Home Posts tagged V4News (Page 832)

ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಇಲ್ಲ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು,: ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ಅವರು ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ರಾಜ್ಯದ ಪೊಲೀಸ್ ಇಲಾಖೆ ಅತ್ಯಂತ ದಕ್ಷ, ನಿಷ್ಪಕ್ಷಪಾತ ಹಾಗೂ

ಹಾಸನ ಬಳಿಯಲ್ಲಿ ರಸ್ತೆ ಅಪಘಾತ : ಆಸ್ಪತ್ರೆಗೆ ಸಾಗಿಸಲು ನೆರವಾದ ನಳಿನ್ ಕುಮಾರ್

ರಾಜ್ಯ ಪ್ರವಾಸದಿಂದ ಮರಳಿ ಮಂಗಳೂರಿಗೆ ಬರುವಾಗ ಹಾಸನ ಬಳಿಯಲ್ಲಿ ರಸ್ತೆ ಅಪಘಾತದಲ್ಲಿ ಸಿಲುಕಿದ್ದ ಸಾರ್ವಜನಿಕರನ್ನು ಸುರಕ್ಷಿತವಾಗಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲು ಬಿಜೆಪಿಯ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೆರವಾಗಿದ್ದಾರೆ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ತಕ್ಷಣವೇ ನಳಿನ್ ಕುಮಾರ್ ಕಟೀಲ್ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.

ಸರಸ್ವತಿ ಕಾಮತ್ ಮೇಲೆ ಹಲ್ಲೆ ಪ್ರಕರಣ: ಹರೀಶ್ ಕಂಜಿಪಿಲಿ ಸೇರಿದಂತೆ 14 ಮಂದಿಗೆ ಜೈಲು ಶಿಕ್ಷೆಯ ತೀರ್ಪು

ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದ ಶ್ರೀಮತಿ ಸರಸ್ವತಿ ಕಾಮತ್ ಅವರ ಮೇಲೆ ಚುನಾವಣೆಯ ಸಂದರ್ಭದಲ್ಲಿ ಹಲ್ಲೆ ನಡೆಸಿದ ಕೇಸಿಗೆ ಒಳಗಾಗಿದ್ದ ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿಗೆ ಸುಳ್ಯ ನ್ಯಾಯಾಲಯ ಜೈಲು ಶಿಕ್ಷೆಯ ತೀರ್ಪು ನೀಡಿದೆ. 2013 ರ ಚುನಾವಣೆ ಸಂದರ್ಭ ಮರ್ಕಂಜದ ಕುದ್ಕುಳಿ ಎಂಬಲ್ಲಿ ಘಟನೆ ನಡೆದಿತ್ತು.ಹರೀಶ್ ಕಂಜಿಪಿಲಿ ಮತ್ತು ಇತರ 14 ಮಂದಿ ಮದುವೆ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದಾಗ ತನ್ನ ವಾಹನವನ್ನು ಅಡ್ಡಗಟ್ಟಿ,

ಶಕ್ತಿನಗರದಲ್ಲಿ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಇಂಜಿನಿಯರಿಂಗ್ ಘಟಕ, ಮಂಗಳೂರು, ಉಪವಿಭಾಗದ ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.ಶಕ್ತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಸುಮಾರು 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ನೂತನ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೂತನ ರೀತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಗೊಂಡಿದೆ. ಮುಂದಿನ ದಿನಗಳಲ್ಲಿ ಇಲ್ಲಿನ ಜನತೆಗೆ ಈ

ಕೇರಳದಲ್ಲಿ ನಿಫಾ ವೈರಸ್ ಹಾವಳಿ – ರಾಜ್ಯದಲ್ಲೂ ಬಿಗಿ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಕೇರಳದಲ್ಲಿ ಮತ್ತೆ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವುದರಿಂದ ರಾಜ್ಯದಲ್ಲೂ ಬಿಗಿ ಕ್ರಮ ಕೈಗೊಳ್ಳಲಾಗವುದು. ಅಗತ್ಯ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಕೇರಳ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ಕೆಲವು ನಿರ್ಬಂಧಗಳನ್ನು ಹೇರಲಾಗಿದ್ದು, ಅದನ್ನು ಇನ್ನಷ್ಟು ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದ ಹೇಳಿದರು. ನಿಫಾ

ರಾಜ್ಯಾದ್ಯಂತ ತಾಂಡವಾಡುತ್ತಿದೆ ಭ್ರಷ್ಟಾಚಾರ: ಮುರಳೀಧರ ರೈ ಮಠಂತಬೆಟ್ಟು ಆರೋಪ

ವಿಟ್ಲ: ರಾಜ್ಯ ಸರ್ಕಾರ ಅನುದಾನ ಕೊಡುವುದಕ್ಕೆ ಗುತ್ತಿಗೆದಾರರಿಂದ ಶೇ.15ಕ್ಕೂ ಮೇಲ್ಪಟ್ಟು ವಸೂಲಿ ಮಾಡುತ್ತಿದೆ. ಕಾಂಗ್ರೆಸ್ ಮುಕ್ತವಾದರೆ ಭ್ರಷ್ಟಾಚಾರ ಮುಕ್ತ ಎಂಬ ಹೇಳಿಕೆಯನ್ನು ಹೇಳಿರುವ ಪುತ್ತೂರು ಶಾಸಕರಿಗೆ ಇದು ಗಮನದಲ್ಲಿ ಇಲ್ಲವಾ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚ ನೋಡಲ್ಲ ಎಂಬ ಗಾದೆ ಮಾತಿನಂತೆ ಬಿಜೆಪಿ ಸರ್ಕಾರದ ಪರಿಸ್ಥಿಯಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು ಹೇಳಿದರು. ವಿಟ್ಲದಲ್ಲಿ ಕರೆದ

ಆನೆಯ ಸೀನಿಗೆ ಹೆದರಿ ಓಡಿದ ವ್ಯಕ್ತಿ ಕಾಲು ಜಾರಿ ಬಿದ್ದು ಮೃತ್ಯು

ಮೂಡುಬಿದಿರೆ : ಆನೆ ಸೀನಿದ ಶಬ್ದಕ್ಕೆ ಹೆದರಿ ಓಡಿ ಹೋಗುವಾಗ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡ್ಯಡ್ಕ ದೇವಸ್ಥಾನದಲ್ಲಿ ಸೋಮವಾರ ಸಂಜೆ ನಡೆದಿದೆ. ಕೊಡ್ಯಡ್ಕ ದೇವಸ್ಥಾನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಕಳ ಇಂಡಸ್ಟ್ರಿಯಲ್ ಬಳಿಯ ನಿವಾಸಿ ವಿಶ್ವನಾಥ ದೇವಾಡಿಗ (58ವ) ಮೃತಪಟ್ಟ ವ್ಯಕ್ತಿ. ಇವರು ದೇವಸ್ಥಾನದ ಆನೆಯ ಸಮೀಪ ಕೆಲಸ ಮಾಡುತ್ತಿದ್ದ ಸಂದರ್ಭ ಆನೆ ಸೀನಿದ್ದು ಈ ಸಂದರ್ಭ ಹೆದರಿ ಓಡಿ ಹೋಗುವಾಗ ಬಿದ್ದು ತಲೆಗೆ ಏಟು ಬಿದ್ದು ಗಂಭೀರ

ಬಣ್ಣದ ಲೋಕದಲ್ಲಿ ಮಿಂಚುತ್ತಿರುವ ಯುವನಟ ಶಶಿರಾಜ್

ಕನಸು ಕಾಣುವುದು ಬಹಳ ಸುಲಭ ಆ ಕನಸನ್ನು ನನಸಾಗುವುದು ಕಷ್ಟ. ಗುರಿ, ಛಲ, ಸತತ ಪರಿಶ್ರಮ ನಮ್ಮಲ್ಲಿದ್ದರೆ ನಾವು ಏನು ಬೇಕಾದರೂ ಸಾಧಿಸಬಹುದು. ಸಾವಿರ ಕಷ್ಟಗಳ ಮಧ್ಯೆಯು ಗುರಿ ತಲುಪುತ್ತೇನೆ ಎಂಬ ಛಲ ಗುರಿ ತಲುಪಲು ಎಷ್ಟು ಸಾಧ್ಯವೋ ಅಷ್ಟು ಪರಿಶ್ರಮ ನಮ್ಮಲ್ಲಿರಬೇಕು ಆಗ ಮಾತ್ರ ನಮ್ಮ ಭವಿಷ್ಯದ ದಾರಿಸುಗಮವಾಗಿರುತ್ತದೆ.ಇಂತಹ ಸವಾಲನ್ನು ಗೆದ್ದು ತನ್ನ ಕನಸನ್ನು ನನಸು ಮಾಡಿಕೊಂಡವರಲ್ಲಿ ಶಶಿರಾಜ್ ಕೂಡಾ ಒಬ್ಬರು. ಮೂಲತಃ ಬೆಂಗಳೂರಿನವರಾದ ಶಶಿರಾಜ್ ಒಬ್ಬ ಕಲಾವಿದ, ನಟ.

ಉಪ್ಪಿನಂಗಡಿ:ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ, ಬಾಲಕ ಮೃತ್ಯು, ತಾಯಿ ಸ್ಥಿತಿ ಗಂಭೀರ

ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್‌ನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ. ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಅವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕ ತನ್ನ ತಾಯಿಯ ಜೊತೆ ತೆರಳುತ್ತಿದ್ದ ವೇಳೆ

ಉದ್ಯಮಿ ಕಜಂಗೆ ಸುದರ್ಶನ್ ಜೈನ್ ನಿಧನ

ಮೂಡುಬಿದರೆ ಎಸ್‌ಜೆಆರ್ ಟಿಂಬರ್ಸ್ ಮಾಲಕ, ರಿಯಲ್ ಎಸ್ಟೇಟ್ ಉದ್ಯಮಿ ಕಜಂಗೆ ಸುದರ್ಶನ್ ಜೈನ್(56) ಅವರು ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಮೂಡುಬಿದರೆ ರೋಟರಿ ಮಾಜಿ ಕಾರ್ಯದರ್ಶಿ, ಜೈನ್ ಮಿಲನ್ ಉಪಾಧ್ಯಕ್ಷರಾಗಿ, ಧಾರ್ಮಿಕ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೂಡುಬಿದರೆಯ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಸುದರ್ಶನ್ ಅವರಿಗೆ ಸದ್ಗತಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶಾಸಕ ಉಮಾನಾಥ