ಕುಂದಾಪುರ: ಆಕಸ್ಮಾತ್ ಸೌಕೂರು ಏತ ನೀರಾವರಿ ಯೋಜನೆಯ ಮೂಲನಕ್ಷೆ ಬದಲಾವಣೆಯಾಗಿದೆ ಎಂದಾದರೆ ಈ ಬಗ್ಗೆ ಪರಿಶೀಲನೆ ಮಾಡೋಣ. ಕುಡಿಯಲು ಹಾಗೂ ಕೃಷಿಗೆ ನೀರು ನೀಡಲು ಸೌಕೂರು ಹಾಗೂ ಸಿದ್ದಾಪುರ ಎರಡು ಯೋಜನೆಗಳು ಆಗಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು. ಇಲ್ಲಿನ ಹೆಮ್ಮಾಡಿಯ ಜ್ಯೂವೆಲ್ ಪಾರ್ಕ್ನ ಜಯಶ್ರೀ ಸಭಾಂಗಣದಲ್ಲಿ ಸೋಮವಾರ ನಡೆದ
ಕಳೆದ ಬಾರಿ ಕೊರೋನಾ ಲಾಕ್ ಡೌನ್ ಸಂಕಷ್ಟದ ಸಂದರ್ಭದಲ್ಲಿ 8 ತಿಂಗಳ ಕಾಲ ದೇಶದ ಜನರಿಗೆ ಉಚಿತವಾಗಿ ಆಹಾರಧಾನ್ಯ ವ್ಯವಸ್ಥೆ ಮಾಡಲಾಗಿತ್ತು. ಅದೇ ರೀತಿ ಈ ವರ್ಷವೂ ಮೇ ಮತ್ತು ಜೂನ್ ತಿಂಗಳಲ್ಲಿ ಉಚಿತವಾಗಿ ಆಹಾರಧಾನ್ಯ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದ್ದು, ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು ಎಂದು ಭಾಷಣದಲ್ಲಿ ಪ್ರಧಾನಿ ಮೋದಿ
ಮಂಗಳೂರಿನ ಪ್ರಖ್ಯಾತ ವೈದ್ಯ ಡಾ| ಬಿ ಶ್ರೀನಿವಾಸ ಕಕ್ಕಿಲ್ಲಾಯರು ಮತ್ತು ಜಿಮ್ಮೀಸ್ ಮಾರ್ಕೇಟಿನ ಸಿಬ್ಬಂದಿ ಮಧ್ಯೆ ನಡೆಯಿತೆನ್ನಲಾದ ಮಾತುಕತೆಗಳ ರಹಸ್ಯ ಸಿಸಿ ಟಿವಿ ದೃಶ್ಯವನ್ನು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಜಿಮ್ಮೀಸ್ ಸುಪರ್ ಮಾರ್ಕೇಟ್ ಮಾಲಕರ ವಿರುದ್ಧ ಹಾಗೂ ಜಿಮ್ಮೀಸ್ ಮಾಲಕ ಮತ್ತು ಪೈ ಎಂಬವರು ಡಾ| ಕಕ್ಕಿಲ್ಲಾಯರನ್ನು, ಕಮ್ಯುನಿಷ್ಟ್ ಪಕ್ಷವನ್ನು, ಡಾಕ್ಟರರ ತಂದೆ ಬಿ ವಿ ಕಕ್ಕಿಲ್ಲಾಯರನ್ನು ದೂಷಿಸುತ್ತಾ ಫೋನು ಮಾತುಕತೆ
ಕೊರೊನಾ ಸೋಂಕಿನ ನಿಯಂತ್ರಣದ ಸಲುವಾಗಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಮಾಸ್ಕ್ ಗಳು ಬಂದಿವೆ. ಮಂಗಳೂರು ಸಮೀಪದ ಗ್ರಾಮಾಂತರ ಪ್ರದೇಶದ ಯುವಕನೊಬ್ಬ ಪರಿಸರ ಸ್ನೇಹಿ ಮಾಸ್ಕ್ ನಿರ್ಮಿಸಿ ದೇಶದಾದ್ಯಂತ ಗಮನ ಸೆಳೆದಿದ್ದಾನೆ. ಈ ವಿನೂತನ ಮಾಸ್ಕ್ ನಲ್ಲಿ ಸಸ್ಯದ ಬೀಜಗಳನ್ನು ಅಳವಡಿಸಲಾಗಿದ್ದು, ಮಾಸ್ಕ್ ಬಳಸಿ ಬಿಸಾಡಿದಾಗ ಮಾಸ್ಕಿನಲ್ಲಿ ಅಳವಡಿಸಲಾದ ತರಕಾರಿ ಬೀಜಗಳು ಗಿಡವಾಗಿ ಬೆಳೆಯುತ್ತವೆ. ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾಸ್ಕ್ ಬಳಕೆಗೆ ಶಿಫಾರಸು ಮಾಡಲಾಗಿದೆ.
