ಐಶಾರಾಮಿ ಹಾಗೂ ಕೈಗೆಟಕುವ ದರದಲ್ಲಿ ಮನೆಗಳನ್ನು ನಿರ್ಮಿಸಿ ಗ್ರಾಹಕರಿಗೆ ಹಸ್ತಾಂತರಿಸುತ್ತಿರುವ ಮುಕುಂದ್ ಎಂಜಿಎಂ ರಿಯಾಲ್ಟಿ' ಸಂಸ್ಥೆಯು ಇದೀಗ ನಗರದ ಜನತೆಗೆ ಎಲ್ಲಾ ಸೌಕರ್ಯಗಳನ್ನು ಒಳಗೊಂಡ ಅಪಾರ್ಟ್ಮೆಂಟ್ಕೇದಾರ್-ಹೈ ಲಿವಿಂಗ್ ಲಕ್ಶುರಿ ಹೋಮ್ಸ್’ ಎಂಬ ವಸತಿ ಸಮುಚ್ಚಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು. ಮಂಗಳೂರಿನ ಜನತೆಯ
ಮಂಜೇಶ್ವರ: ಜಗತ್ತಿನ ಮಲಯಾಳಿಗಳಿಗೆ ಕೇರಳದ ಬಗ್ಗೆ ವಿಭಿನ್ನ ಅಭಿವ್ಯಕ್ತಿ ನೀಡುವ ಹಾಗೂ ಕೇರಳವನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ಮಲಪ್ಪುರಂ ಜಿಲ್ಲೆಯ ಇಬ್ಬರು ಯುವಕರು ಕೇರಳದ ಅನನ್ಯತೆ ಅರಸಿ ಗ್ರಾಮಗಳ ಪ್ರವಾಸದ ಹೆಸರಿನಲ್ಲಿ ಕೇರಳದ ಉತ್ತರ ಭಾಗವಾದ ಗಡಿನಾಡ ಪ್ರದೇಶಕ್ಕೆ ತಲುಪಿದ್ದಾರೆ. ಕೇರಳ ಎಂದರೇನು ಎಂಬುದನ್ನು ತಿಳಿದುಕೊಳ್ಳಲು ಹಾಗೂ ಅಲ್ಲಿನ ಭಾಷೆ, ಸಂಸ್ಕೃತಿ, ಅಭಿರುಚಿ, ವಿವಿಧ ವ್ಯಾಪಾರ, ಕೃಷಿ, ಪ್ರವಾಸೋದ್ಯಮ ಮತ್ತಿತರ ಅಪರೂಪದ
ಬೆಂಗಳೂರು; ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕೌಶಲ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದು, ಈ ಯೋಜನೆಯಡಿ ಇರುವ ಉಜ್ವಲ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಅರಿವು ಮೂಡಿಸಲು ನವೆಂಬರ್ 6 ರಂದು ಯಲಹಂಕದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿಶ್ವಕರ್ಮ ಕಾಷ್ಠಶಿಲ್ಪ ಸಭಾ ದಶಮಾನೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ವಿಶ್ವ ಕರ್ಮ ಕಾಷ್ಠಶಿಲ್ಪ ಅಧ್ಯಕ್ಷ ಎಮ್.ಜಿ. ನಾಗೇಶ್ ಆಚಾರ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರದ
ಮಂಗಳೂರು: ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ವನ್ನು ಕಾಲಮಿತಿಗೊಳಪಡಿಸುವ ನಿರ್ಧಾರವನ್ನು ಹಿಂಪಡೆಯಬೇಕು, ಯಕ್ಷಗಾನ ಪರಂಪರೆಯಂತೆ ರಾತ್ರಿ ಯಿಂದ ಬೆಳಗ್ಗಿನವರೆಗೆ ಯಕ್ಷಗಾನ ಪ್ರದರ್ಶನಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀ ಕಟೀಲು ಮೇಳದ ಯಕ್ಷಗಾನ ಸೇವಾ ಸಮಿತಿಗಳು ಮತ್ತು ಖಾಯಂ ಸೇವಾದಾರರ ಒಕ್ಕೂಟವಾದ ಶ್ರೀ ಕಟೀಲು ಯಕ್ಷಸೇವಾ ಸಮನ್ವಯ ಸಮಿತಿ ದಕ್ಷಿಣ ಕನ್ನಡ ಮತ್ತು ಉಡುಪಿ ವತಿಯಿಂದ ನ. 6ರಂದು ಬೆಳಗ್ಗೆ 8.30ರಿಂದ ಬಜಪೆ ಶ್ರೀ ಶಾರದಾ ಶಕ್ತಿ ಮಂಟಪದಿಂದ ಶ್ರೀ ಕ್ಷೇತ್ರ
ಮಂಗಳೂರು: ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ದಶಕದ ಕನಸಾಗಿದ್ದ ಪದವಿ ಪೂರ್ವ ಕಾಲೇಜು ಮಂಜೂರಾಗಿದೆ. ಹರೇಕಳದ ನ್ಯೂಪಡ್ಪಿವಿಗೆ ಕಷ್ಟಪಟ್ಟು ಸರಕಾರಿ ಶಾಲೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಅವರು ಬಳಿಕ ನಿರಂತರ ಪ್ರಯತ್ನದಿಂದ ಪ್ರೌಢಶಾಲೆ ವರೆಗೆ ಗಳಿಸಿದ್ದರು. ಹಾಜಬ್ಬ ಅನಕ್ಷರಸ್ಥರಾಗಿದ್ದರೂ ತನ್ನೂರಿನ ಎಲ್ಲ ಮಕ್ಕಳೂ ಅಕ್ಷರಸ್ಥರಾಗಿರಬೇಕು ಎಂಬ ಕನಸು ಕಂಡವರು. ಮಂಗಳೂರಿನ ಹಂಪನಕಟ್ಟೆ ಬಳಿ ಬುಟ್ಟಿ ಯಲ್ಲಿ ಕಿತ್ತಳೆ ಹಣ್ಣುಗಳ ಮಾರಾಟ ಮಾಡುತ್ತಿದ್ದ
ಅಬುಧಾಬಿ : ನಾಲ್ಕು ದಶಕಗಳಿಗಿಂತಲೂ ಹೆಚ್ಚಿನ ಶ್ರೀಮಂತ ಇತಿಹಾಸ ಇರುವ ಅಬುಧಾಬಿಯ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕರ್ನಾಟಕ ಸಂಘವು ಇದೀಗ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ರೂಪುರೇಷೆಗಳನ್ನು ಹಾಕಿಕೊಂಡಿದ್ದು ಕಾರ್ಯಕ್ರಮವು ಇದೆ ನವೆಂಬರ್ ತಿಂಗಳ 6ನೇ ತಾರೀಖಿನಂದು ಅಪರಾಹ್ನ 3:30 ಘಂಟೆಗೆ ಸರಿಯಾಗಿ ಅಬುಧಾಬಿಯ ಇಂಡಿಯನ್ ಸೋಶಿಯಲ್ ಆಂಡ್ ಕಲ್ಚರಲ್ ಸೆಂಟರ್ ನಲ್ಲಿ ಜರುಗಲಿದೆ. ಮೂರು ಬಾರಿ ಯಶಸ್ವಿಯಾಗಿ ವಿಶ್ವ ಕನ್ನಡ
