Home Posts tagged #v4newskarnataka (Page 135)

ಮಂಜೇಶ್ವರ : ಪಿಎಫ್‍ಐ ಮುಖಂಡರ ಬಂಧನ ವಿರೋಧಿಸಿ ಪ್ರತಿಭಟನೆ

ಮಂಜೇಶ್ವರ: ಪಾಪ್ಯುಲರ್ ಫ್ರಂಟ್ ಮುಖಂಡರ ಬಂಧನವನ್ನು ವಿರೋಧಿಸಿ ರಾಜ್ಯ ವ್ಯಾಪಕವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಮಂಜೇಶ್ವರ ಭಾಗದಲ್ಲಿ ಹರತಾಳ ಬೆಂಬಲಿಗರ ಮನವಿ ಮೇರೆಗೆ ಬಹುತೇಕ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚಿ ಸಹಕರಿಸಿದ್ದಾರೆ.

ಮುಂಬೈ : 9ಹ್ಯಾಂಡ್ಸ್ ಫೌಂಡೇಶನ್ ಸಂಸ್ಥೆ ವಾರ್ಷಿಕ ಮಹಾಸಭೆ

9 ಹ್ಯಾಂಡ್ಸ್ ಫೌಂಡೇಶನ್ ಮುಂಬೈ ಸಂಸ್ಥೆಯ ವಾರ್ಷಿಕ ಮಹಾಸಭೆಯು ಆಂಧೇರಿಯ ಹೋಟೆಲ್ ತುಂಗಾ ಇಂಟರ್‍ನ್ಯಾಷನಲ್ ಸಭಾಂಗಣದಲ್ಲಿ ದಯಾನಂದ ಬಂಗೇರ ಅಧ್ಯಕ್ಷತೆಯಲ್ಲಿ ಜರುಗಿತು. ಕಾರ್ಯದರ್ಶಿ ದೇವರಾಜ ಅಮೀನ್ ಅವರು ಗತ ವರ್ಷದ ವಾರ್ಷಿಕ ಮಹಾಸಭೆಯ ಟಿಪ್ಪಣಿ ಓದಿದರು. ಜೊತೆ ಕೋಶಾಧಿಕಾರಿ ಶ್ರೀ ಸಂತೋಷ್ ಕರ್ಕೇರ ಇವರು ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಶ್ರೀ ತುಕಾರಾಂ ಸಾಲ್ಯಾನ್ ಮತ್ತು ಶ್ರೀ ಹರೀಶ್ ಶ್ರೀಯಾನ್ ರವರು ತಮ್ಮ ಭಾಷಣದಲ್ಲಿ 9 ಹ್ಯಾಂಡ್ಸ್

ಸಿಂಗಲ್ ಲೇಔಟ್ ಸಮಸ್ಯೆ : ಸರಕಾರದ ನಿರ್ಲಕ್ಷ್ಯವೇ ವಿಳಂಬಕ್ಕೆ ಕಾರಣ

ಕಳೆದ ಹಲವು ವರ್ಷಗಳಿಂದ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸಿಂಗಲ್ ಲೇಔಟ್ ಸಮಸ್ಯೆಯಿಂದ ಜಮೀನು ಖರೀದಿ, ಮಾರಾಟ ಮತ್ತು ಮನೆ ನಿರ್ಮಾಣ ಅಸಾದ್ಯವಾಗಿದ್ದು ನೂರಾರು ಕುಟುಂಬಗಳು ಆತಂಕದಲ್ಲಿದ್ದವು, ಸಮಸ್ಯೆಗೆ ಸ್ಪಂದಿಸಬೇಕಾದ ಸರಕಾರ ಮತ್ತು ಜನಪ್ರತಿನಿದಿಗಳು ನಿರ್ಲಕ್ಷವಹಿಸಿದ್ದ ಕಾರಣ ಪರಿಹಾರ ಸಾಧ್ಯವಾಗಲಿಲ್ಲ. ಅದರೆ ರಾಜ್ಯ ಉಚ್ಚ ನ್ಯಾಯಾಲಯ ನೀಡಿದ ತೀರ್ಪು ಜನರಲ್ಲಿ ಭರವಸೆಯನ್ನು ಮೂಡಿಸಿದೆ. ಈ ಆದೇಶವನ್ನೇ ಮಾದರಿಯಾಗಿ ಎಲ್ಲಾ ಅರ್ಜಿದಾರರಿಗೂ ಖಾತಾ ನೀಡುವಂತೆ

ಉಡುಪಿ ಪಿಎಫ್‍ಐ ಕಾರ್ಯಕರ್ತರಿಂದ ಪ್ರತಿಭಟನೆ : ಲಾಠಿರುಚಿ ತೋರಿಸಿದ ಪೊಲೀಸರು

ಉಡುಪಿಯ ಡಯಾನ ಸರ್ಕಲ್ ಬಳಿ ಧೀಡರನೇ ಪಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಯಾವುದೇ ಅನುಮತಿ ಪಡೆಯದೇ ಹತ್ತಾರು ಮಂದಿ ಏಕಾಏಕಿ ನಡೆಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಹಲವು ಬಾರಿ ಪೆÇಲೀಸರು ಮನವಿ ಮಾಡಿದರೂ ಪ್ರತಿಭಟನಾಕಾರರು ಜಗ್ಗದ ಹಿನ್ನಲೆ ಪೊಲೀಸರು ಪಿ ಎಫ್ ಐ ಕಾರ್ಯಕರ್ತರಿಗೆ ಲಾಠಿ ಬೀಸಿ ಗುಂಪನ್ನು ಚದುರಿಸಿದರು.

ವಿದ್ಯುತ್ ಬಿಲ್ ವಿಚಾರ, ಪವರ್ ಮ್ಯಾನ್ ಮೇಲೆ ಹಲ್ಲೆ

ಬೆಳ್ತಂಗಡಿಯಲ್ಲಿ ವಿದ್ಯುತ್ ಬಿಲ್ ವಿಚಾರವಾಗಿ ಪವರ್ ಮ್ಯಾನ್ ಮೇಲೆ ಹಲ್ಲೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಡ್ಕಾಡಿ ಕಾಂತು ಪೂಜಾರಿ ಎಂಬವರು ಹಲವಾರು ತಿಂಗಳಿನಿಂದ ವಿದ್ಯುತ್ ಬಿಲ್ ಕಟ್ಟಿರಲಿಲ್ಲ. ಹಲವಾರು ಬಾರಿ ಮನವಿ ಮಾಡಿದರೂ ಬಿಲ್ ಕಟ್ಟದೆ ಇರುವುದರಿಂದ ಅಲ್ಲಿನ ಪವರ್ ಮ್ಯಾನ್ ಉಮೇಶ್ ಮೇಲಾಧಿಕಾರಿಗಳ ಆದೇಶದಂತೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು ಇದೇ ಕಾರಣಕ್ಕಾಗಿ ಪವರ್ ಮ್ಯಾನ್ ಉಮೇಶ್ ಹಾಗೂ ದುಂಡಪ್ಪ ಎಂಬವರ ಮೇಲೆ

ಕುಕ್ಕೆ ಸುಬ್ರಹ್ಮಣ್ಯ ಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ಆಕ್ಷೇಪ

ಕುಕ್ಕೆ ದೇಗುಲ ಪದ್ಧತಿ ವಿರುದ್ಧ ಆಕ್ಷೇಪಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇಗುಲಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ವಿರೋಧಪರಿಸರ ಸಂರಕ್ಷಣಾ ಒಕ್ಕೂಟದಿಂದ ದೂರುಧಾರ್ಮಿಕ ದತ್ತಿ ಇಲಾಖೆಗೆ ಒಕ್ಕೂಟದಿಂದ ದೂರುಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನದೇವರ ದರ್ಶನ ಪಡೆಯುವ ಪದ್ಧರಿ ಸರಿಯಲ್ಲಹಿಂದೂ ಸಂಪ್ರದಾಯದಲ್ಲಿ ಈ ಪದ್ದತಿ ಇಲ್ಲಚರ್ಮ ರೋಗವಿದ್ದವರಿಂದ ರೋಗ ಹರಡುವ ಸಾಧ್ಯತೆಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ

ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನು : ಅಧಿಕಾರಿಗಳ ಪರಿಶೀಲನೆ

ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನಿನ ಕಳೇಬರವನ್ನು ಅರಣ್ಯಾಧಿಕಾರಿಗಳು ಮತ್ತು ಮಂಗಳೂರಿನ ರೀಪೋರ್ಚ್ ಮೆರೈನ್ ಕನ್ಸರ್ವೇಶನ್ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸತ್ತಿರುವ ಮೀನು ಪೈಲೆಟ್ ವೇಲ್ ಎನ್ನುವ ಅಪರೂಪದ ತಿಮಿಂಗಲದ ಪ್ರಭೇದ ಎಂದು ತಿಳಿಸಿದ್ದಾರೆ. ತ್ರಾಸಿ ಕಡಲ ತೀರದಲ್ಲಿ ಬೃಹತ್ ಮೀನು ಬಿದ್ದು ಕೊಳೆತ ಸ್ಥಿತಿಯಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಸ್ಥಳೀಯ ” ಬೀಚ್ ಬಾಯ್ಸ್’

