ಭಾರತ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ‘ಅಗ್ನಿಪಥ್ ‘ ಯೋಜನೆಯಡಿಯಲ್ಲಿ ಪ್ರತಿ ವರ್ಷ ಅಗ್ನಿವೀರರಾಗಿ ಆಯ್ಕೆ ಮಾಡಲು ನಡೆಸಲಾಗುವ ನೇಮಕಾತಿ, ಲಿಖಿತ ಮತ್ತು ದೈಹಿಕ ಸಾಧ್ಯತೆಯ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 18/06/2025
ಮೂಡುಬಿದಿರೆ: ಇಲ್ಲಿನ ಶಿವರಾಮ ಕಾರಂತ ಪ್ರತಿಷ್ಠಾನ ನೀಡುವ ಪ್ರಸಕ್ತ ವರ್ಷದ ಶಿವರಾಮ ಕಾರಂತ ಪ್ರಶಸ್ತಿಗೆ ಸಾಹಿತಿಗಳಾದ ಪ್ರೊ.ಎನ್.ಟಿ ಭಟ್, ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ್ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಡಾ.ಜಯಪ್ರಕಾಶ ಮಾವಿನಕುಳಿ ತಿಳಿಸಿದ್ದಾರೆ.
ಮಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ
ರೈಸನ್ ನ್ಯೂಟ್ರಿಷನ್ ಸಂಸ್ಥೆಯ ನಿರ್ದೇಶಕ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅವರನ್ನು ಮೂರು ವರ್ಷಗಳ ಅವಧಿಗೆ ರಾಜ್ಯ ಸರ್ಕಾರವು ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿದೆ. ಡಾ. ಸುಶಾಂತ್ ರೈ 2019-24ರ ವರೆಗೆ ಕರ್ನಾಟಕ ಕೋಳಿ ಸಾಕಾಣೆದಾರರ ಮತ್ತು ತಳಿಗಾರರ ಸಂಘದ ಅಧ್ಯಕ್ಷರಾಗಿ ಸತತ ಎರಡು ಬಾರಿ ಕಾರ್ಯ ನಿರ್ವಹಿಸಿದ್ದರು. ಹೈದ್ರಾಬಾದ್ನ ಐಸಿಎಆರ್-ಎನ್ ಐಎಎನ್ಪಿ ಮತ್ತು
ಮಂಗಳೂರು: ನಗರದಲ್ಲಿ ಭಾರಿ ಮಳೆ ಮುಂದುವರಿದಿದೆ. ನಗರದ ಹೊರ ವಲಯದ ಕೆತ್ತಿಕಲ್ನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಜರಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ನಗರದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಜಲಾವೃತವಾಗಿದ್ದ ಕೊಡಿಯಾಲ್ ಬೈಲ್, ಜಪ್ಪಿನಮೊಗರು ಮತ್ತಿತರ ಪ್ರದೇಶಗಳಲ್ಲಿ ನೀರಿನ ಪ್ರಮಾಣ ಇಳಿದಿದೆ. ಮನೆಯೊಳಗೆ ತುಂಬಿದ್ದ ಕೆಸರು ನೀರನ್ನು ಸ್ವಚ್ಛಗೊಳಿಸುವಲ್ಲಿ ಈ ಪ್ರದೇಶದ ನಿವಾಸಿಗಳು ನಿರತರಾಗಿದ್ದಾರೆ. ರಾತ್ರಿಯೂ ಬಿಟ್ಟು ಬಿಟ್ಟು
ನಗರದಲ್ಲಿ ಮಳೆಯಿಂದ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ರವಿವಾರ ಮಧ್ಯಾಹ್ನ ಊಟದ ವ್ಯವಸ್ಥೆ ನೀಡಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧಾರ ಮಾಡಿದೆ. ಮಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು ಕೂಡ ತೊಂದರೆಯಾಗಿದೆ. ಈ ಸಂದರ್ಭದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಇಂತಹ ಕುಟುಂಬಗಳಿಗೆ ಶ್ರೀ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಾಡಲಾಗಿದೆ. ಅಧ್ಯಕ್ಷರು
ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಎಲ್ಲಾ ತಹಶೀಲ್ದಾರರು ಹಾಗೂ ಇನ್ಸಿಡೆಂಟ್ ಕಮಾಂಡರ್ ಗಳು ಅಪಾಯದಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಕಾಳಜಿ ಕೇಂದ್ರ /ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ನೆರೆ ಉಂಟಾಗುವ ಪ್ರದೇಶಗಳ ಮೇಲೆ ತೀರಾ ನಿಗಾ ವಹಿಸಿ ಎಲ್ಲಾ ರಕ್ಷಣಾ ಸಾಮಾಗ್ರಿಗಳನ್ನು ಸನ್ನದ್ಧವಾಗಿರಿಸಬೇಕು. ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆಯನ್ನು ವಹಿಸಬೇಕು. ಎಲ್ಲಾ ತಾಲೂಕು ಹಾಗೂ
ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಜೂ.15ರಂದು
ಸುಳ್ಯ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13.06.2025 ರಂದು ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ – ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮವನ್ನು ಸೋಣoಗೇರಿಯಲ್ಲಿರುವ ಕೆ ವಿ ಜಿ ಆಯುರ್ವೇದ ಮೂಲಿಕಾ ಉದ್ಯಾನವನದಲ್ಲಿ ಕಾಲೇಜಿನ ದ್ರವ್ಯಗುಣ, ಸ್ವಸ್ಥವೃತ್ತ ವಿಭಾಗ ಹಾಗು ಎನ್ ಎಸ್ ಎಸ್ ವಿಭಾಗದ ಸಹಭಾಗಿತ್ವದಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮಲ್ಲಿ ಕಾಲೇಜಿನ ದ್ರವ್ಯಗುಣ,
ಉಳ್ಳಾಲ : ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೇರಳಕಟ್ಟೆ ಕಾನೆಕೆರೆ ಎಂಬಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ. ದೇರಳಕಟ್ಟೆ ಕಾನೆಕೆರೆ ನಿವಾಸಿ ಶಿವಾನಂದ ರೆಡ್ಡಿ ಎಂಬವರ ಪುತ್ರ ವಿನಯ್ ಕುಮಾರ್ (25) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದವರು. ನಸುಕಿನ ಜಾವ ಹೃದಯ ಭಾಗದಲ್ಲಿ ನೋವುಂಟಾಗಿದ್ದು, ಕೆಲ ಕ್ಷಣಗಳಲ್ಲೇ ವಿನಯ್ ಸಾವನ್ನಪ್ಪಿದ್ದಾರೆ.ನಡುಪದವು ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿನಯ್ ಉದ್ಯೋಗದಲ್ಲಿದ್ದರು. ಶಬರಿಮಲೆ ಯಾತ್ರೆಗೆ ತೆರಳುವ ಸಂದರ್ಭ




























