Home Posts tagged V4News (Page 881)

ಕುಂಬ್ರದ ಶಾಲೆಯ ಮೈದಾನದಲ್ಲಿ ನಳನಳಿಸಲಿದೆ ಭತ್ತದ ಪೈರು

ಶಾಲೆಯ ಮೈದಾನದಲ್ಲಿ ಮಕ್ಕಳ ಕಲರವ ಕೇಳಿಸೋದು ಸಾಮಾನ್ಯ. ಆದರೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈ ಶಾಲೆಯ ಮೈದಾನದಲ್ಲಿ ಇನ್ನು ನಾಲ್ಕು ತಿಂಗಳ ಕಾಲ ಮಕ್ಕಳ ಕಲರವ ನಿಲ್ಲಲಿದ್ದು, ಈ ಸ್ಥಾನವನ್ನು ನಳನಳಿಸುವ ಭತ್ತದ ಪೈರುಗಳು ತುಂಬಲಿದೆ. ಸಂಘ-ಸಂಸ್ಥೆಗಳ ಸಹಕಾರದಿಂದ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ ಈ ಭತ್ತದ ಗದ್ದೆ ಸಿದ್ಧಮಾಡಲಾಗಿದ್ದು, ಕೆಲವೇ ದಿನಗಳಲ್ಲಿ ಭತ್ತದ ಗಿಡಗಳ ನಾಟಿಯೂ ಆರಂಭಗೊಳ್ಳಲಿದೆ. ಹೌದು ರಾಜ್ಯದಲ್ಲೇ ಮೊದಲ ಬಾರಿಗೆ ಈ

ಮಂಗಳೂರು ಶ್ರೀನಿವಾಸ್ ವಿವಿಯಲ್ಲಿ ವರ್ಚುವಲ್ ಸಮ್ಮೇಳನ

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಸ್ ಇದರ ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆಯ ಮೂಲಕ ವರ್ಚುವಲ್ ಸಮ್ಮೇಳನ ನಡೆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಶೆರಾಟನ್ ಗ್ರ್ಯಾಂಡ್ ಬೆಂಗಳೂರು- ಮ್ಯಾರಿಯಟ್ ಇಂಟರ್ನ್ಯಾಷನಲ್ ನ

ದೆಹಲಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲ: ಬೆಳ್ತಂಗಡಿಯಲ್ಲಿ ರೈತ ಸಂಯುಕ್ತ ಮೋರ್ಚಾದಿಂದ ಪ್ರತಿಭಟನೆ

“ಕೃಷಿ ಉಳಿಸಿ ಪ್ರಜಾಪ್ರಭುತ್ವ ರಕ್ಷಿಸಿ” ಘೋಷಣೆಯಡಿಯಲ್ಲಿ ಭಾರತಾದ್ಯಂತ ಪ್ರತಿಭಟನೆ ನಡೆಸಿ ದೆಹಲಿಯಲ್ಲಿ ಕಳೆದ ಏಳು ತಿಂಗಳಿಂದ ನಿರಂತರವಾಗಿ ನಡೆಯುತ್ತಿರುವ ರೈತ ಹೋರಾಟ ಬೆಂಬಲಿಸಿ ಹೋರಾಟ ನಡೆಸಲು ರೈತ ಸಂಯುಕ್ತ ಮೋರ್ಚ ನೀಡಿದ ಕರೆಯಂತೆ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಹಿರಿಯ ಕಮ್ಯೂನಿಸ್ಟ್ ನಾಯಕ ಬಿ.ಎಂ.ಭಟ್ ಮಾತಾಡುತ್ತಾ ಕೊರೋನಾ ಸಂಕಷ್ಟದ ಲಾಕ್ ಡೌನ್ ಸಮಯದಲ್ಲಿ ರೈತ ವಿರೋದಿಯಾಗಿ ರೈತ ಪರ ಮಸೂದೆಗಳ ತಿದ್ದುಪಡಿ ಮಾಡಿದ ಬಿಜೆಪಿ

ಸ್ವಚ್ಚ ಪರಿಸರ ನಿರ್ಮಾಣ ಮಲೇರಿಯಾ ನಿಯಂತ್ರಣದಲ್ಲಿ ಯಶಸ್ವಿಗೆ ದಾರಿ- ಡಾ. ದೀಪಕ್ ರೈ 

ಪುತ್ತೂರು: ದೇಶದಲ್ಲಿ ಸೊಳ್ಳೆಗಳ ಮೂಲಕ ಹರಡುವ ಹಲವು ರೋಗಗಳಿದ್ದು, ಈ ಪೈಕಿ ಮಲೇರಿಯಾ ರೋಗವೂ ಒಂದಾಗಿದೆ. ನಮ್ಮ ಸುತ್ತ ಮುತ್ತ ನೀರು ನಿಲ್ಲದಂತೆ ಮಾಡಿ ಸ್ವಚ್ಚ ಪರಿಸರ ನಿರ್ಮಾಣ ಮಾಡುವುದರಿಂದ ಮಲೇರಿಯಾ ನಿಯಂತ್ರಣದಲ್ಲಿ ನಾವು ಯಶಸ್ವು ಕಾಣಲು ಸಾಧ್ಯ ಎಂದು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಹೇಳಿದರು. ಅವರು ದ.ಕ.ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಪುತ್ತೂರು ಇದರ ವತಿಯಿಂದ ಮಲೇರಿಯಾ

ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಕೋವಿಡ್ ಲಸಿಕಾ ಕಾರ್ಯಕ್ರಮ

ಬೈಕಂಪಾಡಿ ಮಹಿಳಾ ಸಮಾಜದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ರೆಡ್‍ಕ್ರಾಸ್ ಸಂಸ್ಥೆಯ ಸಹಕಾರದೊಂದಿಗೆ ಇಂದಿರಾ ಮಾಧವ ವಿದ್ಯಾರ್ಥಿ ಭವನದಲ್ಲಿ ಕಳೆದ ಮೂರು ದಿನಗಳಿಂದ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಯುತ್ತಿದೆ.ಬೈಕಂಪಾಡಿಯ ಎಲ್ಲಾ ವಯೋ ಮಾನದ ಜನರಿಗೆ ಮತ್ತು ಮುಖ್ಯವಾಗಿ ಮೀನುಗಾರಿಕಾ ವೃತ್ತಿಯವರಿಗೆ ಲಸಿಕೆಯನ್ನು ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬೈಕಂಪಾಡಿ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ನವೀನ್ ಸಾಲ್ಯಾನ್ ಅವರು ಮಾತನಾಡಿ,

ಉಡುಪಿ ಜಿಲ್ಲಾ ಎಸ್ಪಿ ನೇತೃತ್ವದಲ್ಲಿ ಮಾದಕ ವಸ್ತುಗಳ ನಾಶ

ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವಯರ್ ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು.  ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್

ವಿಟ್ಲದಲ್ಲಿ ವಾರಾಂತ್ಯದ ಕರ್ಪ್ಯೂ ಯಶಸ್ವಿ

ವಿಟ್ಲ: ಜಿಲ್ಲಾಡಳಿತ ಆದೇಶ ನೀಡಿದ ವಾರಾಂತ್ಯ ಕರ್ಫ್ಯೂ ವಿಟ್ಲದಲ್ಲಿ ಯಶಸ್ವಿಯಾಗಿದೆ. ವಿಟ್ಲದ ನಾಲ್ಕು ರಸ್ತೆಗಳಲ್ಲಿ ವಿಟ್ಲ ಪ್ರಭಾರ ಎಸೈ ರಾಜೇಶ್ ಕೆ.ವಿ ನೇತೃತ್ವದಲ್ಲಿ ಪ್ರೊಬೆಷನರಿ ಎಸೈ ಮಂಜುನಾಥ ಮತ್ತು ಪೊಲೀಸರ ತಂಡ ನಾಕಾಬಂಧಿ ಅಳವಡಿಸಿದ್ದರು. ಹಾಲು ಮತ್ತು ಮೆಡಿಕಲ್ ಹೊರತುಪಡಿಸಿ, ಅನಗತ್ಯವಾಗಿ ಪೇಟೆಗೆ ಬಂದ ವಾಹನಗಳನ್ನು ಮುಟ್ಟುಗೋಲು ಹಾಕಲಾಯಿತು. ವಿಟ್ಲ ಪೇಟೆಯಲ್ಲಿ ಜನಸಂಚಾರ, ವಾಹನಗಳಿಲ್ಲದೇ ಬಿಕೋ ಎನ್ನುತ್ತಿದ್ದು, ಪೇಟೆ ಸಂಪೂರ್ಣ ಸ್ತಬ್ಧಗೊಂಡಿದೆ.

ಮರಕಡದಲ್ಲಿ ಹಿರಿಯ ಚೇತನಗಳೊಂದಿಗೆ ಮಾತುಕತೆ : ತ್ಯಾಗವನ್ನು ಅಭಿನಂದಿಸಿ ಸನ್ಮಾನಿಸಿದ ಶಾಸಕ ಡಾ. ಭರತ್ ಶೆಟ್ಟಿ

ಇಂದಿರಾಗಾಂಧಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ವಂದೇ ಮಾತರಂ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ ಕಾರಣಕ್ಕೆ ಜೈಲುವಾಸ ಶಿಕ್ಷೆ ಅನುಭವಿಸಿ ಕಳಪೆ ಆಹಾರವನ್ನು ಸೇವಿಸುವ ಪರಿಸ್ಥಿತಿ ಬಂದಾಗಲೂ ಜೈಲಿನಲ್ಲಿ ಸ್ವಾತಂತ್ರ್ಯಯೋಧರ ಕಥೆಗಳನ್ನು ವಾಚಿಸುತ್ತಾ, ಜೈಲಿನಲ್ಲಿಯೇ ಸಂಘದ ಶಾಖೆ ಮಾಡುತ್ತಾ, ಭಜನೆಗಳನ್ನು ಹಾಡುತ್ತಾ ಕಳೆದ ದಿನಗಳನ್ನು ಹಿರಿಯರು ಹೇಳುವಾಗ ರೋಮಾಂಚನವಾಗುತ್ತದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ಹೇಳಿದರು. ಅವರು ಮರಕಡ ವಾರ್ಡಿನ ಲೀಲಾ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ : ಮಂಗಳೂರಲ್ಲಿ ಅನಗತ್ಯ ಓಡಾಡುತ್ತಿದ್ದ ವಾಹನಗಳು ಸೀಝ್

 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ವೀಕೆಂಡ್ ಕರ್ಪ್ಯೂ ಹಿನ್ನೆಲೆನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಬಂದೋ ಬಸ್ ಮಾಡಲಾಗಿದೆ. ನಗರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ.40ಕ್ಕೂ ಅಧಿಕ ಕಡೆ ಚೆಕ್ ಪೋಸ್ಟ್‍ಗಳನ್ನು ಮಾಡಿದ್ದು ಪ್ರತೀ ಚೆಕ್‍ಪೋಸ್ಟ್‍ನಲ್ಲೂ 10ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.. ಮೆಡಿಕಲ್ ಮತ್ತು ತುರ್ತು ಸೇವೆ ಹೊರತುಪಡಿಸಿ ಸಂಚರಿಸೋ ವಾಹನಗಳನ್ನು ಪೊಲೀಸರು ಸೀಝ್