Home Posts tagged V4News (Page 833)

ಉಪ್ಪಿನಂಗಡಿಯಲ್ಲಿ ಮೀನು ಅಂಗಡಿಗೆ ಬೆಂಕಿ ಹಚ್ಚಿದ್ದ ಪ್ರಕರಣ : ಹಿಂಜಾವೇಯಿಂದ ಪ್ರತಿಭಟನೆ

ಉಪ್ಪಿನಂಗಡಿ: ಹಳೇಗೇಟು ಬಳಿ ಕೆಲ ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಸಿ ಮೀನು ಮಾರಾಟದ ಅಂಗಡಿಗೆ ಬೆಂಕಿ ಹಚ್ಚಿರುವ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಸೆ. 6ರಂದು ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಯಿತು. ಬೆಂಕಿ ಹಚ್ಚಿರುವ ಘಟನೆ ಖಂಡಿಸಿ ಹಿಂದೆ ರಾಸ್ತಾರೋಕೋ ನಡೆಸಲಾಗಿತ್ತು.

ಬಜಾಲ್ ನಿವಾಸಿ ವಾಲ್ಟರ್ ಮೊಂತೆರೋ ವಿಧಿವಶ:ಸೆ.6ರಂದು ಹೋಲಿ ಸ್ಪಿರಿಟ್ ಚರ್ಚ್‌ನಲ್ಲಿ ಅಂತ್ಯಸಂಸ್ಕಾರ

ಮಂಗಳೂರಿನ ಬಜಾಲ್ ನಿವಾಸಿಯಾಗಿರುವ ವಾಲ್ಟರ್ ಮೊಂತೆರೋ(77) ಅವರು ಭಾನುವಾರದಂದು ನಿಧನರಾದರು. ಅವರು ಪುತ್ರಿಯರಾದ ವಾಣಿ ಐವನ್, ಸವಿತಾ ಲ್ಯಾನ್ಸಿ, ಸುನಿತಾ ನೋಬರ್ಟ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಸೆಪ್ಟಂಬರ್ 6ರಂದು ಬೆಳಗ್ಗೆ 9.30ಕ್ಕೆ ಬಜಾಲ್‌ನ ಇವಾನಿ ಹೌಸ್‌ನಲ್ಲಿ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ 10 ಗಂಟೆಗೆ ಬಜಾಲ್‌ನ ಹೋಲಿ ಸ್ಪಿರಿಟ್ ಚರ್ಚ್‌ನಲ್ಲಿ ವಿಶೇಷ ಪೂಜೆ ನೆರವೇರಿದ ಬಳಿಕ ಅಂತ್ಯಸಂಸ್ಕಾರ ನೆರವೇರಲಿದೆ.  

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ವಿಕೇಶ್ ಶೆಟ್ಟಿ

ಬಂಟ್ವಾಳ: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಯೊಬ್ಬರನ್ನು ಯಾವುದೇ ಝೀರೋ ಟ್ರಾಫಿಕ್ ಇಲ್ಲದೆ ಕೇವಲ ಇಂಡಿಕೇಟರ್ ಹಾಕುವ ಮೂಲಕ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸುಮಾರು 19 ಕಿ.ಮೀ. ದೂರವನ್ನು ಕೇವಲ 8.5 ನಿಮಿಷದಲ್ಲಿ ತಲುಪಿಸಿದ ಮಾಣಿಯ ಯುವಕ ಮಂಡಲ ಸದಸ್ಯರೂ ಆಗಿರುವ ಯುವ ಕಾಂಗ್ರೆಸ್ ವಲಯಾಧ್ಯಕ್ಷ ವಿಕೇಶ್ ಶೆಟ್ಟಿ ಅವರ ಕಾರ್ಯ ಈಗ ಪ್ರಶಂಸೆಗೆ ಪಾತ್ರವಾಗಿದೆ. ಗುರುವಾರ ರಾತ್ರಿ ಮಾಣಿ ಸಮೀಪ ಬುಡೋಳಿಯ ಯುವತಿಯೊಬ್ಬರು ಉಸಿರಾಟದ ತೊಂದರೆಯನ್ನು