ಮಂಗಳೂರು ಮೂಲದ ಮೆಕ್ಯಾನಿಕಲ್ ಇಂಜಿನಿಯರ್ ಆಕಾಶ್ ಪ್ರಭು ಅವರು ಈ ವರ್ಷ ಮಿಸ್ಟರ್ ಸುಪ್ರಾನೇಶನಲ್ ಇಂಡಿಯಾ 2021 ರ ಫೈನಲಿಸ್ಟ್ (ಟಾಪ್ 10) ಆಗಿ ಅರ್ಹತೆ ಪಡೆದಿದ್ದು, ಪೋಲೆಂಡ್ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಕಾಶ್ ಪ್ರಭು ಅವರು, ಮಿಸ್ಟರ್ ಇಂಡಿಯಾ 2017 ರ ಬೆಂಗಳೂರು ಫೈನಲಿಸ್ಟ್ ಆಗಿದ್ದರು. ಈ ವರ್ಷ ಅವರು ಮಿಸ್ಟರ್ ಸುಪ್ರಾನೇಶನಲ್ ಇಂಡಿಯಾ 2021 ರ ಫೈನಲಿಸ್ಟ್ ಆಗಿ ಆಯ್ಕೆಯಾಗಿದ್ದಾರೆ. 25ರ ಹರೆಯದ ಆಕಾಶ್ ಪ್ರಭು, ಮೆಕ್ಯಾನಿಕಲ್ ಎಂಜಿನಿಯರ್
ಕುಂದಾಪುರ: ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಅಥವಾ ಮುಖ್ಯಮಂತ್ರಿಗಳಲ್ಲಾಗಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿನ್ನೆ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯಕ್ರಮದಲ್ಲಿ ದೇವರಾಜು ಅರಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು, ಹೈಕಮಾಂಡ್ ನನಗೆ ಸಹಮತ ಕೊಟ್ಟು ನಾನೊಬ್ಬ
ಬಂಟ್ವಾಳ : ಕರೋನಾ ಮಹಾಮಾರಿ ಯಿಂದ ಜನರಿಗೆ ಸಾಕಷ್ಟು ತೊಂದರೆಯಾಗಿದ್ದು, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಜನರಿಗೆ ಅಗತ್ಯ ನೆರವು ನೀಡುವುದರ ಜೊತೆಯಲ್ಲಿ ಕಾಲಕಾಲಕ್ಕೆ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ನಡೆಸುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಯೋಜನೆ ರೂಪಿಸಬೇಕು ಎಂದರು.ರೆಡಿಸೀವರ್ ಹಾಗೂ ಬ್ಲಾಕ್ ಫಂಗಸ್ನ ಔಷಧಿಗಳು
ಪಡುಬಿದ್ರಿ ಮಾರುಕಟ್ಟೆ ರಸ್ತೆಯಲ್ಲಿ ನಿರಂತರ ಸಾಮಾಜಿಕ ಅಂತರವಿಲ್ಲದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದರಿಂದ ಬೀದಿಬದಿ ವ್ಯಾಪಾರಿಗಳನ್ನು ಗ್ರಾ.ಪಂ. ಪಕ್ಕದ ಸರ್ಕಾರಿ ಶಾಲಾ ಮೈದಾನಕ್ಕೆ ಸ್ಥಳಾಂತರಿಸಿದ್ದರೂ.. ಅಂಗಡಿ ಹೊಂದಿರುವ ತರಕಾರಿ ವ್ಯಾಪಾರಿಗಳು ರಸ್ತೆಯಲ್ಲೇ ತರಕಾರಿಗಳನ್ನು ಇಟ್ಟು ವ್ಯಾಪಾರನಡೆಸುತ್ತಿರುವ ಬಗ್ಗೆ ಜನರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಮುಖ್ಯ ಮಾರುಕಟ್ಟೆಯ ರಸ್ತೆಗೆ ಅಂಟಿಕೊಂಡೇ
ಪುತ್ತೂರು: 34 ನೆಕ್ಕಿಲಾಡಿ ಗ್ರಾಪಂ ವ್ಯಾಪ್ತಿಯ ಮೈಂದನಡ್ಕದಲ್ಲಿ ಸಾರ್ವಜನಿಕ ಆಟದ ಮೈದಾನದ ಪ್ರವೇಶ ದಾರಿಯನ್ನು ಮುಚ್ಚಿ ಧರ್ಮಾಧಾರಿತ ರಾಜಕಾರಣದ ಮೂಲಕ ಸಮಾಜದ ಸಾಮರಸ್ಯವನ್ನು ಒಡೆಯುವ ಹುನ್ನಾರ ಗ್ರಾಪಂ ನಡೆಸಿದ್ದು, ಇದೊಂದು ಸಂಘರ್ಷದ ವಾತಾವರಣ ಉಂಟುಮಾಡುವ ಕಾರ್ಯವಾಗಿದೆ ಎಂದು ಮೈಂದನಡ್ಕ ಶಾಂತಿ-ಸೌಹಾರ್ದತೆ ಉಳಿಸಿ ಹೋರಾಟ ಸಮಿತಿ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಎ.ಜತೀಂದ್ರ ಶೆಟ್ಟಿ ಅಲಿಮಾರ್ ಮಾತನಾಡಿ, ಕಳೆದ ಎಂಟು ವರ್ಷಗಳಿಂದ ಸತತವಾಗಿ
ಮೂಡುಬಿದಿರೆ : ಕಳೆದ ಮೂರು ದಿನಗಳಿಂದ ಬೆಳಿಗ್ಗೆ 6-10 ಗಂಟೆಯ ನಂತರ ಸುಮ್ಮನೆ ಕಾಲ ಕಳೆಯಲು ಮೂಡುಬಿದಿರೆ ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಟ ಮಾಡಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದ 31 ವಾಹನಗಳನ್ನು ಮೂಡುಬಿದಿರೆ ಪೊಲೀಸರು ಜಫ್ತಿ ಮಾಡಿದ್ದು ಅಲ್ಲದೆ ಮಾಸ್ಕ್ ಧರಿಸದಿದ್ದ 70 ಜನರ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾರ್ಯಚರಣೆಯನ್ನು ಬಿಗಿಗೊಳಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಯ ಸಂದರ್ಭ ಬೆಳಿಗ್ಗೆ ಮೂಡುಬಿದಿರೆಯ ಪೇಟೆಯಲ್ಲಿ ಮತ್ತು


