ದುಬಾಯಿ : ಯುಎಇ ಗಮ್ಮತ್ ಕಲಾವಿದೆರ್ ಪ್ರಸ್ತುತ “ಕುಟುಂಬ” ನಾಟಕ ಪ್ರದರ್ಶನ

ಯುಎಇ ಯ ಗಮ್ಮತ್ ಕಲಾವಿದೆರ್ ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟಟೈನ್ಮೆಂಟ್ ಸಹಯೋಗದಲ್ಲಿ ಹವ್ಯಾಸಿ ತುಳು ರಂಗ ನಾಟಕ ತಂಡವು ಪ್ರಸಿದ್ಧ ಬರಹಗಾರ, ಚಲನಚಿತ್ರ ಮತ್ತು ತುಳು ನಾಟಕ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮತ್ತು ಖ್ಯಾತ ಸಾಹಿತಿಗಳು ಬರೆದ ತುಳು ಹಾಸ್ಯ ಮತ್ತು ಸಾಮಾಜಿಕ ನಾಟಕ ‘ಕುಟುಂಬ’ ಪ್ರದರ್ಶನ ಕಂಡಿತು. ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟರ್ಟೈನ್ಮೆಂಟ್ ಸಹಯೋಗದಲ್ಲಿ ಯಶಸ್ವಿಯಾಗಿ ಕುಟುಂಬ ನಾಟಕವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ

ಎಡಪಂಥೀಯ ಚಿಂತಕ ಐ.ಎ.ಪ್ರಸನ್ನ ನಿಧನ

ಎಡಪಂಥೀಯ ಚಿಂತಕರೂ, ಪ್ರಗತಿಪರ ಚಿಂತಕರ ವೇದಿಕೆಯ ಅಧ್ಯಕ್ಷರೂ,ಜಿಲ್ಲಾ ವಿಚಾರವಾದಿ ವೇದಿಕೆ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆಯ ಸಕ್ರಿಯ ಸದಸ್ಯರೂ,ಮೆಸ್ಕಾಂನ ನಿವ್ರತ್ತ ಹಿರಿಯ ಅಧಿಕಾರಿಗಳಾದ ಐ.ಎ.ಪ್ರಸನ್ನ (80ವರ್ಷ)ರವರು ಇಂದು(21-09-2022)ಅಲ್ಪ ಕಾಲದ ಅಸೌಖ್ಯದಿಂದಾಗಿ ನಗರದ ಖಾಸಗೀ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎಳೆಯ ಪ್ರಾಯದಲ್ಲೇ ಎಡಪಂಥೀಯ ಚಿಂತನೆಯಿಂದ ಪ್ರಭಾವಿತರಾದ ಪ್ರಸನ್ನರವರು, ತನ್ನ ವಿದ್ಯಾರ್ಥಿ ಜೀವನದಲ್ಲಿ ಪ್ರಗತಿಪರ ವಿಧ್ಯಾರ್ಥಿ

ವಿಟ್ಲ :ಜಲ್ಲಿ ಸಾಗಾಟದ ಲಾರಿ ಪಲ್ಟಿ,ಇರ್ವರಿಗೆ ಗಾಯ

ವಿಟ್ಲ: ಜಲ್ಲಿ ಸಾಗಾಟ ಲಾರಿಯೊಂದು ಪಲ್ಟಿಯಾಗಿ ಚಾಲಕನಿಗೆ ಗಾಯವಾದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಟಿಪ್ಪರ್ ಚಾಲಕನಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಯಿಂದಾಗಿ ಅಲ್ಪ ಹೊತ್ತು ರಸ್ತೆ ಸಂಚಾರ ವ್ಯತ್ಯಯವಾಗಿದೆ. ಟಿಪ್ಪರ್ ಪಲ್ಟಿಯಾಗಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲೆಲ್ಲಾ ಜಲ್ಲಿಕಲ್ಲುಗಳು ಚೆಲ್ಲಿ ಹೋಗಿದ್ದು ಬಳಿಕ ಅದನ್ನು ತೆರವುಗೊಳಿಸಿದ ಬಳಿಕ ವಾಹನ ಸಂಚಾರ ಆರಂಭಗೊಂಡಿತು. ಹೊಯ್ಸಳ