯಾಂಗ್‌ರೇಪ್ ನಡೆದಿರುವ ಶಂಕೆ..!

ಮೈಸೂರು:  ಮೈಸೂರಿನಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾಂಸ್ಕೃತಿಕ ನಗರಿ ಜನತೆಯ ನಿದ್ದೆಗಡಿಸಿದೆ. ಇದೀಗ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿದ್ದು ಜನತೆಯನ್ನು ಆತಂಕಕ್ಕೆ ನೂಕಿದೆ. ಹಾಡುಹಗಲಲ್ಲೇ ಯುವಕನಿಗೆ ಗುಂಡು ಹಾರಿಸಿ ಜ್ಯುವೆಲಲ್ಲರಿ ಶಾಪ್ ದರೋಡೆ, ಯುವತಿಗೆ ಚಾಕುವಿನಿಂದ ಇರಿತ ಪ್ರಕರಣಗಳು ಮಾಸುವ ಮುನ್ನವೇ ಬೆಚ್ಚಿ ಬೀಳಿಸುವ ಸುದ್ದಿಯೊಂದು ಹೊರಬಿದ್ದಿದೆ. ಮೈಸೂರು ನಿವಾಸಿ ಖಾಸಗಿ

ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬಂಟ್ವಾಳ: ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಬ್ರಹ್ಮರಕೂಟ್ಲು ಹಾಗೂ ಕಳ್ಳಿಗೆ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯಲ್ಲಿ ನಡೆಯಿತು. ಮಾಜಿ ಸಚಿವ, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು ಶಿಕ್ಷಣ ಪ್ರಗತಿಯ ಸಂಕೇತ ಆದರೆ ಹಿಂದೆಲ್ಲಾ ಎಲ್ಲರಿಗೂ ಶಿಕ್ಷಣ ಪಡೆಯುವ

1ನೇ ತರಗತಿಯಿಂದ ಶಾಲೆ ಆರಂಭಿಸಿ: ಪ್ರಕಾಶ್ ಅಂಚನ್ ನಿಯೋಗದಿಂದ ಶಿಕ್ಷಣ ಸಚಿವರಿಗೆ ಮನವಿ

ಬಂಟ್ವಾಳ: ಶಾಸಕ ರಾಜೇಶ್ ನಾಕ್ ನೇತೃತ್ವದಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅವರಿದ್ದ ನಿಯೋಗ ಬುಧವಾರ ಬೆಂಗಳೂರಿನ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ಭೇಟಿ ಮಾಡಿತು. ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿರುವ ಶಾಲೆಗಳನ್ನು ಒಂದನೇ ತರಗತಿಯಿಂದಲೇ ಆರಂಭಿಸಬೇಕು ಎನ್ನುವ ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು 9 ಮತ್ತು 10ನೇ ತರಗತಿಗಳು ಆರಂಭಗೊಂಡ ಬಳಿಕ ಎರಡು ದಿನದಲ್ಲಿ

ನೀರುಮಾರ್ಗ ಗ್ರಾ.ಪಂ.ನಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ: ಬಿಜೆಪಿ ಬೆಂಬಲಿತ ಸದಸ್ಯರಿಂದ ಪ್ರತಿಭಟನೆ

ಮಂಗಳೂರಿನ ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅಭಿವೃದ್ದಿ ವಿಚಾರದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತ ಸದಸ್ಯರು ಧ್ವನಿ ಎತ್ತಿದ್ದಾರೆ. ಮಾತ್ರವಲ್ಲದೆ ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.