Home Posts tagged V4News (Page 849)

ಬೆಂಗ್ರೆ ಸಾಗರಮಾಲಾ ಯೋಜನಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪ್ರತಿಭಟನಾ ನಿರತ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ

ಮಂಗಳೂರಿನ‌ ಬೆಂಗ್ರೆ ಪ್ರದೇಶದಲ್ಲಿ ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ಕಾಮಗಾರಿ ಗ್ರಾಮಸ್ಥರ ವಿರೋಧದ ನಡುವೆ ನಡೆಯುತ್ತಿದೆ. ಈ ನಡುವೆ ಕೋಸ್ಟಲ್ ಬರ್ತ್ ಕಾಮಗಾರಿ‌ ತಮ್ಮ ನಾಡದೋಣಿಗಳ ತಂಗುದಾಣಗಳನ್ನು ಆಕ್ರಮಿಸುತ್ತದೆ, ಮೀನುಗಾರರ ಕೆಲವು ಮನೆಗಳನ್ನು ಪರಿಹಾರ ಇಲ್ಲದೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮದ ಸಾಂಪ್ರದಾಯಿಕ ಮೀನುಗಾರರು ತಮ್ಮ

ಕಡಬ: ಬೈಕ್ ಗೆ ಕಾರು ಢಿಕ್ಕಿ : ಸವಾರನಿಗೆ ಗಂಭೀರ ಗಾಯ

ಕಡಬ: ಬೈಕಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬ- ಸುಬ್ರಹ್ಮಣ್ಯ ರಸ್ತೆಯ ಮರ್ಧಾಳದಲ್ಲಿ  ನಡೆದಿದೆ. ಬಂಟ್ರ ಗ್ರಾಮದ ಕಂಪ ತುಂಬಿ ಮನೆ ನಿವಾಸಿ ಮೋನಪ್ಪ ಗೌಡ (60 )ಗಾಯಗೊಂಡವರು. ಕಲ್ಲಾಜೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮರ್ಧಾಳ ಜಂಕ್ಷನ್ ಬಳಿಯ ತಿರುವಿನಲ್ಲಿ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ

ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ ಪ್ರಕರಣ:ಇಬ್ಬರು ಆರೋಪಿಗಳ ಬಂಧನ

ವಿಟ್ಲ: ಪೆರುವಾಯಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಣಿಲ ಶಾಖೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಮಾಣಿಲ ಗ್ರಾಮದ ಕೊಡಂದೂರು ನಿವಾಸಿ ವಿಜಯ ಕುಮಾರ್ ಕ್ರಾಸ್ತಾ(40), ಮತ್ತು ಮಂಜೇಶ್ವರ ತಾಲೂಕಿನ ಸೀತಂಗೋಳಿ ಬೆದ್ರಂಪಲ್ಲ ನಿವಾಸಿ ಜಯಪ್ರಕಾಶ್(40) ಬಂಧಿತ ಆರೋಪಿಗಳು. ಸಂಘದ ಮೇಲ್ಚಾವಣಿ ಹಂಚನ್ನು ಕಳ್ಳರು ತೆಗೆದು ಒಳಗಡೆ ಬಂದು ಕಚೇರಿಯ ಕಪಾಟಿನ ಬಾಗಿಲು ತೆಗೆದು ಹುಡುಕಾಡಿದ್ದು

ಲಾಕ್ ಡೌನ್ ಕೊನೆ ಆಯ್ಕೆ, ಬಿಗಿ ಕ್ರಮಕ್ಕೆ ಸರ್ಕಾರದ ಆದ್ಯತೆ, ಮದುವೆ, ಮಂದಿರಗಳ ಮೇಲೆ ನಿರ್ಬಂಧ – ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮದುವೆ, ಮಂದಿರ, ಮಸೀದಿಗಳ ಮೇಲೆ ನಿಯಂತ್ರಣ ಹೇರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.  ಸ್ಮಾರ್ಟ್ ಪದ್ಮನಾಭ ನಗರ ಕಾರ್ಯಕ್ರಮದಡಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ದೋಬಿ ಘಾಟ್ ಬಳಿ ರಾಷ್ಟ್ರೀಯ ಯುವ ಪ್ರತಿಷ್ಠಾನದಿಂದ ಕೋವಿಡ್ ಸಾಂಕ್ರಾಮಿಕದಿಂದ ಆನ್ ಲೈನ್ ಕಲಿಕೆಯಿಂದ ವಂಚಿತರಾದ 100 ಬಡ ಹಾಗೂ

