Home Posts tagged V4News (Page 878)

ಉದಯ್ ಗಾಣಿಗ ಕೊಲೆ ಪ್ರಕರಣದಲ್ಲಿ ನನ್ನ ಧ್ವನಿ ಅಡಗಿಸುವ ಬಿಜೆಪಿಯ ಪ್ರಯತ್ನ ಫಲಿಸದು: ಸೊರಕೆ ವಾಗ್ದಾಳಿ

ಕುಂದಾಪುರ: ಉದಯ್ ಗಾಣಿಗ ಕೊಲೆ ಪ್ರಕರಣವನ್ನು ಖಂಡಿಸಿ ನಾನು ಹಲವು ಸಂದರ್ಭಗಳಲ್ಲಿ ಧ್ವನಿ ಎತ್ತಿದ್ದೇನೆ. ಇದನ್ನು ಸಹಿಸದ ಬಿಜೆಪಿ ಮುಖಂಡರು ನನ್ನ ಧ್ವನಿಯನ್ನು ಅಡಗಿಸುವ ಪ್ರಯತ್ನ ಮಾಡಿದರು. ನಾನು ಪುತ್ತೂರಿನವನು ಹಾಗೂ ಹಿಂದೂ ವಿರೋಧಿ ಎಂದು ಜರಿದರು. ಈ ಜಿಲ್ಲೆಯ ಜನ ನನ್ನನ್ನು ಸಂಸದನಾಗಿ ಆಯ್ಕೆ ಮಾಡಿದ್ದಾರೆ. ಹೀಗಾಗಿ ಇಲ್ಲಿನ ಜನರ ಋಣ ನನ್ನ ಮೇಲಿದೆ. ಈ ಮುಗ್ಧ

ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಳೆದ ಸುಮಾರು ವರ್ಷಗಳಿಂದ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರು ಲಯನ್ಸ್ ಕ್ಲಬ್ ಇಂಟರ್‌ನ್ಯಾಶನಲ್ ಇದರ ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿ, ಪಡೀಲ್ ಡಿಸ್ಟ್ರಿಕ್ಟ್ 317ಡಿ ಇದರ 2021-22ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಲಯನ್ಸ್ ಸೇವಾ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 2021-22ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಲಯನ್ ವೇಣಿ ಮರೋಳಿಯವರಿಗೆ ಫಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಲಯನ್.ಎಂ.ಅರುಣ್ ಶೆಟ್ಟಿ

ಬೋರ್ಕಳ-ಉಪ್ಪಳ ಸಂಪರ್ಕಿಸುವ ರಸ್ತೆಯ ದುಸ್ಥಿತಿ: ರಸ್ತೆಯಲ್ಲೇ ಹರಿಯುತ್ತಿರುವ ಮಳೆ ನೀರು

ಮಂಜೇಶ್ವರ: ಮಂಜೇಶ್ವರ ವರ್ಕಾಡಿ ಪಂಚಾಯತಿಗೆ ಒಳಪಟ್ಟ ಆನೆಕ್ಕಲ್ಲು ಕತ್ತರಕೋಡಿ ಬೋರ್ಕಳ ಮಾರ್ಗವಾಗಿ ಉಪ್ಪಳಕ್ಕೆ ಹೋಗುವ ರಸ್ತೆಯ ಸ್ಥಿತಿ ತುಂಬಾ ಶೋಚನೀಯವಾಗಿದೆ. ಪ್ರತಿದಿನ ನೂರಾರು ವಾಹನಗಳು ಸಂಚರಿಸುವ ಹಾಗೂ ನೂರಾರು ಕಾಲ್ನಡಿಗೆ ಯಾತ್ರಿಕರು ಆಶ್ರಯಿಸುವ ಏಕೈಕ ರಸ್ತೆಯಾಗಿದೆ. ಜನರು ನಡೆದು ಹೋಗಲು ಅಥವಾ ತುರ್ತು ಸಮಯಗಳಲ್ಲಿ ರೋಗಿಗಳನ್ನು ಕೊಂಡೊಯ್ಯಲು ಬೇರೆ ದಾರಿಯಿಲ್ಲ ಏಕೆಂದರೆ ಈ ಮಳೆಗಾಲದಲ್ಲಿ ಜನರು ನಡೆಯುವುದು ತುಂಬಾ ಕಷ್ಟದಿಂದ ಹಾಗೂ ವಾಹನಗಳ ಸಂಚಾರವೂ

ಬನ್ನೂರಿನ ಕಜೆ ಎಂಬಲ್ಲಿ ಕುಸಿದು ಬೀಳುವ ಹಂತದಲ್ಲಿರುವ ಮನೆ:ಕಾವು ಹೇಮನಾಥ್ ಶೆಟ್ಟಿ ಭೇಟಿ ಪರಿಶೀಲನೆ

ಪುತ್ತೂರು ತಾಲೂಕು ಬನ್ನೂರು ಗ್ರಾಮದ ಕಜೆ ಎಂಬಲ್ಲಿಯ ನಿವಾಸಿ ಸಂತೋಷ್ ಎಂಬವರ ಮನೆಯ ದಕ್ಷಿಣ ಭಾಗದ ಮಣ್ಣನ್ನು ಪಕ್ಕದ ಮನೆಯವರು ಅವೈಜ್ಞಾನಿಕವಾಗಿ ಅಗೆದ ಕಾರಣ ವಿಪರೀತ ಮಳೆಯಿಂದ ಮಣ್ಣು ಕುಸಿಯುತ್ತಿದೆ. ಕೆಲವೇ ಅಡಿಗಳ ಅಂತರದಲ್ಲಿ ಸಂತೋಷ್ ಅವರ ಮನೆಯು ಇರುವುದರಿಂದ ಮತ್ತು ಪಕ್ಕದ ಮನೆ ಸುಮಾರು 30  ಅಡಿಗಳಷ್ಟು ಆಳದಲ್ಲಿ ಇರುವುದರಿಂದ ಎರಡೂ ಮನೆಯವರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ್

