Home Posts tagged V4News (Page 834)

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ:ಶೂಟರ್ ಮನೀಶ್ ನರ್ವಾಲ್ ಗೆ ಚಿನ್ನ

ಶೂಟರ್ ಮನೀಶ್ ನರ್ವಾಲ್ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತಕ್ಕೆ ಮೂರನೇ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ.  ಇನ್ನೋರ್ವ ಶೂಟರ್ ಸಿಂಗ್ ರಾಜ್ ಅಧಾನ ಅವರು ಬೆಳ್ಳಿ ಪದಕ ಗೆದ್ದುಕೊಂಡರು. ಈ ಇಬ್ಬರು ಶನಿವಾರ ನಡೆದ ಪಿ4 ಮಿಕ್ಸೆಡ್ 50 ಮೀ. ಪಿಸ್ತೂಲ್ ಎಸ್ಎಚ್ 1 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ.19ರ ರ ಹರೆಯದ ನರ್ವಾಲ್ ಒಟ್ಟು 218.2 ಅಂಕ ಗಳಿಸಿ ಒಲಿಂಪಿಕ್ಸ್

ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ವಿಧಾನ ಮಂಗಳೂರಿನಲ್ಲಿ ಪ್ರಥಮ

ಮಂಗಳೂರು: ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ವಿನೂತನ ತಂತ್ರಜ್ಞಾನವನ್ನು ಮಂಗಳೂರಿನ ಬೋಟ್ ಗೆ ಅಳವಡಿಕೆ ಮಾಡಲಾಗಿದೆ. ಈ ಮೂಲಕ ವಾರಗಟ್ಟಲೆ ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸಲು ಹೋಗುವ ಮೀನುಗಾರರು ಇನ್ನು ಮುಂದೆ ತಮ್ಮ ನಿತ್ಯ ಬಳಕೆಯ ಅವಶ್ಯಕತೆಗೆ ಬೇಕಾದ ನೀರನ್ನು ಕೊಂಡೊಯ್ಯುವ ಪ್ರಮೇಯವೇ ಇಲ್ಲ. ಆಳ ಸಮುದ್ರ ಮೀನುಗಾರಿಕೆ ನಡೆಸುವ ಮೀನುಗಾರರು ಸುಮಾರು ಹತ್ತಾರು ದಿನಗಳ ಕಾಲ ಸಮುದ್ರದ ನಡುವೆಯೇ ಮೀನುಗಾರಿಕೆ ನಡೆಸುತ್ತಿರುತ್ತಾರೆ. ಆದರೆ

ಸಾಹಿತ್ಯ ಎನ್ನುವುದು ಜೀವನದ ಅನುಭವ ದ್ರವ್ಯ: ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಚಂದ್ರಕಲಾ ನಂದಾವರ

ಮಂಗಳೂರು: ಸಾಹಿತ್ಯದ ಬರವಣಿಗೆ ಮತ್ತು ಸಾಹಿತ್ಯದ ಓದು ಮನುಷ್ಯನೊಳಗೆ ತನ್ನನ್ನು ತಾನು ಗುರುತಿಸಿಕೊಳ್ಳುವಂತಹ ಮತ್ತು ಸಮಾಜದೊಳಗೆ ತನ್ನನ್ನು ತಾನು ಬೆಸೆದುಕೊಳ್ಳುವಂತಹ ಶಕ್ತಿ ಸಾಹಿತ್ಯಕ್ಕಿದೆ. ಸಾಹಿತ್ಯ ಎನ್ನುವುದು ಜೀವನದ ಅನುಭವಗಳ ದ್ರವ್ಯ ಎಂದು ಗಣಪತಿ ಪ.ಪೂ. ಕಾಲೇಜಿನ ವಿಶ್ರಾಂತ ಪ್ರಾಂಶುಪಾಲೆ ಚಂದ್ರಕಲಾ ನಂದಾವರ ಹೇಳಿದರು. ಅವರು ನಗರದ ಸ್ಟೇಟ್ ಬ್ಯಾಂಕ್, ರಾವ್ ಆಂಡ್ ರಾವ್ ಸರ್ಕಲ್ ಬಳಿಯ ಸಹಕಾರಿ ಸಧನದಲ್ಲಿರುವ ಶಾಂತಿ ಪ್ರಕಾಶನ ಸಭಾಂಗಣದಲ್ಲಿಂದು ನಡೆದ

