Home Posts tagged #v4newskarnataka (Page 150)

v4 ಡಿಜಿಟಲ್ ಇನ್ಫೋಟೆಕ್‌ನ ಸೆಕ್ಯೂರಿಟಿ ನಿಧನ

ಮಂಗಳೂರಿನ ಯೆಯ್ಯಾಡಿಯ V4 ಡಿಜಿಟಲ್ ಇನ್ಫೋಟೆಕ್‌ನ ಸೆಕ್ಯೂರಿಟಿ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಜು(74) ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಕಳೆದ ಹಲವಾರು ವರ್ಷಗಳಿಂದ V4 ಮೀಡಿಯಾದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಮಕ್ಕಳು ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ. ಮೂಲತಃ ಮಡಿಕೇರಿಯಾಗಿರುವ ಇವರು,

ಐಬಿಬಿಐ ನಡೆಸಿದ ಮೌಲ್ಯಮಾಪಕರ ಪರೀಕ್ಷೆ : ಸಿಎ ನಿತಿನ್ ಬಾಳಿಗಾ ತೇರ್ಗಡೆ

ಮಂಗಳೂರಿನ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಸಿಎ ನಿತಿನ್ ಬಾಳಿಗಾ ಅವರು ಇತ್ತೀಚೆಗೆ ಐಬಿಬಿಐ ನಡೆಸಿದ ಕ್ಯಾಟಗರಿ ಫೈನಾನ್ಸಿಯಲ್ ಅಸೆಟ್ ಸೆಕ್ಯುರಿಟೀಸ್ ವಿಭಾಗದ ಮೌಲ್ಯಮಾಪಕರ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಹಣಕಾಸು ಆಸ್ತಿಗಳಿಗೆ ನೋಂದಾಯಿತ ಮೌಲ್ಯಮಾಪಕರಾಗಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಸಿಎ ನಿತಿನ್ ಬಾಳಿಗಾ ಅವರು ಮೂಲತಃ ಮಂಗಳೂರಿನ ಉರ್ವ ಮಾರ್ಕೇಟ್‍ನ ನಿವಾಸಿಯಾಗಿದ್ದಾರೆ.

ಉಡುಪಿ : 75 ಕಿ.ಮೀ. ಮ್ಯಾರಥಾನ್ ಓಟ ಅಗ್ನಿಪಥ್ ದೌಡ್

ಉಡುಪಿ ಜಿಲ್ಲಾ ರಜತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಜೊತೆಯಲ್ಲಿ ಯುವ ಜನತೆಯನ್ನು ಸೈನ್ಯಕ್ಕೆ ಸೇರಲು ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಮತ್ತು ಟೀಮ್ ನೇಶನ್ ಫಸ್ಟ್ ಸಹಭಾಗಿತ್ವದಲ್ಲಿ, ಶಾಸಕರಾದ ರಘುಪತಿ ಭಟ್ ನೇತೃತ್ವದಲ್ಲಿ ಆಯೋಜಿಸಿರುವ 75 ಕೀ.ಮೀ. ಮ್ಯಾರಥಾನ್ ಓಟ “ಅಗ್ನಿಪಥ್ ದೌಡ್” ಇಂದು ಕಾರ್ಕಳ ಭುವನೆಂದ್ರ ಕಾಲೇಜಿನಿಂದ ಆರಂಭಗೊಂಡಿತು.ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಬಂಟರ ಸಂಘದ ಅಭಿವೃದ್ಧಿಗೆ ಎಲ್ಲಾ ಬಂಟರು ಮುಂದೆ ಬರಬೇಕು :ಚಂದ್ರಹಾಸ್ ಕೆ. ಶೆಟ್ಟಿ

ಮುಂಬಯಿ, ಆ.22 : ದಿಶಾ ” ಒಂದು ಉತ್ತಮ ಕಾರ್ಯಕ್ರಮ ಬಂಟರ ಸಂಘದ ಪ್ರತಿಯೊಂದು ಕಾರ್ಯಕ್ರಮವು ಹಂತ ಹಂತವಾಗಿ ಬೆಳೆಯುತ್ತಾ ಹೋಗುತ್ತಿದೆ. ನಮ್ಮ ಹಿಂದಿನವರು ಹಾಕಿರುವ ಸದೃಢ ಅಡಿಪಾಯ ಶ್ರೇಯೋಭಿವೃದಿಗೆ ಕಾರಣವಾಗಿದೆ ಇದಕ್ಕೆ ಎಸ್. ಎಂ. ಶೆಟ್ಟಿ ಸ್ಕೂಲ್ ಉದಾಹರಣೆಯಾಗಿದೆ ಎಂದು ಬಂಟರ ಸಂಘ ಮುಂಬಯಿ ಅದ್ಯಕ್ಷ ಚಂದ್ರಹಾಸ್ ಕೆ. ಶೆಟ್ಟಿ ಅವರು ತಿಳಿಸಿದರು. ಆ.21 ರಂದು ಪೊವಾಯಿ ಎಸ್.ಎಂ.ಶೆಟ್ಟಿ ಶಾಲೆಯ ಸಭಗೃಹದಲ್ಲಿ ಬಂಟರ ಸಂಘ ಮುಂಬಯಿ , ಅಂಧೇರಿ – ಬಾಂದ್ರ

