Home Posts tagged V4News (Page 902)

ಮರವೂರು ಸೇತುವೆಯಲ್ಲಿ ಬಿರುಕು: ಸಂಚಾರ ಸ್ಥಗಿತ

ಮಂಗಳೂರು ನಗರದಿಂದ ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ-ಕಟೀಲು ಸಂಪರ್ಕ ಕಲ್ಪಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಂಡು ಬಂದಿದ್ದು, ಸಂಚಾರ ಸ್ಥಗಿತಗೊಂಡಿದೆ. ಕರಾವಳಿ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದೆ. ನದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಮರವೂರು ಸೇತುವೆಯ ಮೊದಲ ಪಿಲ್ಲರ್ ಬಳಿ ಸುಮಾರು ಮೂರು ಅಡಿಗಳಷ್ಟು ಸೇತುವೆ

ಎರ್ಮಾಳಿನ ಅಕ್ರಮ ಮರಳು ಅಡ್ಡೆಗೆ ತಹಶಿಲ್ದಾರ್ ದಾಳಿ

ತೆಂಕ ಎರ್ಮಾಳು ಗ್ರಾ.ಪಂ. ವ್ಯಾಪ್ತಿಯ ಖಾಸಗಿ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾದ ಸುಮಾರು 8೦೦ ಟನ್ ಸಿಲಿಕಾ ಮರಳನ್ನು ಕಾಪು ತಹಶಿಲ್ದಾರ್ ಪ್ರತಿಭಾ ಆರ್. ತಂಡ ದಾಳಿ ನಡೆಸಿ ವಶಕ್ಕೆ ಪಡೆದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ಭೂ ಮತ್ತು ಗಣಿ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ. ಗಿರೀಶ್ ಎಂಬಾತ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ಸಿಲಿಕಾ ಮರಳು ದಾಸ್ತಾನು ಮಾಡಿದ ಬಗ್ಗೆ ಮಾಹಿತಿ ತಿಳಿದ ಕಾಪು ತಹಶಿಲ್ದಾರ್ ತಂಡ ದಾಳಿ ನಡೆಸಿದೆ. ತಂಡದಲ್ಲಿ ಕಾಪು ಆರ್.

ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಬಿಗಿ: ಇಬ್ಬರ ಬಂಧನ

ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವ ಮಂಗಳೂರು ಪೊಲೀಸರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಮನ್ ಪ್ರಜೆ ಹಾಗೂ ಹಿಮಾಚಲ ಪ್ರದೇಶದ ಯುವಕನೊಬ್ಬನನ್ನು ಡ್ರಗ್ಸ್‌ನೊಂದಿಗೆ ಬಂಧಿಸಿದ್ದಾರೆ. ಬಂಧಿತ ಒಮನ್ ಪ್ರಜೆ ಅಹ್ಮದ್ ಮುಸಬಾ ಅಲ್ ಮಹಾಮಾನಿ (34) ಹಾಗೂ ಹಿಮಾಚಲ ಪ್ರದೇಶದ ರಾಮ್ (22) ಎಂದು ಗುರುತಿಸಲಾಗಿದೆ. ಈ ಮಧ್ಯೆ ನಗರದ ಹೊಟೇಲೊಂದರಲ್ಲಿ ಹಿಮಾಚಲ ಪ್ರದೇಶದ ರಾಮ್ ಜತೆ ಬಂಧಿಸಲಾಗಿದ್ದು, ಬಂಧಿತರಿಂದ ಎಂಡಿಎಂಎ ಹಾಗೂ ಗಾಂಜಾ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ವಿಭಿನ್ನ ಪ್ರತಿಭಟನೆ

ಮಳೆಯ ನಡುವೆಯೂ ತೈಲ ಬೆಲೆ ಏರಿಕೆಯನ್ನ ವಿರೋಧಿಸಿ, ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಹಾಗೂ ಕಾಂಗ್ರೆಸ್ ಮುಖಂಡ ವಿವೇಕ್ ರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಕಾಂಗ್ರೆಸ್ ಕಚೇರಿಯಿಂದ ಮಲ್ಲಿಕಟ್ಟೆಯ ಪ್ರೆಟೋಲ್ ಬಂಕ್‌ನಲ್ಲಿ ಲಾರಿಗೆ ಡಿಸೇಲ್

ಒಂದೇ ಮಳೆಗೆ ಕೂಳೂರು ಹಳೆ ಸೇತುವೆಯಲ್ಲಿ ಟ್ರಾಫಿಕ್ ಜಾಮ್

ಮಂಗಳೂರಿನ ಕೂಳೂರು ಹಳೆ ಸೇತುವೆಯಲ್ಲಿ ಭಾರೀ ಗಾತ್ರದ ಹೊಂಡಗಳಲ್ಲಿ ಮಳೆ ನೀರು ನಿಂತು ವಾಹನ ಚಾಲಕರು ಪರದಾಡುವ ಜತೆಗೆ ಟ್ರಾಫಿಕ್ ಜಾಮ್ ಪರಿಸ್ಥಿತಿ ಉಂಟಾಗಿದೆ. ಮೈಕ್ರೋ ಟೆಕ್ನಾಲಜಿ ಮೂಲಕ ದುರಸ್ತಿ ಮಾಡಲಾದ ಕೂಳೂರು ಹಳೇ ಸೇತುವೆಯ ಇಕ್ಕೆಲಗಳಲ್ಲಿ ಇದೀಗ ಹೊಂಡ ಬೀಳಲಾರಂಭಿಸಿದೆ. ಡಾಮರು ತೇಪೆ ಹಾಕಿ ಒಂದೆರಡು ತಿಂಗಳು ಕಳೆಯುವುದರೊಳಗೆ ಒಂದೇ ಮಳೆಗೆ ಅಲ್ಲಲ್ಲಿ ಹೊಂಡ ಬಿದ್ದಿದ್ದು, ಸೋಮವಾರ ಮಳೆಯ ನಡುವೆ ಹೆದ್ದಾರಿ ಇಲಾಖೆ ತೇಪೆ ಹಾಕಲು ಮುಂದಾಗಿದ್ದು ಲಾಕ್ ಡೌನ್

ಮಹಾಮಾರಿ `ಕೋವಿಡ್ 19′ ನಿಯಂತ್ರಿಸಲು ಎಲ್ಲರೂ ಎಲ್ಲರೊಡನೆ ಕೈ ಜೋಡಿಸುವ : ಬಿಶಪ್

ಮಂಗಳೂರು : ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನರವರು ಸಂತ ಆಂತೋನಿಯವರ ವಾರ್ಷಿಕ ಹಬ್ಬದ ಸಂದರ್ಭದಲ್ಲಿ ಜೆಪ್ಪು ಸಂತ ಆಂತೋನಿ ಆಶ್ರಮದಲ್ಲಿ ಸಂಭ್ರಮದ ಬಲಿಪೂಜೆ ಅರ್ಪಿಸಿದರು. ಬಿಶಪರು ತಮ್ಮ ಪ್ರವಚನದಲ್ಲಿ, ಸಂತ ಆಂತೋನಿಯವರು ಮೂವತ್ತಾರು ವರ್ಷದ ತಮ್ಮ ಅಲ್ಪ ಅವಧಿಯ ಜೀವನದಲ್ಲಿ ದೇವರ ರಾಜ್ಯಕ್ಕಾಗಿ ನಿರಂತರ ದುಡಿದರು. ಹಸಿವು, ಬಾಯಾರಿಕೆ ಮತ್ತು ದಣಿವೆನ್ನದೆ ಮೈಲುಗಟ್ಟಲೆ ಕಾಲ್ದಾರಿಯಲ್ಲಿ ನಡೆದು ಯೇಸುಸ್ವಾಮಿಯ

ಮಂಗಳೂರಿನಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ನಗರದ ಬಲ್ಮಠದ ಪೆಟ್ರೋಲ್ ಪಂಪ್ ಬಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್. ಲೋಬೊ ಅವರು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಪೆಟ್ರೋಲ್‌ಗೆ 1೦೦ ರೂ ಏರಿಕೆ ಕಂಡಿದೆ. ಇದು ಬಿಜೆಪಿ ಸರ್ಕಾರದ ಸಾಧನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆನಂತರ ಮಂಗಳೂರು ಪಾಲಿಕೆಯ ವಿಪಕ್ಷ ಸದಸ್ಯ

ಸೇಡಿಯಾಪುವಿನಲ್ಲಿ ರಸ್ತೆಗೆ ಅಡ್ಡವಾಗಿ ಉರುಳಿದ ಬೃಹತ್ ಗಾತ್ರದ ಮರ

ಪುತ್ತೂರು: ಕೋಡಿಂಬಾಡಿ ಸಮೀಪದ ಸೇಡಿಯಾಪು ಬಳಿ ಬೃಹತ್ ಗಾತ್ರದ ಆಲದ ಮರವೊಂದು ರಸ್ತೆಗೆ ಅಡ್ಡವಾಗಿ ಉರುಳಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮರ ಬಿದ್ದ ಪರಿಣಾಮ ಪುತ್ತೂರು-ಉಪ್ಪಿನಂಗಡಿ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಮರ ಉರುಳಿ ಬಿದ್ದಿದ್ದು ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಸದಸ್ಯರು ಸಾರ್ವಜನಿಕರ ಸಹಕಾರದೊಂದಿಗೆ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.  

ತೈಲ ಬೆಲೆ ಏರಿಕೆ ಖಂಡಿಸಿ ಮಂಗಳೂರು ನಗರ ಕಾಂಗ್ರೆಸ್ ಪ್ರತಿಭಟನೆ

 ದೇಶದಲ್ಲಿ ವ್ಯಾಪಕವಾಗಿ 100ರ  ಗಡಿ ಸೇರಿರುವ ಪೆಟ್ರೋಲ್ ಹಾಗೂ ಡೀಸೆಲ್‌ ದರ ಹೆಚ್ಚಳದ ವಿರುದ್ಧ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ ಸಾಲ್ಯಾನ್ ರವರ ನೇತೃತ್ವದಲ್ಲಿ  ಶನಿವಾರ  ಮಂಗಳೂರಿನ ಲೇಡಿಹಿಲ್ ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತಾಡಿದ ಮಾಜಿ ಶಾಸಕ ಜೆ.ಆರ್.ಲೋಬೋರವರು ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಆಗಿದೆ.ದೇಶದ ಜನರ ಈ ಸಂಕಷ್ಟಕ್ಕೆ ದೇಶದ

ಪುತ್ತೂರಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಇಂಧನ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ಹಮ್ಮಿಕೊಂಡಿರುವ 100ನೋಟ್ ಔಟ್ ಎನ್ನುವ ಪ್ರತಿಭಟನಾ ಕಾರ್ಯಕ್ರಮದ ಅಂಗವಾಗಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾವು ಹೇಮನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ವಿನೂತನವಾಗಿ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾವು ಹೇಮನಾಥ್ ಶೆಟ್ಟಿಯವರು ಮಾತಾಡಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೂಲಕ ಜನತೆಯ ಹಣವನ್ನು ಲೂಟಿಗೈಯ್ಯುತ್ತಿದೆ, ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ೧೪೦ ಡಾಲರ್ ಆಗಿದ್ದರೂ