Home Posts tagged V4News (Page 867)

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್‍ನಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ

ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹೇಳಿದರು. ಅವರು ಸುರತ್ಕಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಡ್ಯಾ ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು

ಕ್ಯಾಂಪ್ಕೋದಿಂದ ಹಲಸಿನ ಹಣ್ಣಿನ ಚಾಕಲೇಟ್

ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದೀಗ ಹಲಸಿನ ಹಣ್ಣು ಬಳಸಿ ಚಾಕಲೇಟ್ ಉತ್ಪಾದಿಸುವ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಜಾಕ್‍ಪ್ರಟ್ ಎಕ್ಲೇರ್ಸ್ ಹೆಸರಿನಲ್ಲಿ ಈ ಚಾಕಲೇಟ್ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಹಣ್ಣಿನಿಂದ ತಯಾರಿಸಿದ ಚಾಕಲೇಟ್ ಉತ್ಪನ್ನ ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಹೊರಬರುತ್ತಿದ್ದು, ಈ ಸಾಧನೆ ತೋರಿದ ಭಾರತದ ಮೊದಲ ಸಂಸ್ಥೆಯೆಂದೂ ಕ್ಯಾಂಪ್ಕೋ ಗುರುತಿಸಿಕೊಂಡಿದೆ.

ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಕೊಡುವುದಕ್ಕೆ ಆಗಿಲ್ಲ: ಡಿ.ಕೆ. ಶಿವಕುಮಾರ್

ಮಂಗಳೂರು: ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು. ಯಾವ ಅಧಿಕಾರಿಗಳು ಅವರ ಮಾತು

ಉಡುಪಿಯ ಪೆರ್ಣಂಕಿಲದಲ್ಲಿ ಬೋನಿಗೆ ಬಿದ್ದ ಚಿರತೆ

ಪೆರ್ಣಂಕಿಲದಲ್ಲಿ ಗ್ರಾಮಸ್ಥರನ್ನು ಬಹು ದಿನಗಳಿಂದ ಕಾಡುತ್ತಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಗ್ರಾಮದಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ಚಿರತೆ ಕಳೆದ ರಾತ್ರಿ ಪೆರ್ಣಂಕಿಲದ ಗುಂಡುಪಾದೆ ಎಂಬಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿಯಲು ಗುಂಡುಪಾದೆಯ ಅಶೋಕ್ ನಾಯಕ್ ಎಂಬವರ ತೋಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಇರಿಸಿದ್ದರು. ಕಳೆದ ರಾತ್ರಿ ಚಿರತೆ ಇದರೊಳಗೆ ಸೆರೆಯಾಗಿದೆ. ಇಂದು ಬೆಳಗ್ಗೆ

ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ: ಸಿದ್ದರಾಮಯ್ಯ

ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು

ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಮಾರಾಟ ಆರೋಪ: ಬೈಂದೂರು ತಹಶೀಲ್ದಾರ್ ಸ್ಥಳಕ್ಕೆ ಭೇಟಿ, ಪರಿಶೀಲನೆ

ಕುಂದಾಪುರ: ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಶಾಲಾ ಮಕ್ಕಳಿಗೆ ವಿತರಿಸಲಾದ ಅಡುಗೆ ಎಣ್ಣೆ ಅಂಗಡಿಯೊಂದರಲ್ಲಿ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆ ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಲಾಕ್ ಡೌನ್ ಹಿನ್ನೆಲೆ ಶಾಲಾ ಮಕ್ಕಳಿಗೆ ವಿತರಿಸುವ ಅಡುಗೆ ಎಣ್ಣೆ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತೆಗ್ಗರ್ಸೆ ಅಂಗಡಿಯೊಂದರಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಗ್ರಾಹಕರೋರ್ವರು

ಪುತ್ತೂರಿನಲ್ಲಿ ಅಕ್ರಮ ಗೂಡಂಗಡಿಗಳ ತೆರವು: ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ

ಪುತ್ತೂರು ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಅಂಗಡಿಗಳ ತೆರವು ಕಾರ್ಯಾಚರಣೆಗೆ ಪುತ್ತೂರು ನಗರ ಸಭೆ ಜು.೨೩ರ ಬೆಳ್ಳಂಬೆಳಗ್ಗೆ ಮುಂದಾಗಿದೆ. ಜೆಸಿಬಿ ಮೂಲಕ ನಗರ ಸಭೆ ಪೌರಾಯುಕ್ತ ಹಾಗೂ ಇತರ ಅಧಿಕಾರಿಗಳ ಸಮಕ್ಷಮದಲ್ಲಿ ಆಕ್ರಮ ಶೆಡ್ ಗಳನ್ನೂ ಕೆಡವಲಾಗುತ್ತಿದೆ. ತಳ್ಳು ಗಾಡಿಯ ಅನುಮತಿ ಪಡೆದು, ಒಂದಷ್ಟು ಸಮಯದ ಬಳಿಕ ಅಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ ವ್ಯಾಪಾರ ನಡೆಸುತಿದ್ದವರಿಗೆ ನಗರ ಸಭೆ ಈ ಮೂಲಕ ಇಂದು ನಸುಕಿನ ವೇಳೆ ಆಘಾತ ನೀಡಿದೆ. ಈ ಅಂಗಡಿಗಳು

ಜೀವವನ್ನು ಪಣಕ್ಕಿಟ್ಟು ಪರೀಕ್ಷೆ ಬರೆದ ಎಸ್ಸೆಸ್ಸೆಲ್ಸಿ ಮಕ್ಕಳು

ಜಿಟಿ ಜಿಟಿ ಮಳೆ. ತುಂಬಿ ಹರಿಯುತ್ತಿರುವ ಸೌಪರ್ಣಿಕೆ. ಆ ಭಾಗದ ಮಕ್ಕಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕೆಂದರೆ ತುಂಬಿ ಹರಿಯುವ ನದಿಯನ್ನು ದೋಣಿ ಮೂಲಕ ದಾಟಿ ಜೀವವನ್ನು ಪಣಕ್ಕಿಟ್ಟು ಪರೀಕ್ಷೆಯನ್ನು ಬರೆಯಬೇಕು. ಆದರೆ ಮಕ್ಕಳ ಸುರಕ್ಷತೆಗಾಗಿ ಖುದ್ದು ಡಿಡಿಪಿಐ ಉಡುಪಿಯಿಂದ ಬಂದು ಪರೀಕ್ಷಾ ಕೇಂದ್ರಕ್ಕೆ ದೋಣಿಯ ಮೂಲಕ ಮಕ್ಕಳನ್ನು ಕರೆದೊಯ್ದ ಅಪರೂಪದ ಸ್ಟೋರಿಯನ್ನು ನಾವಿವತ್ತು ನಿಮ್ಮ ಮುಂದೆ ಇಡುತ್ತಿದ್ದೇವೆ ನೋಡಿ..   ಒಂದೆಡೆ ಜಿಟಿಜಿಟಿ ಮಳೆಯಲಿ ನೆನೆದು

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಲು ಆಗ್ರಹ : ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ

ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‍ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು