Home Posts tagged V4News (Page 838)

ಅವಳಿ ನಗರಕ್ಕೆ ಮೂಲ ಸೌಕರ್ಯ ಕಲ್ಪಿಸದ ಬಿಜೆಪಿಗೆ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ : ರಕ್ಷಾ ರಾಮಯ್ಯ

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿ ನಗರ ಮೂಲಭೂತ ಸೌಕರ್ಯದಲ್ಲಿ ರಾಜ್ಯದಲ್ಲಿಯೇ ಅತ್ಯಂತ ಪರಮ ನಿರ್ಲಕ್ಷ್ಯಕ್ಕೆ ಒಳಗಾದ ಪ್ರದೇಶವಾಗಿದ್ದು, ಆಡಳಿತ ನಡೆಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರಮುಖರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಆರೋಪಿಸಿದ್ದಾರೆ. ಹುಬ್ಬಳ್ಳಿ ಧಾರವಾಡ

ಶಾಲೆಗಳ ಆರಂಭದ ಕುರಿತು ಸಿಎಂ ನಿರ್ಧಾರ- ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿಗಳು ತಾಂತ್ರಿಕ ಶಿಕ್ಷಣ ಸಮಿತಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಶ್ರೀ ಬಿ.ಸಿ. ನಾಗೇಶ್ ಅವರು ಇಂದು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ಕ್ಕೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು

ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿದ ಸಚಿವ ಎಸ್.ಅಂಗಾರ

ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ತುಳು ಸಾಹಿತ್ಯ ಅಕಾಡೆಮಿಯ ಭವನದ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‍ಸರ್ ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ತುಳು ಸಾಹಿತ್ಯ ಅಕಾಡೆಮಿಯ

ರಾಷ್ಟ್ರೀಯ ಶಿಕ್ಷಣ ನೀತಿಗೆ ಸಿಎಫ್‌ ಐನಿಂದ ವಿರೋಧ: ವಿವಿ ಆವರಣದಲ್ಲಿ ಚಾಲನೆ ನೀಡುತ್ತಿದ್ದಂತೆ ಪ್ರತಿಭಟನೆ

ಕೊಣಾಜೆ ವಿವಿಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿಗೆ ಚಾಲನೆ ನೀಡುತ್ತಿದ್ದಂತೆಯೇ ಕ್ಯಾಂಪಸ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ವಿವಿಯ ಆವರಣದಲ್ಲಿ ಪ್ರತಿಭಟನೆ ನಡೆಸಿ, ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಗಳಾ ಸಭಾಂಗಣದ ಹೊರಾಂಗಣದಲ್ಲಿ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದು ಧಿಕ್ಕಾರ ಘೋಷಣೆ ಕೂಗಿದ್ದಾರೆ. ತಕ್ಷಣ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಸಿಎಫ್‌ಐ

ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್ : ಇಂಡಿಯನ್ ಐಡಲ್ ಪೈನಲಿಸ್ಟ್ ನಿಹಾಲ್ ತಾವ್ರೋಗೆ ಸನ್ಮಾನ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಇಂಡಿಯನ್ ಐಡಲ್ ಫೈನಲಿಸ್ಟ್ ನಿಹಾಲ್ ತಾವ್ರೋ ಅವರಿಗೆ ಭಾನುವಾರ ಉಡುಪಿ ಮಳಿಗೆಯಲ್ಲಿ ಅಭಿನಂದಿಸಲಾಯಿತು. ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ಸಮಾಜ ಸೇವಕರಾದ ಲೀಲಾಧರ್ ಶೆಟ್ಟಿ ಮಜೂರು,ಹಾಸ್ಯ ಭಾಷಣಕಾರ್ತಿ ಸಂಧ್ಯಾ ಪೈ ಅವರು ನಿಹಾಲ್ ತಾವ್ರೋ ಗೆ ಶಾಲು ಹೊದಿಸಿ ಫಲಪುಷ್ಪ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಈ ವೇಳೆ ಮಾತನಾಡಿದ ಸಂಧ್ಯಾ ಪೈ ನಿಹಾಲ್ ತನ್ನ