ಮೊಗವೀರ ಗಾಟ್ ಟ್ಯಾಲೆಂಟ್ ಟೈಟಲ್ ಸಾಂಗ್ ಬಿಡುಗಡೆ

ಸಿನಿ ಗ್ಯಾಲಕ್ಸಿ ಅರ್ಪಿಸುವ ಮೋಗವೀರ ಗಾಟ್ ಟ್ಯಾಲೆಂಟ್ ರಿಯಾಲಿಟಿ ಶೋ ಅದ್ಧೂರಿಯಾಗಿ ನಡೆಯಲಿದ್ದು, ಈ ಕಾರ್ಯಕ್ರಮದ ಧ್ವನಿ ಸುರುಳಿ ಮತ್ತು ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ನಡೆಯಿತು.ಉಡುಪಿ ಮತ್ತು ದ.ಕ.ಜಿಲ್ಲಾ ಮೀನು ಮಾರಾಟಗಾರರ ಪೆಡರೆಸನ್ ಮಂಗಳೂರು ಇದರ ಜಿಲ್ಲಾ ಅಧ್ಯಕ್ಷರಾದ ಯಶಪಾಲ್ ಸುವರ್ಣ ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ರಕ್ತದ ಆಪತ್ಭಾಂದವ ಸತೀಶ್ ಸಾಲ್ಯಾನ್ ರವರನ್ನು ಸನ್ಮಾನಿಸಲಾಯಿತು. ರಿಯಾಲಿಟಿ ಶೋನ ಧ್ವನಿ ಸುರುಳಿ, ಪೆÇೀಸ್ಟರ್

ಬ್ಲಾಕ್ ಬಸ್ಟರ್ ಚಿತ್ರಗಳ ನಿರ್ಮಾಪಕ ಎ.ಜಿ. ನಡಿಯಾಡ್ ವಾಲಾ ನಿಧನ

ಬಾಲಿವುಡ್ ಬ್ಲಾಕ್ ಬ್ಲಸ್ಟರ್ ಚಿತ್ರಗಳ ನಿರ್ಮಾಪಕ ಹಾಗೂ ಲೋಕೋಪಕಾರಿ ಅಬ್ದುಲ್ ಗಫರ್ ನಾಡಿಯಾಡ್ ವಾಲಾ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಮೂವರು ಪುತ್ರಿಯರು ಹಾಗೂ ಮೂವರು ಪುತ್ರರು. ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಹೀರಾಪೇರಿ ಮತ್ತು ವೆಲ್ ಕಮ್ ನಂತಹ ಹಾಸ್ಯಮಯ ಚಿತ್ರಗಳನ್ನು ನಿರ್ಮಿಸಿ ಎ.ಜಿ. ನಡಿಯಾಡ್ ವಾಲಾ ಮನೆ ಮಾತಾಗಿದ್ದರು. ಪಠಾಣ್ ಕೆ

ತೆಂಗಿನ ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮೆ ,ಮಾಹಿತಿ ಹಾಗೂ ನೋಂದಾವಣೆ ಕಾರ್ಯಕ್ರಮ

ಸಣ್ಣ ಪುಟ್ಟ ಕೂಲಿ ಕೆಲಸ ಮಾಡುವವರಿಗೂ ಸರ್ಕಾರದ ವಿವಿಧ ಸವಲತ್ತುಗಳು ದೊರೆಯುತ್ತೆ, ಆದರೆ ಕಷ್ಟ ಪಟ್ಟು ತೆಂಗಿನ ಮರ ಹತ್ತಿ ಜೀವನ ನಡೆಸುವವರಿಗೆ ಯಾವುದೇ ಪೂರಕ ವ್ಯವಸ್ಥೆಗಳು ಇಲ್ಲ ಎಂಬ ನೆಲೆಯಲ್ಲಿ ಪ್ರಾಣೇಶ್ ಹೆಜಮಾಡಿ ನೇತ್ರತ್ವದಲ್ಲಿ ಕೇರಾ ಸುರಕ್ಷಾ ವಿಮೆ ಬಗ್ಗೆ ಮಾಹಿತಿ ಹಾಗೂ ನೋಂದಣಿ ಕಾರ್ಯಕ್ರಮ ಹೆಜಮಾಡಿಯಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಲಾಲಾಜಿ ಆರ್. ಮೆಂಡನ್, ಬಾರೀ ಕಷ್ಟದ ಬದುಕು ತೆಂಗಿನ ಮರ ಹತ್ತುವ ಮಂದಿಯದ್ದು,