ಚಾಲಕನ ನಿಯಂತ್ರಣ ತಪ್ಪಿದ ಕಾರು ಮಹಿಳೆಗೆ ಡಿಕ್ಕಿಯಾಗಿ, ಮಹಿಳೆ ಸಹಿತ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಕಿನ್ನಿಗೋಳಿ ಮೂಡಬಿದ್ರೆ ರಾಜ್ಯ ಹೆದ್ದಾರಿಯ ಎಂಸಿಸಿ ಬ್ಯಾಂಕ್ ಬಳಿ ನಡೆದಿದೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಪಕ್ಷಿಕೆರೆ ಕೆಮ್ರಾಲ್ ನಿವಾಸಿ ಜಯಂತಿ ಶೆಟ್ಟಿ (50) ಗಾಯಗೊಂಡ ಮಹಿಳೆ. ಉಳಿದಂತೆ ಕಾರಿನಲ್ಲಿದ್ದ ಚಾಲಕ ತೋಡಾರ್ ಗಳಾದ ನಿವಾಸಿ ಚಾಲಕ ಕೆ ಹೆಚ್ ಅಬ್ದುಲ್ ಖಾದರ್ (65), ರಿದಾ (16), ರಶ್ಮಿ (18), ಕೌಸರ್ (46), ಎಂದು
ತೊಕ್ಕೋಟು ಪೆರ್ಮನ್ನೂರಿನ ಸಂತ ಸೆಬಾಸ್ತಿಯನ್ನರ ಇಗರ್ಜಿ ಬಳಿಯಲ್ಲಿ ಸಂತ ಸೆಬಾಸ್ತಿಯನ್ ಅಡಿಟೋರಿಯಂ ಹೆಸರಿನ ಸುಸಜ್ಜಿತವಾದ ಮದುವೆ ಸಮಾರಂಭಕ್ಕೆ ಯೋಗ್ಯವಾದ ಸಭಾಂಗಣ ವೊಂದು ಉದ್ಘಾಟನೆ ಗೊಂಡಿತು. ಸರ್ವ ಧರ್ಮ ಸಮನ್ವಯತೆಯ ಸಂದೇಶ ಸಾರುವ ರೀತಿಯಲ್ಲಿ ಈ ಸಮಾರಂಭ ಏರ್ಪಟ್ಟಿತ್ತು. ಹಿಂದೂ ಮುಸ್ಲಿಂ ಕ್ರೈಸ್ತ ಸಮುದಾಯದ ಬಾಂಧವರು ವೇದಿಕೆಯಲ್ಲಿ ಆಸನ ಅಲಂಕರಿಸಿದ್ದರು. ಈ ವೇದಿಕೆಯಲ್ಲಿದ್ದವರೆಲ್ಲರೂ ಗಣ್ಯರೇ. ಆ ಪೈಕಿ ಸಭಾಂಗಣವನ್ನು ಉದ್ಘಾಟಿಸಿದ ಡಾ|| ಯು.ಸಿ.
ಗುಂಡ್ಲುಪೇಟೆ ತಾಲೂೀಕಿನ ಬಂಡೀಪುರ ಹುಲಿ ಪ್ರದೇಶದ ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಹೊತ್ತುಕೊಂಡು ಬರುತ್ತಿದ್ದ ವೇಳೆ ಅರಣ್ಯಾಧಿಕಾರಿಗಳಿ ದಾಳಿ ಮಾಡಿ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ. ಮದ್ದೂರು ಕಾಲೋನಿಯ ಷಣ್ಮುಖ(35) ಬಂಧಿತ ಆರೋಪಿ. ಉಳಿದ ನಾಲ್ಕು ಮಂದಿ ಪರಾರಿಯಾಗಿದ್ದಾರೆ. ಮದ್ದೂರು ವಲಯದ ನೇರಳೆ ಮರದ ಅರಣ್ಯ ಪ್ರದೇಶದ ಉಪ ವಲಯ ಅರಣ್ಯಾಧಿಕಾರಿ ರವಿಕುಮಾರ್ ಸಗೂರು , ಅರಣ್ಯ ರಕ್ಷಕ ನವೀನ ಹಾಗೂ ಸಿಬ್ಬಂದಿ
ಸುರತ್ಕಲ್ ಅಕ್ರಮ ಟೋಲ್ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ ಧರಣಿಯಲ್ಲಿ ಬೆಳಗ್ಗಿನಿಂದ ಪಾಲ್ಗೊಂಡಿದ್ದಾರೆ. ಹೋರಾಟ ಸಮಿತಿಗೆ ಇದರಿಂದ ಮತ್ತಷ್ಟು ಹುಮ್ಮಸು ದೊರಕಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದರು. ಮತ್ತೊಂದೆಡೆ ಒಂದು ವಾರದಿಂದ




