ರಂಗ ನಿನ್ನ ಆಲ್ಬಾಂ ಸಾಂಗ್ ಬಿಡುಗಡೆ

ಹಿಂದೂಸ್ತಾನಿಯ ಖ್ಯಾತ ಸಂಗೀತ ಕಲಾವಿದೆ, ಕರಾವಳಿಯ ಪ್ರತಿಭೆ ವಿದ್ವಾನ್ ವಿಭಾ ಎಸ್.ನಾಯಕ್ ಅವರು ಸಂಗೀತ ನಿರ್ದೇಶಿಸಿ, ತಾವೇ ಹಾಡಿರುವ ’ರಂಗ ನಿನ್ನ’ ಎಂಬ ಶ್ರೀಕೃಷ್ಣ ದೇವರ ಕುರಿತ ಭಕ್ತಿ ಪ್ರಧಾನ ಅಲ್ಬಾಂ ಸಾಂಗ್ ಅನಾವರಣಗೊಂಡಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ರಂಗ ನಿನ್ನ ಅಲ್ಬಾಂ ಸಾಂಗ್ ಬಿಡುಗಡೆ ಸಮಾರಂಭ ನಡೆಯಿತು. ಶ್ರೀಕೃಷ್ಣ ಜನ್ಮಾಷ್ಠಮಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣನ ಕುರಿತು ಶ್ರೀ ವ್ಯಾಸರಾಯರು ಬರೆದಿರುವ ಹಾಡಿಗೆ ವಿದ್ವಾನ್ ವಿಭಾ ಎಸ್.ನಾಯಕ’

ದ.ಕ. ಜಿಲ್ಲಾಡಳಿತ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಈ ಬಾರಿ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿ, ದೇವರ ಅನುಗ್ರಹದಿಂದ

ಕತ್ತು ಕೊಯ್ದ ಸ್ಥಿತಿಯಲ್ಲಿ ಕೋಣ ಪತ್ತೆ

ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ನಡೆದಿದೆ. ವಿಚಾರ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾಯಿಸಿ ತೋಟದ ಮಾಲೀಕನೇ ಕೋಣವನ್ನು ಬೇರೆಯವರ ಮೂಲಕ ಹತ್ಯೆ ನಡೆಸಿರುವುದಾಗಿ ಆರೋಪಿಸಿದ್ದಾರೆ.ಬಲ್ಯ ಎಂಬಲ್ಲಿರುವ ಜಯರಾಮ ಶೆಟ್ಟಿ ಎಂಬವರ ತೋಟದ ಬಳಿ ಕೃತ್ಯ ನಡೆದಿದೆ. ಕೋಣದ ಕುತ್ತಿಗೆಯನ್ನು ಹರಿತವಾದ ಆಯುಧದಿಂದ ಕಡಿದ ಸ್ಥಿತಿಯಲ್ಲಿದ್ದು,

ಅಮೆರಿಕನ್ನರ ಗಮನ ಸೆಳೆದ ಮಮತಾ ಪುಟ್ಟಸ್ವಾಮಿ

ಅಮೆರಿಕಾದಲ್ಲಿ ನೆಲೆಸಿರುವ ಮೈಸೂರು ಮೂಲದ ಶಿಕ್ಷಕಿ ಮಮತಾ ಪುಟ್ಟಸ್ವಾಮಿ ಅವರು ತನ್ನ ಪ್ರತಿಭೆಯ ಮೂಲಕ ಅಮೆರಿಕಾದ ಭಾರತೀಯರ ಗಮನ ಸೆಳೆದಿದ್ದಾರೆ. ಅಮೆರಿಕಾದ ವಿವಿಧ ಭಾರತೀಯ ಸಂಘಟನೆಗಳು ಆಯೋಜಿಸಿರುವ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸೌಂಧರ್ಯ ಸ್ಫರ್ಧೆಯಲ್ಲಿ ಮಮತಾ ಪುಟ್ಟಸ್ವಾಮಿ ಅವರು ಪ್ರಶಸ್ತಿ ಪಡೆಯುವ ಮೂಲಕ ತನ್ನ ಪ್ರತಿಭೆಯನ್ನು ಮೆರೆದಿದ್ದಾರೆ.   ಮಿಸೆಸ್ ಇಂಡಿಯಾ ಕನೆಕ್ಟಿಕಟ್ 2018 ರ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಮಮತಾ ಪುಟ್ಟಸ್ವಾಮಿ

ಮಂಗಳೂರಲ್ಲಿ ಮಹಿಳೆಯ ಚಿನ್ನದ ಸರ ಎಳೆದು ದುಷ್ಕರ್ಮಿ ಪರಾರಿ

ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್‌ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್‌ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಯೋರ್ವ ಬೈಕ್‌ನಲ್ಲಿ ಆಗಮಿಸಿ, ಆಕೆಯ ಕುತ್ತಿಯಲ್ಲಿದ್ದ ಚಿನ್ನದ ಸರವನ್ನ ದೋಚಿ ಪರಾರಿಯಾಗಿದ್ದಾನೆ. ಸರವನ್ನು ಎಳೆಯುವ ಸಂದರ್ಭದಲ್ಲಿ ರಸ್ತೆಗೆ ಉರುಳಿ ಬಿದ್ದು