ಆ.27,28 : ವರ್ಣಕುಟೀರ ಚಿತ್ರಕಲೆ ಹಾಗೂ ಕರಕುಶಲ ಕಲೆಯ ಪ್ರದರ್ಶನ

ಶ್ರೀಗಣೇಶೋತ್ಸವದ ಪ್ರಯುಕ್ತ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಯು ನಡೆಸುವ ಚಿತ್ರಕಲೆ ಹಾಗೂ ಕರಕುಶಲ ಕಲೆಯ ಪ್ರದರ್ಶನ ಹಮ್ಮಿಕೊಂಡಿದೆ. ಆಗಸ್ಟ್ 27 ಮತ್ತು 28 ರಂದು ಬೆಳಗ್ಗೆ 10.00 ಗಂಟೆಯಿಂದ ಸಾಯಂಕಾಲ 6.00 ಗಂಟೆಯ ತನಕ ಕಾವೆರಿ ಕಾಂಪ್ಲೆಕ್ಸ್,ಕಲ್ಲಾರೆ, ಮುಖ್ಯರಸ್ತೆ, ಪುತ್ತೂರು, ಇದರಲ್ಲಿ ಗಣೇಶನ ನಾನಾ ರೀತಿ ಯ ಕರಕುಶಲ ಕಲೆ, ಕ್ಲೇ ಮೊಡೆಲಿಂಗ್ ಚಿತ್ರಕಲೆಗಳು ಇವೆ. ಇದನ್ನು ಸಂಸ್ಥೆಯ ವಿದ್ಯಾರ್ಥಿಗಳು ಮಾಡಿದ ಚಿತ್ರಕಲೆ ಹಾಗೂ ಕ್ಲೇ ಮೊಡೆಲಿಂಗ್

ಕ್ರಿಯಾತ್ಮಕ ಚಿಂತನೆಗಳಿಂದ ಜೀವನದಲ್ಲಿ ಯಶಸ್ಸು ಸಾಧ್ಯ – ಪ್ರೊ. ಎನ್ ದಿನೇಶ್ ಚೌಟಾ

ಉಜಿರೆ: “ಕ್ರಿಯಾಶೀಲತೆ, ಧೈರ್ಯ, ಸಾಮರ್ಥ್ಯ ಮತ್ತು ಸಂವಹನ ಕೌಶಲಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಸತತ ಪ್ರಯತ್ನ ಹಾಗೂ ಏಕಾಗ್ರತೆಯಿಂದ ಜೀವನದಲ್ಲಿ ಗೆಲುವು ಸಾಧಿಸಬಹುದು” ಎಂದು ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎನ್ ದಿನೇಶ್ ಚೌಟಾ ಹೇಳಿದರು. ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿಜ್ಞಾನ ವಿಭಾಗವು ಆಯೋಜಿಸಿದ್ದ 2022ನೇ ಸಾಲಿನ ವಿಜ್ಞಾನಸಿಂಚನ ಎಂಬ ಅಂತರ್ ಕಾಲೇಜು

ಕೆಲಸಗಳಲ್ಲಿ ಕಾರ್ಯಗತಗೊಳ್ಳಲು ಜ್ಞಾನ ಅಗತ್ಯ- ಧನಂಜಯ ರಾವ್

ಉಜಿರೆ: ಜೀವನದಲ್ಲಿ ಗೆಲುವು ಸಾಧಿಸಬೇಕಿದ್ದರೆ, ಮೊದಲು ಜ್ಞಾನದ ಸಂಪನ್ಮೂಲಗಳನ್ನು ತಿಳಿದುಕೊಂಡು, ಸಿಗುವ ಜ್ಞಾನವನ್ನು ನಿರ್ವಹಿಸಿ, ಕಾರ್ಯಗತಗೊಳಿಸಬೇಕು. ನಾವು ದುಡಿಯುವ ಹಣ ಇಂದು ಬಂದರೆ, ನಾಳೆಯ ದಿನ ಮತ್ತೆ ಖಾಲಿಯಾಗುತ್ತದೆ. ಆದರೆ, ನಾವು ಗಳಿಸುವ ಜ್ಞಾನ ನಮ್ಮ ಕೊನೆಯ ತನಕ ನಮ್ಮ ಮಸ್ತಕದಲ್ಲೇ ಇರುತ್ತದೆ ಎಂದು, ಬೆಳ್ತಂಗಡಿಯ ವಕೀಲರಾದ ರೊಟೇರಿಯನ್, ಧನಂಜಯ ರಾವ್ ಅಭಿಪ್ರಾಯಪಟ್ಟರು. ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