ಟೋಕಿಯೋ ಪ್ಯಾರಾಲಿಂಪಿಕ್ಸ್ : ಬೆಳ್ಳಿ ಪದಕ ಗೆದ್ದ ಕನ್ನಡಿಗ ಸುಹಾಸ್

 ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್ ಎಲ್ 4 ಫೈನಲ್ ನಲ್ಲಿ  ಅಗ್ರ ಶ್ರೇಯಾಂಕದ ಫ್ರಾನ್ಸ್ ಆಟಗಾರ ಲುಕಾಸ್ ಮಝೂರ್ ಅವರ ವಿರುದ್ಧ ತೀವ್ರ ಹೋರಾಟ ನೀಡಿದ ಹೊರತಾಗಿಯೂ 1-2 (21-15, 17-21, 15-21) ಅಂತರದಿಂದ ಸೋತಿರುವ ಭಾರತದ ಐಎಎಸ್ ಅಧಿಕಾರಿ ಹಾಗೂ ನೊಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಗೆದ್ದುಕೊಂಡು ಹೊಸ ಇತಿಹಾಸ ನಿರ್ಮಿಸಿದರು. ಸುಹಾಸ್ ಇವರು ಕರ್ನಾಟಕ  ಮೂಲದ ಐಎಎಸ್ ಅಧಿಕಾರಿ.

ಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ಗೌರಿ ನೆನಹು ಕಾರ್ಯಕ್ರಮ

ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮವು ಚಾಮರಾಜಪೇಟೆಯಲ್ಲಿ ನಡೆಯಿತು. ಸೆಪ್ಟಂಬರ್ 05 ಅಂದರೆ ಇಂದು ಗೌರಿ ಲಂಕೇಶ್‌ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ ಗೌರವ ಸಲ್ಲಿಸಲಾಯಿತು. ಗೌರಿ ಲಂಕೇಶ್‌ರವರ ನಮ್ಮನ್ನು ಅಗಲಿ ನಾಲ್ಕು

ಕೋವಿಡ್ ನಿಯಂತ್ರಣಕ್ಕೆ ಪುತ್ತೂರಿನಲ್ಲಿ ಕಟ್ಟುನಿಟ್ಟಿನ ಕ್ರಮ: ಪುತ್ತೂರು ಎಸಿ ಡಾ.ಯತೀಶ್ ಉಳ್ಳಾಲ್

ಕೇರಳ ಗಡಿಭಾಗವನ್ನು ಹಂಚಿಕೊಂಡಿರುವಂತಹ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬರುತ್ತಿಲ್ಲ. ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 16 ಹಾಗೂ 17 ರ ಆಸುಪಾಸಿನಲ್ಲಿರುವ ಕಾರಣ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಕೊರೊನಾ ನಿಯಂತ್ರಣದ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಹೇಳಿದರು. ಅವರು ಪುತ್ತೂರಿನ ತಮ್ಮ ಕಚೇರಿಯಲ್ಲಿ

ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಕೋವಿಡ್ ಲಸಿಕೆ ಶಿಬಿರ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 22 ಕದ್ರಿ ಬಿ ನಲ್ಲಿರುವ ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಉಚಿತ ಕೋವಿಡ್ ಲಸಿಕಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಿದರು. 5೦೦ ಕ್ಕೂ ಹೆಚ್ಚು ನಾಗರಿಕರು ಈ ಲಸಿಕಾ ಅಭಿಯಾನದ ಸದುಪಯೋಗ ಪಡೆದುಕೊಂಡರು.ಶಿಬಿರದಲ್ಲಿ ಮನಪಾ ಸದಸ್ಯರಾದ ಜಯಾನಂದ ಅಂಚನ್, ಶಾಲಾ ಮುಖ್ಯೋಪಾಧ್ಯಾಯರಾದ ಮಂಜಪ್ಪ ಬಿ, ಡಾ. ಮಹಿಮ ಗುಪ್ತ, ಆಶಾ ಕಾರ್ಯಕರ್ತೆಯಾದ ಸುಶೀಲ,

ವಿದ್ಯುತ್ ಬಿಲ್ ನಲ್ಲಿ ಅಕ್ರಮ, ಮೂವರ ಅಮಾನತು: ಸಚಿವ ಸುನಿಲ್ ಕುಮಾರ್

ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ,ಈ ಮೂವರು ಅಮಾನತಿ ಗೊಳಗಾದ ಸಿಬ್ಬಂದಿ ಯಾಗಿದ್ದಾರೆ. ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ

ನವಮಂಗಳೂರು ಬಂದರು ಟ್ರಸ್ಟ್‌ನ ಹೊಸ ಸಾಧನೆ: ಮೊದಲ ಬಾರಿಗೆ 22,825 ಟನ್ ಕಬ್ಬಿಣದ ಸರಕು ರಫ್ತು

ಮಂಗಳೂರು: ನಗರದ ನವ ಮಂಗಳೂರು ಬಂದರು ಟ್ರಸ್ಟ್ ಹೊಸ ಸಾಧನೆ ಮಾಡಿದ್ದು, ಇದೇ ಮೊದಲ ಬಾರಿಗೆ ಇಲ್ಲಿಂದ 22,825 ಟನ್ ಕಬ್ಬಿಣದ ಸರಕನ್ನು ರಫ್ತು ಮಾಡಲಾಗಿದೆ.ಎಂ.ವಿ. ಮಿನಿಯನ್ ಗ್ರೇಸ್ ಹಡಗು ನಗರದ ಎನ್‌ಎಂಪಿಟಿಗೆ ಬಂದಿತ್ತು. ಇದರಿಂದ ಜೆಎಸ್‌ಡಬ್ಲ್ಯು ಕಂಪನಿಗೆ ಸೇರಿದ 22,825 ಟನ್ ಕಬ್ಬಿಣದ ಸರಕನ್ನು ತುಂಬಲಾಗಿದೆ. ಸರಕು ಹೊತ್ತ ಹಡಗು ಈಜಿಪ್ಪನ ಡಾಮಿಯೆಟ್ಟ, ಇಟಲಿಯ ಮರ್ಗೇರಾ ಹಾಗೂ ಸ್ಪೇನ್‌ನ ಸಗುಂಟೋ ಬಂದರಿಗೆ ತೆರಳಲಿದೆ. ಎನ್‌ಎಂಪಿಟಿಯ 3 ನೇ ದಕ್ಕೆ ಮಿನಿಯನ್

ಅಫ್ಘಾನ್ ತಾಲಿಬಾನ್ ವಶದ ಬೆನ್ನಲ್ಲೇ ಭಾರತದ ಡ್ರೈ ಫ್ರೂಟ್ ಉದ್ಯಮಕ್ಕೆ ಹೊಡೆತ..!

ಜಾಗತಿಕವಾಗಿ ಡ್ರೈ ಫ್ರೂಟ್ ಮಾರಾಟ ಕ್ಷೇತ್ರದಲ್ಲಿ ಅಫ್ಘಾನಿಸ್ತಾನ ಪಾರುಪತ್ಯ ಹೊಂದಿದೆ. ಅಲ್ಲದೇ ಭಾರತದಲ್ಲಿ ಅಫ್ಘಾನಿಸ್ತಾನದ ಡ್ರೈ ಫ್ರೂಟ್‍ಗೆ ಎಲ್ಲಿಲ್ಲದ ಬೇಡಿಕೆ ಕೂಡ ಇದೆ ಆದರೆ ಈಗ ಅಫ್ಘಾನಿಸ್ತಾನ ತಾಲಿಬಾನ್ ವಶಕ್ಕೆ ಹೋಗಿ ಶಾಂತವಾಗಿದ್ದ ನೆಲ ನಲುಗಿ ಹೋಗಿದ್ದು. ಭಾರತದ ಡ್ರೈ ಫ್ರೂಟ್ ಉದ್ಯಮ ಅಕ್ಷರಶಃ ನೆಲಕಚ್ಚಿದಂತಾಗಿದೆ. ಹೌದು ಅಫ್ಘಾನಿಸ್ತಾನ ತಾಲಿಬಾನ್ ವಶ ಪಡಿಸಿಕೊಂಡ ನಂತರ ಶಾಂತವಾಗಿದ್ದ ಅಫ್ಘಾನ್ ನೆಲ ನಲುಗಿ ಹೋಗಿದೆ. ಇನ್ನು ಅಫ್ಗಾನ್ ನೆಲದಲ್ಲಿ