Home Posts tagged V4News (Page 85)

ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಚರ್ಚೆ

ಕಾಪು ಪುರಸಭೆಯ ಸಾಮಾನ್ಯ ಸಭೆ ಕಾಪು ಪುರಸಭೆಯ ಇಂದಿರಾಗಾಂಧಿ ಸಭಾಂಗಣದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು. ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ

ಮಂಗಳೂರು: ಜಾಗತಿಕ ತಂತ್ರಜ್ಞಾನ ಶ್ರೇಷ್ಠತೆಗೆ ನೋವಿಗೋ ಸೊಲ್ಯೂಷನ್ಸ್: ವರ್ಟೆಕ್ಸ್ ವರ್ಕ್‌ಸ್ಪೇಸ್‌ನಿಂದ ಸಂವಾದ ಕಾರ್ಯಕ್ರಮ

ಮಂಗಳೂರು: ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್‌ಸ್ಪೇಸ್ ವತಿಯಿಂದ ಯಶಸ್ವಿ ಸ್ವದೇಶಿ ಐಟಿ ಉದ್ಯಮಗಳಲ್ಲಿ ಒಂದಾದ ನೋವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರೊಂದಿಗೆ ’ದಿ ನೋವಿಗೋ ಸ್ಟೋರಿ’ ಎಂಬ ಶೀರ್ಷಿಕೆಯಲ್ಲಿ ಸಂವಾದ ಕಾರ್ಯಕ್ರಮ ಜು.18ರಂದು ಬಿಜೈ ಕಾಪಿಕಾಡ್‌ನ ಅಜಂತಾ ಬಿಸಿನೆಸ್ ಸೆಂಟರ್‌ನಲ್ಲಿ ಜರುಗಿತು.ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್‌ಸ್ಪೇಸ್‌ನ ವ್ಯವಸ್ಥಾಪಕ ಪಾಲುದಾರಗುರುದತ್ತ ಶೆಣೈಅವರು ’ಜಾಗತಿಕತಂತ್ರಜ್ಞಾನ ಶ್ರೇಷ್ಠತೆಯಲ್ಲಿ ಮಂಗಳೂರಿನ

ಈದಿನ ಯೂಟ್ಯೂಬ್ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ

ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಆ ಮೂಲಕ ಧರ್ಮಸ್ಥಳ ಮತ್ತು ಸೌಜನ್ಯ ವಿಚಾರಕ್ಕೆ ಸಂಬಂಧಿಸಿ ಈದಿನ ಡಾಟ್ ಕಾಮ್‌ಗೆ ಮೊದಲ ಗೆಲುವು ಸಿಕ್ಕಿದಂತಾಗಿದೆ. ಧರ್ಮಸ್ಥಳ ಮತ್ತು ಸೌಜನ್ಯ ವಿಷಯಕ್ಕೆ ಸಂಬಂಧಿಸಿದ ಸುದ್ದಿ ಪ್ರಕಟಿಸದಂತೆ ಇದ್ದ ಸಿವಿಎಲ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಧರ್ಮಸ್ಥಳ ದೇವಸ್ಥಾನದ ಟ್ರಸ್ಟ್‌ನ ಕೆಲವರು ಈದಿನ ಡಾಟ್ ಕಾಮ್

ಬೈಂದೂರು: ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮವಾಸ್ಯೆ ಜಾತ್ರೆ ಸಂಭ್ರಮ

ಬೈಂದೂರು-ವಿಶ್ವವಿಖ್ಯಾತ ಮರವಂತೆಯ ಪ್ರಕೃತಿ ಸೊಬಗಿನ ತಾಣದಲ್ಲಿ ನೆಲೆ ನಿಂತಿರುವ ಪುರಾಣ ಪ್ರಸಿದ್ದ ಕ್ಷೇತ್ರ ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮವಾಸ್ಯೆ ಜಾತ್ರೆ ಸಂಭ್ರಮದಿಂದ ಜರುಗಿತು. ಮಳೆ ನಡುವೆ ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಅಭಿಷೇಕ, ಪೂಜೆ, ಅರ್ಪಣೆ ಸಲ್ಲಿಸಿದರು. ಸಹಸ್ರಾರು ಭಕ್ತರು ಸರತಿ

