Home Posts tagged V4News (Page 845)

ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಕೃಷಿ ಉತ್ಪಾದಕ ಸಂಘ: ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ

 ದೇಶದ ಎಲ್ಲಾ ಸಣ್ಣ ರೈತರನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಪ್ರತೀ ತಾಲೂಕಿನಲ್ಲಿ ಕನಿಷ್ಟ ಒಂದು ಕೃಷಿ ಉತ್ಪಾದಕ ಸಂಘ ಆರಂಭಿಸಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಭಾರತ ಸಣ್ಣ ರೈತರನ್ನೇ ಹೊಂದಿರುವ ದೇಶವಾಗಿದ್ದು, ದೇಶದ ಎಲ್ಲಾ ರೈತರನ್ನು ಒಟ್ಟುಗೂಡಿಸುವ

ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯದಿಂದ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

ಗುರುಪುರ: ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯ ವಿಖಾಯ ವತಿಯಿಂದ ಬ್ರಹತ್ ರಕ್ತದಾನ ಶಿಬಿರ ಹಾಗೂ ಕೊರೊನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ಆದಿತ್ಯವಾರ ಗುರುಪುರ ಕೈಕಂಬ ಪ್ರೀಮಿಯರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಲಯ ಅಧ್ಯಕ್ಷರಾದ ಬಹು: ಜಮಲುದ್ದೀನ್ ದಾರಿಮಿ ಅಧ್ಯಕ್ಷತೆ ವಹಿಸಿದ್ದರು. ಬಹು:ಝುಬೈರ್ ಫೈಝಿ ಅಂಕೋಲಾ ದುಆ: ನೆರವರಿಸಿದರು. ಸಮಸ್ತ ಕೇರಳ ಜಮಿಯತುಲ್ ಉಲೆಮಾ ಕೇಂದ್ರ ಮುಶಾವರ ಸದಸ್ಯರಾದ ಬಾಂಬ್ರಣ ಉಸ್ತಾದ್ ರವರು

ಪರಿಸರ ಸಂರಕ್ಷಣೆ ಸಂದೇಶದೊಂದಿಗೆ ರಕ್ಷಾ ಬಂಧನ ಆಚರಿಸಿದ ಮಾಜಿ ಸಚಿವ ಎಂ.ಬಿ ಪಾಟೀಲ್

ರಾಜ್ಯದ ಹಲವೆಡೆ ಇಂದು ಅಣ್ಣ ತಂಗಿಯರ ಬಾಂಧವ್ಯ ಬೆಸೆಯುವ ಹಬ್ಬ ಎಂದೇ ಖ್ಯಾತಿ ಪಡೆದಿರುವ ರಕ್ಷಾ ಬಂಧನ ಆಚರಿಸಲಾಗುತ್ತಿದೆ. ರಕ್ಷಾ ಬಂಧನವು ನೂಲು ಹುಣ್ಣಿಮೆ ದಿನದಂದು ಪ್ರತಿ ವರ್ಷ ನಡೆಯುವ ಹಬ್ಬದಲ್ಲಿ ಅಣ್ಣ ತಂಗಿಗೆ ನೂಲಿನ ರೂಪದಲ್ಲಿ ದಾರ, ರಾಖಿ ಕಟ್ಟುವುದು ಸಂಪ್ರದಾಯ. ಆದರೆ ಮಾಜೀ ಗೃಹ ಸಚಿವರಾದ ಎಂ.ಬಿ ಪಾಟೀಲ್ ಈ ಬಾರಿ ವಿಶಿಷ್ಟ ರೀತಿಯಲ್ಲಿ ರಕ್ಷಾ ಬಂಧನ ಆಚರಿಸಿ ಗಮನಸೆಳೆದಿದ್ದಾರೆ. ಕೋಟಿ ವೃಕ್ಷ ಅಭಿಯಾನವನ್ನು ಯಶಸ್ವಿಯಾಗಿ ಪೂರೈಸಿ ಆ ಮೂಲಕ ಪರಿಸರದ

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ: ಕುದ್ರೋಳಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ಸಂಸದ ನಳಿನ್

ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ‌ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಮೋಹನ್

ತಿರಸ್ಕೃತದ ಪುಸ್ತಕಕ್ಕೆ ಮತ್ತೊಮ್ಮೆ ಮಣೆ : ಮಂಗಳೂರು ವಿ.ವಿ. ಪುಸ್ತಕ ವಿವಾದ !!