ಮಂಗಳೂರಿನ ಎಸ್‌ ಸಿಡಿಸಿಸಿ ಬ್ಯಾಂಕ್‌ ನಿಂದ ರೈತಸ್ಪಂದನ ಕಾರ್ಯಕ್ರಮ:ವಿವಿಧ ಕೃಷಿ ಸಾಲ ವಿತರಣೆ

ಮಂಗಳೂರು: ರಾಜ್ಯದ ಕೋವಿಡ್ ಸಂತ್ರಸ್ತರ ಕುಟುಂಬದ 81ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.  ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡ ’ರೈತ ಸ್ಪಂದನ’ ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಕೃಷಿಕರಿಗೆ ವಿವಿಧ ರೀತಿಯ ಸಾಲ ವಿತರಿಸಿದರು. ಬಳಿಕ ಮಾತನಾಡಿದ್ರು, ಕೋವಿಡ್ ಸಂತ್ರಸ್ತ

ಬಿಜೆಪಿ ಮತ್ತು ಕಾಂಗ್ರೆಸ್ ಪ್ರತಿಭಟನಾಕಾರರ ಮುಖಾಮುಖಿ: ಕಾವಳಕಟ್ಟೆಯಲ್ಲಿ ವಾಗ್ವಾದ

ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ನಡೆದಿದೆ. ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆಯನ್ನು ಏಕಾಏಕಿ ಏರಿಕೆಯನ್ನು

ಆಳ್ವಾಸ್‌ ನ ಇಬ್ಬರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್ ಗೆ ಆಯ್ಕೆ

ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷಿ ಹಾಗೂ ಶುಭ ಇವರು 4*400 ಮಿಕ್ಸಡ್  ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಭತ್ತ ಕೃಷಿಯಲ್ಲಿ ತೊಡಗಿಸಿಕೊಂಡ ನಿಟ್ಟೆ ಪಿಯು ಕಾಲೇಜಿನ ವಿದ್ಯಾರ್ಥಿಗಳು

ಉಳ್ಳಾಲ: ಮಂಗಳೂರಿನ ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪಿಲಾರು ಇರ್ನೂರು ಗುತ್ತು ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಾಲೇಜಿನ ಎನ್‍ಸಿಸಿ ವಿಭಾಗದ ಹಲವು ವಿದ್ಯಾರ್ಥಿಗಳು ಭತ್ತದ ನಾಟಿಯಲ್ಲಿ ತಮ್ಮನ್ನು ತೊಡಗಿಸಿದ್ದು, ಕೃಷಿ ಚಟುವಟಿಕೆಗಳನ್ನು ಮತ್ತೆ ನೆನಪಿಸಿಕೊಂಡರು.    ಮಾಜಿ ಶಾಸಕ ಜಯರಾಮ ಶೆಟ್ಟಿ ಕೆ. ಭಾಗವಹಿಸಿ ಮಾತನಾಡಿ ಕೃಷಿ ಕ್ಷೇತ್ರ ಆಧುನೀಕರಣಗೊಳ್ಳಬೇಕು, ಬದಲಾವಣೆಗಳಾಗಬೇಕು ಅನ್ನುವ

ಶ್ರೀ ಕ್ಷೇತ್ರ ಪೊಳಲಿ ಅವರಣದಲ್ಲಿ ಸಾರಿಗೆ ಸುರಕ್ಷಾ-ಐಸಿಯು ಬಸ್‌ಗೆ ಸಚಿವ ಕೋಟಾ ಚಾಲನೆ

ಬಂಟ್ವಾಳ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಸಂಸ್ಥೆ ವಿನ್ಯಾಸಗೊಳಿಸಿಸದ ’ ಸಾರಿಗೆ ಸುರಕ್ಷಾ-ಐಸಿಯು ಬಸ್’ ಗೆ ಶ್ರೀಕ್ಷೇತ್ರ ಪೊಳಲಿ ಅವರಣದಲ್ಲಿ ಚಾಲನೆ ನೀಡಲಾಯಿತು. ದ.ಕ.ಜಿಲ್ಲಾ ಉಸ್ತಿವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ದ.ಕ.ಜಿಲ್ಲೆಯಲ್ಲೆ ಮೊದಲಿಗೆ ಮಂಗಳೂರು ಮತ್ತು ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗ

ಉಡುಪಿ ಜಿಲ್ಲೆಯ ಮೂವರು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪ್ರದಾನ

ಅಗ್ನಿ ಶಾಮಕ ದಳ ಹಾಗೂ ತುರ್ತು ಸೇವಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಮೂವರು ಸಿಬ್ಬಂದಿಗಳಿಗೆ ಕರ್ನಾಟಕ ಸರಕಾರದಿಂದ ನೀಡುವ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೀಡಿ ಗೌರವಿಸಿದ್ದಾರೆ.  ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪದಕ‌ ಪ್ರಧಾನ ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳ ಜಿಲ್ಲಾ ಮುಖ್ಯ ಅಧಿಕಾರಿ ಹೆಚ್ ಎಂ ವಸಂತ್ ಕುಮಾರ್, ಅಶ್ವಿನ್ ಸನಿಲ್ ಹಾಗೂ ಎಂ. ಕೇಶವ್ ಇವರಿಗೆ ಮುಖ್ಯಮಂತ್ರಿಗಳಿಂದ