ಎಸ್.ಡಿ.ಎಂ.ನವಿದ್ಯಾರ್ಥಿಗಳಿಗೆ ಅಮೆರಿಕಾ ವಿ.ವಿ ಪಿ.ಎಚ್.ಡಿ ಫೆಲೋಷಿಪ್

ಉಜಿರೆ, ಆ.12: ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದರಸಾಯನಶಾಸ್ತ್ರ ವಿಭಾಗದಇಬ್ಬರು ವಿದ್ಯಾರ್ಥಿಗಳು ಅಮೆರಿಕಾದಎರಡು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಎಚ್.ಡಿ ಸಂಶೋಧನಾಅಧ್ಯಯನ ಕೈಗೊಳ್ಳಲು ಫೆಲೋಷಿಪ್ ಪಡೆದಿದ್ದಾರೆ. ವಿಭಾಗದ 2017-19ನೇ ಸಾಲಿನಲ್ಲಿಆರ್ಗ್ಯಾನಿಕ್ ಕೆಮಿಸ್ಟ್ರಿ  ವಿಭಾಗದಲ್ಲಿಸ್ನಾತಕೋತ್ತರ ವ್ಯಾಸಂಗ ಪೂರೈಸಿದ್ದ ಗಿರೀಶ್‍ಗೌಡಆರ್ ಮತ್ತುಕೆಮಿಸ್ಟ್ರಿ ವಿಭಾಗದಲ್ಲಿಅಧ್ಯಯನನಿರತರಾಗಿದ್ದಸಾಧನಾ ಭಟ್‍ಫೆಲೋಷಿಪ್ ಆಯ್ಕೆ ಪ್ರಕ್ರಿಯೆಯ

ನೆಹರೂ, ಇಂದಿರಾ ಬಗ್ಗೆ ಕೀಳು ಹೇಳಿಕೆ ಖಂಡನೀಯ-ಕಾವು ಹೇಮನಾಥ ಶೆಟ್ಟಿ

ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಇವರು ತಮ್ಮ ತಪ್ಪು ತಿದ್ದಿಕೊಳ್ಳದಿದ್ದಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಎಚ್ಚರಿಸಿದ್ದಾರೆ. ಅವರು ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ

ಸ್ಟ್ರೆಚರ್‌ನಲ್ಲಿ ಆರೋಪಿಯನ್ನು ಕೋರ್ಟ್‌ಗೆ ಹಾಜರು: ಪೊಲೀಸರ ಮೇಲೆ ನ್ಯಾಯಾಧೀಶರು ಗರಂ

ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.   ಈ ಪ್ರಕರಣದಲ್ಲಿ ಅತನಿಗೆ ಕೋರ್ಟ್‌ಗೆ ಹಾಜರಾಗುವಂತೆ ವಾರಂಟ್ ಹೊರಡಿಸಲಾಗಿತ್ತು. ಆರೋಪಿ ಅಸೌಖ್ಯದಿಂದ ಹಾಸಿಗೆ ಹಿಡಿದಿದ್ದ. ಕುಟುಂಬ ವರ್ಗದಿಂದ

ಶ್ರೀನಿವಾಸ ವಿವಿ ವತಿಯಿಂದ ಕ್ಯಾಂಪಸ್ ಸಂದರ್ಶನ

ಕೋವಿಡ್‍ನ ಈ ಸಂಕಷ್ಟದ ಕಾಲದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯವು ಕ್ಯಾಂಪಸ್ ಸಂದರ್ಶನಕ್ಕೆ ಅತ್ಯಂತ ಮಹತ್ವ ನೀಡಿದ್ದು, ಪ್ರಥಮ ವರ್ಷದಿಂದ ಅಂತಿಮ ವರ್ಷದ ವಿದಯಾರ್ಥಿಗಳಿಗೆ ಆನ್‍ಲೈನ್ ಮತ್ತು ಆಫ್ ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು ಉದ್ಯೋಗಕ್ಕಾಗಿ ಸಿದ್ದರಾಗುವಂತೆ ತಯಾರು ಮಾಡಿ ಯಶಸ್ಸನ್ನು ಕಂಡಿದ್ದೇವೆ ಎಂದು ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫಾರ್ಮೇಶನ್ ಸೈನ್ಸ್ ತರಬೇತಿ ಹಾಗೂ ಪ್ಲೇಸ್ಮೆಂಟ್ ಅಧಿಕಾರಿ, ಪ್ರೊ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫ್ಯೂ

ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಈ ಎರಡೂ ದಿನ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕೇರಳದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ (ಆ.14,15) ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.