ಮಂಗಳೂರು ವಿಶ್ವವಿದ್ಯಾನಿಯಲದ ಪ್ರಸಾರಾಂಗದ ಸಂಶೋಧನಾ ಮಾಲಕೆಯ ಕೃತಿ ಪ್ರಕಟನೆಯಲ್ಲಿ ಈ ಹಿಂದೆ ತಿರಸ್ಕೃತವಾಗಿದ್ದ ಪುಸ್ತಕಕ್ಕೆ ಇದೀಗ ವಿಶ್ವವಿದ್ಯಾನಿಲಯದ ಅಧಿಕೃತ ಮುದ್ರೆ ಲಭಿಸುವ ಸಾಧ್ಯತೆ ಕಂಡು ಬಂದಿದೆ. ಮಂಗಳೂರು ನಗರದ ಕಾಲೇಜೊಂದರ ನಿವೃತ್ತ ಉಪನ್ಯಾಸಕ ಡಾ.ಪಿ. ಅನಂತಕೃಷ್ಣ ಭಟ್ ಅವರು ಬರೆದಿರುವ “ಭಾರತ ಸಂವಿಧಾನ ” ಎಂಬ ಕನ್ನಡ ಕೃತಿ ಹಾಗೂ ಆಂಗ್ಲ ಭಾಷೆಯ ” ಇಂಡಿಯನ್ ಕ್ವಾನ್ಸಿಟಿಟ್ಯೂಶನ್ ” ಎಂಬ ಪುಸ್ತಕಕ್ಕೆ

ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್‌ : ಓಣಂ ಹಬ್ಬ ಆಚರಣೆ

ಆಯುರ್ವೇದ ಚಿಕಿತ್ಸೆಯ ಮೂಲಕ ಮಂಗಳೂರಿನ ಜನತೆಯ ಮನೆ ಮಾತಾಗಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್‌ನಲ್ಲಿ ಕೇರಳದ ಜನಪ್ರೀಯ ಓಣಂ ಹಬ್ಬವನ್ನು ಆಚರಿಸಲಾಯಿತು. ನಗರದ ವೆಲೆಂಸ್ಸಿಯಾ ಮತ್ತು ಕದ್ರಿಯಲ್ಲಿ ಕಾರ್ಯಚರಿಸುತ್ತಿರುವ ವೇದಂಆರೋಗ್ಯ ಆಯುರ್ವೇದ ಹೆಲ್ತ್ ಸೆಂಟರ್ ಕಳೆದ ಹಲವು ವರ್ಷಗಳಿಂದ ಜನತಗೆ ನಗುಮುಗದ ಸೇವೆಯನ್ನು ನೀಡುತ್ತಾ ಜನತೆಯ ಮನೆಮತಾಗಿದೆ. ಇಂದು ಮುಂಜಾನೆ ಕದ್ರಿಯ ಆಯುರ್ವೇದ ಹೆಲ್ತ್ ಸೆಂಟರ್ ಪೂಕಳಂ ಹಾಕಿ ಸಾಂಪ್ರದಾಯಿಕವಾಗಿ ಓಣಂ ಹಬ್ಬವನ್ನು

ಮಂಗಳೂರು: ಹಳಿ ದಾಟುವಾಗ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ಪ್ರತಿನಿತ್ಯ ಕುಡುಪ್ಪಾಡಿ ದೋಟದಿಂದ ಮಹಾಕಾಳಿಪಡ್ಪುವಿನಲ್ಲಿರುವ ಬೀಡಿ ಬ್ರ್ಯಾಂಚ್ ಗೆ ಬೀಡಿ ಕೊಂಡೊಯ್ಯುತ್ತಿದ್ದ  ಇಬ್ಬರು ಮಹಿಳೆಯರು ರೈಲಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ವಸಂತಿ (50), ಪ್ರೇಮಾ (48)ಮೃತಪಟ್ಟ ದುರ್ದೈವಿಗಳು.ರೈಲು ಬರುತ್ತಿದ್ದದು ಇವರ ಗಮನಕ್ಕೆ ಬಂದಿರಲಿಲ್ಲ ಎಂದು ತಿಳಿದು ಬಂದಿದೆ. ವಿಷಯ ತಿಳಿದು ರೈಲ್ವೇ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನಲ್ಲಿ ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಕೇಂದ್ರದ ಜತೆ ಚರ್ಚೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್‍ಐಎ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಅಪ್ಘಾನಿಸ್ತಾನದಲ್ಲಿ