ಉಪ್ಪುಂದ ಸಂರಕ್ಷಿತ ಸಮುದ್ರ ಪ್ರಬೇಧಗಳ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

ಬೈಂದೂರು; ಯಶಸ್ವಿ ಫಿಶ್ ಮಿಲ್ ಮತ್ತು ಆಯಿಲ್ ಕಂಪೆನಿ, ಮಂಗಳೂರು ಐಸಿಎಆರ್-ಕೇಂದ್ರ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕೇಂದ್ರ, ಮೀನುಗಾರಿಕಾ ಇಲಾಖೆ – ಕರ್ನಾಟಕ ಸರ್ಕಾರ, ಸ್ಮಾಲ್ ಪೆಲಾಜಿಕ್ ಪರ್ಸಿನ್ ಫಿಷರೀಸ್ – ಕರ್ನಾಟಕ ಸ್ಪೇಟ್ FIP, ಆಳ ಸಮುದ್ರ ತಾಂಡೇಲರ ಸಂಘದ ವತಿಯಿಂದ ಅಳಿವಿನಂಚಿನಲ್ಲಿರುವ, ಅಪಾಯವನ್ನೆದುರಿಸುತ್ತಿರುವ, ಮತ್ತು ಸಂರಕ್ಷಿತ (ETP) ಸಮುದ್ರ ಪ್ರಭೇಧಗಳ ಸಂರಕ್ಷಣೆಯ ಕುರಿತು ಜಾಗ್ರತಿ ಮಾಹಿತಿ ಕಾರ್ಯಾಗಾರ

ಮೂಡುಬಿದಿರೆ: ಕಾಲೇಜು ವಿದ್ಯಾಥಿ೯ ಆತ್ಮಹತ್ಯೆ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕರಿಂಜೆಯಲ್ಲಿರುವ ನ್ಯೂ ವೈಬ್ರೆಂಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವನಿಗೆ ಆತನ ಪ್ರೇಯಸಿ ಮಾತು ಬಿಟ್ಟ ಕಾರಣ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ನೆಹರುನಗರದ ವಿನಾಯಕ ಟಿ.ಮಿಸಾಳ ಅವರ ಮಗ ಸೂರ್ಯಮ್ ವಿನಾಯಕ ಮಿಸಾಳ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಈತ ನ್ಯೂ ವೈಬ್ರೆಂಟ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು ತಾನು ವಾಸ್ತವ್ಯದಲ್ಲಿದ್ದ ರೂಮಿನಲ್ಲಿ ಡೆತ್ ನೋಟ್ ಬರೆದಿಟ್ಟು

ಪಡುಬಿದ್ರಿ ಅಡಿಗಳ್ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನಿಂದ ಸಮವಸ್ತ್ರ ವಿತರಣೆ

ಬ್ರಹ್ಮವಿದ್ಯಾ ಪ್ರಕಾಶಿನಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪಡುಬಿದ್ರಿ ಗಣಪತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಡಿಗಳ್ ಸುಬ್ರಾಯ ಭಟ್ ಮೆಮೋರಿಯಲ್ ಟ್ರಸ್ಟ್ ನ ವತಿಯಿಂದ ಸಮವಸ್ತ್ರವನ್ನು ವಿತರಣ ಕಾರ್ಯಕ್ರಮ ನಡೆಯಿತು. “ಬಾಲ್ಯದಲ್ಲಿ ವಿದ್ಯಾಭ್ಯಾಸ ಮಾಡಿದ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ನೀಡುವ ಯೋಗ ನಮಗೆ ದೊರಕಿದೆ. ಇದು ನಿಜಕ್ಕೂ ಸೌಭಾಗ್ಯ. ಶಾಲೆಯ ಋಣ ಬಹಳ ದೊಡ್ಡದು. ಈಗ ಈ ಮೂಲಕ ಋಣವನ್ನು ತೀರಿಸುವ ಅವಕಾಶ ದೊರೆತಿದೆ ” ಎಂದು