ಕಡಬದಲ್ಲಿ ಪೊಲೀಸ್ ಜೀಪು ಹಾಗೂ ಬೊಲೆರೋ ನಡುವೆ ಢಿಕ್ಕಿ: ಎಸ್.ಐ ಸಹಿತ ಹಲವರು ಅಪಾಯದಿಂದ ಪಾರು

ಕಡಬ ಎಸ್.ಐ. ರುಕ್ಮ ನಾಯ್ಕ್ ಪ್ರಯಾಣಿಸುತ್ತಿದ್ದ ಜೀಪು ಹಾಗೂ ಬೊಲೆರೋ ಮಧ್ಯೆ ಡಿಕ್ಕಿ ಸಂಭವಿಸಿದ್ದು ಎರಡು ವಾಹನಗಳು ನುಜ್ಜುಗುಜ್ಜಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಪೊಲೀಸ್ ಜೀಪು ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಲ್ಲಿ ಜ್ಞಾನ ಜ್ಯೋತಿ ಕೋಚಿಂಗ್ ಕ್ಲಾಸ್ ಉದ್ಘಾಟನೆ

ಜ್ಞಾನ ಜ್ಯೋತಿ ಕೋಚಿಂಗ್ ಕ್ಲಾಸ್ ಶ್ರೀ ಗೋಕರ್ಣನಾತೆಶ್ವರ ದೇವಸ್ಥಾನದ ಪ್ರವೇಶ ದ್ವಾರಾದ ಹತ್ತಿರ ಇರುವ ಶಿವಗಿರಿ ಅಪಾರ್ಟ್ಮೆಂಟ್ ಪ್ಲಾಟ್ ನಂಬರ್ 305ರಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ ಉಪ ಕುಲಸಚಿವರು ಆಗಿರುವ ಡಾ. ಪ್ರಭಾಕರ್ ನೀರ್ ಮಾರ್ಗ ಅವರ ಅಮೃತ ಹಸ್ತದಿಂದ ಉದ್ಘಾಟಿಸಲ್ಪಟ್ಟಿತು. ನಾರಾಯಣ ಗುರು ಪ್ರಥಮ ದರ್ಜೆ ಕಾಲೇಜು ಕುದ್ರೋಳಿ ಇದರ ಪ್ರಾಂಶುಪಾಲರು ಡಾ ವಸಂತ ಕುಮಾರ್, ಗೋಕರ್ಣೇಶ್ವರ ಕಾಲೇಜಿನ

ದ.ಕ.ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫೂ ರದ್ದಾಗಲಿ :ಸಿಪಿಐ(ಎಂ)

ಕೊರೋನಾ ನಿಯಂತ್ರಣದ ಹೆಸರಿನಲ್ಲಿ ಎಲ್ಲಾ ವಿಭಾಗದ ಜನತೆಗೆ ವಿನಾಃ ಕಾರಣ ತೊಂದರೆ ನೀಡುವ ವಾರಾಂತ್ಯದ ಕರ್ಫ್ಯೂವನ್ನು ಕೂಡಲೇ ರದ್ದುಮಾಡಬೇಕೆಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ದ.ಕ. ಜಿಲ್ಲಾಡಳಿತವನ್ನು ಒತ್ತಾಯಿಸಿದೆ. CPIM ಹಿರಿಯ ನಾಯಕರಾದ ಕಾಂ.ಕೆ ಆರ್ ಶ್ರೀಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಸಿಪಿಐ(ಎಂ)ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಈ ಬಗ್ಗೆ ನಿರ್ಣಯವನ್ನು ಅಂಗೀಕರಿಸಿದ್ದು, ಇಂತಹ ಅವೈಜ್ಞಾನಿಕ ಕರ್ಫೂನಿಂದಾಗಿ ಕೋರೋನ ನಿಯಂತ್ರಣ