ಅಲೋಶಿಯಸ್ ಕಾಲೇಜಿನ ಡ್ಯಾನಿಯೆಲ್ಲಾ ಆನ್‌ ಎಲ್. ಚೆಯ್ನ್‌ರವರಿಗೆ ಪಿಹೆಚ್.ಡಿ. ಪದವಿ

ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಆಹಾರ ವಿಜ್ಞಾನವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್‌ ಡ್ಯಾನಿಯೆಲ್ಲಾ ಆನ್‌ಎಲ್. ಚೆಯ್ನ್‌ರವರ ಸ್ಟಡೀಸ್‌ ಆನ್‌ದ ಬಯೋ ಡೈವರ್ಸಿಟಿ ಆಫ್ ಫುಡ್‌ ರಿಸೋರ್ಸಸ್‌ ಇನ್ ಮೇಘಾಲಯ ಎಂಬ ಮಹಾಪ್ರಬಂಧಕ್ಕೆ ಹೈದರಾಬಾದ್‌ನ ಓಸ್ಮಾನಿಯಾ ವಿಶ್ವವಿದ್ಯಾನಿಲಯವು ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ.ಇವರು ಹೈದರಾಬಾದ್‌ನ ನ್ಯಾಶನಲ್‌ಇನ್ಸ್ಟಿಟ್ಯೂಟ್‌ ಆಫ್ ನ್ಯೂಟ್ರಿಶನ್‌ನ ಇಂಡಿಯನ್‌ ಕೌನ್ಸಿಲ್‌ ಆಫ್ ಮೆಡಿಕಲ್‌ ರಿಸರ್ಚ್‌

ಗೋವು ನಮ್ಮೆಲ್ಲರ ತಾಯಿ – ಗೋ ಸೇವೆಯೇ ನಮಗೆ ಕರ್ತವ್ಯ –  ದಯಾನಂದ ಜಿ. ಕತ್ತಲ್‌ಸಾರ್

ಮಂಗಳೂರು:  ಗೋವು ಜಗತ್ತಿನೆಲ್ಲರ ತಾಯಿ. ಆಕೆಯ ಸೇವೆಯನ್ನು ಮಾಡ ಬೇಕಾದುದು ನಮಗೆ ಕರ್ತವ್ಯ. ನಮ್ಮ ತಾಯಿಯ ನಂತರದ ಸ್ಥಾನ ಆಕೆಗೇ ಹೋಗುತ್ತದೆ. ಮೂರು ಮೂರ್ತಿಗಳು, ಮೂವತ್ತು ಮೂರು ಕೋಟಿ ದೇವತೆಗಳು ಅಷ್ಟ ಲಕ್ಷ್ಮೀಯರು, ರತಿ, ವಾಣಿ, ಗಿರಿಜೆಯರು ನೆಲೆಗೊಂಡಿದ್ದಾರೆ ಆಕೆಯ ಮೈ ಮೇಲೆ ಹಾಗಾಗಿ ಆಕೆ ಸರ್ವತ್ರ ಪೂಜ್ಯಳು. ಸರ್ವವಂದ್ಯಳೂ ಆಗಿದ್ದಾಳೆ. ಅಂತಹಾ ಗೋಮಾತೆಯ ಬಗ್ಗೆ ಇಂದಿನ ಪೀಳಿಗೆಗೆ ತಿಳಿಸಿ ಹೇಳಬೇಕಾದ ಅಗತ್ಯ ಇಂದಿದೆ. ಗೋವಿನ ಮಹತ್ವ, ಗೋವಿನಿಂದಾಗುವ