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮೊಗವೀರ ಸಮಾಜಕ್ಕೆ ನೀಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ಒತ್ತಾಯ

ಪಡುಬಿದ್ರಿ :- ಕರಾವಳಿ ಭಾಗದ ಉದ್ದಗಲಕ್ಕೂ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಮೊಗವೀರ ಸಮಾಜವು ಹಿಂದುಳಿದ ಸಮಾಜವಾಗಿದ್ದು..ಮೀನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತಿದ್ದು ಅಬ್ಬರದ ಕಡಲಿಗೆ ಎದೆ ಒಡ್ಡಿ ಜೀವ ಭಯ ಲೆಕ್ಕಿಸದೇ ಮೀನುಗಾರಿಕೆಯನ್ನು ಮಾಡಿಕೂಂಡು ಬರುತಿದ್ದು. ನ್ಯಾಯಯುತ ಬದುಕನ್ನು ನಡೆಸುತಿರುವ ಮೊಗವೀರ ಸಮಾಜವು ಸರ್ಕಾರದ ಸ್ಥಾನ ಮಾನವನನ್ನು ಪಡೆಯುವಲ್ಲಿ ವಂಚಿತರಾಗಿದ್ದು .ಅದ್ದರಿಂದ ಈ ಬಾರಿ ಕಾಂಗ್ರೆಸ್ ಸರ್ಕಾರ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ

ಕಾಪು : ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

ಕಾಪು ವಿಧಾನಸಭಾ ಕ್ಷೇತ್ರದ ಕಾಪು ತಾಲೂಕಿನ 16 ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ತಹಶೀಲ್ದಾರರ ಕಚೇರಿಯಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಕಾಪು ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ ಬರುನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲಭ್ಯವಿರುವ ನಿವೇಶಗಳನ್ನು ನಿವೇಶನ ರಹಿತರಿಗೆ ಹಂಚಿಕೆ ಮಾಡುವ ಬಗ್ಗೆ ಹಾಗೂ ಸರಕಾರಿ ನಿವೇಶನವನ್ನು ಗುರುತಿಸಿ ಸರ್ವೆ

ಉರ್ವ ಸ್ಟೋರ್ ಅಂಬೇಡ್ಕರ್ ಭವನ ಮಂಗಳೂರಿನಲ್ಲಿ ಆಗಸ್ಟ್ 3 ಭಾನುವಾರದಂದು “ಕುಂದಾಪುರ ಕನ್ನಡ ಹಬ್ಬ -2025”

ಕುಂದಗನ್ನಡದ ನೆಲದಲ್ಲಿ ಹುಟ್ಟಿ, ಬದುಕಿಗೊಂದು ನೆಲೆಯರಸಿ ಮಂಗಳೂರಿಗೆ ಬಂದು ಸೇರಿ, ಇಲ್ಲಿಯವರಾದವರೆಲ್ಲರೂ ಸೇರಿ, ತಮ್ಮ ಮೂಲ ಸಂಸ್ಕೃತಿ, ಭಾಷೆ, ಆಚರಣೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಸಲುವಾಗಿ “ಕುಡ್ಲದಗಿಪ್ಪ ಕುಂದಾಪ್ರದರ್” ಎಂಬ ವಾಟ್ಸಾಪ್ ಬಳಗವನ್ನು ರಚಿಸಿಕೊಂಡಿದ್ದಾರೆ. ಈಗ ಈ ವಾಟ್ಸಾಪ್ ಬಳಗದ ಸದಸ್ಯರ ಸಂಖ್ಯೆ 650ನ್ನು ಮೀರಿದೆ.ಈ ವಾಟ್ಸಾಪ್ ಬಳಗದ ಸದಸ್ಯರೆಲ್ಲರೂ ಸೇರಿ , ಕಳೆದ ಐದು ವರ್ಷಗಳಿಂದ, ಆಷಾಢ ಮಾಸದ ಒಂದು