V4STREAM OTT ಯಲ್ಲಿ “ನಸೀಬ್”- ಏರೆಗುಂಡು ಏರೆಗಿಜ್ಜಿ ತುಳು ಸಿನಿಮಾ ಬಿಡುಗಡೆ

ಮಂಗಳೂರು ಕ್ಯಾಮ್ ಫಿಲ್ಮ್ ಅರ್ಪಿಸುವ ಪ್ರೆಸ್ಟನ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ತಯಾರಾದ ಹೆನ್ರಿ ಡಿಸಿಲ್ವ ನಿರ್ಮಿಸಿದ ಹ್ಯಾರಿ ಫೆರ್ನಾಂಡಿಸ್ ನಿರ್ದೇಶಿಸಿದ ನಶೀಬಾಚೊ ಖೆಳ್ ಕೊಂಕಣಿ ಚಲನಚಿತ್ರವು ಈಗ ನಸೀಬ್ ಏರೆಗುಂಡ ಏರೆಗಿಜ್ಜಿ ಹೆಸರಿನಲ್ಲಿ ತುಳು ಸಿನಿಮಾ ಆಗಿ ಡಬ್ಬಿಂಗ್ ಆಗಿದೆ. ಈ ತುಳು ಸಿನಿಮಾ ಸೆಪ್ಟಂಬರ್ 8ರಂದು ವಿ4 ಸ್ಟ್ರೀಮ್ ಬಿಡುಗಡೆಗೊಳ್ಳಲಿದೆ. ಸುಮಾರು 35 ವರ್ಷಗಳ ಹಿಂದೆ ಹೆನ್ರಿ ಡಿ ಸಿಲ್ವರವರು ರಚಿಸಿದ ಕಾಜಾರಾಚೆ ಉತಾರ್ ಎಂಬ ನಾಟಕದ ಮೂಲ

ವಾರಾಂತ್ಯ ಲಾಕ್ಡೌನ್ ವಿರೋಧಿಸಿ ವ್ಯವಹಾರ ನಡೆಸಲು ಕರಾವಳಿ ವರ್ತಕರ ತೀರ್ಮಾನ

ದ. ಕ , ಉಡುಪಿ ಜಿಲ್ಲೆಗಳಲ್ಲಿ ಸತತವಾಗಿ ವಾರಾಂತ್ಯ ಲಾಕ್ಡೌನ್ ಮುಂದುವರಿಸುತ್ತಿರುವುದರಿಂದ ಜನ ಸಾಮಾನ್ಯ ರಿಗೂ ಕೆಲ ವರ್ಗದ ವ್ಯಾಪಾರಿಗಳಿಗೂ ತೀವ್ರ ತೊಂದರೆ ಯಾಗಿದ್ದು ಅವೈಜ್ಞಾನಿಕ ಮತ್ತು ತಾರ ತಮ್ಯ ಗಳಿಂದ ಕೂಡಿದ ಈ ನಿರ್ಧಾರವನ್ನು ಪ್ರತಿಭಟಿಸಿ ಅಂಗಡಿ ತೆರೆದು ವ್ಯವಹಾರ ನಡೆಸಲು ಕರಾವಳಿ ಜಿಲ್ಲೆಗಳ ಜವಳಿ, ಪಾದರಕ್ಷೆ, ಫ್ಯಾನ್ಸಿ ಮುಂತಾದ ಅಂಗಡಿಗಳ ಮಾಲೀಕರು ನಿನ್ನೆ ನಡೆದ ಸಂಘದ ವಿಶೇಷ ಮಹಾ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಂಡರು. ಪ್ರತೀ ಅಂಗಡಿಯವರು

ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕರಿಗೆ ಹಲ್ಲೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ

ಪುತ್ತೂರು: ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಜುರುಪಾದೆಯ ಅಬ್ದುಲ್ ಮಜೀದ್, ಪಂಜ ಎಣ್ಮೂರಿನ ಪಾರೂಕ್ ಅವರನ್ನು ಸೆ.1ರಂದು ತಡ ರಾತ್ರಿಯೇ ಪೊಲೀಸರು ಬಂಧಿಸಿದ್ದರು. ಉಳಿದಂತೆ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದ ಪೊಲೀಸರು ಇದೀಗ ಇನ್ನೋರ್ವ ಆರೋಪಿ ಅಲೆಬಿ ಎಂಬವರನ್ನು

ಗ್ಯಾಸ್ ಬೆಲೆ 354 ರೂ. ಇದ್ದಾಗ ಬೀದಿಗಿಳಿದವರು ಈಗ ಎಲ್ಲಿದ್ದಾರೆ: ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಪ್ರಶ್ನೆ

 ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಕೊರೋನಾದಿಂದ ಮೃತಪಡಲ್ಲ, ಬಡತನದಿಂದ ಮೃತಪಡುವ ಸಾಧ್ಯತೆ ಇದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಚ್ಚೇದಿನ್ ತರುವುದಾಗಿ ಹೇಳಿ ಕಾಂಗ್ರೆಸ್‌ನ ದೋಷಗಳನ್ನು ಹೇಳಿ ಭಾವನಾತ್ಮಕವಾಗಿ ಜನರನ್ನು ಸೆಳೆದು ಮತಗಳಿಸಿ ಉನ್ನತ ಅಧಿಕಾರಕ್ಕೇರಿದ್ದರೂ ಜನರ